Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ರಾಷ್ಟ್ರೀಯ ಹುತಾತ್ಮರ ದಿನದಂದೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದರು. 30 ಲಕ್ಷದಿಂದ ಪರಿಹಾರದ ಮೊತ್ತವನ್ನು 50 ಲಕ್ಷಕ್ಕೆ ಹೆಚ್ಚಿಸಿದ್ದಂತ ಸರ್ಕಾರಕ್ಕೆ ಸಾಗರ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಅರಣ್ಯ ಇಲಾಖೆಯ ನೌಕರರ ಬೇಡಿಕೆಗಳು, ಸೌಲಭ್ಯಗಳಿಗೆ ಸರ್ಕಾರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅರಣ್ಯ ಇಲಾಖೆಯ ನೌಕರರಿಗೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಲು ನೆರವಾಗಬೇಕು. ಮಾನವ-ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದ ಅರಣ್ಯ ಇಲಾಖೆಯ ನೌಕರರಿಗೆ 30 ರಿಂದ 50 ಲಕ್ಷಕ್ಕೆ ಪರಿಹಾರ ಹೆಚ್ಚಿಸಿದ್ದಕ್ಕೆ ಸಚಿವ ಈಶ್ವರ್ ಖಂಡ್ರೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನೌಕರರ ಪರವಾಗಿ ಸಂತೋಷ್ ಕುಮಾರ್ ಅಭಿನಂದನೆ ತಿಳಿಸಿದರು. ಅರಣ್ಯ ಇಲಾಖೆಯ ನೌಕರರ ಇನ್ನೂ ಹಲವು ಬೇಡಿಕೆ ಈಡೇರೇಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿ. ಆ ಮೂಲಕ ನೌಕರರ…
ಶಿವಮೊಗ್ಗ: ಇಂದು ಸಾಗರ ತಾಲ್ಲೂಕಿನ ಕೊಗಾರಿನಲ್ಲಿ ಶರಾವತಿ ವನ್ಯಜೀವಿ ವಲಯದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಯಿತು. ಮಾನವ-ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದಂತ ನೌಕರರಿಗೆ ಕೊಗಾರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕಾತೇದಾರ್ ಅವರು ಗೌರವ ನಮನ ಸಲ್ಲಿಸಿದರು. ಈ ಬಳಿಕ ನೌಕರರನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಸೆ.11ರಂದು ರಾಷ್ಟ್ರೀಯ ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ದೇಶ, ರಾಜ್ಯದಲ್ಲಿ ಅರಣ್ಯ ಇಲಾಖೆಯ ನೌಕರರು ಮಾನವ-ಪ್ರಾಣಿ ಸಂಘರ್ಷದಲ್ಲಿ ಹಲವಾರು ಹುತಾತ್ಮರಾಗಿದ್ದಾರೆ. ಕಾಡಿನಿಂದ ನಾಡಿಗೆ ಬರುವಂತ ಪ್ರಾಣಿಗಳ ನಿಯಂತ್ರಣ, ಕಾಡ್ಗಿಚ್ಚಿನ ಸಂದರ್ಭದಲ್ಲಿ ಹಲವು ಅರಣ್ಯ ಇಲಾಖೆಯ ನೌಕರರು ಹುತಾತ್ಮರಾಗಿದ್ದಾರೆ. ಅವರನ್ನು ನಾವು ಸ್ಮರಿಸೋಣ. ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದರು. ರಾಜ್ಯದಲ್ಲಿ ಕಾಡಿಗೆ ಅಮೂಲ್ಯ ಸ್ಥಾನವನ್ನು ನೀಡಲಾಗಿದೆ. ಆಲದ ಮರಕ್ಕೆ ದೇವರ ಸ್ಥಾನ ನೀಡಲಾಗಿದೆ. ದೇವರ ವನವಿದೆ. ಸಮುದಾಯ ಅರಣ್ಯವಿದೆ. ದೇವರ ಹೆಸರಿನಲ್ಲಿ ಕಾಡನ್ನು ಕಾಡುವಂತದ್ದನ್ನು ನಾವು ರೂಡಿಸಿಕೊಂಡು ಬಂದಿದ್ದೇವೆ. ಈ ಸಂಸ್ಕೃತಿ ಮುಂದುವರೆಯಲಿ. ಅಲ್ಲದೇ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಹಿಂದಿನ ಕತೆಯನ್ನು ನೌಕರರಿಗೆ ವಿವರವಾಗಿ…
ಗುರುವಾರ, ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದೆ. ಶಂಕಿತನನ್ನು ಗುರುತಿಸುವಲ್ಲಿ ಸಾರ್ವಜನಿಕರ ಸಹಾಯವನ್ನು ಕೋರಿದೆ. “ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಚಾರ್ಲಿ ಕಿರ್ಕ್ ಅವರ ಮಾರಕ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಈ ಆಸಕ್ತ ವ್ಯಕ್ತಿಯನ್ನು ಗುರುತಿಸಲು ನಾವು ಸಾರ್ವಜನಿಕರ ಸಹಾಯವನ್ನು ಕೇಳುತ್ತಿದ್ದೇವೆ” ಎಂದು ಎಫ್ಬಿಐ ಸಾಲ್ಟ್ ಲೇಕ್ ಸಿಟಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ಚಿತ್ರಗಳನ್ನು ಲಗತ್ತಿಸಿ ತಿಳಿಸಿದೆ. ಬುಧವಾರ ಚಾರ್ಲಿ ಕಿರ್ಕ್ ಎಂಬಾತ ಸ್ನೈಪರ್ ನಿಂದ ಗುಂಡು ಹಾರಿಸಲ್ಪಟ್ಟನು, ಮತ್ತು ಅಧಿಕಾರಿಗಳು ನಂಬುವಂತೆ ಒಂದು ಗುಂಡು ಹಾರಿಸಿ ನಂತರ ಛಾವಣಿಯಿಂದ ಹಾರಿ ನೆರೆಹೊರೆಗೆ ಓಡಿಹೋದನು. ದಾಳಿಯಲ್ಲಿ ಬಳಸಲಾಗಿದೆ ಎಂದು ಅವರು ನಂಬುವ ಹೈಪವರ್, ಬೋಲ್ಟ್-ಆಕ್ಷನ್ ರೈಫಲ್ ಅನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ ಮತ್ತು ಹತ್ಯೆಯ ಹಿಂದೆ ಇದ್ದಾನೆ ಎಂದು ಅವರು ನಂಬುವ ವ್ಯಕ್ತಿಯ ವೀಡಿಯೊ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಮಿತ್ರರಾದ ಚಾರ್ಲಿ ಕಿರ್ಕ್ ಅವರು ಹಗಲು ಹೊತ್ತಿನಲ್ಲಿ ಸಾಮಾಜಿಕ…
ಶಿವಮೊಗ್ಗ: ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕವಿ ವಿ.ಟಿ.ಸ್ವಾಮಿ ಅವರ `ಸಾಗರ ಸಂಪಿಗ’ ಕವನ ಸಂಕಲನಕ್ಕೆ ಕಾವ್ಯಸಿರಿ ರಾಷ್ಟಿಯ ಪುರಸ್ಕಾರ ಲಭಿಸಿದೆ. ಹೈದರಾಬಾದ್ನ ರಾಷ್ಟ್ರೀಯ ಕನ್ನಡ ಸಾಹಿತ್ಯ ಬಳಗ ಪ್ರತಿವರ್ಷ ಕನ್ನಡ ಕವನ ಸಂಕಲನಕ್ಕೆ ಕಾವ್ಯಸಿರಿ ರಾಷ್ಟಿಯ ಪ್ರಶಸ್ತಿ ನೀಡಿ ಪುರಸ್ಕರಿಸಿಕೊಂಡು ಬರುತ್ತಿದೆ. ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಸಾಗರ ಸಂಪಿಗೆ ಕವನ ಸಂಕಲನವನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರದ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಟಿ.ಸ್ವಾಮಿ ಹಲವು ದಶಕಗಳಿಂದ ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬಂದಿದ್ದು ಈತನಕ 30ಕ್ಕೂ ಹೆಚ್ಚು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಸಂಘಟನೆಗಳಲ್ಲಿ ವಿ.ಟಿ.ಸ್ವಾಮಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ. ವಿ.ಟಿ.ಸ್ವಾಮಿ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸಹೃದಯ ಬಳಗ, ಜಾನಪದ…
ಲಕ್ನೋ: ಗುರುವಾರ ಇಲ್ಲಿನ ಕಾಕೋರಿ ಪ್ರದೇಶದಲ್ಲಿ ರಸ್ತೆ ಮಾರ್ಗದ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಹರ್ದೋಯ್ ನಿಂದ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಸ್ಥಳದಲ್ಲಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲಕ್ನೋ ಪೊಲೀಸ್ ಆಯುಕ್ತ ಅಮರೇಂದ್ರ ಸಿಂಗ್ ಸೆಂಗಾರ್ ತಿಳಿಸಿದ್ದಾರೆ. ಸ್ಥಳೀಯರ ಸಹಾಯದಿಂದ ರಕ್ಷಣಾ ತಂಡಗಳು ಗಾಯಗೊಂಡ ಪ್ರಯಾಣಿಕರನ್ನು ಕಾಕೋರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾ ದೇವಿಗೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ಹಾಗಾದ್ರೇ ಈವರೆಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದಂತ ಗಣ್ಯರು ಯಾರೆಲ್ಲ ಎನ್ನುವ ಪಟ್ಟಿ ಮುಂದಿದೆ ಓದಿ. ಕರ್ನಾಟಕ ರತ್ನ ಪ್ರಶಸ್ತಿಯು ಕರ್ನಾಟಕ ಸರ್ಕಾರ ನೀಡುವ ಅತ್ಯುತ್ನತ ಪ್ರಶಸ್ತಿಯಾಗಿದೆ. ಇಂದು ಈ ಪ್ರಶಸ್ತಿಯನ್ನು ದಿವಂಗತ ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾ ದೇವಿಗೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಹೀಗಿದೆ ಈವರೆಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದ ಗಣ್ಯರ ಪಟ್ಟಿ ರಾಷ್ಟ್ರಕವಿ ಕುವೆಂಪು, ಸಾಹಿತ್ಯ ಕ್ಷೇತ್ರ, 1992 ಡಾ.ರಾಜ್ ಕುಮಾರ್, ಚಲನಚಿತ್ರ ಕ್ಷೇತ್ರ, 1992 ಎಸ್ ನಿಜಲಿಂಗಪ್ಪ, ರಾಜಕೀಯ ಕ್ಷೇತ್ರ, 1999 ಪ್ರೊ.ಸಿಎನ್ ಆರ್ ರಾವ್, ವಿಜ್ಞಾನ ಕ್ಷೇತ್ರ, 2000 ಪಂಡಿಂತ್ ಭೀಮಸೇನ್ ಜೋಶಿ, ಸಂಗೀತ ಕ್ಷೇತ್ರ, 2004 ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಗಳು, ಸಾಮಾಜಸೇವೆ ಕ್ಷೇತ್ರ, 2006 ಡಾ.ದೇ.ಜವರೇಗೌಡ, ಸಾಹಿತ್ಯ ಕ್ಷೇತ್ರ,…
ಶಿವಮೊಗ್ಗ: ಜಿಲ್ಲೆಯ ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಭಾರೀ ಹಗರಣವೇ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಂದು ಕಲ್ಮನೆ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಇಂಚಿಂಚೂ ತನಿಖೆಯನ್ನು ನಡೆಸಿದರು. ನಿಮ್ಮ ಕನ್ನಡ ನ್ಯೂಸ್ ನೌ ಸೆಪ್ಟೆಂಬರ್.10ರ ನಿನ್ನೆಯಷ್ಟೇ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಶಿವಮೊಗ್ಗ ಜಿಲ್ಲೆಯ ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯ ನರೇಗಾ ಯೋಜನೆಯಲ್ಲಿ ನಡೆದಿದೆ ಎನ್ನಲಾದಂತ ಹಗರಣದ ಬಗ್ಗೆ ಇಲಾಖೆಯ ಗಮನವನ್ನು ಸೆಳೆದಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಗಮನಕ್ಕೆ ತಂದಿದ್ದರು. ಹೀಗಾಗಿ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ತನಿಖೆ ನಡೆಸಿ, ವರದಿ ನೀಡುವಂತೆಯೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಬಗ್ಗೆಯೂ ಕನ್ನಡ…
ಬೆಂಗಳೂರು: ರಾಜ್ಯ ಸರ್ಕಾರವು ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾದ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಹೂಸದಾಗಿ ನೇರ ನೇಮಕಾತಿಯನ್ನು ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿರುತ್ತದೆ ಎಂದಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ಆಯೋಗವು ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟವು ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಅಂಗಿಕರಿಸಿದ್ದು, ಸರ್ಕಾರದಿಂದ ಈ ಕೆಳಕಂಡ ಆದೇಶ/ ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. 1. ದಿನಾಂಕ 25.08.2025 ರ ಸರ್ಕಾರದ ಆದೇಶ ಸಂಖ್ಯೆ: ಸಕಇ 8 ಎಸ್ಎಲ್ಪಿ 2024. 2. ದಿನಾಂಕ: 03.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 02…
ನವದೆಹಲಿ: ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯವು ಹೊಸ ಭೌತಚಿಕಿತ್ಸೆಯ ಪಠ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡುವಂತೆ ಕೇಳಿಕೊಂಡಿದ್ದು, ಫಿಜಿಯೋಥೆರಪಿಸ್ಟ್ ಗೆ “ಡಾ” ಪೂರ್ವಪ್ರತ್ಯಯದ ಬಳಕೆಯನ್ನು ತೆಗೆದುಹಾಕಲು ಕೇಳಿಕೊಂಡಿದೆ. ಇದು ರೋಗಿಗಳನ್ನು ದಾರಿ ತಪ್ಪಿಸಬಹುದು ಮತ್ತು ಗೊಂದಲಗೊಳಿಸಬಹುದು ಎಂದು ಹೇಳಿದೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗೆ ಬರೆದ ಪತ್ರದಲ್ಲಿ, ಭಾರತೀಯ ಭೌತಚಿಕಿತ್ಸೆಯ ಸಾಮರ್ಥ್ಯ ಆಧಾರಿತ ಪಠ್ಯಕ್ರಮ, 2025 ರಲ್ಲಿನ ನಿಬಂಧನೆಗೆ ಭಾರತೀಯ ಫಿಜಿಯೋಥೆರಪಿಸ್ಟ್ ಗಳ ಸಂಘ (ಐಎಪಿಎಂಆರ್) ಸೇರಿದಂತೆ ಹಲವಾರು ಗುಂಪುಗಳು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ ಎಂದು ಡಿಜಿಎಚ್ಎಸ್ ತಿಳಿಸಿದೆ. ಈ ವರ್ಷದ ಏಪ್ರಿಲ್ನಲ್ಲಿ ಹೊರಡಿಸಲಾದ ಪಠ್ಯಕ್ರಮವು ಫಿಜಿಯೋಥೆರಪಿಸ್ಟ್ ಪದವೀಧರರು ತಮ್ಮ ಹೆಸರಿನ ಮೊದಲು “ಡಾ” ಅನ್ನು “ಪಿಟಿ” ಪ್ರತ್ಯಯದೊಂದಿಗೆ ಬಳಸಬಹುದು ಎಂದು ಸೂಚಿಸಿತ್ತು. ಫಿಜಿಯೋಥೆರಪಿಸ್ಟ್ ಗಳು ವೈದ್ಯಕೀಯ ವೈದ್ಯರಾಗಿ ತರಬೇತಿ ಪಡೆದಿಲ್ಲ ಮತ್ತು ತಮ್ಮನ್ನು ತಾವು ಹಾಗೆ ಪ್ರಸ್ತುತಪಡಿಸಬಾರದು ಎಂದು ಡಿಜಿಎಚ್ಎಸ್ ಗಮನಿಸಿದೆ. ಡಿಜಿಎಚ್ಎಸ್ ಆರೋಗ್ಯ ರಕ್ಷಣೆಗೆ ಪ್ರಾಥಮಿಕ ನಿಯಂತ್ರಕ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಲಗತ್ತಿಸಲಾಗಿದೆ. “ಫಿಸಿಯೋಥೆರಪಿಸ್ಟ್ ಗಳಿಗೆ ವೈದ್ಯಕೀಯ…
ಚಿಕ್ಕಮಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಚಿಕ್ಕಮಗಳೂರಿನ ತರೀಕೆರೆಯಲ್ಲೂ ಪಾಕ್ ಪರ ಘೋಷಣೆ ಕೂಗಿದ ಘಟನೆ ನಡೆದಿತ್ತು. ಹೀಗೆ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ನಾರಾಯಣಪ್ಪ ದೂರು ನೀಡಿದ್ದರು. ಈ ದೂರು ಆಧರಿಸಿ ತರೀಕೆರೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. https://kannadanewsnow.com/kannada/four-people-took-oaths-as-newly-appointed-members-of-the-legislative-council/ https://kannadanewsnow.com/kannada/tumakuru-the-conflict-that-started-over-water-ends-in-a-grave-incident-horrific-murder-of-a-person-after-a-goods-vehicle-was-overturned/













