Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದ್ದರೇ, ಇತ್ತ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಸಿಇಓಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ prcdirdev@gmail.com ದಿನಾಂಕ: 24-10-2025 ರೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

Read More

ಚಿತ್ರದುರ್ಗ: ಆನ್ ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿಯಿಂದ ಬಂಧಿಸಲಾಗಿತ್ತು. ಇಂದು ಅವರಿಗೆ ಸೇರಿದಂತ ವಿವಿಧೆಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಮತ್ತೆ 50 ಕೋಟಿ ರೂಪಾಯಿ ಮೌಲ್ಯದ 44 ಕೆಜಿ ಚಿನ್ನವನ್ನು ಸೀಜ್ ಮಾಡಿದ್ದಾರೆ. ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದಂತ ಚಳ್ಳಕೆರೆ ಬ್ಯಾಂಕ್ ನ 2 ಲಾಕರ್ ನಲ್ಲಿ ಇದ್ದಂತ 44 ಕೆಜಿ ಚಿನ್ನವನ್ನು ಇಡಿ ಜಪ್ತಿ ಮಾಡಿದ್ದಾರೆ. ಆನ್ ಲೈನ್ ಗೇಮಿಂಗ್ ಕೇಸ್ ಸಂಬಂಧ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದಂತೆ ಆಗಿದೆ. https://kannadanewsnow.com/kannada/massive-fire-at-bengaluru-restaurant-two-dead/ https://kannadanewsnow.com/kannada/a-tragic-incident-in-the-state-a-brother-and-sister-drown-in-an-agricultural-well-and-die/

Read More

ಬಳ್ಳಾರಿ: ರಾಜ್ಯದಲ್ಲೊಂದು ಧಾರುಣ ಘಟನೆ ಎನ್ನುವಂತೆ ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ, ತಮ್ಮರಿಬ್ಬರು ದುರ್ಮರಣ ಹೊಂದಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದಂತ ತಮ್ಮನನ್ನು ಉಳಿಸಲು ಹೋಗಿ, ಅಕ್ಕನೂ ಮುಳುಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬಳ್ಳಾರಿಯ ಮೈಲಾಪುರದಲ್ಲಿ ರೈತ ಮೂಕಣ್ಣನವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಮಕ್ಕಳಾದಂತ ಮಹಾಂಕಾಳಿ(12) ಹಾಗೂ ಶಿವರಾಜ್(9) ತಂದೆಯ ಬಳಿಗೆ ತೆರಳಿದ್ದರು. ತಂದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರೇ, ಮಕ್ಕಳು ಆಟ ಆಡುತ್ತಿದ್ದರು. ಕೃಷಿ ಹೊಂಡದ ಬಳಿಯಲ್ಲಿ ಆಟ ಆಡುತ್ತಿದ್ದಂತ ಸಂದರ್ಭದಲ್ಲಿ ತಮ್ಮ ಶಿವರಾಜ್(9) ಕಾಲು ಜಾರಿ ಬಿದ್ದಿದ್ದಾನೆ. ಆತನನ್ನು ರಕ್ಷಣೆ ಮಾಡೋದಕ್ಕೆ ಅಕ್ಕ ಮಹಾಂಕಾಳಿ(12) ಧಾವಿಸಿದ್ದಾರೆ. ಆದರೇ ಅದು ಸಾಧ್ಯವಾಗದೇ ಅಕ್ಕ-ತಮ್ಮ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಬಳ್ಳಾರಿಯ ಸಿರಗುಪ್ಪದ ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ನಗರದ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅನಾಹುತದಿಂದ ಯುವಕ, ಯುವತಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಗದಗ ಮೂಲದ ಯುವಕ, ಹುನಗುಂದ ಮೂಲದ ಕಾವೇರಿ ಸಾವನ್ನಪ್ಪಿದ್ದಾರೆ. ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟಿನ ಲಾಡ್ಜ್ ಕೊಠಡಿಯ ಬಾತ್ ರೂಮ್ ನಲ್ಲಿ ಕಾವೇರಿ ಬಡಿಗೇರ್ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಇದ್ದರು. ಹೊಗೆ ಬಂದ ತಕ್ಷಣ ಲಾಡ್ಜ್ ಸಿಬ್ಬಂದಿಗೆ ಕರೆಯನ್ನು ಕಾವೇರಿ ಮಾಡಿದ್ದರು. ಬೆಂಕಿ ಕಾಣಿಸಿಕೊಂಡ ನಂತ್ರ ಸ್ಥಳಕ್ಕೆ ಬಂದಿದ್ದಂತ ಅಗ್ನಿ ಶಾಮಕ ಸಿಬ್ಬಂದಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದ್ದರು. ಬೆಂಕಿಯಿಂದ ಯುವಕ ಸಾವನ್ನಪ್ಪಿದರೇ, ಹೊಗೆಯಿಂದ ಯುವತಿ ಸಾವನ್ನಪ್ಪಿದ್ದಾರೆ. ಸದ್ಯ ಇಬ್ಬರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.  ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದರು. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ…

Read More

ಬೆಂಗಳೂರು: ಬರುವ ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ “ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್: ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ. ಎಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಭಾಗದಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಅಂತರ್ಜಲ ವೃದ್ಧಿಯಾಗಿದೆ. ಇದೀಗ ಪ್ರತಿ ವರ್ಷ 1018 ಕೆರೆಗಳಿಗೆ ನೀರು ತುಂಬಿಸುತ್ತಿದ್ದು, 25 ಲಕ್ಷ ಎಕರೆಗೆ ಸಣ್ಣ ನೀರಾವರಿ ಇಲಾಖೆಯಿಂದ ನೀರು ಪೂರೈಸಲಾಗುತ್ತಿದೆ. ಜೊತೆಗೆ ಎಲ್ಲಾ ಕೆರೆಗಳನ್ನು ಸೊಸೈಟಿಗಳ ಮೂಲಕ ಪುನರುಜ್ಜೀವನಗೊಳಿಸಲಾಗಿದೆ. ಅಂತರ್ಜಲ ಸುಧಾರಣೆಗೆ ಒತ್ತು ನೀಡುತ್ತಿದ್ದೇವೆ ಎಂದರು. ಅಂತರ್ಜಲ ಇಲಾಖೆ ಮೂಲಕ ರಾಜ್ಯದ 2714…

Read More

ಕೊಳ್ಳೇಗಾಲ: ಮೈಸೂರಲ್ಲಿ 9 ವರ್ಷದ ಬಾಲಕಿ ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಕೊಳ್ಳೇಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 9 ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದ ಬಳಿಕ ಮೈಸೂರಿನಿಂದ ಕೊಳ್ಳೇಗಾಲಕ್ಕೆ ಆರೋಪಿ ಕಾರ್ತಿಕ್ ಹೋಗಿದ್ದನು. ಸಿಸಿಟಿವಿ ದೃಶ್ಯ ಆಧರಿಸಿ ವಶಕ್ಕೆ ಪೊಲೀಸರು ಪಡೆದಿದ್ದಾರೆ. ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಬಂಧಿತ ಆರೋಪಿಯಾಗಿದ್ದಾನೆ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಆರೋಪಿ ಕಾರ್ತಿಕ್ ಯತ್ನಿಸಿದ್ದನು. ಅತ್ಯಾಚಾರಕ್ಕೆ ಯತ್ನಿಸಿ ಆರೋಪಿ ಕಾರ್ತಿಕ್ ಸಿಕ್ಕಿಬಿದ್ದಿದ್ದನು. ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. ಶಂಕಿತ ಆರೋಪಿ ಕಾರ್ತಿಕ್ ಮದ್ಯವ್ಯಸನಿಯಾಗಿದ್ದನು. https://kannadanewsnow.com/kannada/https-kannadanewsnow-com-kannada-applications-invited-for-the-post-of-teacher-under-mission-vatsalya-scheme/ https://kannadanewsnow.com/kannada/four-accused-arrested-in-sbi-bank-robbery-case-in-vijayapura/

Read More

ಬೆಂಗಳೂರು: ನಗರದಲ್ಲಿ ರೆಸ್ಟೋರೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿಯೊಂದು ಪಕ್ಕದ ಸ್ಪಾಗೂ ತಗುಲಿದ ಪರಿಣಾಮ ಇಬ್ಬರು ಯುವಕ-ಯುವತಿಯರು ಸಜೀವ ದಹನವಾಗಿರುವಂತ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವಂತ ಲಾಡ್ಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದ ವೇಳೆಯಲ್ಲಿ ಸಮೀಪದ ಬಿಲ್ಡಿಂಗ್ ನಲ್ಲಿನ ಸ್ಪಾನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ರೆಸ್ಟೋರೆಂಟ್ ನ ಬೆಂಕಿ ಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸಿದ ಹಿನ್ನಲೆಯಲ್ಲಿ ಯುವಕ-ಯುವತಿಯರು ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applications-invited-for-the-post-of-teacher-under-mission-vatsalya-scheme/ https://kannadanewsnow.com/kannada/four-accused-arrested-in-sbi-bank-robbery-case-in-vijayapura/ https://kannadanewsnow.com/kannada/cabinet-approves-construction-of-tech-park-on-blueberry-hills-road-in-mangalore-minister-priyank-kharge/

Read More

ಬೆಂಗಳೂರು: ರಾಜ್ಯದ ಎಲ್ಲ ಕೈಗಾರಿಕೆಗಳೂ ಸುಸ್ಥಿರ ಅಭಿವೃದ್ಧಿಯ ಚಿಂತನೆ ಮಾಡಬೇಕು. ತಮ್ಮ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲ ಗ್ರಾಮ, ಪಟ್ಟಣದಲ್ಲೂ ಹಸಿರು ವಲಯ ಸಂರಕ್ಷಣೆಗೆ ಶ್ರಮಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಟಯೋಟಾ ಕಿರ್ಲೋಸ್ಕರ್ ಮೋಟರ್ಸ್ ಸಂಸ್ಥೆಯ ಸುಸ್ಥಿರ ವರದಿ 2025 ಬಿಡುಗಡೆ ಮಾಡಿ ಮಾತನಾಡಿದ ಅವರು, ಹಸಿರಿದ್ದರೆ ಉಸಿರು, ಬನವಿದ್ದರೆ ಭವಿಷ್ಯ ಎಂಬುದನ್ನು ಎಲ್ಲರೂ ಅರಿತಾಗ ಮಾತ್ರ ಈ ಭೂಗ್ರಹವನ್ನು ಸಂರಕ್ಷಿಸಲು ಸಾಧ್ಯ ಎಂದರು. ಇಂದು ಇಡೀ ವಿಶ್ವ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ಎದುರಿಸುತ್ತಿದ್ದು, ವೃಕ್ಷ ಸಂರಕ್ಷಣೆ ಮತ್ತು ಸಂವರ್ಧನೆಯೊಂದೇ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕೈಗಾರಿಕೆಗಳೂ ತಮ್ಮ ಕೈಗಾರಿಕಾ ಆವರಣದಲ್ಲಿ ಹೆಚ್ಚು ಹೆಚ್ಚು ಮರ ಗಿಡ ಬೆಳೆಸಬೇಕು, ರಸ್ತೆ ಬದಿ ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಸಾಧ್ಯವಾದಷ್ಟು ಹಸಿರು ಕಟ್ಟಡ ನಿರ್ಮಿಸಿ, ನವೀಕರಿಸಬಹುದಾದ ಇಂಧನ ಬಳಕೆ ಮಾಡಬೇಕು, ನೀರನ್ನು ಮಿತವಾಗಿ…

Read More

ಬೆಂಗಳೂರು: ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಂಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರೆಬೈಲ್‌ನ ಬ್ಲೂಬರ‍್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇ ರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರ ಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಳೆದ ತಿಂಗಳು 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣಕ್ಕೆ ಅನುಮತಿ…

Read More