Author: kannadanewsnow09

ಶಿವಮೊಗ್ಗ : 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. 2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಮೇ 20 ರೊಳಗಾಗಿ…

Read More

ಶಿವಮೊಗ್ಗ : ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ ಕೇಕುಡ ಎಂಬುವವರು ಮ್ಯಾನೇಜರ್, ಕೆನರಾ ಬ್ಯಾಂಕ್, ಶಿವಮೂರ್ತಿ ಸರ್ಕಲ್, ಶಿವಮೊಗ್ಗ ಹಾಗೂ ಮ್ಯಾನೇಜರ್, ಕೆನರಾ ಬ್ಯಾಂಕ್, ಕಾನ್‌ಕಾರ್ಡ್ ಡಿವಿಷನ್, ಬೆಂಗಳೂರು ಇವರುಗಳ ವಿರುದ್ದ ಕ್ರೆಡಿಟ್ ಕಾರ್ಡ್ ಸಂಬAಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕೆನರಾ ಬ್ಯಾಂಕ್ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ದೂರುದಾರರು ಏಪ್ರಿಲ್-2024 ರಂದು ತಮ್ಮ ಕೆನರಾ ಬ್ಯಾಂಕ್ ಸೇವಿಂಗ್ಸ್ ಅಕೌಂಟ್ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗಿ ಒಟ್ಟು ರೂ. 1.29 ಲಕ್ಷ ಕಡಿತಗೊಂಡಿದ್ದು, ಈ ಬಗ್ಗೆ ಬ್ಯಾಂಕ್‌ಗೆ ಸರಿಪಡಿಸುವಂತೆ ಹಲವಾರು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳದೇ ತಮ್ಮ ಎಸ್.ಬಿ.ಖಾತೆಗೆ ಮೊತ್ತವನ್ನು ಮರುಜಮೆ ಮಾಡಿಲ್ಲವೆಂದು ಆಯೋಗಕ್ಕೆ ದೂರು ನೀಡಿರುತ್ತಾರೆ.  ಆಯೋಗವು ದೂರನ್ನು ಪರಿಶೀಲಿಸಿ ನೀಡಿದ ನೋಟಿಸ್‌ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ದೂರುದಾರರೇ ತಮ್ಮ ಓ.ಟಿ.ಪಿ ಅಥವಾ ಲಿಂಕ್‌ನ್ನು ಶೇರ್ ಮಾಡಿರುವುದರಿಂದ ಈ…

Read More

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧ ಮಳಿಗೆ ಬಂದ್ ಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ…

Read More

ಬೆಂಗಳೂರು : “ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ ಹಾಗೂ ಅದಕ್ಕೂ ಮುನ್ನ ತಮ್ಮ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಹಾಲು ಉತ್ಪಾದಕರ ಸಲಹೆ ಹಾಗೂ ಪಕ್ಷದ ನಾಯಕರ ಸೂಚನೆ ಮೇರೆಗೆ ಇಂದು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಕನಕಪುರ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಮುಖಂಡರ ತೀರ್ಮಾನ ಹಾಗೂ ಸಹಕಾರದೊಂದಿಗೆ ನಾಮಪತ್ರ ಸಲ್ಲಿಸಲಾಗಿದೆ” ಎಂದು ತಿಳಿಸಿದರು. ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ…

Read More

ದಕ್ಷಿಣ ಅಮೆರಿಕದ ಮಿಸೌರಿ ಮತ್ತು ಕೆಂಟುಕಿ ರಾಜ್ಯಗಳಲ್ಲಿ ಬೀಸಿದಂತ ಭಾರೀ ಬಿರುಗಾಳಿ ಅಪ್ಪಳಿಸಿ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿಯ ತೀವ್ರ ಬಿರುಗಾಳಿಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಕೆಂಟುಕಿ ಗವರ್ನರ್ ಆಂಡಿ ಬೆಶಿಯರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವರದಿಗಳ ಪ್ರಕಾರ ಮಿಸೌರಿಯಲ್ಲಿ ಕನಿಷ್ಠ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ರಾತ್ರಿಯ ಬಿರುಗಾಳಿಗಳಿಗೆ ನಾವು ನಮ್ಮ ಕನಿಷ್ಠ 14 ಜನರನ್ನು ಕಳೆದುಕೊಂಡಿದ್ದೇವೆ.  ಆದರೆ ದುಃಖಕರವೆಂದರೆ, ನಾವು ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದಂತೆ ಈ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಬೆಶಿಯರ್ ಹೇಳಿದರು. ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ಅಧಿಕಾರಿಗಳನ್ನು ಉಲ್ಲೇಖಿಸಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ನಮ್ಮ ನಗರ ಇಂದು ರಾತ್ರಿ ದುಃಖಿಸುತ್ತಿದೆ ಎಂದು ಮೇಯರ್ ಕಾರಾ ಸ್ಪೆನ್ಸರ್ ಶುಕ್ರವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು. “ಜೀವನ ನಷ್ಟ ಮತ್ತು ವಿನಾಶ ನಿಜವಾಗಿಯೂ ಭಯಾನಕವಾಗಿದೆ ಎಂದರು. https://kannadanewsnow.com/kannada/indian-army-destroys-terrorist-camps-infiltrating-100-km-into-pakistan-amit-shah/…

Read More

ನವದೆಹಲಿ: ಪಾಕಿಸ್ತಾನದ ಒಳಗೆ 100 ಕಿ.ಮೀ. ದೂರದ ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಶನಿವಾರ ಶ್ಲಾಘಿಸಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. “ಅಧಿಕಾರ ವಹಿಸಿಕೊಂಡಾಗಿನಿಂದ, ಪ್ರಧಾನಿ ಮೋದಿ ದೇಶದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳಾದ ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ. ಈ ಬಾರಿ, ಆಪರೇಷನ್ ಸಿಂಧೂರ್ ಅಡಿಯಲ್ಲಿ, ಪಾಕಿಸ್ತಾನದಲ್ಲಿರುವ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದಂತಹ ಭಯೋತ್ಪಾದಕ ಸಂಘಟನೆಗಳ ಪ್ರಧಾನ ಕಚೇರಿಯನ್ನು ನಾಶಪಡಿಸಲಾಯಿತು ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಭಾರತೀಯ ಸಶಸ್ತ್ರ ಪಡೆಗಳು ಶತ್ರು ಪ್ರದೇಶದೊಳಗೆ 100 ಕಿಲೋಮೀಟರ್ ಒಳಗೆ ಹೋಗಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದವು. ಭಯೋತ್ಪಾದಕರು ತಮ್ಮ ಬೆದರಿಕೆಗಳು ನಮ್ಮನ್ನು…

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ( Reserve Bank of India – RBI) ಶೀಘ್ರದಲ್ಲೇ ಮಹಾತ್ಮ ಗಾಂಧಿ (ಹೊಸ) ಸರಣಿಯಲ್ಲಿ ಪ್ರಸ್ತುತ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ( Governor Sanjay Malhotra ) ಅವರ ಸಹಿಯನ್ನು ಹೊಂದಿರುವ ಹೊಸ ₹20 ನೋಟುಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ಈ ಹೊಸ ನೋಟುಗಳು ಈ ಸರಣಿಯಲ್ಲಿ ಅಸ್ತಿತ್ವದಲ್ಲಿರುವ ₹20 ನೋಟುಗಳಂತೆಯೇ ವಿನ್ಯಾಸವನ್ನು ಹೊಂದಿರುತ್ತವೆ. ಹಿಂದೆ ನೀಡಲಾದ ಎಲ್ಲಾ ₹20 ನೋಟುಗಳು ಕಾನೂನುಬದ್ಧವಾಗಿ ಉಳಿಯುತ್ತವೆ ಎಂಬುದಾಗಿ ಸ್ಪಷ್ಟ ಪಡಿಸಿದೆ. https://twitter.com/ians_india/status/1923730681835946309 ಮುಂಬರುವ ನೋಟುಗಳು ವಿನ್ಯಾಸ, ಬಣ್ಣ ಮತ್ತು ಭದ್ರತಾ ವೈಶಿಷ್ಟ್ಯಗಳಲ್ಲಿ 2019 ರಲ್ಲಿ ಮೊದಲು ಪರಿಚಯಿಸಲಾದ ₹20 ಬಿಲ್‌ಗಳಿಗೆ ಹೋಲುತ್ತವೆ. ಇದು CDM ಗಳು ಮತ್ತು ATM ಗಳಂತಹ ನಗದು ನಿರ್ವಹಣಾ ಯಂತ್ರಗಳಿಗೆ ಸುಗಮ ಪರಿವರ್ತನೆಯನ್ನು ಖಚಿತಪಡಿಸುತ್ತದೆ ಎಂದು RBI ಹೇಳಿದೆ. ಮೇಲ್ಮುಖದ ಕೆಳಗಿನ ಮಧ್ಯಭಾಗದಲ್ಲಿ ಕಾಣಿಸಿಕೊಳ್ಳುವ ಗವರ್ನರ್ ನಕಲು ಸಹಿಯನ್ನು ಮಾತ್ರ ನವೀಕರಿಸಲಾಗುತ್ತಿದೆ. ಬ್ಯಾಂಕ್‌ಗಳು ನೋಟು-ವಿಂಗಡಣೆ ಉಪಕರಣಗಳನ್ನು ಅದಕ್ಕೆ ಅನುಗುಣವಾಗಿ…

Read More

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನವೇ ಬೆಂಗಳೂರಲ್ಲಿ ಮಳೆ ಮತ್ತೊಂದೆಡೆ ಐಪಿಎಸ್ ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ ಇದೆ. https://kannadanewsnow.com/kannada/pakistan-vigilant-eye-on-terrorists-tomorrow-isro-to-launch-indias-surveillance-satellite/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More

ಶ್ರೀಹರಿಕೋಟಾ: ಭಾರತದ ರಕ್ಷಣೆಗೆ ಬಲ ನೀಡಲು ಇಸ್ರೋ ಸಜ್ಜಾಗಿದೆ. ಪಾಕಿಸ್ತಾನ, ಉಗ್ರರ ಮೇಲೆ ಹದ್ದಿನ ಕಣ್ಣಿಡಲು ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆಯನ್ನು ಇಸ್ರೋ ಮಾಡಲಿದೆ. ಭಾರತವು ತನ್ನ ಬಾಹ್ಯಾಕಾಶ ಕಾರ್ಯಕ್ರಮದ 101ನೇ ಕಾರ್ಯಾಚರಣೆಯೊಂದಿಗೆ ಮಹತ್ವದ ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಮೇ 18, 2025 ರಂದು ಬೆಳಿಗ್ಗೆ 05:59 IST ಕ್ಕೆ, ಇಸ್ರೋ SHAR ನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಮೊದಲ ಉಡಾವಣಾ ಪ್ಯಾಡ್ (FLP) ನಿಂದ PSLV-C61 ನಲ್ಲಿ EOS-09 ಅನ್ನು ಉಡಾವಣೆ ಮಾಡಲಿದೆ. ಈ ಕಾರ್ಯಾಚರಣೆಯು ಭೂಮಿಯ ವೀಕ್ಷಣಾ ಉಪಗ್ರಹವನ್ನು ಸೂರ್ಯ ಸಿಂಕ್ರೊನಸ್ ಪೋಲಾರ್ ಆರ್ಬಿಟ್ (SSPO) ಗೆ ಇರಿಸುತ್ತದೆ. ಉಡಾವಣಾ ವಾಹನ – PSLV-C61 PSLV-C61 ಪೋಲಾರ್ ಉಪಗ್ರಹ ಉಡಾವಣಾ ವಾಹನದ ( Polar Satellite Launch Vehicle-PSLV) 63 ನೇ ಹಾರಾಟ ಮತ್ತು PSLV-XL ಸಂರಚನೆಯನ್ನು ಬಳಸುವ 27 ನೇ ಹಾರಾಟವನ್ನು ಸೂಚಿಸುತ್ತದೆ. ಈ ಕಾರ್ಯಾಚರಣೆಯು ವ್ಯಾಪಕ ಶ್ರೇಣಿಯ ಪೇಲೋಡ್‌ಗಳು ಮತ್ತು ಕಕ್ಷೆಗಳಲ್ಲಿ ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು…

Read More

ಶಿವಮೊಗ್ಗ: ದೇಶದ ಜನರು ಇಡೀ ಪಾಕಿಸ್ತಾನವನ್ನೇ ಉಡೀಸ್ ಮಾಡುವಂತ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ ಎಂಬುದಾಗಿ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದ ಸೈನಿಕರಿಗೆ ಅಭಿನಂದನೆಯನ್ನು ತಿಳಿಸಿದರು. ನಮ್ಮ ಸೈನಿಕರು ಬಹಳ ಚೆನ್ನಾಗಿ ಹೋರಾಡಿದ್ದಾರೆ ಎಂಬುದಾಗಿ ಶ್ಲಾಘನೆ ವ್ಯಕ್ತ ಪಡಿಸಿದರು. ಅಲ್ಲದೇ ಇಡೀ ಪ್ರಪಂಚವೇ ಭಾರತದತ್ತ ತಿರುಗಿ ನೋಡುವಂತೆ ನಮ್ಮ ಯೋಧರು ಮಾಡಿದ್ದಾರೆ ಎಂದರು. ಮುಸಲ್ಮಾನ್, ಕ್ರಿಶ್ಚಿಯನ್, ಹಿಂದೂ ಸೇರಿದಂತೆ ಎಲ್ಲರೂ ಪಾಕಿಸ್ತಾನವನ್ನು ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ. ಈ ಬಗ್ಗೆ ದೇಶದ ಜನರಲ್ಲಿ ಬೇಸರವಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/two-bikers-were-victims-of-a-hit-and-run-in-bangalore/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More