Subscribe to Updates
Get the latest creative news from FooBar about art, design and business.
Author: kannadanewsnow09
ಛತ್ತೀಸ್ ಗಢ: ಮಂಗಳವಾರ ಸಂಜೆ ಛತ್ತೀಸ್ಗಢದ ಬಿಲಾಸ್ಪುರ ನಿಲ್ದಾಣದ ಬಳಿ ಪ್ಯಾಸೆಂಜರ್ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಸರಕು ರೈಲಿನ ಕೊನೆಯ ಬೋಗಿ ಪ್ರಯಾಣಿಕರ ರೈಲಿನ ಮೊದಲ ಬೋಗಿಗೆ ಡಿಕ್ಕಿ ಹೊಡೆದಿದೆ. ನಾಲ್ಕು ಪ್ರಯಾಣಿಕರು ಇನ್ನೂ ಪ್ಯಾಸೆಂಜರ್ ರೈಲಿನ ಒಂದು ಬೋಗಿಯ ಕೆಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಲಾಸ್ಪುರ ಕಲೆಕ್ಟರ್ ಸಂಜಯ್ ಅಗರ್ವಾಲ್ ಹೇಳಿದ್ದಾರೆ. ಅಪಘಾತ ಹೇಗೆ ಸಂಭವಿಸಿತು? ಸಂಜೆ 4 ಗಂಟೆ ಸುಮಾರಿಗೆ MEMU (ಮುಖ್ಯ ವಿದ್ಯುತ್ ಮಲ್ಟಿಪಲ್ ಯೂನಿಟ್) ಪ್ಯಾಸೆಂಜರ್ ರೈಲು ಗೆವ್ರಾದಿಂದ (ನೆರೆಯ ಕೊರ್ಬಾ ಜಿಲ್ಲೆಯಲ್ಲಿ) ಬಿಲಾಸ್ಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಗಟೋರಾ ಮತ್ತು ಬಿಲಾಸ್ಪುರ ರೈಲ್ವೆ ನಿಲ್ದಾಣಗಳ ನಡುವೆ ಇದ್ದಾಗ, ಪ್ಯಾಸೆಂಜರ್ ರೈಲು ಹಿಂದಿನಿಂದ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಕಾರ್ಯಪ್ರವೃತ್ತವಾಗಿದೆ: ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸಿದ್ದಾರೆ ಮತ್ತು ಗಾಯಾಳುಗಳ ಚಿಕಿತ್ಸೆಗೆ…
ಮಂಡ್ಯ: ಜಿಲ್ಲೆಯಲ್ಲಿ ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ರೈತನನ್ನು ಮಂಜೇಗೌಡ ಎಂಬುದಾಗಿ ಗುರುತಿಸಲಾಗಿದೆ. ಈತ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ ಬಗೆಯರಿದ ಜಮೀನು ಸಮಸ್ಯೆಯಾಗಿತ್ತು. ಈ ಸಂಬಂಧ ತಾಲೂಕು ಕಚೇರಿಗೆ ಅಲೆದು ಮಂಜೇಗೌಡ ಸುಸ್ತಾಗಿದ್ದರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ರೈತ ಮಂಜೇಗೌಡ ಅಲೆದಾಡಿದ್ದರು. ಇಷ್ಟಾದರೂ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆಗೆ ರೈತ ಮಂಜೇಗೌಡ ಯತ್ನಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ರೈತ ಮಂಜೇಗೌಡ ಬೆಂಕಿ ಹಚ್ಚಿಕೊಂಡಿದ್ದಾನೆ. ಈ ದೃಶ್ಯ ಕಂಡು ಸ್ಥಳೀಯರು ಕೂಡಲೇ ಬೆಂಕಿ ಹಾರಿಸಿದ್ದಾರೆ. ಇದೀಗ ಗಾಯಗೊಂಡಿರುವ ಮಂಜೇಗೌಡರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/ai-helps-couple-conceive-after-19-years-of-failed-pregnancies/ https://kannadanewsnow.com/kannada/beware-that-excessive-masturbation-can-lead-to-these-dangerous-problems/
ನಿತ್ಯ ಪಠಿಸುವ ಪ್ರಮುಖ ಶ್ಲೋಕ – ಮಂತ್ರಗಳು ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಕೃತಕ ಬುದ್ಧಿಮತ್ತೆಯ ಅಲ್ಗಾರಿದಮ್ ಎರಡು ಗಂಟೆಗಳಲ್ಲಿ ವೀರ್ಯ ಮಾದರಿಯ 2.5 ಮಿಲಿಯನ್ ಚಿತ್ರಗಳನ್ನು ಸ್ಕ್ಯಾನ್ ಮಾಡಿ, ಎರಡು ಕಾರ್ಯಸಾಧ್ಯವಾದ ವೀರ್ಯ ಕೋಶಗಳನ್ನು ಗುರುತಿಸಿದೆ. ಆ ಮೂಲಕ ಶಾಕಿಂಗ್ ಘಟನೆ ಎನ್ನುವಂತೆ 19 ವರ್ಷಗಳ ವಿಫಲ ಗರ್ಭಧಾರಣೆಯ ನಂತ್ರ ದಂಪತಿಗಳಿಗೆ ಗರ್ಭಿಣಿಯಾಗಲು AI ಸಹಾಯ ಮಾಡಿದೆ. ದಿ ಲ್ಯಾನ್ಸೆಟ್ ಜರ್ನಲ್ನಲ್ಲಿ ವರದಿಯಾಗಿರುವಂತೆ, ಈ ಪ್ರಗತಿಯು ದಂಪತಿಗಳು 19 ವರ್ಷಗಳ ನಂತರ ಗರ್ಭಧರಿಸಲು ಅನುವು ಮಾಡಿಕೊಟ್ಟಿತು. ಅಮೆರಿಕದ 39 ವರ್ಷದ ಪುರುಷ ಮತ್ತು 37 ವರ್ಷದ ಮಹಿಳೆ ದಂಪತಿಗಳು ಈ ಹಿಂದೆ ವೀರ್ಯವನ್ನು ಹೊರತೆಗೆಯಲು ಬಹು ಐವಿಎಫ್ ಚಕ್ರಗಳು ಮತ್ತು ಶಸ್ತ್ರಚಿಕಿತ್ಸಾ ವಿಧಾನಗಳಿಗೆ ಒಳಗಾಗಿದ್ದರು. ಅಜೋಸ್ಪೆರ್ಮಿಯಾ ಹೊಂದಿರುವ ಪುರುಷರು ತಮ್ಮ ಸ್ಖಲನದಲ್ಲಿ ಕಡಿಮೆ ಅಥವಾ ಯಾವುದೇ ವೀರ್ಯವಿಲ್ಲದ ಕಾರಣ ಆಗಾಗ್ಗೆ ಸವಾಲುಗಳನ್ನು ಎದುರಿಸುತ್ತಾರೆ. ವೃಷಣಗಳಿಂದ ವೀರ್ಯವನ್ನು ಹೊರತೆಗೆಯಲು ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು, ಆದರೆ ಇದು ಆಗಾಗ್ಗೆ ವಿಫಲಗೊಳ್ಳುತ್ತದೆ ಮತ್ತು ನಾಳೀಯ ಸಮಸ್ಯೆಗಳು ಅಥವಾ ಕಡಿಮೆ ಟೆಸ್ಟೋಸ್ಟೆರಾನ್ ಮಟ್ಟಗಳಂತಹ ತೊಡಕುಗಳಿಗೆ…
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಲಾಭ ಹೊಂದಲು ತವಕದಿಂದ ಕಾಯುತ್ತಿದ್ದು, ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕೆಂದು ಸಚಿವರು ಹೇಳಿದರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು,…
ನವದೆಹಲಿ: ಕೆಲವು ದಿನಗಳ ಹಿಂದೆ ನಾವು ನೋಡಿದ್ದ ಅಮೆಜಾನ್ ವೆಬ್ ಸೇವೆಗಳ ಪ್ರಮುಖ ಸ್ಥಗಿತದ ನಂತರ, ಈಗ ರೆಡ್ಡಿಟ್ ಅದೇ ಹಾದಿಯಲ್ಲಿ ನಡೆಯುತ್ತಿರುವಂತೆ ತೋರುತ್ತಿದೆ. ಇತ್ತೀಚಿನ ಬೆಳವಣಿಗೆಯಲ್ಲಿ, ಹತ್ತು ಸಾವಿರಕ್ಕೂ ಹೆಚ್ಚು ಬಳಕೆದಾರರು ಜಾಗತಿಕ ಮಟ್ಟದಲ್ಲಿ ರೆಡ್ಡಿಟ್ ಅವರಿಗೆ ಕೆಲಸ ಮಾಡುತ್ತಿಲ್ಲ ಎಂದು ವರದಿ ಮಾಡಿದ್ದಾರೆ. ಒಟ್ಟು ದೂರುಗಳಲ್ಲಿ, ಸುಮಾರು 60% ಅಪ್ಲಿಕೇಶನ್ಗಾಗಿ, 33% ವೆಬ್ಸೈಟ್ಗಾಗಿ ಮತ್ತು ಸುಮಾರು 8% ಸರ್ವರ್ ಸಂಪರ್ಕಕ್ಕಾಗಿ ಬಂದಿವೆ. ಅನೇಕ ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ X ಗೆ ಅಡ್ಡಿಪಡಿಸುವಿಕೆಯ ಬಗ್ಗೆ ದೂರು ನೀಡಲು ಬಂದರು, ಅವರು ಸರಿಯಾಗಿ ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ ಎಂದು ಹಂಚಿಕೊಂಡರು. ಡೌನ್ ಡಿಟೆಕ್ಟರ್ನ ಭಾರತೀಯ ನಿರ್ದಿಷ್ಟ ವೆಬ್ಸೈಟ್ನಲ್ಲಿ ರೆಡ್ಡಿಟ್ನ ಸ್ಥಗಿತಕ್ಕೆ ಸಂಬಂಧಿಸಿದ ದೂರುಗಳು ಸಹ ನಿರಂತರವಾಗಿ ಹೆಚ್ಚುತ್ತಿವೆ. ಇಲ್ಲಿಯವರೆಗೆ, ಸುಮಾರು 350 ಬಳಕೆದಾರರು ಅಪ್ಲಿಕೇಶನ್ನಲ್ಲಿ ಲಾಗಿನ್ ಮಾಡುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದು ವರದಿ ಮಾಡಿದ್ದಾರೆ. ಡೌನ್ಡೆಕ್ಟರ್ ಪ್ರಕಾರ, ಹೆಚ್ಚಿನ ಬಳಕೆದಾರರು ವೆಬ್ಸೈಟ್ನಲ್ಲಿ (ಶೇಕಡಾ 49), ನಂತರ ಅಪ್ಲಿಕೇಶನ್ (ಶೇಕಡಾ 44)…
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ ನೋಂದಣಿ, ಇಂದಿರಾ ಕ್ಯಾಂಟೀನ್, ವಸತಿಗೃಹಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಉದ್ದಿಮೆ ಪರವಾನಗಿ ಕುರಿತಂತೆ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅಪರ ಆಯುಕ್ತರು, * ಡೆಂಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಲಾರ್ವಾ ಸರ್ವೇ ಮತ್ತು “ಡ್ರೈ ಡೇ” ಕಡ್ಡಾಯವಾಗಿ ನಡೆಸುವಂತೆ, * ಟಿಬಿ ಕಾಯಿಲೆ ನಿಯಂತ್ರಣಕ್ಕಾಗಿ ಎಲ್ಲಾ ಆಸ್ಪತ್ರೆಗಳಿಂದ ಮಾಸಿಕ ವರದಿ ಪಡೆದು ನಿಯಮಿತ ಮೇಲ್ವಿಚಾರಣೆ ನಡೆಸುವಂತೆ, * ಉಚಿತ ಲಸಿಕೆಗಳ ವಿತರಣೆ ಪರಿಣಾಮಕಾರಿಯಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆ, * ರೋಗ ವಾಹಕಗಳು ಮೂಲಕ ರೋಗ ಹರಡದಂತೆ ನಿರಂತರ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಂಬಾಕು ನಿಯಂತ್ರಣ ಅಂಗಡಿಗಳಲ್ಲಿ ನಿಯಮ…
ಬೆಂಗಳೂರು: ಸರಕಾರದ ಕೆಟ್ಟ ನಡೆಯನ್ನು ವಿರೋಧಿಸಲು ಇಡೀ ರಾಜ್ಯದಲ್ಲಿ ರೈತರು ಮುಂದಾಗಿದ್ದಾರೆ. ಬಿಜೆಪಿ ಮುಖಂಡತ್ವ ರೈತರ ಪರವಾಗಿ ನಿಲ್ಲುವ ತೀರ್ಮಾನ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ರೈತಪರ ನಿಲುವನ್ನು ತೆಗೆದುಕೊಂಡಿದೆ. ಕಾಂಗ್ರೆಸ್ಸಿನ ರೈತವಿರೋಧಿ ನೀತಿಯನ್ನು ಖಂಡಿಸುವುದಲ್ಲದೇ ವಿರೋಧಿಸುತ್ತೇವೆ ಎಂದು ತಿಳಿಸಿದರು. ಅತಿವೃಷ್ಟಿ ಆದಾಗ ಎಲ್ಲರಿಗಿಂತ ಮೊದಲು ನಾವೇ ಹೋಗಿದ್ದೇವೆ. ವಿಜಯೇಂದ್ರ, ನಾನು ಮತ್ತು ಅಶೋಕ್ ಅವರು ತೆರಳಿದ್ದೇವೆ ಎಂದು ಪ್ರಶ್ನೆಗೆ ಉತ್ತರವಾಗಿ ವಿವರಿಸಿದರು. ನಾವು ಹೋಗುವ ವರೆಗೆ ಸರಕಾರ ಎಚ್ಚತ್ತುಕೊಂಡಿರಲಿಲ್ಲ ಎಂದು ತಿಳಿಸಿದರು. ನಾನು ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಅವರು ನಾಳೆ ಗುಂಡ್ಲುಪೇಟೆಗೆ ಹೋಗಲಿದ್ದೇವೆ ಎಂದರು. ಬೆಳಗಾವಿಯಲ್ಲಿ ಸರಕಾರ ತಕ್ಷಣ ಕಬ್ಬು ಬೆಳೆಗೆ ಬೆಲೆ ನಿಗದಿಪಡಿಸಬೇಕು. ಹಳೆಯ ಬಾಕಿ ಸಿಗದೇ ರೈತರು ಕಂಗಾಲಾಗಿದ್ದು, ಅದನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗಾಗಲೇ ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಳೆ…
ಬೆಂಗಳೂರು: “ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮ ನಡೆದ ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು. ನಮ್ಮ ಮತ ನಮ್ಮ ಹಕ್ಕು. ಹೀಗಾಗಿ ನಮ್ಮ ದೇಶದಲ್ಲಿ ನಮ್ಮ ಜನ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಲ್ಲಾ ಸಂಸ್ಥೆಗಳು ಬಿಹಾರದ ಮತದಾರರಿಗೆ ವತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ ಬಿಹಾರ ಚುನಾವಣೆಯಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ಬಹಳಷ್ಟು ಆತ್ಮ ವಿಶ್ವಾಸದಲ್ಲಿದೆ ಎಂದು ಕೇಳಿದಾಗ,…
ಮಂಡ್ಯ: ಯಾವುದೇ ರಾಜಕೀಯ ಹಿನ್ನಲೆಯಿಲ್ಲದ ಒಬ್ಬ ಸಾಮಾನ್ಯ ರೈತ ಕುಟುಂಬದ ಮಗನಾಗಿ ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸಬೇಕೆಂಬ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯವನ್ನು ತಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮದ್ದೂರು ನಗರದ ಖಾಸಗಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಗಳಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣಾ ಇತಿಹಾಸದಲ್ಲಿ ಎಂದು ಸಹ 12 ಸ್ಥಾನಗಳಲ್ಲಿ 9 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿರಲಿಲ್ಲ. ಈ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಅಧ್ಯಕ್ಷ ಜೋಗಿಗೌಡ ಅವರ ಉಸ್ತುವಾರಿಯಲ್ಲಿ 9 ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಾಗಿದ್ದು, ಇನ್ನು ಮೂರು ಸ್ಥಾನಗಳಿಗೆ ಚುನಾವಣೆ ನಡೆದು 2 ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಜಿಲ್ಲೆಯ ರೈತರ ಹಿತ ದೃಷ್ಟಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರ…














