Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿದ್ದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪಡೆದರು. ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಅವರ ನಿವಾಸಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಸ್ ಎಂ ಕೃಷ್ಣ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಕೈಮುಗಿದು ಅಂತಿಮ ದರ್ಶನವನ್ನು ಪಡೆದರು. ಈ ವೇಳೆ ಮಾತನಾಡಿದಂತ ಅವರು, ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿದ್ದರು. ಒಬ್ಬ ದೂರದೃಷ್ಠಿ ಇದ್ದಂತ ಮುತ್ಸದ್ದಿ ರಾಜಕಾರಣಿಯಾಗಿದ್ದರು. ದೀರ್ಘ ಕಾಲ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿದ್ದರು. 6 ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಇದ್ದರು ಎಂದರು. ಎಸ್ ಎಂ ಕೃಷ್ಣ ಅವರು ಸಮರ್ಥ ಆಡಳಿತಗಾರರಾಗಿದ್ದರು. ಬೆಂಗಳೂರು ಸಿಂಗಾಪುರ ಮಾಡಬೇಕೆಂದು ಕನಸು ಕಂಡಿದ್ರು. ಐಟಿ ಕ್ಷೇತ್ರ ಬೆಳವಣಿಗೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇಂದು ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರೋದಕ್ಕೆ ಎಸ್ ಎಂ ಕೃಷ್ಣ ಅವರ ಕೊಡುಗೆ ಕಾರಣ. ಬೆಂಗಳೂರು ಐಟಿ-ಬಿಟಿ ಸಿಟಿಯಾಗಲು ಎಸ್ ಎಂ ಕೃಷ್ಣ ಅಪಾರ…
ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದಿದ್ದಾರೆ. https://twitter.com/siddaramaiah/status/1866435222104924384 https://kannadanewsnow.com/kannada/aicc-mallikarjun-kharge-condoles-sm-krishnas-death/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/
ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ ಕೊಟ್ಟಿಲ್ಲ, ನಾವು ಜಾರಿ ತಂದ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ. ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ರೈತ ವಿರೋಧಿ ಮತ್ತು ಜನ ವಿರೋಧಿ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಅದೇ…
ಬೆಂಗಳೂರು: ಬೆಳಗಾವಿ ಮತ್ತು ಮಣುಗೂರು ನಿಲ್ದಾಣಗಳ ನಡುವೆ ವಾರದಲ್ಲಿ ನಾಲ್ಕು ದಿನ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07335/07336) ರೈಲು ಸೇವೆ ಕಾರ್ಯಾಚರಣೆಯ ಕಾರಣಗಳಿಂದಾಗಿ ಮುಂದಿನ ಸೂಚನೆವರೆಗೆ ರದ್ದುಪಡಿಸಲಾಗುತ್ತಿದೆ. 1. ಡಿಸೆಂಬರ್ 18, 2024 ರಿಂದ ಮುಂದಿನ ಆದೇಶದವರೆಗೆ ಬೆಳಗಾವಿಯಿಂದ ಮಣುಗೂರು ನಿಲ್ದಾಣದವರೆಗೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07335) ರೈಲು ಸಂಚಾರ ರದ್ದುಪಡಿಸಲಾಗಿದೆ. 2. ಡಿಸೆಂಬರ್ 19, 2024 ರಿಂದ ಮುಂದಿನ ಆದೇಶದವರೆಗೆ ಮಣುಗೂರುದಿಂದ ಬೆಳಗಾವಿ ತನಕ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07336) ರೈಲು ಸಂಚಾರ ರದ್ದುಪಡಿಸಲಾಗಿದೆ. https://kannadanewsnow.com/kannada/union-minister-hd-kumaraswamy-slams-lathicharge-on-panchamasali-seers-leaders/ ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news | Kannada | Kannada News | Karnataka News | Karnataka News
ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಹರಿಹಾಯ್ದಿದ್ದಾರೆ. ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ…
ಬೆಂಗಳೂರು: ಹೃದಯಾಘಾತದಿಂದ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಇಂತಹ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು ಮೂಡಿಸಿದವರು ಶ್ರೀ ಎಸ್.ಎಂ. ಕೃಷ್ಣ ಅವರು. ಇವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ. 1999 ರಿಂದ 2004 ಕೃಷ್ಣ ರವರು ಮುಖ್ಯಮಂತ್ರಿ ಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು ಅದು ಕೃಷ್ಣ ರವರ ದೂರದೃಷ್ಟಿಯ ಫಲವಾದದ್ದು. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ವಿಚಾರಣೆಯ ವೇಳೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಕೋರಿದ ಕಾರಣದಿಂದಾಗಿ ಹೈಕೋರ್ಟ್ ಏಕಸದಸ್ಯ ಪೀಠವು ಡಿಸೆಂಬರ್.12ಕ್ಕೆ ಮುಂದೂಡಿಕೆ. ಅಂದಹಾಗೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಹೈಕೋರ್ಟ್ ಅವರನ್ನು ಬಂಧಿಸದಂತೆ ಆದೇಶಿಸಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news | Kannada | Kannada News | Karnataka…
ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಯಕೃತ್ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್ ಜಿ.ಎಸ್.ಬಿ. ಹಾಗೂ ಡಾ. ಪಿಯೂಷ್ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಕುರಿತು ಮಾತನಾಡಿದ ಡಾ. ಕಿಶೋರ್ ಜಿಎಸ್ಬಿ, ಆಫ್ರಿಕಾ ಮೂಲಕ ಜಾನ್ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ. ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಒಬ್ಬ ಸಮರ್ಥ ರಾಜಕಾರಣಿ, ಸಂಸದೀಯ ಪಟುವಾಗಿ ಈ ರಾಜ್ಯದ ಪ್ರಗತಿಗೆ ಅಪಾರ ಕೊಡುಗೆ ನೀಡಿದ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಗೃಹ ಸಚಿವರಾಗಿ ತಾವು ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳನ್ನು ಒಮ್ಮತದಿಂದ ಸ್ವೀಕರಿಸುತ್ತಿದ್ದರು ಎಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅವರೊಂದಿಗೆ ಗೃಹ ಸಚಿವರಾಗಿದ್ದ ದಿನಗಳನ್ನು ನೆನೆಪು ಮಾಡಿಕೊಂಡಿದ್ದಾರೆ, ಡಾ.ರಾಜಕುಮಾರ್ ಅಪರಣವಾದ ಸಂದರ್ಭದಲ್ಲಿ ಅವರು ತಮ್ಮ ಜೊತೆ ಜೊತೆಯಲ್ಲಿ ಸಂಯಮದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಬಣ್ಣಿಸಿದ್ದಾರೆ. ತಮ್ಮ ಸಹೋದ್ಯೋಗಿಯಾಗಿ ರಾಜಕೀಯ ಜೀವನದುದ್ದಕ್ಕೂ ಸ್ನೇಹಮಯಿಯಾಗಿದ್ದರು, ರಾಜ್ಯದ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರೂ ಒಟ್ಟಿಗೆ ಕಾರ್ಯನಿರ್ವಹಿಸುವಸುವ ಹಲವಾರು ಅವಕಾಶಗಳು ಒದಗಿ ಬಂದಿದ್ದವು ಎಂದು ತಿಳಿಸಿದ್ದಾರೆ, ಬೆಂಗಳೂರು ನಗರವನ್ನು ವಿಶ್ವಮಾನ್ಯ ನಗರವನ್ನಾಗಿ ನಿರ್ಮಿಸಲು ಎಸ್.ಎಂ.ಕೃಷ್ಣ ಅವರು ಅಡಿಪಾಯ ಹಾಕಿದರು, ಬೆಂಗಳೂರು ನಗರವನ್ನು ಸಿಂಗಪುರವಾಗಿ ನೋಡಲು ಇಚ್ಛಿಸಿ, ನಗರವನ್ನು ಸೌಂದರ್ಯೀಕರಣ ಮಾಡಲು ಆರಂಭಿಸಿದರು. ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯನ್ನಾಗಿ ರೂಪಿಸುವ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅರಣ್ಯ ಇಲಾಖೆಯ ಎಸಿಎಫ್ ಸುರೇಶ್ ನಿವಾಸ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಸಿಕ್ಕಂತ ಚಿನ್ನಾಭರಣ, ಆಸ್ತಿಯನ್ನು ಕಂಡಂತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಾಗಾದ್ರೇ ಸಿಕ್ಕಿದ್ದು ಏನೇನು ಅನ್ನೋ ಬಗ್ಗೆ ಮುಂದೆ ಓದಿ. ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಭೇಟೆಗೆ ಲೋಕಾಯುಕ್ತ ಪೊಲೀಸರು ಇಳಿದಿದ್ದರು. ಬೆಂಗಳೂರಿನ ಐದು ಕಡೆ, ಬೆಂಗಳೂರು ಗ್ರಾಮಾಂತರದ ಓರ್ವ ಅಧಿಕಾರಿಯ ಮೇಲೆ, ಗದಗ, ಕಲಬುರ್ಗಿ, ರಾಯಚೂರು, ಚಿತ್ರದುರ್ಗದಲ್ಲಿ ವಿವಿಧ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎಸಿಸ್ಟೆಂಟ್ ಕನ್ವೆರ್ಟರ್ ಆಫ್ ಫಾರೆಸ್ಟ್ ಅಧಿಕಾರಿ ಸುರೇಶ್ ನಿವಾಸದ, ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಅಕ್ರಮ ಆಸ್ತಿ, ಪಾಸ್ತಿ ಪರಿಶೀಲನೆ ವೇಳೆಯಲ್ಲಿ ಸಿಕ್ಕಂತ ಚಿನ್ನಾಭರಣ, ಆಸ್ತಿಯನ್ನು ಕಂಡು ದಂಗಾಗಿದ್ದಾರೆ. ಹಿರಿಯೂರು ತಾಲ್ಲೂಕು ಎಸಿಎಫ್ ಸುರೇಶ್ ಮನೆಯಲ್ಲಿ ತನಿಖೆ ವೇಳೆ 1 ಕೆಜಿ ಚಿನ್ನಾಭರಣ, 3 ನಿವೇಶನಗಳು, 9 ಎಕರೆ…