Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಬೇಕಾಗಿರುವುದರಿಂದ ಅರ್ಹ ಶಿಕ್ಷಕರಿಂದ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ವೇಳಾಪಟ್ಟಿ: 06.11.2025 (ಗುರುವಾರ): ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ. 25.11.2025 (ಮಂಗಳವಾರ): ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ. 25.11.2025 (ಮಂಗಳವಾರ) ರಿಂದ 10.12.2025 (ಬುಧವಾರ) ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗಧಿಪಡಿಸಿದ ಅವಧಿ. 30.12.2025 (ಮಂಗಳವಾರ): ಅಂತಿಮ ಮತದಾರರ…
ಕೂದಲಿನ ಬೇರುಗಳು ಗಟ್ಟಿಯಾಗಿ ಉಳಿದರೆ ನಮ್ಮ ಕೂದಲಿನ ಸಾಂದ್ರತೆಯನ್ನು ಯಾರೂ ಕಡಿಮೆ ಮಾಡಲು ಸಾಧ್ಯವಿಲ್ಲ. ಅಂದರೆ, ಉಪ್ಪು ನೀರು, ಧೂಳು ಮತ್ತು ಇತರ ಸಮಸ್ಯೆಗಳು ನಿಮ್ಮ ಕೂದಲಿನ ಬೇರುಗಳನ್ನು ದುರ್ಬಲಗೊಳಿಸಬಹುದು. ಇಂದಿನ ಪರಿಸ್ಥಿತಿಯಲ್ಲಿ ನಿಮ್ಮ ಕೂದಲು ತುಂಬಾ ಉದುರಲು ಪ್ರಾರಂಭಿಸುತ್ತಿದೆಯೇ? ಅದನ್ನು ಸರಿಪಡಿಸಲು ಮನೆಯಲ್ಲಿ ಅನುಸರಿಸಬೇಕಾದ ಸೌಂದರ್ಯ ಸಲಹೆಗಳು ಯಾವುವು ಎಂಬುದನ್ನು ಈ ಪೋಸ್ಟ್ನಲ್ಲಿ ನಾನು ತಿಳಿಯಲಿದ್ದೇನೆ . ಎರಡು ವಿಧದ ಸೌಂದರ್ಯ ಸಲಹೆಗಳನ್ನು ಹೇಳಲಾಗಿದೆ, ನೀವು ಈ ಎರಡು ಸಲಹೆಗಳಲ್ಲಿ ಒಂದನ್ನು ಅನುಸರಿಸಿ ಅಥವಾ ವಾರಕ್ಕೊಮ್ಮೆ ಎರಡೂ ಸಲಹೆಗಳನ್ನು ಅನುಸರಿಸಿದರೆ, ನಿಮ್ಮ ಕೂದಲು ಕಾಡು ಕಾಡಿನಂತೆ ಬೆಳೆಯಲು ಪ್ರಾರಂಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…
ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು. ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು. ಜಾಗೃತಿ ಮೂಡಿಸಿ: ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು…
ಭಾರತದಲ್ಲಿ, ನಾಗರಿಕರಿಗೆ ಗುರುತಿನ ಚೀಟಿ ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಹಲವಾರು ಅಗತ್ಯ ಕಾರ್ಡ್ಗಳನ್ನು ಒದಗಿಸಲಾಗುತ್ತದೆ. ಈ ಕಾರ್ಡ್ಗಳು ಸರ್ಕಾರಿ ಸೇವೆಗಳಿಗೆ ಮಾತ್ರವಲ್ಲದೆ ಬ್ಯಾಂಕಿಂಗ್, ಮತದಾನ, ಶಿಕ್ಷಣ, ಪ್ರಯಾಣ ಮತ್ತು ಇತರ ಹಲವು ಉದ್ದೇಶಗಳಿಗೂ ಅವಶ್ಯಕವಾಗಿದೆ. ಸರ್ಕಾರವು ಈ ಕಾರ್ಡ್ಗಳನ್ನು ಪಡೆಯುವುದನ್ನು ಬಹಳ ಸುಲಭ ಮತ್ತು ಉಚಿತವಾಗಿಸಿದೆ, ಇದು ಸಾರ್ವಜನಿಕರಿಗೆ ಅನುಕೂಲವನ್ನು ಒದಗಿಸುತ್ತದೆ. ಆರು ಅಗತ್ಯ ಸರ್ಕಾರಿ ಗುರುತಿನ ಚೀಟಿಗಳು: ಉಚಿತ ಮತ್ತು ಕಡ್ಡಾಯ: ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (EPIC), ಪ್ಯಾನ್ ಕಾರ್ಡ್, ಪಾಸ್ಪೋರ್ಟ್, ಚಾಲನಾ ಪರವಾನಗಿ, ಪಡಿತರ ಚೀಟಿ. ಸರ್ಕಾರಿ ಗುರುತಿನ ಚೀಟಿಗಳ ಅವಲೋಕನ: ಕೋಷ್ಟಕದಲ್ಲಿನ ಮಾಹಿತಿ. ಈ ಎಲ್ಲಾ ಸರ್ಕಾರಿ ಗುರುತಿನ ಚೀಟಿಗಳು ಏಕೆ ಅಗತ್ಯ? ಎಲ್ಲಾ ಅಗತ್ಯ ಸರ್ಕಾರಿ ಕಾರ್ಡ್ಗಳನ್ನು ಉಚಿತವಾಗಿ ಪಡೆಯುವುದು ಹೇಗೆ? ಈ ಕಾರ್ಡ್ಗಳನ್ನು ಯಾರು ಪಡೆಯಬೇಕು? ಅಗತ್ಯವಿರುವ ದಾಖಲೆಗಳು ಮತ್ತು ಕಾರ್ಯವಿಧಾನ. ಸರ್ಕಾರಿ ವೆಬ್ಸೈಟ್ಗಳು ಅಥವಾ ಪೋರ್ಟಲ್ಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಿ. ನೀವು ಯಾವ ಸರ್ಕಾರಿ ಸೈಟ್ಗಳಲ್ಲಿ…
ಬೆಂಗಳೂರು: ನಗರದಲ್ಲಿ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಹೀಗಾಗಿ ಕೆಲ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆ ಬಳಿಕ ಇದೀಗ ರೈಲು ಸಂಚಾರ ಪುನರಾರಂಭಗೊಂಡಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಇಂದು (04.10.2025) ರಂದು ಸುಮಾರು 15.17 ಗಂಟೆಗೆ ನಾಡಾಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮಾಧವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಒಬ್ಬ ಪ್ರಯಾಣಿಕನು ರೈಲಿನ ಹಳಿಯ ಮುಂದೆ ಹಾರಿದ ಪರಿಣಾಮವಾಗಿ ಈ ಬಾಗದ ರೈಲು ಸೇವೆಯಲ್ಲಿ ವ್ಯತ್ಯಾಯವಾಯಿತು ಎಂದಿದೆ. ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ ಮತ್ತು ನ್ಯಾಷನಲ್ ಕಾಲೇಜು ಮತ್ತು ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 15.47 ಗಂಟೆಗೆ ಸಾಮಾನ್ಯ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಮಾಹಿತಿ ನೀಡಿದೆ.
ಬೆಂಗಳೂರು: ನಗರದಲ್ಲಿ ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭಗೊಂಡಿತ್ತು. ರಾಜ್ಯಾಧ್ಯಂತ ಆರಂಭಗೊಂಡಾಗ ಎದುಗಾರಿದ್ದಂತ ವಿಘ್ನದಂತೆ ಬೆಂಗಳೂರಲ್ಲಿ ಮೊದಲ ದಿನವೇ ವಿಘ್ನ ಉಂಟಾಗಿದೆ. ಗೊಂದಲ ನಿವಾರಿಸುವಂತೆ ಗಣತಿದಾರರು ಪ್ರತಿಭಟನೆ ಕೂಡ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಇರುವಂತ ಜಿಬಿಎ ಕಚೇರಿಯಲ್ಲಿ ಗೊಂದಲ ನಿವಾರಣೆಗೆ ಆಗ್ರಹಿಸಿ ನೂರಾರು ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡಿದ್ದಂತ ಗಣತಿದಾರರು ಪ್ರತಿಭಟನೆ ನಡೆಸಿದರು. ವಾರ್ಡ್ ಗಳ ಹಂಚಿಕೆಯಲ್ಲಿ ಗಣತಿದಾರರಿಗೆ ಗೊಂದಲ ಉಂಟಾಗಿದೆ. ಇದನ್ನು ನಿವಾರಿಸುವಂತೆ ಒತ್ತಾಯಿಸಿದರು. ಇದಷ್ಟೇ ಅಲ್ಲದೇ ರೋಗಿಗಳನ್ನೂ ಗಣತಿಗೆ ನೇಮಕ ಮಾಡಲಾಗಿದೆ. ಆಪ್ ನಲ್ಲಿ ತಾಂತ್ರಿಕ ಸಮಸ್ಯೆ ಸೇರಿ ಹತ್ತಾರು ಗೊಂದಲಗಳಿದ್ದಾವೆ. ಇವುಗಳನ್ನು ಬಗೆ ಹರಿಸುವಂತೆ ಆಗ್ರಹಿಸಿ ಗಣತಿದಾರರು ಜಿಬಿಎ ಅಧಿಕಾರಿಗಳಿಗೆ ಆಗ್ರಹಿಸಿದರು. ಇದಲ್ಲದೇ ತಮ್ಮ ಕ್ಷೇತ್ರವನ್ನು ಬಿಟ್ಟು 30 ರಿಂದ 40 ಕಿಲೋಮೀಟರ್ ದೂರದವರೆಗೂ ಸಮೀಕ್ಷೆಗೆ ನಿಯೋಜಿಸಲಾಗಿದೆ. ಸಮಸ್ಯೆ ಎದುರಾದರೇ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಗಣತಿದಾರರು ಬೇಸರವನ್ನು ಹೊರ ಹಾಕಿದರು. https://kannadanewsnow.com/kannada/good-news-for-farmers-in-the-state-registration-begins-for-purchase-of-millet-under-support-price-scheme/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ.ಜಿ ನಿರ್ದೇಶನ ನೀಡಿದರು. ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡುವ ಸಂಬಂಧ ಕರೆಯಲಾಗಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಕ್ವಿಂಟಲ್ ರಾಗಿಗೆ 4,886 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಪಡಿಸಿದ್ದು, 2025ರ ಅಕ್ಟೋಬರ್ 01 ರಿಂದ ಡಿಸೆಂಬರ್ 15 2025 ರ ವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಜನವರಿ 01 2026 ರಿಂದ ಮಾರ್ಚ್ 31 2026 ರವರೆಗೆ ರಾಗಿ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರಂ, ಬೆಂಗಳೂರು ದಕ್ಷಿಣ…
ಬೆಳಗಾವಿ: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ…
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ. ಗ್ಯಾರಂಟಿಗಳಿಂದ ಆದ ಪರಿವರ್ತನೆ: ಈ ಯೋಜನೆಗಳ ಯಶಸ್ಸಿನ ಅಂಕಿ-ಅಂಶಗಳನ್ನು ನೀಡಿದ ಸುರ್ಜೇವಾಲಾ, ಗ್ಯಾರಂಟಿಗಳಿಂದ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳನ್ನು…
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿತ್ತು. ರೈಲಿನ ಅಡಿಯಲ್ಲಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಿರುವಂತ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು. ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಜಿಗಿದ ನಂತ್ರ ರೈಲು ಸಾಗಿತ್ತು. ಹೀಗಾಗಿ ರೈಲಿನ ಅಡಿಯಲ್ಲಿ ಯುವಕ ಸಿಲುಕಿಕೊಂಡಿದ್ದನು. ಹೀಗೆ ಆತ್ಮಹತ್ಯೆಗೆ ಯತ್ನಿಸಿ, ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವಂತ ಆತನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/national-best-teacher-awardee-pg-dwarkanath-passes-away/ https://kannadanewsnow.com/kannada/note-do-you-know-how-many-days-you-can-store-water-in-your-home/













