Author: kannadanewsnow09

ಗುಜರಾತ್ : ಅನಂತ್ ಅಂಬಾನಿ ಅವರ ವಂತಾರಗೆ ಭಾರತ ಸರ್ಕಾರವು ‘ಕಾರ್ಪೊರೇಟ್’ ವಿಭಾಗದ ಅಡಿಯಲ್ಲಿ ಪ್ರಾಣಿ ರಕ್ಷಣೆಗೆ ದೇಶದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ ‘ಪ್ರಾಣಿ ಮಿತ್ರ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದೆ. ವಂತಾರ ಅಡಿಯಲ್ಲಿ ಆನೆಗಳ ರಕ್ಷಣೆ, ಚಿಕಿತ್ಸೆ ಮತ್ತು ಜೀವಿತಾವಧಿಯ ಆರೈಕೆಗೆ ಮೀಸಲಾಗಿರುವ ರಾಧೆ ಕೃಷ್ಣ ಟೆಂಪಲ್ ಎಲೆಫೆಂಟ್ ವೆಲ್ ಫೇರ್ ಟ್ರಸ್ಟ್ (RKTEWT)ನ ಅಸಾಧಾರಣ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ವಂತಾರದ ಅತ್ಯಾಧುನಿಕ ಆನೆ ಆರೈಕೆ ಕೇಂದ್ರದಲ್ಲಿ ರಕ್ಷಿಸಲಾದ 240ಕ್ಕೂ ಹೆಚ್ಚು ಆನೆಗಳಿಗೆ ಸರಪಳಿ-ಮುಕ್ತ, ಸುರಕ್ಷಿತ ಮತ್ತು ಸಮೃದ್ಧ ವಾತಾವರಣವನ್ನು ಒದಗಿಸುತ್ತದೆ. ಇದರಲ್ಲಿ ಸರ್ಕಸ್‌ಗಳಿಂದ 30 ಆನೆಗಳು, ಮರ ಕಡಿಯುವ ಉದ್ಯಮದಿಂದ 100ಕ್ಕೂ ಹೆಚ್ಚು ಆನೆಗಳು ಮತ್ತು ಸವಾರಿ ಹಾಗೂ ಬೀದಿ ಭಿಕ್ಷಾಟನೆಯಂಥದ್ದರಿಂದ ರಕ್ಷಿಸಲಾದ ಇತರ ಆನೆಗಳೂ ಸೇರಿವೆ. ಅನೇಕ ಪ್ರಾಣಿಗಳು ವರ್ಷಗಳ ನಿರ್ಲಕ್ಷ್ಯ ಮತ್ತು ದೌರ್ಜನ್ಯವನ್ನು ಸಹಿಸಿಕೊಂಡಿದ್ಧಂಥವು. ಆದರೆ ವಂತಾರದಲ್ಲಿ ಅವುಗಳಿಗೆ ವಿಶ್ವ ದರ್ಜೆಯ ಪಶುವೈದ್ಯಕೀಯ ಚಿಕಿತ್ಸೆ ಮತ್ತು ಸಹಾನುಭೂತಿಯ ಆರೈಕೆ ಸಿಗುತ್ತದೆ. 998 ಎಕರೆಗಳಷ್ಟು ವಿಶೇಷವಾಗಿ…

Read More

ಅಸ್ಸಾಂ: ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (Directorate of Revenue Intelligence -DRI) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕಳೆದ ಎರಡು ದಿನಗಳಲ್ಲಿ ತ್ರಿಪುರದ ಎರಡು ಸ್ಥಳಗಳಿಂದ 24 ಕೋಟಿ ರೂ. ಮೌಲ್ಯದ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾಬಾ ಎಂಬುದು ಮೆಥಾಂಫೆಟಮೈನ್ ಮತ್ತು ಕೆಫೀನ್ ಮಿಶ್ರಣವನ್ನು ಹೊಂದಿರುವ ಅಕ್ರಮ ಸಂಶ್ಲೇಷಿತ ಔಷಧವಾಗಿದೆ. ಇತ್ತೀಚಿನ ಕಾರ್ಯಾಚರಣೆಯಲ್ಲಿ, ತಂಡವು ಗುರುವಾರ ಖೋವಾಯ್ ಜಿಲ್ಲೆಯ ತೆಲಿಯಾಮುರಾದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿ, ಆತನ ಬಳಿಯಿಂದ 9 ಕೋಟಿ ರೂ. ಮೌಲ್ಯದ 90,000 ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದೆ. ಶಿಲ್ಲಾಂಗ್‌ನಿಂದ ಬರುತ್ತಿದ್ದ ಸಿಮೆಂಟ್ ಚೀಲಗಳನ್ನು ಹೊಂದಿರುವ ಸರಕು ಟ್ರಕ್ ಅನ್ನು ಅವರು ತಡೆದರು. ಬಂಧಿತ ವ್ಯಕ್ತಿ ಮತ್ತು ವಶಪಡಿಸಿಕೊಂಡ ನಿಷಿದ್ಧ ವಸ್ತುಗಳನ್ನು ಕಾನೂನು ಕ್ರಮಕ್ಕಾಗಿ DRI ಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 26 ರಂದು ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಧಲೈ ಜಿಲ್ಲೆಯ ಅಂಬಾಸಾದಲ್ಲಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಿಂದ 15 ಕೋಟಿ ರೂ.…

Read More

ಇಸ್ರೇಲ್: ಉತ್ತರ ಇಸ್ರೇಲ್‌ನಲ್ಲಿ ಪಾದಚಾರಿಗಳ ಮೇಲೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪೊಲೀಸರು ಇದನ್ನು “ಶಂಕಿತ ಭಯೋತ್ಪಾದಕ ದಾಳಿ” ಎಂದು ಹೇಳಲಾಗುತ್ತಿದೆ. ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದು ಭಯೋತ್ಪಾದಕ ದಾಳಿ ಎಂಬ ಅನುಮಾನವಿದೆ. ಹೈಫಾ ನಗರದ ದಕ್ಷಿಣಕ್ಕೆ ಕರ್ಕೂರ್ ಜಂಕ್ಷನ್‌ನಲ್ಲಿ ಪೊಲೀಸ್ ಪಡೆಗಳು ಅನುಮಾನಾಸ್ಪದ ವಾಹನವನ್ನು ಯಶಸ್ವಿಯಾಗಿ ತಡೆಯಲಾಗಿದೆ. ಗುಂಡು ಹಾರಿಸಿದ ಶಂಕಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ರೇಲ್‌ನ ಮೊದಲ ಪ್ರತಿಕ್ರಿಯೆ ನೀಡಿದ ಮ್ಯಾಗೆನ್ ಡೇವಿಡ್ ಅಡೋಮ್, ತಮ್ಮ ತಂಡವು ಘಟನೆಯ ಸ್ಥಳದಲ್ಲಿ ಏಳು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಇದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು. https://kannadanewsnow.com/kannada/mla-gopalakrishna-belur-urges-farmers-to-become-better-farmers-using-government-facilities/ https://kannadanewsnow.com/kannada/protocol-mandatory-at-government-meetings-functions-state-govt/

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಿಗುವಂತ ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದ ಆವರಣದಲ್ಲಿ 13 ಅರ್ಹ ರೈತರಿಗೆ ಸಣ್ಣ ನೀರಾವರಿ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ SCPTSP ಯೋಜನೆಯಡಿ ಸುಮಾರು 66 ಲಕ್ಷ ರೂ.ಗಳ ಉಪಕರಣಗಳನ್ನು ವಿತರಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತವಾಗಿ ಪಂಪ್ ಸೆಟ್ ಗಳನ್ನು ಇಂದು ವಿತರಣೆ ಮಾಡಲಾಗಿದೆ. ಇದರ ಒಟ್ಟು ಮೌಲ್ಯ 66 ಲಕ್ಷ ಆಗಿದೆ. ಎಲ್ಲರಿಗೂ ಚೆನ್ನಾಗಿ ನೀರು ಬಂದಿದೆ. ಸರ್ಕಾರದ ಯೋಜನೆಯಡಿ ರೈತರಿಗೆ ಪಂಪ್ ಸೆಟ್ ವಿತರಣೆಗೆ ಅವಕಾಶ ಮಾಡಿಕೊಟ್ಟಂತ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅವರಿಗೆ ಅಭಿನಂದಿಸುತ್ತೇನೆ. ಈ ಬಾರಿ ಇಷ್ಟು ಕೊಟ್ಟಿದ್ದಾರೆ. ಈ ವರ್ಷ ಜಾಸ್ತಿ ನೀಡುವಂತೆ ಕೋರುತ್ತೇನೆ. ಇದರಿಂದ ಬಹಳ ಜನರಿಗೆ ಉಪಯೋಗ ಆಗಲಿದೆ ಎಂದರು. ಈ ಯೋಜನೆಗೆ ಅರ್ಜಿ…

Read More

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. https://kannadanewsnow.com/kannada/bbmp-collects-rs-65-lakh-fine-on-ikea-in-dasarahalli-zone/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/

Read More

ಬೆಂಗಳೂರು: ದಾಸರಹಳ್ಳಿ ವಲಯದ IKEA ದಲ್ಲಿ ಉದ್ದಿಮೆ ಪರವಾನಗಿಗೆ ಸಂಬಂಧಿಸಿದಂತೆ ದಂಡ ಸಮೇತ 65 ಲಕ್ಷ ರೂ. ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಂಡಿರುತ್ತಾರೆ ಎಂದು ವಲಯ ಆಯುಕ್ತರಾದ ಗಿರೀಶ್ ಅವರು ತಿಳಿಸಿದರು. ದಾಸರಹಳ್ಳಿ ವಲಯದ ಐಕಿಯ(IKEA INDIA PRIVATE LIMITED) ಉದ್ದಿಮೆಯನ್ನು ನಡೆಸುತ್ತಿದ್ದು, ದಿನಾಂಕ: 13ನೇ ಮೇ 2022 ರಂದು ಪಾಲಿಕೆ ವತಿಯಿಂದ ಉದ್ದಿಮೆ ಪರವಾನಗಿಯನ್ನು ಪಡೆದಿದ್ದು, 05 ವರ್ಷಗಳಿಗೆ ನವೀಕರಣ ಮಾಡಿಕೊಂಡಿರುತ್ತಾರೆ. ಮುಂದುವರೆದಂತೆ, 08ನೇ ಜನವರಿ 2025 ರಂದು ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳು ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ಈ ವೇಳೆ 4021 ಹೆಚ್.ಪಿ ಅಶ್ವಶಕ್ತಿ, Areated water, Soft Drinks & Bottled Water ಉದ್ದಿಮೆಗಳಿಗೆ ಪರವಾನಗಿಯನ್ನು ಪಡೆಯದೇ ಇರುವುದು ಕಂಡುಬಂದಿರುತ್ತದೆ. ಈ ಸಂಬಂಧ ಒಟ್ಟು 05 ವರ್ಷಗಳಿಗೆ 2022-23 ನೇ ಸಾಲಿನಿಂದ 2026-27 ನೇ ಸಾಲಿನವರೆಗೂ ಒಟ್ಟು 65,93,600 ರೂ.ಗಳನ್ನು ಪಾವತಿಸಲು ನೋಟಿಸ್‌ಗಳನ್ನು ಜಾರಿ ಮಾಡಲಾಗಿರುತ್ತದೆ. ಐಕಿಯಗೆ ಎರಡು ಬಾರಿ ನೋಟೀಸ್…

Read More

ಬೆಂಗಳೂರು: ಈ ವರ್ಷ ಮಂಡಿಸುವ ಬಜೆಟ್‍ನಲ್ಲಿ ದಲಿತರಿಗೆ ಮೀಸಲಾಗಿಡುವ ಎಸ್.ಸಿ.ಪಿ., ಟಿ.ಎಸ್.ಪಿ.ಗೆ ಸೇರಿದ ಒಂದು ರೂಪಾಯಿ ಹಣವನ್ನು ಕೂಡ ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ ಎಸ್.ಸಿ.ಪಿ., ಟಿ.ಎಸ್.ಪಿ. ಹಣದಲ್ಲಿ ಮೊದಲು ಅಂಬೇಡ್ಕರ್ ನಿಗಮ, ಆದಿ ಜಾಂಬವ ನಿಗಮ, ಬೋವಿ, ವಾಲ್ಮೀಕಿ ನಿಗಮ ಸೇರಿ ವಿವಿಧ ನಿಗಮಗಳ ಮೂಲಕ ಜಮೀನು ಇಲ್ಲದವರಿಗೆ ಜಮೀನುಗಳನ್ನು ಕೊಡಲಾಗುತ್ತಿತ್ತು. ಆದರೆ, ಭೂಮಿ ಕೊಟ್ಟಿಲ್ಲ; 39 ಸಾವಿರ ಕೋಟಿ ಮೀಸಲಿಟ್ಟರೂ ಎಲ್ಲ ನಿಗಮಗಳಿಗೆ ಸೇರಿ 500 ಕೋಟಿ ಕೊಡಲು ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ದಲಿತರ ಹಣ ಗ್ಯಾರಂಟಿಗೆ ಕೊಡುವುದೇಕೆ? ದಲಿತರಿಗೆ ಇಟ್ಟ ಹಣವನ್ನು ಅವರಿಗಲ್ಲದೇ ಇನ್ನೊಬ್ಬರಿಗೆ ಖರ್ಚು ಮಾಡುವುದಿಲ್ಲ ಎನ್ನುತ್ತಾರೆ. ಆದರೆ, ಗ್ಯಾರಂಟಿಗಳಿಗೆ ಬಳಸುವುದು ತಪ್ಪು. ಸಾರ್ವಜನಿಕವಾಗಿ ಕೊಡುವ ಗ್ಯಾರಂಟಿಗೆ ದಲಿತರಿಗೆ ಮೀಸಲಿಟ್ಟ ಹಣ ಬಳಸುವುದು ತಪ್ಪು ಎಂದು ಛಲವಾದಿ ನಾರಾಯಣಸ್ವಾಮಿ…

Read More

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳಕ್ಕೆ ನಿನ್ನೆ ತೆರೆ ಬಿದ್ದಿದೆ. 2025ರ ಮಹಾ ಕುಂಭಮೇಳಕ್ಕೆ ಬರೋಬ್ಬರಿ 17000+ ರೈಲುಗಳು ಸಂಚಾರ ನಡೆಸಿವೆ. ಮಹಾಕುಂಭದ ಪ್ರಯಾಗ್ ರಾಜ್ ನಲ್ಲಿ ರೈಲ್ ಕರ್ಮಯೋಗಿಯ ಅಸಾಧಾರಣ ಪ್ರಯತ್ನಗಳಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು 2025 ರ ಮಹಾಕುಂಭಕ್ಕೆ ಭಾರತೀಯ ರೈಲ್ವೆಯ ವ್ಯಾಪಕ ಸಿದ್ಧತೆಗಳನ್ನು ವೈಯಕ್ತಿಕವಾಗಿ ಪರಿಶೀಲಿಸಲು ಬೆಳಿಗ್ಗೆ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದರು. ಈ ಭವ್ಯ ಧಾರ್ಮಿಕ ಸಭೆಯ ಪ್ರಮಾಣ ಮತ್ತು ಮಹತ್ವವನ್ನು ಗುರುತಿಸಿದ ಅವರು, ಉತ್ತರ ಮಧ್ಯ ರೈಲ್ವೆ (NCR), ಈಶಾನ್ಯ ರೈಲ್ವೆ (NER) ಮತ್ತು ಉತ್ತರ ರೈಲ್ವೆ (NR) ಅಡಿಯಲ್ಲಿನ ವಿವಿಧ ನಿಲ್ದಾಣಗಳಿಗೆ ಭೇಟಿ ನೀಡಿ, ನೆಲದ ಕಾರ್ಯಾಚರಣೆಗಳನ್ನು ನಿರ್ಣಯಿಸಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ರೈಲ್ವೆ ಸಿಬ್ಬಂದಿಯೊಂದಿಗೆ ಸಂವಹನ ನಡೆಸಿದರು. ಪ್ರಮುಖ ವ್ಯವಸ್ಥೆಗಳನ್ನು ಪರಿಶೀಲಿಸಿದರು ಮತ್ತು ಅಭೂತಪೂರ್ವ ಭಕ್ತರ ಒಳಹರಿವನ್ನು ಸರಿಹೊಂದಿಸಲು ಎಲ್ಲಾ ವ್ಯವಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ…

Read More

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು. “ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ…

Read More

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಫೆಬ್ರವರಿ 27 ರ ಇಂದಿನಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳ ಆಯೋಜಿಸಲಾಗಿದೆ. ಈ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.  ಇಂದು ವಿಧಾನಸೌಧದ ಆವರಣದಲ್ಲಿ ಐದು ದಿನಗಳ ಕಾಲ ನಡೆಯುವಂತ ಪುಸ್ತಕ ಮೇಳಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಈ ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದೆ. ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. https://kannadanewsnow.com/kannada/no-discussion-on-dk-shivakumar-joining-bjp-basavaraj-bommai/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/

Read More