Author: kannadanewsnow09

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಬೈಪಾಸ್ ನ ಸಿಲ್ಕ್ ಫ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಈ ವಿಷಯ ತಿಳಿದು ವಿಜಯಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರರಿಗೆ ಡಿಕ್ಕಿಯಾಗಿ ಪರಾರಿಯಾಗಿರುವಂತ ಅಪರಿಚಿತ ವಾಹನದ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ. https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/ https://kannadanewsnow.com/kannada/alert-public-beware-if-you-make-this-mistake-fraudsters-will-use-a-sim-card-in-your-name/

Read More

ಜೆರುಸಲೆಮ್/ಕೈರೋ: ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವಾಯುಪಡೆ ಗಾಜಾ ಮೇಲೆ ನಡೆಸಿದ ಹೊಸ ದಾಳಿಗಳಲ್ಲಿ ಕನಿಷ್ಠ 146 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.  ಮಾರ್ಚ್‌ನಲ್ಲಿ ಕದನ ವಿರಾಮ ರದ್ದುಗೊಂಡ ನಂತರ ಗುರುವಾರದಿಂದ ಇಸ್ರೇಲಿ ದಾಳಿಗಳು ಅತ್ಯಂತ ಮಾರಕ ಬಾಂಬ್ ದಾಳಿಗಳಲ್ಲಿ ಒಂದನ್ನು ಕಂಡಿವೆ. ಹೊಸ ಕದನ ವಿರಾಮದತ್ತ ಯಾವುದೇ ಸ್ಪಷ್ಟ ಪ್ರಗತಿಯಿಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ತಮ್ಮ ಮಧ್ಯಪ್ರಾಚ್ಯ ಪ್ರವಾಸವನ್ನು ಕೊನೆಗೊಳಿಸಿದ್ದರಿಂದ ಇತ್ತೀಚಿನ ದಾಳಿಗಳು ನಡೆದಿವೆ. ಮಧ್ಯರಾತ್ರಿಯಿಂದ, ನಾವು 58 ಹುತಾತ್ಮರನ್ನು ಸ್ವೀಕರಿಸಿದ್ದೇವೆ. ಆದರೆ ಸಾವನ್ನಪ್ಪಿದವರು ಹೆಚ್ಚಿನವರು ಅವಶೇಷಗಳ ಅಡಿಯಲ್ಲಿದ್ದಾರೆ. ಆಸ್ಪತ್ರೆಯೊಳಗಿನ ಪರಿಸ್ಥಿತಿ ವಿಕೋಪಕಾರಿಯಾಗಿದೆ ಎಂದು ಉತ್ತರ ಗಾಜಾದಲ್ಲಿರುವ ಇಂಡೋನೇಷ್ಯಾ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಸುಲ್ತಾನ್ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 459 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾ ಪಟ್ಟಿಯಲ್ಲಿ ಕಾರ್ಯಾಚರಣೆಗಳನ್ನು ವಿಸ್ತರಿಸಲು ಮತ್ತು ಪ್ಯಾಲೆಸ್ಟೀನಿಯನ್ ಎನ್ಕ್ಲೇವ್ ಪ್ರದೇಶಗಳಲ್ಲಿ…

Read More

ಬಾಗಲಕೋಟೆ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರನಿಗೆ ಹೃದಯಾಘಾತದಿಂದ ಕುಸಿದು ಬಿದ್ದು ಕಲ್ಯಾಣ ಮಂಟಪದಲ್ಲೇ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರ ಪ್ರವೀಣ್ ಕುರ್ನೆಗೆ ಕಲ್ಯಾಣ ಮಂಟಪದಲ್ಲಿ ಹೃದಯಾಘಾತ ಉಂಟಾಗಿದೆ. ಹೀಗಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆಗೂ ಮುನ್ನಾ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ. ಇದೀಗ ಕಲ್ಯಾಣ ಮಂಟಪದಲ್ಲೇ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕಲ್ಯಾಣ ಮಂಟಪವು ಸೂತಕದ ಮನೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/try-to-achieve-first-place-in-gst-collection-in-the-country-cms-call-to-commercial-tax-officials/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More

ಬೆಂಗಳೂರು : ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು. ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿಯಲ್ಲಿ ಖಾಲಿ ಇದ್ದಂತ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಈಗಾಗಲೇ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಯ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 16-12-2024 ರಿಂದ ನಡೆಸಲಾಗುತ್ತಿದೆ. ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ: 08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ. ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 23-05-2025 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 22-05-2025 ರ…

Read More

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ. ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ…

Read More

ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು. ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌…

Read More

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹೊಡೆತವಾಗಿ, 13 ಕೌನ್ಸಿಲರ್‌ಗಳು ಅದರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಡಾಯ ಕೌನ್ಸಿಲರ್‌ಗಳು ಹೇಮಚಂದ್ ಗೋಯಲ್ ನೇತೃತ್ವದಲ್ಲಿ ಪ್ರತ್ಯೇಕ ಪಕ್ಷವನ್ನು ಸ್ಥಾಪಿಸುವ ಸಾಧ್ಯತೆಯಿದೆ. ದೆಹಲಿ ಮಹಾನಗರ ಪಾಲಿಕೆಯಲ್ಲಿ ಎಎಪಿಯ ಸದನದ ನಾಯಕರಾಗಿದ್ದ ಮುಖೇಶ್ ಗೋಯಲ್ ಕೂಡ ಬಂಡಾಯಗಾರರಲ್ಲಿ ಒಬ್ಬರು. ಎಲ್ಲಾ ಪುರಸಭೆ ಸದಸ್ಯರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದ್ರಪ್ರಸ್ಥ ವಿಕಾಸ್ ಪಕ್ಷವನ್ನು ರಚಿಸಲು ನಿರ್ಧರಿಸಿದ್ದಾರೆ. ರಾಜೀನಾಮೆ ನೀಡಿದ ಕೌನ್ಸಿಲರ್‌ಗಳಲ್ಲಿ ಮುಖೇಶ್ ಗೋಯಲ್, ಹೇಮಂಚಂದ್ ಗೋಯಲ್, ದಿನೇಶ್ ಭಾರದ್ವಾಜ್, ಹಿಮಾನಿ ಜೈನ್, ಉಷಾ ಶರ್ಮಾ, ಸಾಹಿಬ್ ಕುಮಾರ್, ರಾಖಿ ಕುಮಾರ್, ಅಶೋಕ್ ಪಾಂಡೆ, ರಾಜೇಶ್ ಕುಮಾರ್, ಅನಿಲ್ ರಾಣಾ, ದೇವೇಂದ್ರ ಕುಮಾರ್ ಮತ್ತು ಹಿಮಾನಿ ಜೈನ್ ಸೇರಿದ್ದಾರೆ. ಅನಿತಾ ಬಸೋಯಾ (ಆಂಡ್ರ್ಯೂಸ್ ಗಂಜ್), ನಿಖಿಲ್ ಚಾಪ್ರಾಣ (ಹರಿ ನಗರ) ಮತ್ತು ಧರಮ್‌ವೀರ್ (ಆರ್ ಕೆ ಪುರಂ) – ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರಿದ ಕೇವಲ ಮೂರು ತಿಂಗಳ ನಂತರ ಎಎಪಿಗೆ ಆಘಾತವಾಯಿತು. ಕೌನ್ಸಿಲರ್‌ಗಳು…

Read More

ಒಡಿಶಾ: ಇಲ್ಲಿ ಮನಕಲಕುವ ಪ್ರಕರಣದಲ್ಲಿ, ಗಜಪತಿ ಜಿಲ್ಲೆಯ ಪರಲಖೆಮುಂಡಿ ಪಟ್ಟಣದ ಬಾಡಿಗೆ ಮನೆಯಲ್ಲಿ ತನ್ನ 54 ವರ್ಷದ ದತ್ತು ತಾಯಿ ರಾಜಲಕ್ಷ್ಮಿ ಕರ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ 13 ವರ್ಷದ ಬಾಲಕಿಯನ್ನು ಇಬ್ಬರು ಯುವಕರೊಂದಿಗೆ ಬಂಧಿಸಲಾಗಿದೆ. ಭುವನೇಶ್ವರದಲ್ಲಿ ಬಿಟ್ಟು ಹೋಗಿದ್ದ ಹುಡುಗಿಯ ಮರೆತುಹೋದ ಮೊಬೈಲ್ ಫೋನ್ ಎಂಬ ನಿರ್ಣಾಯಕ ಸುಳಿವು ಹೊರಬರುವವರೆಗೂ ಪ್ರಕರಣವು ಎರಡು ವಾರಗಳಿಗೂ ಹೆಚ್ಚು ಕಾಲ ಗೌಪ್ಯವಾಗಿತ್ತು. ರಾಜಲಕ್ಷ್ಮಿಯ ಸಹೋದರ ಸಿಬಾ ಪ್ರಸಾದ್ ಮಿಶ್ರಾ ಅವರು ಈ ಸಾಧನವನ್ನು ಕಂಡುಕೊಂಡರು ಮತ್ತು ಅದನ್ನು ಪರಿಶೀಲಿಸಿದಾಗ, ಕೊಲೆ ಸಂಚನ್ನು ವಿವರಿಸುವ ಇನ್‌ಸ್ಟಾಗ್ರಾಮ್ ಸಂಭಾಷಣೆಗಳನ್ನು ಕಂಡುಹಿಡಿದರು. ಸಂದೇಶಗಳಲ್ಲಿ ರಾಜಲಕ್ಷ್ಮಿಯನ್ನು ಕೊಂದು ಆಕೆಯ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿರ್ದಿಷ್ಟ ಚರ್ಚೆಗಳು ಸೇರಿವೆ ಎಂದು ವರದಿಯಾಗಿದೆ. ಇದರ ನಂತರ, ಮಿಶ್ರಾ ಮೇ 14 ರಂದು ಪರಲಖೆಮುಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು, ಇದು ಬಂಧನಕ್ಕೆ ಕಾರಣವಾಯಿತು. ಏನಿದು ಪ್ರಕರಣ? ಪೊಲೀಸರ ಪ್ರಕಾರ, ಹದಿಹರೆಯದ ಹುಡುಗಿ ಮತ್ತು ಅವಳ ಇಬ್ಬರು…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಉಲ್ಲೇಖಿತ (1)ರ ಟಿಪ್ಪಣಿಯೊಡನೆ ಲಗತ್ತಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ (2) ರಲ್ಲಿನ ತೀರ್ಪಿನಲ್ಲಿ, ಅನಧಿಕೃತವಾಗಿ ನಿರ್ಮಿಸುತ್ತಿರುವ ಹಾಗೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸರ್ಕಾರದ ಮತ್ತು ಸಾರ್ವಜನಿಕ ಸ್ವತ್ತಿನಲ್ಲಿ ನಿರ್ಮಿಸುತ್ತಿರುವ ನಿರ್ಮಿಸಿರುವ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಮುನ್ನ ಸ್ಥಳೀಯ ಪ್ರಾಧಿಕಾರಗಳು ನಿಯಮಾನುಸಾರ ಅನುಸರಿಸಬೇಕಾದ ಕಾರ್ಯವಿಧಾನಗಳ ಬಗ್ಗೆ ನಿರ್ದೇಶನಗಳನ್ನು ನೀಡಿರುವುದನ್ನು ಪ್ರಸ್ತಾಪಿಸಲಾಗಿರುತ್ತದೆ.…

Read More