Author: kannadanewsnow09

ಶಿವಮೊಗ್ಗ: ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌ, ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ  ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬಗ್ಗೆ ಸಾಗರ ನಗರಸಭೆ ಆಯುಕ್ತ ನಾಗಪ್ಪ ಅವರು, ಅವರವರು ಹಲ್ಲೆ ಮಾಡ್ಕೊಂಡಿದ್ದಾರೆ. ಅವರೇ ಬಗೆ ಹರಿಸಿಕೊಳ್ಳುತ್ತಾರೆ ಅಂತ ಮಹಿಳಾ ಪೌರ ಕಾರ್ಮಿಕರ ಮೇಲೆ ಮೆಸ್ತ್ರಿ ನಾಗರಾಜ ಹಲ್ಲೆ ನಡೆಸಿದ್ರೂ ಕ್ರಮ ಕೈಗೊಳ್ಳದೇ ಉಡಾಫೆ ಉತ್ತರವನ್ನು ನೀಡಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ಕನ್ನಡ ನ್ಯೂಸ್ ನೌ ಸಂಪಾದಕರಾದಂತ ವಸಂತ ಬಿ ಈಶ್ವರಗೆರೆ ಅವರು, ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಆಯುಕ್ತರಾದಂತ ಹೆಚ್.ಕೆ.ನಾಗಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಪ್ರತಿಕ್ರಿಯೆ ಕೇಳಿದರು. ಅದಕ್ಕೆ ಉತ್ತರಿಸಿದಂತ ಅವರು, ಮೇಸ್ತ್ರಿ ನಾಗರಾಜ ಹಾಗೂ ಮಹಿಳಾ ಪೌರ ಕಾರ್ಮಿಕರಾದಂತ ಪಣಿಯಮ್ಮ ಅವರನ್ನು ಕರೆಸಿ ಕೇಳಲಾಗಿದೆ ಎಂದರು. ಇನ್ನೂ ಮುಂದುವರೆದು ಮಾತನಾಡಿದಂತ ಅವರು, ನಾನು ಕೇಳಿದಂತ ಸಂದರ್ಭದಲ್ಲಿ ನಾವು ನಾವೇ ಮಾಡಿಕೊಂಡಿದ್ದೇವೆ. ನಮ್ಮ ಜಗಳ ನಾವೇ ಪರಿಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. ನನಗೆ ಯಾರು…

Read More

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬುಧವಾರ (ಜೂನ್ 03, 2024) ಮನವಿ ಸಲ್ಲಿಸಿದ್ದಾರೆ. ಜಿಂದಾಲ್ ಭೂ ಅಕ್ರಮದಲ್ಲಿ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿ, ಆಗಿನ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಕಾರಣರಾಗಿದ್ದ ಕೆ.ಎ.ಪಾಲ್ ನೇತೃತ್ವದ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಇದೀಗ ಈಗಿನ ಸಿ.ಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮೂಡಾ ಹಗರಣದ ಬಗ್ಗೆಯೂ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ…

Read More

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರ ವಿರುದ್ಧ ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಈ ಅರ್ಜಿಯ ವಿಚಾರಣೆ ನಡೆಸಿದರು. ಈ ವೇಳೆ ಶ್ರೀಕಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ನ್ಯಾಯಪೀಠಕ್ಕೆ ಶ್ರೀಕೃಷ್ಣ ವಿರುದ್ಧ ಸಂಘಟಿತ ಅಪರಾಧಗಳ ಕಾಯ್ದೆ ಅನ್ವಯವಾಗದೇ ಇದ್ದರೂ ಜಾಮೀನು ಸಿಗಬಾರದು ಅಂತ ದಾಖಲಿಸಿದ್ದಾರೆ ಪೊಲೀಸರು ಎಂಬುದಾಗಿ ಗಮನಕ್ಕೆ ತಂದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಶ್ರೀಕಿ ವಿರುದ್ಧ ದಾಖಲಿಸಲಾಗಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆ(KCOC) ಯಾಕೆ ದಾಖಲಿಸಿದ್ದಾರೆ ಅಂತ ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ. ಹೀಗಾಗಿ ಕೆಸಿಓಸಿ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೇ ಜಾಮೀನಿಗಾಗಿ ಸಂಬಂಧಿಸಿದಂತ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. https://kannadanewsnow.com/kannada/update-mangaluru-landslide-one-worker-rescued/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ನಿಯಂತ್ರಣಕ್ಕೆ ಮಹತ್ವದ ಕ್ರಮ ಎನ್ನುವಂತೆ ಡೆಂಗ್ಯೂ ಪರೀಕ್ಷೆಗೆ 300 ರೂ ದರ ನಿಗದಿ ಪಡಿಸಿ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ನಂತ್ರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳ ಜೊತೆಗೆ ನಡೆದಂತ ಸಭೆಯಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮವಾಗಿ ಪರೀಕ್ಷೆಗೆ ದರ ನಿಗದಿ ಪಡಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ಬಂದವರಿಗೆ ಎರಡು ಮಾದರಿಯ ಪರೀಕ್ಷೆ ಮಾಡಬೇಕಿದ್ದು, ಪ್ರತಿ ಟೆಸ್ಟ್ ಗೆ ರೂ.300 ನಿಗದಿ ಪಡಿಸೋದಕ್ಕೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಡೆಂಗ್ಯೂ ಪ್ರತಿ ಪರೀಕ್ಷೆಗೆ 300 ರೂ ನಿಗದಿ ಮಾಡಿ, ರಾಜ್ಯ ಸರ್ಕಾರ ಇಂದೇ ಅಧಿಕೃತ ಅಧಿಸೂಚನೆ ಪ್ರಕಟಿಸೋ ಸಾಧ್ಯತೆ ಇದೆ. ಆ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಅಧಿಸೀಚನೆ ಹೊರಡಿಸಲಿದೆ. https://kannadanewsnow.com/kannada/19-students-hospitalised-after-consuming-milk-mixed-with-malt-in-kolar/ https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/

Read More

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಲ್ಲದೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು. ಅವರ ನ್ಯಾಯಾಂಗ ಬಂಧನವನ್ನು ಜುಲೈ.18ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇನ್ನೂ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಂದಹಾಗೇ ಜೂನ್.22, 2024ರಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದೂರು ನೀಡಿದ್ದನು. ಆ ಬಳಿಕ ಜೂನ್.23ರಂದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು. https://kannadanewsnow.com/kannada/19-students-hospitalised-after-consuming-milk-mixed-with-malt-in-kolar/ https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/

Read More

ಕೋಲಾರ: ಜಿಲ್ಲೆಯಲ್ಲಿ ಮಾಲ್ಟ್ ಮಿಶ್ರಿತ ಹಾಲು ಕುಡಿದಂತ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಅಂತ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಗೊಂಡಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದು ಬೆಳಿಗ್ಗೆ ಮಾಲ್ಟ್ ಮಿಶ್ರಿತ ಹಾಲನ್ನು ಕುಡಿಯೋದಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಮಾಲ್ಟ್ ಮಿಶ್ರಿತ ಹಾಲು ಕುಡಿದಂತ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಅಂತ ತಿಳಿದು ಬಂದಿದೆ. https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/ https://kannadanewsnow.com/kannada/update-mangaluru-landslide-one-worker-rescued/

Read More

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ…

Read More

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ಹೀಗಾಗಿ ಅವರಿಗೆ ಇಂದು ರಿಲೀಫ್ ಸಿಗದಂತೆ ಆಗಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ಆರೋಪ ಪ್ರಕರಣದಲ್ಲಿ ಸಲ್ಲಿಸಿದ್ದಂದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೋರ್ಟ್ ಸಿಐಡಿಗೆ ನಾಳೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.18ಕ್ಕೆ ಮುಂದೂಡಿ ಆದೇಶಿಸಿದೆ. https://kannadanewsnow.com/kannada/suraj-revanna-sent-to-judicial-custody-till-july-18-in-unnatural-sexual-assault-case/ https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/

Read More

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಸೂರಜ್ ರೇವಣ್ಣ ಅವರಿಗೆ, ಜುಲೈ.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿತು. ಎಂಎಲ್ ಸಿ ಸೂರಜ್ ರೇವಣ್ಣ ಅವರಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಸೂರಜ್ ರೇವಣ್ಣ ಜೈಲು ಪಾಲಾಗುವಂತೆ ಆಗಿದೆ. https://kannadanewsnow.com/kannada/hathras-stampede-uttar-pradesh-cm-yogi-adityanath-announces-judicial-probe/ https://kannadanewsnow.com/kannada/update-mangaluru-landslide-one-worker-rescued/

Read More

ಹತ್ರಾಸ್: 121 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಘೋಷಿಸಿದ್ದಾರೆ. ಮೃತಪಟ್ಟವರಲ್ಲಿ ಆರು ಮಂದಿ ಇತರ ರಾಜ್ಯಗಳಿಗೆ ಸೇರಿದವರು: ನಾಲ್ವರು ಹರಿಯಾಣದವರು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ತಲಾ ಒಬ್ಬರು ಎಂದು ಅವರು ಹೇಳಿದರು. ಕಾಲ್ತುಳಿತದ ಬಗ್ಗೆ ತನಿಖೆ ನಡೆಸಲು ನಿವೃತ್ತ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ನ್ಯಾಯಾಂಗ ತನಿಖೆಯ ಭಾಗವಾಗಲಿದ್ದಾರೆ ಎಂದು ಅವರು ಹೇಳಿದರು. ದುರಂತಕ್ಕೆ ಯಾರು ಜವಾಬ್ದಾರರು ಅಥವಾ ಇದು ಪಿತೂರಿಯೇ ಎಂಬುದನ್ನು ಸಮಿತಿಯು ಕಂಡುಹಿಡಿಯುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನಾವು ಮುನ್ನೆಚ್ಚರಿಕೆ ವಹಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳ ಸಂಘಟನೆಗೆ ಮಾರ್ಗದರ್ಶನ ನೀಡುವ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಅನ್ನು ಸರ್ಕಾರ ಜಾರಿಗೆ ತರಬಹುದು ಎಂದು ಹೇಳಿದ್ದಾರೆ. https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/ https://kannadanewsnow.com/kannada/update-mangaluru-landslide-one-worker-rescued/

Read More