Author: kannadanewsnow09

ಸ್ವೀಡನ್‌ : ಕರ್ನಾಟಕವನ್ನು ಶುದ್ಧ ಇಂಧನ ಸಂಚಾರ (ಕ್ಲೀನ್‌ ಮೊಬಿಲಿಟಿ) ಮತ್ತು ವಿದ್ಯುತ್‌ಚಾಲಿತ ವಾಹನ (ಇವಿ) ತಯಾರಿಕೆಯ ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಹೂಡಿಕೆದಾರರ ಗಮನ ಸೆಳೆಯಲು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ ನಡೆಸಿತು. ಇದೇ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼರಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳನ್ನು ತ್ವರಿತವಾಗಿ ಜಾರಿಗೊಳಿಸಲು ಹಾಗೂ ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಲು ನಡೆಯಲಿರುವ 10 ದಿನಗಳ ಅಂತರರಾಷ್ಟ್ರೀಯ ರೋಡ್‌ಷೋಗಳಲ್ಲಿ ಸಚಿವ ಪಾಟೀಲ ಅವರು ಭಾಗವಹಿಸಲಿದ್ದಾರೆ. ಸ್ವೀಡನ್‌ ನಂತರ ಕರ್ನಾಟಕದ ನಿಯೋಗವು ಸಚಿವ ಪಾಟೀಲ ಅವರ ನೇತೃತ್ವದಲ್ಲಿ ಡೆನ್ಮಾರ್ಕ್‌ನಲ್ಲಿಯೂ ರೋಡ್‌ಷೋ ನಡೆಸಲಿದೆ. ಇಲ್ಲಿ ನಡೆಯುತ್ತಿರುವ ಇವಿಎಸ್38 ಶೃಂಗಸಭೆಯು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಬಳಕೆ ಹೆಚ್ಚಳ ಮತ್ತು ಅತ್ಯಾಧುನಿಕ ವಾಹನ ತಯಾರಿಕೆಯ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಿದ ಪ್ರಮುಖ ಜಾಗತಿಕ ಸಮ್ಮೇಳನವಾಗಿದೆ. ಶೃಂಗಸಭೆಯ ಸಂದರ್ಭದಲ್ಲಿ ನಡೆದ…

Read More

ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಗೊಂಡಿದ್ದಾರೆ. ದಿನಾಂಕ 15-06-2025 ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಡಾ.ಮಾನಸ, ಸಹಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ. ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರುಗಳಾಗಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಿ.ಕೆ.ರವಿ, ಎಸ್.ನಾಗಣ್ಣ, ಬಾಬುರಾವ್, ಡಾ.ಮೈಲಹಳ್ಳಿ ರೇವಣ್ಣ, ಡಾ.ಪರಶುರಾಂ.ಸಿ.ಡಿ. ಡಾ.ವಾಣಿಶ್ರೀ ಅರುಣ್. ಸೌಜನ್ಯ ಪರಮೇಶ್, ಶಂಕ‌ ಹರ್ತಿಕೋಟೆ ಹಾಗೂ ಹೆಚ್.ಆರ್.ದಿನೇಶ್ ಆಯ್ಕೆಯಾಗಿದ್ದಾರೆ. https://kannadanewsnow.com/kannada/in-the-state-a-total-of-208-people-tested-positive-for-corona/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ. ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 103 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/lokayukta-police-blackmail-case-against-government-official-accused-ningappa-remanded-in-14-day-judicial-custody/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/

Read More

ಬೆಂಗಳೂರು: ಲೋಕಾಯುಕ್ತ ಪೊಲೀಸರಿಂದಲೇ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡಿದಂತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಜೂನ್.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್ ಆದೇಶಿಸಿದೆ. ಜಾಮೀನು ಕೋರಿ ಪೊಲೀಸ್ ಸಿಬ್ಬಂದಿ ನಿಂಗಪ್ಪ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದರು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. https://kannadanewsnow.com/kannada/bellary-district-school-education-departments-progress-conducted-by-minister-madhu-bangarappa-here-are-the-main-highlights/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/

Read More

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯು ಸಹ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ಸರ್ಕಾರಕ್ಕೆ ನೀವು ನೀಡುವ ಕೊಡುಗೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು. ಹಂತ-ಹAತವಾಗಿ ಅದನ್ನು ಕಾರ್ಯರೂಪಕ್ಕೆ ತರಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಡಿಪಾಯ ಹಾಕಿದಂತಾಗುತ್ತದೆ. ಕೊನೆಯ ಸಮಯದಲ್ಲಿ ಗೊಂದಲದಲ್ಲಿ ಅನುಷ್ಠಾನಗೊಳಿಸುವುದಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಕ್ಕಳಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸವಾಗಬೇಕು. ಅಧಿಕಾರಿಗಳು ಶಾಲೆಗಳನ್ನು ದತ್ತು ರೀತಿಯಲ್ಲಿ ಕಾಳಜಿ ವಹಿಸಬೇಕು. ಇದರಿಂದ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ ಮತ್ತು ಒಳ್ಳೆಯ ಫಲಿತಾಂಶವು ಲಭಿಸುತ್ತದೆ ಎಂದರು.…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, ಜೂನ್ 25 ರಂದು ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಪ್ರಾರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆದ 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 36 ವರ್ಷದ ಆಟಗಾರನಿಗೆ ಉಂಟಾದ ಬೆರಳಿನ ಗಾಯದಿಂದಾಗಿ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ಆ ಪಂದ್ಯದಲ್ಲಿ ಅವರು ಐದು ವಿಕೆಟ್‌ಗಳಿಂದ ಸೋತರು. 2025 ರ ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಮೂರನೇ ದಿನದಂದು, ಆಸ್ಟ್ರೇಲಿಯಾ 281 ರನ್‌ಗಳ ಒಟ್ಟು ಮೊತ್ತವನ್ನು ರಕ್ಷಿಸುತ್ತಿದ್ದಾಗ, ಮಿಚೆಲ್ ಸ್ಟಾರ್ಕ್ ಟೆಂಬಾ ಬವುಮಾ ಅವರ ಬ್ಯಾಟ್‌ನ ಹೊರಗಿನ ಅಂಚಿಗೆ ಹೊಡೆದರು, ಸ್ಟೀವ್ ಸ್ಮಿತ್ ಹೆಲ್ಮೆಟ್ ಧರಿಸಿ ಮೊದಲ ಸ್ಲಿಪ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ, ಅದನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಈ ಸಂಪೂರ್ಣ ಸರಣಿಯಲ್ಲಿ, ಚೆಂಡು ಅವರ ಬಲಗೈಯ ಕಿರುಬೆರಳಿಗೆ ತಗುಲಿತು,…

Read More

ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಸೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗಿದೆ. ಶಾಲಾ ಶಿಕ್ಷಣ ಇಲಾಖಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದ 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಹ 7328 ಮಕ್ಕಳನ್ನು ಎರಡನೇ ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:16.06.2025 ರಂದು ಆನ್‌ಲೈನ್ ಮೂಲಕ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ ಎಂದಿದೆ. ಈ ಎರಡನೇ ಸುತ್ತಿನ ಲಾಟರಿ, ಪುಕ್ರಿಯೆಯಲ್ಲಿ 921 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ಹಂಚಿಕೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌.ಎಂ.ಎಸ್ ಮೂಲಕ ಸೀಟು ಮಾಹಿತಿಯನ್ನು ನೀಡಲಾಗಿದೆ. ಸಂಬಂಧಿಸಿದ ಪೋಷಕರು ದಿನಾಂಕ:17.06.2025 ರಿಂದ 21.06.2025 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು…

Read More

ಚೆನ್ನೈ: ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ತಮಿಳುನಾಡು ಪೊಲೀಸರಿಗೆ ಮೌಖಿಕವಾಗಿ ನಿರ್ದೇಶನ ನೀಡಿದ್ದು, ಕೆಲವೇ ನಿಮಿಷಗಳ ನಂತರ ಅವರಿಗೆ ಭದ್ರತೆ ಒದಗಿಸಲಾಗಿದೆ. ಈ ಪ್ರಕರಣದಲ್ಲಿ ಬಂಧನವನ್ನು ತಡೆದ ಶಾಸಕ ಎಂ. ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಪಿ. ವೇಲ್ಮುರುಗನ್ ಈ ನಿರ್ದೇಶನ ನೀಡಿದರು. ಅವರು ಕಿಲ್ವೈತಿನಂಕುಪ್ಪಂ (ಎಸ್‌ಸಿ) ಅನ್ನು ಪ್ರತಿನಿಧಿಸುತ್ತಾರೆ ಮತ್ತು ಒಂದು ಸಂಘಟನೆಯ ಮುಖ್ಯಸ್ಥರಾಗಿದ್ದಾರೆ. ಸಹಾಯಕ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ (ಸಶಸ್ತ್ರ ಪೊಲೀಸ್) ಅವರನ್ನು ನ್ಯಾಯಾಲಯದ ಕಟ್ಟಡದಿಂದ ಹೊರಬಂದ ನಂತರ ಬಂಧಿಸಲಾಯಿತು. ಸೋಮವಾರ ಪ್ರಕರಣ ವಿಚಾರಣೆಗೆ ಬಂದಾಗ, ನ್ಯಾಯಾಧೀಶರು ಪುಥಿಯಾ ಭಾರತಮ್ ಕಚ್ಚಿಯ ನಾಯಕ ಮೂರ್ತಿ ಮತ್ತು ಅಪಹರಣಕ್ಕೆ ಬಳಸಲಾಗಿದೆ ಎನ್ನಲಾದ ಎಡಿಜಿಪಿ ಜಯರಾಮ್ ಅವರನ್ನು ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಮೌಖಿಕವಾಗಿ ಸಮನ್ಸ್ ನೀಡಿದರು. ಅದರಂತೆ ಇಬ್ಬರೂ ನ್ಯಾಯಾಲಯದ ಮುಂದೆ ಹಾಜರಾದರು. ನ್ಯಾಯಾಧೀಶರು ಜಗನ್ ಮೂರ್ತಿ ಅವರು ಶಾಸಕರಾಗಲು ಎಷ್ಟು…

Read More

ಕೇರಳ: ಕೇರಳ ಹೈಕೋರ್ಟ್ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), 2023 ರ ಸೆಕ್ಷನ್ 107 ರ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಬಹುದು. ಇದು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಮಾತ್ರ ಮತ್ತು ಪೊಲೀಸರು ಒಗ್ಗಟ್ಟಿನಿಂದ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಸೆಕ್ಷನ್ 107 BNSS ಒಂದು ಹೊಸ ನಿಬಂಧನೆಯಾಗಿದ್ದು, ಇದು “ಅಪರಾಧದ ಆದಾಯ”ವನ್ನು ಜಪ್ತಿ ಮಾಡಲು ಒದಗಿಸುತ್ತದೆ. ನ್ಯಾಯಮೂರ್ತಿ ವಿ.ಜಿ. ಅರುಣ್ ಅವರು ಹೆಡ್‌ಸ್ಟಾರ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುತ್ತಿದ್ದರು, ಸ್ಪೆಜಿಯಾ ಆರ್ಗಾನಿಕ್ ಕಾಂಡಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಒಳಗೊಂಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಲಾಗಿದೆ ಎಂಬ ಆರೋಪದ ನಂತರ ಕಲಾಮಸ್ಸೆರಿ ಪೊಲೀಸರು ಅವರ ಖಾತೆಯನ್ನು ಸ್ಥಗಿತಗೊಳಿಸಿದ್ದರು. ಅರ್ಜಿದಾರರು ಈ ವ್ಯವಹಾರವು ನಿಯಮಿತ ವ್ಯವಹಾರದ ಭಾಗವಾಗಿದ್ದು, ಅವರು ಯಾವುದೇ ಅಪರಾಧ ಎಸಗಿಲ್ಲ ಎಂದು ವಾದಿಸಿದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 94 ಅಥವಾ 106 ರ ಅಡಿಯಲ್ಲಿ ಖಾತೆಯನ್ನು ಸ್ಥಗಿತಗೊಳಿಸಲು ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ…

Read More

ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ 124 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದು ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ ದಿನಾಚರಣೆಯನ್ನು ಆಚರಿಸುವ ಮೂಲಕ ರಕ್ತದಾನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 1 ಯುನಿಟ್ ರಕ್ತವು 4 ಜೀವಗಳನ್ನು ಉಳಿಸಬಹುದು. ಹೀಗಾಗಿ ನಮ್ಮ ಯುವಕ ಯುವತಿಯರು ರಕ್ತದಾನಕ್ಕೆ ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯ ಸರ್ಕಾರದಿಂದ ರಕ್ತ ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ…

Read More