Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ದಿನಾಂಕ 20-09-2025ರಂದು ಕರೆಯಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದಂದು ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯ ಸಾಮಾನ್ಯ ಸಭೆಯನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ. ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ತಿಳಿಸಲಾಗಿದೆ. ಇನ್ನೂ ಶ್ರೀ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಸದಸ್ಯರುಗಳಿಗೆ ಈಗಾಗಲೇ ಸಭೆಯ ನೋಟಿಸ್ ಅನ್ನು ಅವರವರ ವಿಳಾಸಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೇ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು. ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೋ? ಒಂದಂತು ನಿಜ ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಎಎಸ್ಪಿ ವರ್ಗಾವಣೆ ಮಾಡಿರುವ ಕುರಿತು ಮಾತನಾಡಿ, ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ…
ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಅವರ ಪತ್ರಿಕಾಗೋಷ್ಢಿಯ ಹೈಲೈಟ್ಸ್ ಮುಂದಿದೆ ಓದಿ. ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆ. ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ ಎಂದರು. ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ. 22 ಸೆಪ್ಟೆಂಬರ್ 2025 ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು…
ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು. ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/cumin-water-vs-chia-seeds-which-is-better-for-weight-loss-heres-the-information/
ತೂಕ ಇಳಿಸಿಕೊಳ್ಳಲು ನೈಸರ್ಗಿಕ ಪರಿಹಾರಗಳ ವಿಷಯಕ್ಕೆ ಬಂದರೆ, ಅಡುಗೆಮನೆಯಲ್ಲಿ ಸಿಗುವ ಆಹಾರ ಪದಾರ್ಥಗಳು ಹೆಚ್ಚಾಗಿ ಗಮನ ಸೆಳೆಯುತ್ತವೆ. ಎರಡು ಜನಪ್ರಿಯ ಪಾನೀಯಗಳಾದ ಜೀರಿಗೆ ನೀರು ಮತ್ತು ಚಿಯಾ ಬೀಜಗಳ ನೀರು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡಲು ವ್ಯಾಪಕವಾಗಿ ಶಿಫಾರಸು ಮಾಡಲ್ಪಡುತ್ತವೆ. ಆದರೆ ತೂಕ ಇಳಿಸಿಕೊಳ್ಳಲು ಯಾವುದು ಹೆಚ್ಚು ಪರಿಣಾಮಕಾರಿ? ಬನ್ನಿ ನೋಡೋಣ. ಪೌಷ್ಟಿಕಾಂಶದ ಮೌಲ್ಯ ಜೀರಿಗೆ (ಜೀರಿಗೆ) ಉತ್ಕರ್ಷಣ ನಿರೋಧಕಗಳು ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ಸಾರಭೂತ ತೈಲಗಳನ್ನು ಹೊಂದಿರುತ್ತದೆ ಕಡಿಮೆ ಕ್ಯಾಲೋರಿಗಳು ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಸಸ್ಯ ಆಧಾರಿತ ಪ್ರೋಟೀನ್ಗಳಲ್ಲಿ ಅಧಿಕವಾಗಿದೆ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ ನೆನೆಸಿದಾಗ ವಿಸ್ತರಿಸುತ್ತದೆ, ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ ತೂಕ ನಷ್ಟಕ್ಕೆ ಪ್ರಯೋಜನಗಳು ಜೀರಾ ಪಾನೀಯ ನೈಸರ್ಗಿಕವಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಚಿಯಾ…
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ. ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಸಹಜ. ನೂರಕ್ಕೆ ಲಕ್ಷ ಪರ್ಸೆಂಟ್ ಮದ್ದೂರು ಗಲಾಟೆಗೂ ವರ್ಗಾವಣೆಗೂ ಸಂಬಂಧ ಇಲ್ಲ ಎಂದರು. ಈ ಘಟನೆಗೆ ಪೊಲೀಸ್ ವೈಫಲ್ಯ ಕಾರಣ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಆ ಬಗ್ಗೆ ಮಾಹಿತಿ ನೀಡುವೆ. ಘಟನೆ ಸಂಬಂಧ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ.…
ಶಿವಮೊಗ್ಗ: ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ.ಆರ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಶಿವಮೊಗ್ಗ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅವರನ್ನು ನೇಮಕ ಮಾಡಲಾಗಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಮಾರುತಿ.ಆರ್ ಅವರು ಕೆಎಟಿ ಮೊರೆ ಹೋಗಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದಂತ ಕೋರ್ಟ್ ಸರ್ಕಾದ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೇ ಶಿವಮೊಗ್ಗ ವಾರ್ತಾಧಿಕಾರಿಯಾಗಿಯೇ ಮುಂದುವರಿಕೆ ಆದೇಶ ಮಾಡಿದೆ. ಆಗಸ್ಟ್.22ರಂದು ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿಯವರು ಶಿವಮೊಗ್ಗ ವಾರ್ತಾಧಿಕಾರಿಯಾಗಿದ್ದಂತ ಮಾರುತಿ.ಆರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದರು. ಈ ಆದೇಶದ ಕಾರಣ ಅಂದೇ ವಾರ್ತಾ ಇಲಾಖೆಯ ಆಯುಕ್ತರು ಮಾರುತಿ.ಆರ್ ಅವರನ್ನು ವರ್ಗಾವಣೆಗೊಳಿಸಿ ಚಾಲನಾದೇಶವನ್ನು ಮಾಡಿದ್ದರು. ಮಾರುತಿ.ಆರ್ ಅವರ ಸ್ಥಾನಕ್ಕೆ ದಾವಣಗೆರೆಯ ವಾರ್ತಾಧಿಕಾರಿಯಾಗಿದ್ದಂತ ಧನಂಜಯ ಅವರನ್ನು ನೇಮಕ ಮಾಡಲಾಗಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಆಗಸ್ಟ್.23ರಂದು ಶಿವಮೊಗ್ಗ ವಾರ್ತಾಧಿಕಾರಿ ಮಾರುತಿ.ಆರ್ ಅವರು ಕೆಎಟಿ ಮೊರೆ ಹೋಗಿದ್ದರು. ಕೆಎಟಿಯಲ್ಲಿ OA A.No.3832/2025 ರಡಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕರ್ನಾಟಕ ಆಡಳಿತ ನ್ಯಾಯಮಂಡಳಿಯು…
ಬಾದಾಮಿ ಪ್ರಪಂಚದಾದ್ಯಂತ ಆನಂದಿಸಲ್ಪಡುವ ಪೌಷ್ಟಿಕ ಮತ್ತು ರುಚಿಕರವಾದ ಆಹಾರವಾಗಿದ್ದು, ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಅಂಶಕ್ಕೆ ಹೆಸರುವಾಸಿಯಾಗಿದೆ. ಅನೇಕ ಜನರು ಬಾದಾಮಿಯನ್ನು ತಿನ್ನುವ ಮೊದಲು ರಾತ್ರಿಯಿಡೀ ನೆನೆಸಿಡುತ್ತಾರೆ, ಈ ಪ್ರಕ್ರಿಯೆಯು ಅವರ ಆರೋಗ್ಯ ಪ್ರಯೋಜನಗಳನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ ಎಂದು ನಂಬುತ್ತಾರೆ. ಆದರೆ ಬಾದಾಮಿಯನ್ನು ನೆನೆಸುವುದು ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಇದು ಪೀಳಿಗೆಯಿಂದ ಪೀಳಿಗೆಗೆ ಬಂದಿರುವ ಸಾಂಪ್ರದಾಯಿಕ ಅಭ್ಯಾಸವೇನು ಎನ್ನುವ ಬಗ್ಗೆ ಮುಂದೆ ಓದಿ. ಬಾದಾಮಿಯನ್ನು ನೆನೆಸುವುದರಿಂದ ಫೈಟಿಕ್ ಆಮ್ಲದಂತಹ ಪೋಷಕಾಂಶ ವಿರೋಧಿ ಅಂಶಗಳು ಕಡಿಮೆಯಾಗುತ್ತವೆ ಎಂದು ಹೇಳಲಾಗುತ್ತದೆ, ಇದು ಖನಿಜ ಹೀರಿಕೊಳ್ಳುವಿಕೆಗೆ ಅಡ್ಡಿಯಾಗುತ್ತದೆ. ಹೆಚ್ಚುವರಿಯಾಗಿ, ನೆನೆಸಿದ ಬಾದಾಮಿಯ ಮೃದುವಾಗಿರುತ್ತದೆ, ಕೆಲವು ಜನರಿಗೆ ಅವುಗಳನ್ನು ಅಗಿಯಲು ಮತ್ತು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ. ಆದಾಗ್ಯೂ, ಪೌಷ್ಠಿಕಾಂಶದ ಮೇಲಿನ ಒಟ್ಟಾರೆ ಪರಿಣಾಮವು ವೈಯಕ್ತಿಕ ಆರೋಗ್ಯ ಅಗತ್ಯಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿ ಬದಲಾಗಬಹುದು. ಬಾದಾಮಿಯನ್ನು ನೆನೆಸಿ ತಿನ್ನುವುದರ ಪ್ರಯೋಜನಗಳು ಬಾದಾಮಿಯನ್ನು ನೆನೆಸುವುದರಿಂದ ಹಲವಾರು ಪ್ರಯೋಜನಗಳಿವೆ, ಅವುಗಳೆಂದರೆ: 1. ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ…
ವೀಳ್ಯದ ಎಲೆಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತಿರುವುದರಿಂದ ಅವುಗಳನ್ನು ಸಾಂಪ್ರದಾಯಿಕ ಔಷಧಿಗಳಾಗಿ ಬಳಸಲಾಗುತ್ತಿತ್ತು. ಬಾಯಿಯ ಆರೋಗ್ಯವನ್ನು ಉತ್ತೇಜಿಸುವುದರಿಂದ ಹಿಡಿದು ಮಧುಮೇಹವನ್ನು ನಿರ್ವಹಿಸುವವರೆಗೆ, ಅದನ್ನು ಅಗಿಯುವುದರಿಂದಾಗುವ ಅದ್ಭುತ ಪ್ರಯೋಜನಗಳನ್ನು ಪರಿಶೀಲಿಸಿ. ಓದಲು ಟ್ಯಾಪ್ ಮಾಡಿ! ಬಾಯಿಯ ಆರೋಗ್ಯ ವೀಳ್ಯದ ಎಲೆಗಳು ಬಾಯಿಯ ನೈರ್ಮಲ್ಯವನ್ನು ಸುಧಾರಿಸಲು ಮತ್ತು ಉಸಿರಾಟವನ್ನು ತಾಜಾಗೊಳಿಸಲು ಸಹಾಯ ಮಾಡುತ್ತದೆ. ಇದು ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಆರೋಗ್ಯಕರ ಒಸಡುಗಳು ಮತ್ತು ಹಲ್ಲುಗಳನ್ನು ಉತ್ತೇಜಿಸುತ್ತದೆ. ಮಧುಮೇಹ ವಿರೋಧಿ ವೀಳ್ಯದ ಎಲೆಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣವನ್ನು ಉತ್ತಮವಾಗಿ ಬೆಂಬಲಿಸುತ್ತವೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತವೆ. ಇದು ನೈಸರ್ಗಿಕ ಮೂಲಗಳಿಂದ ಮಧುಮೇಹವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಉರಿಯೂತ ವಿರೋಧಿ ಸಂಧಿವಾತ ಮತ್ತು ಕೀಲು ನೋವಿನಿಂದ ಉಂಟಾಗುವ ನೋವು, ಊತ ಮತ್ತು ಉರಿಯೂತವನ್ನು ಕಡಿಮೆ ಮಾಡಲು ವೀಳ್ಯದ ಎಲೆಗಳು ಸಹಾಯ ಮಾಡುತ್ತವೆ. ಅವು ನೈಸರ್ಗಿಕ ಉರಿಯೂತ ನಿವಾರಕ ಏಜೆಂಟ್ಗಳ ಗುಣಲಕ್ಷಣಗಳನ್ನು ಹೊಂದಿವೆ. ಹೃದಯರಕ್ತನಾಳದ ಪ್ರಯೋಜನಗಳು ವೀಳ್ಯದ ಎಲೆಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ…
ಭಾರತೀಯ ಮನೆಗಳಲ್ಲಿ ಬಾದಾಮಿ ಬಹಳ ಹಿಂದಿನಿಂದಲೂ ಅಚ್ಚುಮೆಚ್ಚಿನದು, ಅದನ್ನು ಬೆಚ್ಚಗಿನ ಹಲ್ವಾ ಬಟ್ಟಲಿನಲ್ಲಿ ಹಾಕಿ ತಿನ್ನುವುದಾಗಲಿ, ಕಡಲೆಕಾಯಿ ಬೆಣ್ಣೆಯಲ್ಲಿ ಪುಡಿಮಾಡಿ ತಿನ್ನುವುದಾಗಲಿ ಅಥವಾ ಜಾಡಿಯಿಂದ ನೇರವಾಗಿ ತಿನ್ನುವುದನ್ನು ಮಾಡಲಾಗುತ್ತದೆ. ಆದರೆ ಆರೋಗ್ಯ ಉತ್ಸಾಹಿಗಳನ್ನು ವಿಭಜಿಸುವ ಚರ್ಚೆ ಮುಂದುವರೆದಿದೆ. ನೀವು ಅವುಗಳನ್ನು ಕಚ್ಚಾ ತಿನ್ನಬೇಕೇ ಅಥವಾ ರಾತ್ರಿಯಿಡೀ ನೆನೆಸಿಡಬೇಕೇ? ಎನ್ನುವುದರ ಬಗ್ಗೆ ಮುಂದೆ ಓದಿ. ಬಾದಾಮಿಯನ್ನು ರಾತ್ರಿಯಿಡೀ ನೆನೆಸುವುದು ಆಯುರ್ವೇದ ಮತ್ತು ಸಾಂಪ್ರದಾಯಿಕ ಭಾರತೀಯ ಆರೋಗ್ಯ ದಿನಚರಿಯಲ್ಲಿ ಬೇರೂರಿರುವ ಸಾಮಾನ್ಯ ಅಭ್ಯಾಸವಾಗಿದೆ. ಈ ಪ್ರಕ್ರಿಯೆಯು ಕಾಯಿಯ ಕಂದು ಚರ್ಮವನ್ನು ಮೃದುಗೊಳಿಸುತ್ತದೆ, ಸಿಪ್ಪೆ ಸುಲಿಯಲು ಮತ್ತು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆಯೇ? ಹಲವಾರು ಪೌಷ್ಟಿಕಾಂಶ ಸಂಶೋಧಕರ ಪ್ರಕಾರ, ಬಾದಾಮಿಯನ್ನು ನೆನೆಸುವುದು ನಿಜವಾಗಿಯೂ ಅವುಗಳ ಜೀರ್ಣಸಾಧ್ಯತೆಯನ್ನು ಸುಧಾರಿಸುತ್ತದೆಯೇ? ಎಂಬುದೇ ಪ್ರಶ್ನೆಯಾಗಿದೆ. ಬಾದಾಮಿಯ ಹೊರಗಿನ ಕಂದು ಚರ್ಮವು ಟ್ಯಾನಿನ್ಗಳು ಮತ್ತು ಫೈಟಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುವ ನೈಸರ್ಗಿಕ ಸಂಯುಕ್ತಗಳಾಗಿವೆ. ಬಾದಾಮಿಯನ್ನು ನೆನೆಸಿದಾಗ, ಈ ಸಂಯುಕ್ತಗಳು ಭಾಗಶಃ ಒಡೆಯಲ್ಪಡುತ್ತವೆ, ದೇಹವು ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಸತುವಿನಂತಹ ಹೆಚ್ಚಿನ ಪೋಷಕಾಂಶಗಳನ್ನು…












