Author: kannadanewsnow09

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ…

Read More

ಬೆಂಗಳೂರು : ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು “ನಮಗೆ ಡಿಸಿಎಂ, ಸಿಎಂ ಸ್ಥಾನ ಬೇಕು, ನಮ್ಮ ಜನಾಂಗಕ್ಕೆ ಅನ್ಯಾಯ ಆಗುತ್ತಿದೆ ಎನ್ನುವ ಭಾವನೆ ಇದ್ದರೆ. ಯಾರ ನಾಯಕತ್ವದಲ್ಲಿ ಬೇಕಾದರೂ ಚುನಾವಣೆ ಎದುರಿಸಲಿ ಜನ ತೀರ್ಪು ಕೊಡುತ್ತಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಕಡಿಮೆ ಸ್ಥಾನ ಬಂದ ಕಾರಣಕ್ಕೆ ಮತ್ತೆ ಚುನಾವಣೆ ಎದುರಿಸಿದ್ದರು” ಎಂದರು. “ಮುಖ್ಯಮಂತ್ರಿಗಳಿಗೆ ಅವಶ್ಯಕತೆ ಇದ್ದರೆ ಎಷ್ಟು ಜನ ಮಂತ್ರಿಗಳು, ಡಿಸಿಎಂಗಳನ್ನು ಬೇಕಾದರೂ ನೇಮಕ ಮಾಡಿಕೊಳ್ಳುವ ಪರಮಾಧಿಕಾರವಿದೆ. ಮುವತ್ತಮೂರು ಜನರನ್ನು ಡಿಸಿಎಂಗಳು ಎಂದು ಘೋಷಣೆ ಮಾಡಬಹುದು. ಇದಕ್ಕೆ ಸಾಂವಿಧಾನಿಕ ಮಾನ್ಯತೆ ಇದೆ” ಎಂದರು. “ಜನರು ಸರ್ಕಾರವನ್ನು ಆಯ್ಕೆ ಮಾಡಿರುವುದು ಒಳ್ಳೆಯ ಆಡಳಿತ ನೀಡಲು ಹಾಗೂ ಕೊಟ್ಟ…

Read More

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಇಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳನ್ನು ಮಂಜೂರು ಮಾಡಲು ಮನವಿ ಮಾಡಿದರು. ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಸಹಯೋಗದಲ್ಲಿ ಸ್ಥಾಪಿಸಲಾದ ಸೆಂಟರ್ ಆಫ್ ಎಕ್ಸಲೆನ್ಸ್-ಆರ್‌ಟಿಪಾರ್ಕ್‌ಗೆ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಒಂದು ಕೈಗಾರಿಕಾ ಶೆಡ್ ಅನ್ನು ಗುತ್ತಿಗೆಗೆ ನೀಡಲಾಗಿದೆ. ಖಾಲಿ ಇರುವ ಎರಡು ಶೆಡ್‌ಗಳನ್ನು ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆಗೆ ದೀರ್ಘಾವಧಿಗೆ ಗುತ್ತಿಗೆ ನೀಡುವಂತೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು. ಜಾಗತಿಕವಾಗಿ ವಿವಿಧ ಹೈಟೆಕ್ ಡೊಮೇನ್ ಗಳಲ್ಲಿ ಕರ್ನಾಟಕವನ್ನು ಮುಂಚೂಣಿಯಲ್ಲಿರಿಸುವ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಗೆ ನೆರವಾಗುವ ಕುರಿತು ಪ್ರಸ್ತಾಪಿಸಿದರು. ಹೆಚ್ಚು ಟೆಕ್ ಸಂಸ್ಥೆಗಳ ಸ್ಥಾಪನೆ ಮೂಲಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕೆಂದು ಮನವಿ ಮಾಡಿದರು. https://kannadanewsnow.com/kannada/ips-officer-malini-krishnamurthy-appointed-as-dgp-of-fire-brigade-by-state-government/ https://kannadanewsnow.com/kannada/sda-accepts-bribe-through-phonepe-in-education-ministers-constituency/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಗ್ನಿಶಾಮಕ ದಳದ ಡಿಜಿಪಿಯಾಗಿ IPS ಅಧಿಕಾರಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಅಗ್ನಿಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಮಲ್ ಪಂತ್ ಅವರ ನಿವೃತ್ತಿಯಿಂದ ತೆರವಾದಂತ ಅಗ್ನಿ ಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ. ಮಾಲಿನಿ ಕೃಷ್ಣಮೂರ್ತಿಯವರು ಅಗ್ನಿಶಾಮಕ ದಳ, ಎಸ್ ಡಿ ಆರ್ ಎಫ್, ಹೋಂ ಗಾರ್ಡ್ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. 1993 ಬ್ಯಾಚ್ IPS ಅಧಿಕಾರಿಯಾಗಿ ಪೊಲೀಸ್ ಇಲಾಖೆ ಸೇರಿದ್ದ ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ‌ ನಿರ್ವಹಿಸಿದ್ದರು. ಕಾರಗೃಹ ಇಲಾಖೆ DGPಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ರಾಜ್ಯದ ದಕ್ಷ ಹಾಗೂ ಪ್ರಾಮಾಣಿಕ ಮಹಿಳಾ ಅಧಿಕಾರಿಯಾಗಿದ್ದಾರೆ. https://kannadanewsnow.com/kannada/the-state-government-is-bankrupt-and-has-no-money-to-pay-salaries-to-government-employees-bommai/ https://kannadanewsnow.com/kannada/sda-accepts-bribe-through-phonepe-in-education-ministers-constituency/

Read More

ಚಿಕ್ಕಬಳ್ಳಾಪುರ: ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ. ಇದು ಸ್ಥಳೀಯ ಶಾಸಕರಿಗೆ ಗೊತ್ತಿಲ್ಲ. ಅಧಿಕಾರ ಇದೇ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. ಆದರೆ ಡಾ. ಸುಧಾಕರ್ ಗೆಲುವಿನ ಮೂಲಕ ಜನಶಕ್ತಿಗೆ ಎದಿರೇಟು ಕೊಡುವ ಶಕ್ತಿ ಇದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸುಧಾಕರ್ ಅವರು ಕಳೆದ ಚುನಾವಣೆಯಲ್ಲಿ ಸೋತಾಗ ನನಗೆ ಸೋತಿದ್ದಕ್ಕೆ ದುಃಖವಿಲ್ಲ. ಆದರೆ, ಕೆಲಸಗಳು ಆಗಲ್ಲವಲ್ಲ ಎಂದಿದ್ದರು. ಅವರಿಗೆ ಎಲ್ಲೇ ಸ್ಥಾನ ಇದ್ದರೂ ಚಿಕ್ಕಬಳ್ಳಾಪುರದಲ್ಲಿ ಇದ್ದೇ ಇರುತ್ತಾರೆ. ಜನಶಕ್ತಿ ಗೆಲ್ಲಿಸುವ ಮೂಲಕ ಅವರಿಗೆ ಅವಕಾಶ ಕೊಟ್ಟಿದೆ ಎಂದು ತಿಳಿಸಿದರು. ಸುಧಾಕರ್ ಅವರು ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳು ಅವರ ಕೈ ಹಿಡಿದಿವೆ. ದೊಡ್ಡ ಪ್ರಮಾಣದ ಗೆಲುವು ಸಿಕ್ಕಿದೆ. ಕ್ಷೇತ್ರದ ಋಣಾನುಬಂಧ ಸುಧಾಕರ್ ಅವರನ್ನು ಎಳೆದುತಂದು ಸಮಗ್ರ ಅಭಿವೃದ್ಧಿ ಗೆ ಅವಕಾಶ ಕೊಟ್ಟಿದ್ದೀರಿ. ಎಲ್ಲ ಕನಸುಗಳ ಸಾಕಾರ ಮಾಡಿಕೊಳ್ಳಲು…

Read More

ಸಾಲದ ಹೊರೆಯನ್ನು ಸಹಿಸಲಾಗಲಿಲ್ಲ. ಕೆಲವರು ಊರು ಬಿಟ್ಟು ಓಡಿ ಹೋಗುವಂತಾಗಿದೆ ಎಂದು ದೂರುವುದನ್ನು ಕೇಳಿದ್ದೇವೆ. ಇಂತಹ ದೊಡ್ಡ ಸಾಲದ ಹೊರೆಯಿಂದ ನರಳುತ್ತಿರುವವರಿಗೂ ಈ ಗಣೇಶ ಪರಿಕರಂ ಪರಿಹಾರ ನೀಡಬಲ್ಲದು. ಸಾಲದ ಹೊರತಾಗಿ ಇತರ ಅಡೆತಡೆಗಳಿವೆ. ಆ ಅಡಚಣೆಯನ್ನು ಮುರಿಯಲು ಈ ಆಚರಣೆಯನ್ನೂ ಮಾಡಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಓಡಾಟ ಆರಂಭಿಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ. ಅವುಗಳ ವಿವರ ಈ ಕೆಳಗಿನಂತಿವೆ: 1. ಎಸ್ಎಂವಿಟಿ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಷೇಶ ಎಕ್ಸ್ ಪ್ರೆಸ್ (06297/06298) ರೈಲು ಸಂಚಾರ * ರೈಲು ಸಂಖ್ಯೆ 06297 ಎಸ್ಎಂವಿಟಿ ಬೆಂಗಳೂರಿನಿಂದ ಜುಲೈ 1, 3, & 6, 2024 ರಂದು ರಾತ್ರಿ 22:00 ಗಂಟೆಗೆ ಹೊರಟು, ಮರುದಿನ ಸಾಯಂಕಾಲ 18:20 ಗಂಟೆಗೆ ಪಂಢರಪುರ ನಿಲ್ದಾಣವನ್ನು ತಲುಪಲಿದೆ. * ಪುನಃ ಇದೆ ರೈಲು (06298) ಜುಲೈ 2, 4, & 7, 2024 ರಂದು ಪಂಢರಪುರದಿಂದ ರಾತ್ರಿ 20:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ…

Read More

ಬೆಂಗಳೂರು: ಯುಜಿ ಸಿಇಟಿ-2024ರ ಪರೀಕ್ಷೆಯನ್ನು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿತ್ತು. ಈ ಬೆನ್ನಲ್ಲೇ ದಾಖಲಾತಿ ಪರಿಶೀಲನೆಗೆ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ ಮಾತ್ರ ಪರಿಗಣಿಸಲಾಗಿರುತ್ತದೆ. ಯುಜಿಸಿಇಟಿ-2024 ಕ್ಕೆ ಅಭ್ಯರ್ಥಿಗಳು http://kea.kar.nic.in ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಮತ್ತು ಆರ್‌ಡಿ ಸಂಖ್ಯೆಯನ್ನು ಆಧರಿಸಿ ಮೀಸಲಾತಿ [ಎಸ್‌ಸಿ, ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ] 371(ಜೆ), ಧಾರ್ಮಿಕ ಅಲ್ಪ ಸಂಖ್ಯಾತ, ಎನ್‌ಎಲ್‌ಸಿ ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್ ಮೂಲಕ ಪರಿಶೀಲನೆ ಮಾಡಲಾಗಿರುತ್ತದೆ ಎಂದಿದೆ. ಅರ್ಹತಾ ಕಂಡಿಕೆ ಇ, ಎಫ್, ಜಿ, ಹೆಚ್ ಮತ್ತು ಒ ಕ್ಲಾಸ್‌ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲಿಸಿ ನೀಡಿದಂತೆ ಅರ್ಹತೆಯನ್ನು ಪರಿಗಣಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು…

Read More

ಬೆಂಗಳೂರು: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಾಗುತ್ತಿದೆ. ಟಿಕೆಟ್ ದರವನ್ನು ಬಡವರು, ಮಧ್ಯಮ ವರ್ಗದ ಜನರಿಗೂ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಂದೇ ಭಾರತ್ ರೈಲಿನಲ್ಲಿ ಬಡವರು, ಮಧ್ಯಮ ವರ್ಗದವರು ಓಡಾಡುವಂತೆ ಆಗಬೇಕು. ಅದಕ್ಕಾಗಿ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಿನ್ನೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೂ ಚರ್ಚೆ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗಗಳು ಅಭಿವೃದ್ಧಿಯಾಗಲಿದ್ದಾವೆ. ಯಶವಂತಪುರ ಟು ಚನ್ನಸಂದ್ರ ನಡುವೆ 25 ಕಿಲೋ ಮೀಟರ್ ಮತ್ತು ಬೈಯ್ಯಪ್ಪನಹಳ್ಳಿ ಟು ಹೊಸೂರು ನಡುವೆ 48 ಕಿಲೋಮೀಟರ್ ಹಳಿ ಡಬ್ಲಿಂಗ್ ಯೋಜನೆಗೆ 814 ಕೋಟಿ ರೂ ವೆಚ್ಚವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುದಾನ ಮಂಜೂರು ಮಾಡಲಿದೆ ಎಂದರು. https://kannadanewsnow.com/kannada/note-kas-recruitment-preliminary-exam-rescheduled-to-august-25/ https://kannadanewsnow.com/kannada/sda-accepts-bribe-through-phonepe-in-education-ministers-constituency/

Read More

ಬೆಂಗಳೂರು: ಕೆಪಿಎಸ್ಸಿಯಿಂದ ಕರೆಯಲಾಗಿದ್ದಂತ ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ಕ್ಕೆ ಮರುನಿಗದಿ ಮಾಡಲಾಗಿದೆ. ಈ ಮೂಲಕ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ʼಎʼ ಮತ್ತು ʼಬಿʼ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21 ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧರಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, 2017-18ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. https://twitter.com/KarnatakaVarthe/status/1806680751599206518 https://kannadanewsnow.com/kannada/dk-shivakumar-warns-of-disciplinary-action-against-those-who-make-public-statements-on-change-of-deputy-cm-cm/ https://kannadanewsnow.com/kannada/bengaluru-five-buses-of-a-private-nursing-college-gutted-in-another-fire/

Read More