Author: kannadanewsnow09

ಬೆಳಗಾವಿ: ಸರ್ಕಾರಿ ಅಧಿಕಾರಿಯಾಗಿದ್ದಂತ ಹೆಸ್ಕಾಂ ಸಹಾಯಕ ಎಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದಂತ ದೂರುದಾರೆ ಸೇರಿ 13 ಮಂದಿಗೆ ಕೋರ್ಟ್ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಳಗಾವಿಯಲ್ಲಿ ಹೆಸ್ಕಾಂ ಸಹಾಯ ಅಧೀಕ್ಷಕ ಅಭಿಯಂತರರಾಗಿದ್ದಂತ ತುಕಾರಾಂ ಮಜ್ಜಿಗೆ ಎಂಬುವರ ವಿರುದ್ಧ ಸಿಂಧು ಎಂಬುವರು ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದರು. 11 ವರ್ಷಗಳ ಸುಧೀರ್ಘ ವಿಚಾರಣೆ ನಡೆಸಿದಂತ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ದೂರುದಾರೆ ಸಿಂಧು ಸೇರಿದಂತೆ 13 ಮಂದಿ ದಾಖಲಿಸಿರೋದು ಸುಳ್ಳು ದೂರಾಗಿದೆ ಎಂಬುದಾಗಿ ಹೇಳಿದಂತ ನ್ಯಾಯಾಲಯವು, ಬಿ.ವಿ ಸಿಂಧು ಸೇರಿದಂತೆ 13 ಜನರಿಗೆ ನ್ಯಾಯಾಲಯವು 3 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ತಲಾ 86,000 ದಂಡವನ್ನು ವಿಧಿಸಿ ಆದೇಶಿಸಿದೆ. ಅಂದಹಾಗೇ ನವೆಂಬರ್.19, 2014ರಂದು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಬಿ.ವಿ ಸಿಂಧು ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪದಡಿ ಹೆಸ್ಕಾಂ ಅಧಿಕಾರಿ ತುಕಾರಾಂ…

Read More

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಯಾಗಿರುವಂತ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಶ್ರೀಧರ್ ಪೂಜಾರ್ ಗೆ ಬಿಗ್ ರಿಲೀಫ್ ನೀಡಿದೆ. ಇಂದು ಹೈಕೋರ್ಟ್ ನಲ್ಲಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ನ್ಯಾಯಪೀಠದ ಮುಂದೆ ಶ್ರೀಧರ್ ಪೂಜಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದಿಸಿದರು. ಒಂದೇ ಕೇಸ್ ನಲ್ಲಿ ಎರಡು ಎರಡು ಬಾರಿ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ 4 ವರ್ಷಗಳ ಬಳಿಕ ಬಂಧಿಸೋದಕ್ಕೆ ಯತ್ನಿಸಲಾಗಿದೆ ಎಂಬುದಾಗಿ ವಾದಿಸಿದರು. ಈ ವಾದದ ಬಳಿಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರು ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿದರು. ಅಲ್ಲದೇ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುವಂತಿದೆ ಅಂತ ಹೇಳುವ ಮೂಲಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು. https://kannadanewsnow.com/kannada/cm-siddaramaiah-to-hold-meeting-with-mps-in-delhi-r-ashoka/ https://kannadanewsnow.com/kannada/ramesh-babu-demands-judicial-probe-into-land-scam-against-r-ashoka/

Read More

ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಯಾವಾಗಲೂ ಸೌಹಾರ್ದತೆ ಇರಬೇಕು. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ. ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಜನರು ಬೆಲೆ ಏರಿಕೆಗಳಿಗೆ ತಯಾರಾಗಿರಬೇಕು. ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪೆಟ್ರೋಲ್‌ ದರ ಏರಿಕೆ,…

Read More

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ನಾಗೇಂದ್ರರ ಜೊತೆ ಇದ್ದಾರೆ. ಹಗರಣದಲ್ಲಿ ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದು, ಇವರೆಲ್ಲರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇರುವ ಮೂವರಲ್ಲಿ ಕದ್ದವರು ಯಾರು ಎಂಬಂತಾಗಿದೆ ಪರಿಸ್ಥಿತಿ. ಒಬ್ಬರ ಮೇಲೆ ಇನ್ನೊಬ್ಬರು ಬೆಟ್ಟು ತೋರಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಮೊತ್ತದ ಬೃಹತ್ ಹಗರಣದಲ್ಲಿ ಭಾಗಿಯಾದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಈಗಾಗಲೇ ಎಸ್‍ಟಿ ಮೋರ್ಚಾ ರಾಜ್ಯಾದ್ಯಂತ ಹೋರಾಟ ಮಾಡುತ್ತಿದೆ ಎಂದು ವಿವರಿಸಿದರು. 187 ಕೋಟಿ ಹಣದಲ್ಲಿ ಬಹಳಷ್ಟು ಮೊತ್ತ ದುರ್ಬಳಕೆ ಆಗಿದೆ. 89 ಕೋಟಿ ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದೆ. 700ಕ್ಕೂ ಅಧಿಕ ಖಾತೆಗಳಿಗೆ…

Read More

ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ( Ayushman Bharat health insurance scheme ) 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಅಧ್ಯಕ್ಷ ದ್ರೌಪದಿ ಮುರ್ಮು ( President Droupadi Murmu ) ಗುರುವಾರ ಹೇಳಿದ್ದಾರೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (Ayushman Bharat-Pradhan Mantri Jan Arogya Yojana -AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಅಧ್ಯಕ್ಷ ಮುರ್ಮು ಹೇಳಿದರು. ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು. ಇದಲ್ಲದೆ, ಸರ್ಕಾರವು ಈ ಪ್ರದೇಶದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಸಹ ಇದರ ವ್ಯಾಪ್ತಿಗೆ ಬರುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ” ಎಂದು ರಾಷ್ಟ್ರಪತಿ ಹೇಳಿದರು.…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು. ಕೇಂದ್ರ ಸಚಿವರ ಭೇಟಿ ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು,ರೈಲ್ವೆ, ನೀರಾವರಿ , ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ಇಂದು ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಪೋಕ್ಸ್ ವಿಶೇಷ ನ್ಯಾಯಾಲಯಕ್ಕೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಅಂದಹಾಗೇ ಈಗಾಗಲೇ ಈ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಎನ್ನುವಂತೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ ವಿಚಾರಣೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆಯೂ ತಿಳಿಸಿತ್ತು. https://kannadanewsnow.com/kannada/ramesh-babu-demands-judicial-probe-into-land-scam-against-r-ashoka/ https://kannadanewsnow.com/kannada/emergency-proposal-could-have-been-avoided-rahul-gandhi-meets-lok-sabha-speaker/

Read More

ಬೆಂಗಳೂರು : ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದರು. ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು. ಕೆಂಪೇಗೌಡರ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು. https://kannadanewsnow.com/kannada/big-shock-for-high-school-teachers-promotion-stopped-due-to-low-sslc-exam-result/ https://kannadanewsnow.com/kannada/ramesh-babu-demands-judicial-probe-into-land-scam-against-r-ashoka/

Read More

ಯಾದಗಿರಿ: ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊನೆಯ ಸ್ಥಾನವನ್ನು ಗಳಿಸಿತ್ತು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಕುಸಿತಗೊಂಡ ಪರಿಣಾಮ, ಪ್ರೌಢ ಶಾಲಾ ಶಿಕ್ಷಕರ ಬಡ್ತಿಗೂ ಬ್ರೇಕ್ ಹಾಕಿ, ಶಾಕ್ ನೀಡಲಾಗಿದೆ. ಈ ಸಂಬಂಧ ಯಾದಗಿರಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರೀಮಾ ಫನ್ವಾರ್ ಆದೇಶ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನವನ್ನು ಗಳಿಸಿದಂತ ಪರಿಣಾಮ, ಪ್ರೌಢ ಶಾಲಾ ಶಿಕ್ಷಕರು ಪ್ರಮೋಷನ್ ತಡೆ ಹಿಡಿಯಲಾಗಿದೆ ಅಂತ ತಿಳಿಸಿದ್ದಾರೆ. ಸಿಇಓ ಈ ಆದೇಶದಿಂದ ಶಾಲಾ ಶಿಕ್ಷಕರು ಬೇಸರ, ಭಯವನ್ನು ಹೊಂದಿದ್ದು, ಅವರ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ಶಾಲಾ ಶಿಕ್ಷಕರು ಮಾತ್ರವೇ ಎಸ್ ಎಸ್ ಎಲ್ ಸಿ ಫಲಿತಾಂಶ ಕಡಿಮೆಯಾಗೋದಕ್ಕೆ ಕಾರಣವಲ್ಲ ಅಂತ ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಯಾದಗಿರಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಕೆಂಬಾವಿ ಅವರು, ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ…

Read More

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ಆಕ್ಷೇಪಿಸಿದರು. ಸರಕಾರದ ನೀತಿ, ನಿರ್ಧಾರ ಹಾಗೂ ಚಟುವಟಿಕೆಗಳನ್ನು ನೋಡಿದರೆ ಈ ಸರಕಾರಕ್ಕೆ ಮನುಷ್ಯತ್ವ ಇಲ್ಲ ಎಂದು ಯಾರಿಗಾದರೂ ಅನಿಸಿ, ಅದರ ಸ್ಪಷ್ಟ ಸೂಚನೆಗಳು ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆ ಲಭಿಸುತ್ತಿಲ್ಲ. ವೈದ್ಯರು, ಔಷಧಿಯ ಲಭ್ಯತೆ ಇಲ್ಲ. ಡೆಂಗ್ಯೂ ಅವತಾರವನ್ನು ನಿಯಂತ್ರಿಸಲು, ಅದರ ಬಗ್ಗೆ ಮಾತನಾಡಲು ವೈದ್ಯಕೀಯ ಸಚಿವರು- ಆರೋಗ್ಯ ಸಚಿವರು ಎಲ್ಲಿ ಹೋಗಿದ್ದಾರೆ ಎಂಬುದನ್ನು ಹುಡುಕಬೇಕಾಗಿದೆ ಎಂದು ತಿಳಿಸಿದರು. ಪಿಯುಸಿ, ಎಸ್ಸೆಸ್ಸೆಲ್ಸಿ, ಎಂಜಿನಿಯರಿಂಗ್, ವೈದ್ಯಕೀಯ ಸೇರಿ ಎಲ್ಲ ವಿದ್ಯಾರ್ಥಿಗಳ ಶುಲ್ಕ ಹೆಚ್ಚು…

Read More