Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ-2026ರ ಅಂಗವಾಗಿ ಯಶವಂತಪುರದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ (ಬೆಂಗಳೂರು ಉತ್ತರ) ಆವರಣದಲ್ಲಿ ಇಂದು ‘ವಿಶೇಷ ರಕ್ತದಾನ ಶಿಬಿರ’ ಮತ್ತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ (RTO) ಬಿ.ಶ್ರೀನಿವಾಸ ಪ್ರಸಾದ್ ಅವರು, ರಸ್ತೆ ಸುರಕ್ಷತೆ ಮತ್ತು ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ಸಂದರ್ಭಗಳಲ್ಲಿ ರಸ್ತೆ ಬಳಕೆದಾರರ ಅಜಾಗರೂಕತೆ ಅಥವಾ ರಸ್ತೆ ಸುರಕ್ಷತೆಯ ನಿಯಮಗಳ ಅರಿವಿನ ಕೊರತೆಯಿಂದಾಗಿಯೇ ಭೀಕರ ಅಪಘಾತಗಳು ಸಂಭವಿಸುತ್ತವೆ. ಮನುಷ್ಯನಿಗೆ ಬದುಕಲು ಬೇಕಾದ ಇತರೆ ಮೂಲಭೂತ ಕೌಶಲ್ಯಗಳು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ‘ರಸ್ತೆ ಸುರಕ್ಷತಾ ಶಿಕ್ಷಣ’ವನ್ನು ಕಲಿಯುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಅವರು ಅಭಿಪ್ರಾಯಪಟ್ಟರು. ರಸ್ತೆ ಸುರಕ್ಷತಾ ಸಪ್ತಾಹ ಮತ್ತು ಮಾಸಾಚರಣೆಯು ಕೇವಲ ಒಂದು ಆಚರಣೆಯಲ್ಲ, ಇದೊಂದು ರಾಷ್ಟ್ರವ್ಯಾಪಿ ಅಭಿಯಾನವಾಗಿದೆ. ಅಸ್ತಿತ್ವದಲ್ಲಿರುವ ಮತ್ತು ಹೊಸದಾಗಿ ಲೈಸೆನ್ಸ್ ಪಡೆಯುವ ಸಂಭಾವ್ಯ ಚಾಲಕರಲ್ಲಿ ಸುರಕ್ಷಿತ ಚಾಲನಾ…
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಅಳವಡಿಕೆ ಮಾಡದೇ ಆರೋಗ್ಯಕರ ಪ್ರಜಾಪ್ರಭುತ್ವ, ಸಕಾರಾತ್ಮಕ ಒಕ್ಕೂಟ ವ್ಯವಸ್ಥೆಯಡಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುವು ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾನ್ಯ ರಾಜ್ಯಪಾಲರು ಭಾಷಣ ಮಾಡಲು ಎಲ್ಲಿಯೂ ವಿರೋಧಿಸಿಲ್ಲ. ರಾಜ್ಯ ಸರ್ಕಾರವು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಹರಡುವುದಕ್ಕೆ ಮತ್ತು ಜನಸಾಮಾನ್ಯರನ್ನು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮಾತ್ರ ವಿರೋಧಿಸಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರವು ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ರೀತಿಯ ಅಪಪ್ರಚಾರಕ್ಕೆ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರನ್ನೂ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ. ಹಾಗೂ ಇದು ಸಂವಿಧಾನ ವಿರೋಧಿ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರದ ಎಕತೆ ಮತ್ತು ಅಖಂಡತೆಗೆ ಧಕ್ಕೆ ತರಬಲ್ಲಂತಹ ಹೇಳಿಕೆಯನ್ನು ನಾನು ಓದುವುದಿಲ್ಲ ಎಂದು ಮಾನ್ಯ ರಾಜ್ಯಪಾಲರು ಹೇಳಿರುವುದು ಸ್ವಾಗತಾರ್ಹ ಹಾಗೂ…
ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಅಂಗಡಿಯೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಗುಜರಿ ಅಂಗಡಿಯಲ್ಲಿದ್ದಂತ ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದಾವೆ. ಗುಜರಿ ಅಂಗಡಿಗೆ ತಗುಲಿದ ಬೆಂಕಿ ಅಕ್ಕ ಪಕ್ಕದ ಮನೆಗೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಹೆಂಗಾರು ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/house-being-used-to-engage-in-hate-politics-against-the-central-government-by-vijayendra-kidikidi/ https://kannadanewsnow.com/kannada/kochi-muziris-biennale-brings-new-impetus-to-kerala-tourism-road-show-across-the-country/
ಬೆಂಗಳೂರು: ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನವನ್ನು ಬಳಸುತ್ತಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾನ್ಯ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇವತ್ತು ಮಾತನಾಡಿದ್ದಾರೆ. ಆದರೆ, ಸದನದ ಒಳಗಡೆ ಗೌರವಾನ್ವಿತ ರಾಜ್ಯಪಾಲರಿಗೆ ಅಗೌರವ ಸೂಚಿಸುವ ಕೆಲಸವನ್ನು ಆಡಳಿತ ಪಕ್ಷದವರು ಮಾಡಿದ್ದು ಖಂಡನಾರ್ಹ ಎಂದು ತಿಳಿಸಿದರು. ಈ ಕಾಂಗ್ರೆಸ್ ಸರಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕೆಲಸ ಮಾಡಿದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ದಾರಿಯಲ್ಲಿ ರಾಜ್ಯ ಸರಕಾರ ಸಾಗುತ್ತಿದೆ. ಸದನದ ದುರ್ಬಳಕೆಯನ್ನೂ ರಾಜ್ಯ ಸರಕಾರ ಮಾಡಲು ಹೊರಟಿರುವುದು ದುರ್ದೈವ ಎಂದು ಟೀಕಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಜೀಯವರು, ಕೇಂದ್ರ ಸರಕಾರವು ಮನ್ ರೇಗಾದಲ್ಲಿ ವಿಬಿ ಜಿ ರಾಮ್ ಜಿ ಎಂದು ಕೆಲವು ಮಾರ್ಪಾಡುಗಳನ್ನು ಮಾಡಿದ್ದಾರೆ. ಸುಧಾರಣೆಗಳನ್ನು ತಂದಿದ್ದಾರೆ. ಅದರ ವಿರುದ್ಧ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್…
ಬೆಂಗಳೂರು: ಸದನದಲ್ಲಿ ಮಾನ್ಯ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ ಎಂದು ಆಕ್ಷೇಪಿಸಿದರು. ಗೌರವಾನ್ವಿತ ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಬಿದ್ದು ಅವರನ್ನು ಥಳಿಸುವ ಹಂತಕ್ಕೂ ಬಂದಿದ್ದುದು ಈಗಾಗಲೇ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ; ಇದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು. ಈ ಗೂಂಡಾಗಿರಿಯ ಹೊಣೆ ಹೊತ್ತು ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಮಾನ್ಯ ರಾಜ್ಯಪಾಲರ ವಿರುದ್ಧ ನೀವು ಕನಿಷ್ಠ ಪ್ರಜ್ಞೆಯೂ ಇಲ್ಲದೇ ಗೂಂಡಾಗಿರಿ ಪ್ರದರ್ಶನ ಮಾಡಿರುವುದು ಅಸಾಂವಿಧಾನಿಕ; ಇದು ಸಂವಿಧಾನ ವಿರೋಧಿ. ಇವತ್ತು ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಯ ಪರವಾಗಿದೆ. ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸವನ್ನು ಅವರು ಮಾಡಿದ್ದಾರೆ. ಅದನ್ನು…
ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಬಾಡಿಗೆ ಕೋಣೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನಂತರ ಅಸ್ವಾಭಾವಿಕ ಸಾವು ಎಂದು ದಾಖಲಾಗಿದ್ದ ಪ್ರಕರಣ ಈಗ ನಾಟಕೀಯ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರು ಅನುಮಾನ ವ್ಯಕ್ತಪಡಿಸಿದ ನಂತರ ಪೊಲೀಸರು ಆಕೆಯ ಪತಿ ಮತ್ತು ಆತನ ಸ್ನೇಹಿತನನ್ನು ಕೊಲೆ ಶಂಕೆಯ ಮೇಲೆ ಬಂಧಿಸಿದ್ದಾರೆ. ಜನವರಿ 10 ರಂದು ಮೃತ ಮಹಿಳೆಯ ಸಹೋದರ ಅರುಣ್ ಕುಮಾರ್ ಸಲ್ಲಿಸಿದ ದೂರಿನ ಪ್ರಕಾರ, ಆಶಾ ಕುಣಿಗಲ್ ತಾಲ್ಲೂಕಿನ ಸಂತೇಮವತೂರು ಗ್ರಾಮದ ವಿರೂಪಾಕ್ಷ ಅವರನ್ನು ಸುಮಾರು ಆರು ವರ್ಷಗಳ ಹಿಂದೆ ವಿವಾಹವಾದರು, ನಂತರ ಇಬ್ಬರೂ ಸಂಬಂಧದಲ್ಲಿದ್ದರು. ದಂಪತಿಗಳು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಮತ್ತು ಕಳೆದ ಒಂದೂವರೆ ವರ್ಷಗಳಿಂದ ರಾಜರಾಜೇಶ್ವರಿನಗರದಲ್ಲಿ ವಾಸಿಸುತ್ತಿದ್ದರು. ವಿರೂಪಾಕ್ಷ ಅವರು ಮದುವೆಯ ಆರಂಭದಿಂದಲೂ ಆಶಾ ಅವರನ್ನು ನೋಡಿಕೊಳ್ಳಲು ವಿಫಲರಾಗಿದ್ದರು, ನಿಯಮಿತವಾಗಿ ಕೆಲಸ ಮಾಡುತ್ತಿರಲಿಲ್ಲ ಮತ್ತು ಅವರ ಆದಾಯದ ಮೇಲೆ ಅವಲಂಬಿತರಾಗಿದ್ದರು ಎಂದು ಅರುಣ್ ಕುಮಾರ್ ಆರೋಪಿಸಿದ್ದಾರೆ. ವಿರೂಪಾಕ್ಷ ಅವರ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ವಿವಾದಗಳಿಂದಾಗಿ ನಂತರ ಮದುವೆ ಹದಗೆಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.…
ಬೆಂಗಳೂರು: ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ವಿನಾ ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು. ಗೌರವಾನ್ವಿತ ರಾಜ್ಯಪಾಲರು ಸಂವಿಧಾನಬದ್ಧವಾಗಿ ಇರುವ ಅವರ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದಾರೆ. ಆದರೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದ ಹೊರಗಡೆಯೂ ನೀವು ಅಪಮಾನ ಮಾಡುತ್ತೀರಿ. ಜಂಟಿ ಸದನವನ್ನುದ್ದೇಶಿಸಿ ಮಾತನಾಡಿ ತೆರಳುವ ಸಂದರ್ಭದಲ್ಲಿ ಅವರಿಗೆ ಸದನದ ಒಳಗಡೆಯೂ ತಡೆ ಒಡ್ಡಲಾಗಿದೆ; ಅವರ ಮೇಲೆ ದಬ್ಬಾಳಿಕೆ ಮಾಡಲಾಗಿದೆ. ಇದು ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು. ನಿನ್ನೆ ನಾನು ಮಾನ್ಯ ಕಾನೂನು ಸಚಿವ ಎಚ್.ಕೆ.ಪಾಟೀಲರ ಮಾತುಗಳನ್ನೂ ಗಮನಿಸಿದ್ದೇನೆ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಪ್ರಶ್ನಿಸಿದ್ದಂತ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್ ಜನವರಿ.28ಕ್ಕೆ ಮುಂದೂಡಿದೆ. ಇಂದು ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಹಿ ಕೃಷ್ಣ ಅವರು ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ನಡೆಸಿತು. ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶವನ್ನು ಜನವರಿ.28ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಮತ್ತೆ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಕೇಸಲ್ಲಿ ಸಂಕಷ್ಟ ಎದುರಾಗಲಿದ್ಯಾ ಎಂಬುದು ಕುತೂಹಲ ಮೂಡಿಸಿದೆ. https://kannadanewsnow.com/kannada/bangladesh-boycotts-t20-world-cup/ https://kannadanewsnow.com/kannada/kochi-muziris-biennale-brings-new-impetus-to-kerala-tourism-road-show-across-the-country/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತದಲ್ಲಿ ಪಂದ್ಯಗಳನ್ನು ಆಡುವ ಬಗ್ಗೆ ಬಗೆಹರಿಯದ ಕಳವಳಗಳನ್ನು ಉಲ್ಲೇಖಿಸಿ ಬಾಂಗ್ಲಾದೇಶ ಸರ್ಕಾರ ತನ್ನ ಕ್ರಿಕೆಟ್ ತಂಡವು ಮುಂಬರುವ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಭಾರತದಿಂದ ತಮ್ಮ ಪಂದ್ಯಗಳನ್ನು ಸ್ಥಳಾಂತರಿಸುವ ಬಾಂಗ್ಲಾದೇಶದ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದು ಮಂಡಳಿ, ಐಸಿಸಿ ಮತ್ತು ಭಾರತೀಯ ಕ್ರಿಕೆಟ್ ಅಧಿಕಾರಿಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. https://kannadanewsnow.com/kannada/pay-salaries-of-gram-panchayat-staff-without-considering-e-attendance-state-government-orders/
ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪಂಚತಂತ್ರ ತಂತ್ರಾಂಶದಲ್ಲಿ ಇ-ಹಾಜರಾತಿ ದಾಖಲಿಸಲು ತಾಂತ್ರಿಕ ಸಮಸ್ಯೆಗಳು ಉಂಟಾದ ಸಂದರ್ಭಗಳಲ್ಲಿ ಅದನ್ನು ಪರಿಗಣಿಸದೇ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ತಾಂತ್ರಿಕ ದೋಷದ ಕಾರಣ ಇ-ಹಾಜರಾತಿ ಸಿಗದೇ ವೇತನ ವಿಳಂಬ ಅನುಭವಿಸುತ್ತಿದ್ದಂತ ಗ್ರಾಮ ಪಂಚಾಯ್ತಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಸಿಇಓಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ತಾಂತ್ರಿಕ ದೋಷಗಳಿಂದಾಗಿ ಇ-ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗದೇ ಇದ್ದಾಗ, ಅಂಥಹ ತಾಂತ್ರಿಕ ದೋಷಗಳನ್ನು ಪಂಚತಂತ್ರ 2.0 ನಲ್ಲಿ ಸರಿಪಡಿಸಲು ಹಾಗೂ ಪೂರ್ಣ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ರಿ), (ಸಿಐಟಿಯು ಸಂಯೋಜಿತ), ರವರು ಉಲ್ಲೇಖಿತ ಸಭೆಯಲ್ಲಿ ಮನವಿ ಸಲ್ಲಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದು, ಪಂಚತಂತ್ರ 2.0 ತಂತ್ರಾಂಶದಲ್ಲಿ ಅಥವಾ ಮೊಬೈಲ್ ಆಪ್ ಮೂಲಕ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿಯನ್ನು ದಾಖಲಿಸಲು…














