Author: kannadanewsnow09

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.8ರಂದು ರಾಜ್ಯಾಧ್ಯಂತ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು…

Read More

ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಮಾನ್ಯ ಮುಖ್ಯಮಂತ್ರಿಗಳನ್ನು 28.02.2025 ರಂದು ಭೇಟಿ ಮಾಡಲಿದೆ.  ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬೆಂಗಳೂರು ಕೇಂದ್ರ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಸಂಸದರು ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ, ಬೆಂಗಳೂರಿನ ಶಾಸಕರುಗಳು, ವಿಧಾನ ಪರಿಷತ್‍ನ ಸದಸ್ಯರು, ರಾಜ್ಯ ಸಭಾ ಸದಸ್ಯರು , 3 ಜಿಲ್ಲೆಗಳ ಅಧ್ಯಕ್ಷರು ಭಾಗಿಯಾಗಿಲದ್ದಾರೆ. ಇವರಲ್ಲದೇ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್ ಅವರು ಈ ನಿಯೋಗದಲ್ಲಿ ಇರುವರು. ನಾಳೆ 28.02.2025ರ ಬೆಳಿಗ್ಗೆ 10.30 ಗಂಟೆಗೆ ಕುಮಾರ ಕೃಪಾ ಅತಿಥಿ ಗೃಹ ದಲ್ಲಿ ಸಭೆ ಸೇರಿ, ನಂತರ ಮಾನ್ಯ ಮುಖ್ಯ ಮಂತ್ರಿಗಳ ಕಾವೇರಿ ನಿವಾಸಕ್ಕೆ ಬೆಳಿಗ್ಗೆ 11.00 ಗಂಟೆಗೆ ಭೇಟಿ ನೀಡಲಿದ್ದಾರೆ. https://kannadanewsnow.com/kannada/72-year-old-man-diagnosed-with-rare-bladder-cancer-successfully-operated-on-at-fortis-hospital/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/

Read More

ಬೆಂಗಳೂರು: ಕ್ವಾಮಸ್ ಸೆಲ್ ಕಾರ್ಸಿನೋಮ’ ಎಂದು ಕರೆಯಲ್ಪಡುವ ಅಪರೂಪದ ಮೂತ್ರಕೋಶದ ಕ್ಯಾನ್ಸರ್‌ಗೆ ಒಳಗಾಗಿದ್ದ 72 ವರ್ಷದ ವ್ಯಕ್ತಿಗೆ ನಾಗರಭಾವಿಯ ಫೋರ್ಟಿಸ್ ಆಸ್ಪತ್ಸೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್‌ ಆಸ್ಪತ್ರೆ ಆಂಕೋಲಜಿ ಸರ್ಜಿಕಲ್‌ ಸಲಹೆಗಾರರಾದ ಭರತ್‌ ಜಿ ಹಾಗೂ ಅವರ ತಂಡ ಸತತ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದು, ಒಂದು ವಾರದ ಬಳಿಕ ರೋಗಿಯನ್ನು ಬಿಡುಗಡೆ ಮಾಡಲಾಯಿತು. ಚಂದ್ರ (ಹೆಸರು ಬದಲಾಗಿದೆ) ಎಂಬ ರೋಗಿಯು ಮೂತ್ರ ವಿಸರ್ಜನೆ ವೇಳೆ ನೋವು ಅನುಭವಿಸುತ್ತಿದ್ದರು, ಇದರಿಂದ ಅವರು ತಮ್ಮ ಗುದದ್ವಾರದ ಮೂಲಕ ಮೂತ್ರ ವಿಸರ್ಜನೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಫಿಸ್ಟುಲಾದಿಂದ ಉಂಟಾಗುವ ಈ ಅಪರೂಪದ ಆರೋಗ್ಯ ಸ್ಥಿತಿ (ಗಾಳಿಗುಳ್ಳೆಯ ಮತ್ತು ಕರುಳಿನ ನಡುವಿನ ಅಸಹಜ ಸಂಪರ್ಕ) ಒಂದು ತಿಂಗಳ ಕಾಲ ಇದೇ ರೀತಿ ನಡೆಯುತ್ತಿತ್ತು. ಇದರಿಂದ ಅವರ ದೈನಂದಿನ ಚಟುವಟಿಕೆ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿತು. ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದರೂ ಪರಿಹಾರ ದೊರೆಯಲಿಲ್ಲ. ಅಂತಿಮವಾಗಿ, ಅವರು ಪರಿಣಾಮಕಾರಿ ಚಿಕಿತ್ಸೆಯನ್ನು ಕಂಡುಕೊಳ್ಳುವ ಭರವಸೆಯಿಂದ ನಾರಭಾವಿಯ…

Read More

ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸಿಲ್ಲ. ಕಾಯಂ ಮಾಡುತ್ತೇವೆ, ಸಂಬಳ ನೀಡುತ್ತೇವೆಂದು ಭರವಸೆ ನೀಡಿ ಈಗ ಕೈ…

Read More

ಬೆಂಗಳೂರು: ಆರ್ಟಿಕಲ್ 371ಜೆ ತಿರಸ್ಕರಿಸಿದ್ದ ಬಿಜೆಪಿಯವರಿಗೆ ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ನನ್ನ ಮಾತು ಸಮಸ್ಯೆಯಾಗಿ ಕಾಡುತ್ತಿದೆಯೇ? ಅಥವಾ ನಾನು ಮಾತಾಡುವುದೇ ಸಮಸ್ಯೆಯಾಗಿ ಕಾಣುತ್ತಿದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾನ್ಯ ಆರ್.ಅಶೋಕ್ ಅವರೇ, ಕಲ್ಯಾಣ ಕರ್ನಾಟಕದ ವಿಷಯದಲ್ಲಿ ಮಾತಾನಾಡಲು ನಿಮಗೆ ಹಾಗೂ ನಿಮ್ಮ ಪಕ್ಷಕ್ಕೆ ಅರ್ಹತೆಯೂ ಇಲ್ಲ, ನೈತಿಕತೆಯೂ ಇಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ವಿರೋಧಿಗಳು ಯಾರು ಎನ್ನುವುದನ್ನು ನಾನು ಹೇಳಬೇಕಿಲ್ಲ, ಅಡ್ವಾಣಿಯವರ ಈ ಪತ್ರವೇ ಹೇಳುತ್ತದೆ. ಬಿಜೆಪಿ ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದಿದ್ದು ಐತಿಹಾಸಿಕ ಸತ್ಯ ಎಂದು ಹೇಳಿದ್ದಾರೆ. ಇಂದು ನೀವು ಅನುದಾನದ ಬಗ್ಗೆ ಮಾತನಾಡುತ್ತಿರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದೇ ಆರ್ಟಿಕಲ್ 371ಜೆ, ಆದರೆ ಹಿಂದೆ ನಿಮ್ಮ ಬಿಜೆಪಿ ಸರ್ಕಾರ ಈ ವಿಶೇಷ ಸ್ಥಾನಮಾನವನ್ನು ತಿರಸ್ಕರಿಸಿತ್ತು, ದಶಕ ಕಳೆದರೂ ಬಿಜೆಪಿ ಆರ್ಟಿಕಲ್ 371ಜೆ ತಿರಸ್ಕರಿಸಿದ್ದಕ್ಕೆ ಸ್ಪಷ್ಟ ಕಾರಣಗಳನ್ನು ಕೊಟ್ಟಿಲ್ಲ, ಅಶೋಕ್ ಸರ್, ಈಗ ನೀವಾದರೂ ಆರ್ಟಿಕಲ್ 371ಜೆ…

Read More

ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ. ಕರುನಾಡಿನಲ್ಲಿ ನೀರಿಗಿಲ್ಲ ಬರ ಎನ್ನುವಂತೆ ರಾಜ್ಯದ ಜಲಾಶಯಗಳು ಮೈದುಂಬಿ ನಿಂತಿವೆಯಂತೆ. ಹೌದು. 2024ರಲ್ಲಿ ಉತ್ತಮ ಮಳೆಯಾದುದ್ದರಿಂದ ರಾಜ್ಯದಲ್ಲಿನ ಜಲಾಶಯಗಳು ತುಂಬಿವೆ. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 504.39 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಕಳೆದ ವರ್ಷ ಈ ಹೊತ್ತಿಗೆ 316.74 ಟಿಎಂಸಿ ಅಷ್ಟೇ ಇತ್ತು. ಲಿಂಗನಮಕ್ಕಿ ಜಲಾಶಯದಲ್ಲಿ 82.49 ಟಿಎಂಸಿ ನೀರಿದೆ. ಸದ್ಯದ ಒಳ ಹರಿವು 13 ಕ್ಯೂಸೆಸ್ ಆಗಿದೆ. ಹಾರಂಗಿ ಜಲಾಶಯದಲ್ಲಿ 3.850 ಟಿಎಂಸಿ ನೀರಿದೆ. ಹೇಮಾವತಿ ಜಲಾಶಯದಲ್ಲಿ 20.855 ಟಿಎಂಸಿ ಇದ್ದರೇ, ಕಬಿನಿ ಜಲಾಶಯದಲ್ಲಿ 14.546 ಟಿಎಂಸಿ ಇದೆ. ಇನ್ನೂ ಭದ್ರಾ ಜಲಾಶಯದಲ್ಲಿ 52.40 ಟಿಎಂಸಿ, ತುಂಗಭದ್ರಾ ಡ್ಯಾಂನಲ್ಲಿ 35.06 ಟಿಎಂಸಿ, ಘಟಪ್ರಭಾ ಜಲಾಶಯದಲ್ಲಿ 26.16 ಟಿಎಂಸಿ, ಮಲಪ್ರಭಾ ಜಲಾಶಯದಲ್ಲಿ 18.01 ಟಿಎಂಸಿ, ಆಲಮಟ್ಟಿ ಜಲಾಶಯದಲ್ಲಿ 52.60 ಟಿಎಂಸಿ, ವಾಣಿವಿಲಾಸ ಜಲಾಶಯದಲ್ಲಿ 29.40 ಟಿಎಂಸಿ ಸೇರಿದಂತೆ 14 ಜಲಾಶಯಗಳಲ್ಲಿ 504.39 ಟಿಎಂಸಿ ನೀರು ಇರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನರ ಆರೋಗ್ಯ ರಕ್ಷಣೆಗಾಗಿ ಮಹತ್ವದ ತುರ್ತ ಕ್ರಮ ಕೈಗೊಂಡಿದೆ. ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ. ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಅಂತ ತಿಳಿಸಿದ್ದಾರೆ. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ. https://twitter.com/KarnatakaVarthe/status/1895054018264834314 https://kannadanewsnow.com/kannada/icc-champions-trophy-2025-pakistan-bangladesh-tournament-called-off-due-to-rain/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/ https://kannadanewsnow.com/kannada/breaking-bird-flu-enters-state-birds-die-under-mysterious-circumstances-in-raichur-panic-among-people/

Read More

ರಾವಲ್ಪಿಂಡಿ: ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವು ನಿರಂತರ ಮಳೆಯಿಂದಾಗಿ ರದ್ದಾಗಿದೆ. 29 ವರ್ಷಗಳಲ್ಲಿ ಮೊದಲ ಬಾರಿಗೆ ಐಸಿಸಿ ಪಂದ್ಯಾವಳಿಯ ಆತಿಥ್ಯ ವಹಿಸಿರುವ ಪಾಕಿಸ್ತಾನವು ಒಂದೇ ಒಂದು ಗೆಲುವನ್ನು ದಾಖಲಿಸದೆ ತನ್ನ ವಿನಾಶಕಾರಿ ಅಭಿಯಾನವನ್ನು ಕೊನೆಗೊಳಿಸಿತು. ಬಾಂಗ್ಲಾದೇಶ ಕೂಡ ಜಯವಿಲ್ಲದೆ ತಮ್ಮ ಪ್ರಯಾಣವನ್ನು ಕೊನೆಗೊಳಿಸಿತು ಮತ್ತು ಆತ್ಮಾವಲೋಕನ ಮಾಡಲು ಸಾಕಷ್ಟು ಸಮಯದೊಂದಿಗೆ ಮನೆಗೆ ಮರಳಲಿದೆ. ಒಂದು ಪಾಯಿಂಟ್ ಅನ್ನು ಎರಡೂ ತಂಡಗಳು ಹಂಚಿಕೊಳ್ಳುತ್ತವೆ. ದುಬೈನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಆರು ವಿಕೆಟ್ಗಳ ಸೋಲನ್ನು ಒಳಗೊಂಡ ಪಂದ್ಯಾವಳಿಯಲ್ಲಿ ಪಾಕಿಸ್ತಾನವು ಮರೆಯಲಾಗದ ಪ್ರದರ್ಶನಕ್ಕಾಗಿ ಟೀಕೆಗೆ ಗುರಿಯಾಗಿದೆ. ರಾವಲ್ಪಿಂಡಿಯಲ್ಲಿ ಒಂದು ಎಸೆತವೂ ಎಸೆಯದೆ ಪಂದ್ಯವನ್ನು ರದ್ದುಗೊಳಿಸಿರುವುದು ಇದು ಎರಡನೇ ಬಾರಿ, ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ವಾಶ್ ಔಟ್ ಮೊದಲನೆಯದು. https://kannadanewsnow.com/kannada/railway-passengers-notice-partial-cancellation-of-movement-of-these-trains/ https://kannadanewsnow.com/kannada/breaking-bird-flu-enters-state-birds-die-under-mysterious-circumstances-in-raichur-panic-among-people/

Read More

ಬೆಂಗಳೂರು: ವಿವಿಧ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಕೆಳಕಂಡ ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಿರುವುದಾಗಿ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. A) ಅಸನ್ಸೋಲ್ ವಿಭಾಗದಲ್ಲಿ ಪಾದಚಾರಿ ಮೇಲ್ಸೇತುವೆ (ಫೂಟ್ ಓವರ್ ಬ್ರಿಡ್ಜ್) ಕಾಮಗಾರಿ ನಡೆಯುತ್ತಿರುವುದರಿಂದ, ಫೆಬ್ರವರಿ 28, 2025 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17321 ವಾಸ್ಕೋ-ಡ-ಗಾಮಾ–ಜಸಿದಿಃ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜಸಿದಿಃ ನಿಲ್ದಾಣದ ಬದಲಿಗೆ ಮಧುಪುರದಲ್ಲಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಮಧುಪುರ ಮತ್ತು ಜಸಿದಿಃ ನಿಲ್ದಾಣಗಳ ನಡುವಿನ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆಯು ತಿಳಿಸಿದೆ. B) ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದ ಐಲ್ಯಾಂಡ್ ಪ್ಲಾಟ್ಫಾರ್ಮ್ 12 ಮತ್ತು 13ರ ವಿಸ್ತರಣೆಗಾಗಿ ಟ್ರಾಫಿಕ್ ಮತ್ತು ಪವರ್ ಬ್ಲಾಕ್ಗಳ ಕಾರಣದಿಂದಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ಸೂಚಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ಮಾರ್ಚ್ 1, 2025 ರಂದು ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ…

Read More

ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ. ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ. ಕೇಂದ್ರದ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆ ನೀಡಿರುವಂತ ಅವರು, ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ. ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು…

Read More