Author: kannadanewsnow09

ಬೆಂಗಳೂರು : “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇಂದು ಜಿಬಿಎ ವ್ಯಾಪ್ತಿಯ ಎಲ್ಲಾ ಶಾಸಕರನ್ನು ಕರೆದು ಪಾಲಿಕೆಗಳ ಬಜೆಟ್ ಕುರಿತು ಸಭೆ ನಡೆಸಲಾಯಿತು. ಇದರ ಜತೆಗೆ ಕೆಲವು ಪ್ರಮುಖ ನಿರ್ಣಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜಿಬಿಎ ಕಾರ್ಯಕಾರಿ ಸಭೆಯನ್ನು ನಡೆಸಲಾಗಿದೆ. ಪೊಲೀಸ್, ಬೆಸ್ಕಾಂ, ಬಿಎಂಆರ್ ಸಿಎಲ್, ಬಿಡಬ್ಲ್ಯೂಎಸ್ಎಸ್ ಬಿ, ಬಿಡಿಎ ಅಧಿಕಾರಿಗಳು, ಸಚಿವರು, ಶಾಸಕರು, ಸಚಿವರು ಭಾಗವಹಿಸಿದ್ದರು” ಎಂದು ಮಾಹಿತಿ ನೀಡಿದರು. “ಐದೂ ಪಾಲಿಕೆಗಳು ತಮ್ಮದೇ ಆದ ಪ್ರತ್ಯೇಕ ಬಜೆಟ್ ತಯಾರಿಸಿಕೊಂಡಿದ್ದಾರೆ. ಶಾಸಕರುಗಳು ಕೂಡ ತಮ್ಮ ಮನವಿ ಸಲ್ಲಿಸಿದ್ದಾರೆ. ವಾರ್ಡ್…

Read More

ಬೆಂಗಳೂರು: ನಗರದ ವಿವಿಧ ವಾರ್ಡ್ ಗಳಲ್ಲಿ ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೆ ವಾಹನಗಳನ್ನು ಡಂಪ್ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಹಳೆ ವಾಹನಗಳನ್ನು ವಾರಾನುಗಟ್ಟಲೆ ರಸ್ತೆಗಳಲ್ಲಿ ನಿಲ್ಲಿಸಿ ಹೋಗಿದ್ದಾರೆ, ಅವುಗಳನ್ನು ಎತ್ತಿಕೊಂಡು ಹೋಗಿ ನಿಗದಿತ ಜಾಗದಲ್ಲಿ ಹಾಕಲಾಗುವುದು. ಇದರ ಜವಾಬ್ದಾರಿಯನ್ನು ಪೊಲೀಸರಿಗೆ ನೀಡಲಾಗಿದೆ. ಬೆಲ್ಲಳ್ಳಿ, ಬಿಡಗಾನಹಳ್ಳಿ, ಬಿದ್ದನಳ್ಳಿ, ಸೊಂಡೆಕೊಪ್ಪ ಜಾಗ ನಿಗದಿ ಮಾಡಲಾಗಿದ್ದು, ಇನ್ನು ಕೆಲವು ಜಾಗ ನೀಡಲಾಗುವುದು” ಎಂದು ಮಾಹಿತಿ ನೀಡಿದರು. ವಾಹನಗಳ ಟೋಯಿಂಗ್ ಮಾಡುವ ವಿಚಾರ ಪ್ರಸ್ತಾಪ ಆಗಿದೆಯೇ ಎಂದು ಕೇಳಿದಾಗ, “ಎಲ್ಲಾ ಪಾಲಿಕೆಗಳಿಗೆ 2 ವಾಹನ ನೀಡಿದ್ದೇವೆ. ಎಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲವೋ, ಅಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್ ಮಾಡಲಾಗುವುದು” ಎಂದರು. ಪ್ರತಿ ವಾರ್ಡಿಗೆ 5-10 ಕೋಟಿ ಅನುದಾನ ಕೇಳುತ್ತಿದ್ದು, ಎಷ್ಟು ನೀಡಲಾಗುವುದು ಎಂದಾಗ, “ನೋಡೋಣ, ಅವರು ಆಕಾಶವನ್ನು ಕೇಳುತ್ತಿದ್ದಾರೆ,…

Read More

ಬೆಂಗಳೂರು: ನಗರದಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ ಹಾಕೋದಕ್ಕೆ ಚಿಂತನೆ ನಡೆಸಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಅವರು, ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇನ್ನು ನಾವು ಎಷ್ಟೇ ಹೇಳಿದರೂ ಫ್ಲೆಕ್ಸ್ ಹಾಕುವುದು ಹೆಚ್ಚುತ್ತಿದೆ. ನಮ್ಮ ಪಕ್ಷವೂ ಸೇರಿದಂತೆ ಎಲ್ಲಾ ಪಕ್ಷದವರು ಫ್ಲೆಕ್ಸ್ ಹಾಕುತ್ತಿದ್ದಾರೆ. ಇನ್ನು ಮುಂದೆ ಯಾರು ಅನಧಿಕೃತ ಫ್ಲೆಕ್ಸ್ ಹಾಕುತ್ತಾರೋ ಅವರಿಗೆ ಪ್ರತಿ ಫ್ಲೆಕ್ಸ್ ಗೆ ಅದನ್ನು ಹಾಕಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂ. ವರೆಗೆ ದಂಡ ವಿಧಿಸಲು ಸೂಚಿಸಿದ್ದೇವೆ. ಹುಟ್ಟುಹಬ್ಬ, ಶುಭಾಶಯ ಸೇರಿದಂತೆ ಫ್ಲೆಕ್ಸ್ ಹಾವಳಿ ಹೆಚ್ಚಾಗಿದೆ. ಸರ್ಕಾರದಿಂದ ಜಾಹೀರಾತು ಪ್ರಕಟಿಸಲು ಕೆಲವು ಜಾಗ ನಿಗದಿ ಮಾಡಿದ್ದು, ಅಲ್ಲಿ ಅನುಮತಿ ಪಡೆದು ಹಾಕಿಕೊಳ್ಳಲಿ. ಇದರ ಹೊರತಾಗಿ ಫ್ಲೆಕ್ಸ್ ಹಾಕಿದರೆ ನಂತರದ ಪರಿಣಾಮವನ್ನು ನೀವು ಅನುಭವಿಸಬೇಕಾಗುತ್ತದೆ. ಈ ವಿಚಾರವಾಗಿ ಪೊಲೀಸ್…

Read More

ನವದೆಹಲಿ: ಸಿನಿಮಾ ಎನ್ನುವುದು ವಾಣಿಜ್ಯ ಅಪಾಯಗಳನ್ನು ಒಳಗೊಂಡಿರುವ ಕ್ಷೇತ್ರ. ಒಂದು ಸಿನಿಮಾ ಹಿಟ್ ಆಗುತ್ತದೆಯೇ ಅಥವಾ ಫ್ಲಾಪ್ ಆಗುತ್ತದೆಯೇ ಎಂದು ಯಾರೂ ಮೊದಲೇ ಊಹಿಸಲು ಸಾಧ್ಯವಿಲ್ಲ. ಆದ್ದರಿಂದ, ಸಿನಿಮಾದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಬರಲಿಲ್ಲ ಎಂಬ ಕಾರಣಕ್ಕೆ ನಿರ್ಮಾಪಕರ ಮೇಲೆ ವಂಚನೆ (Cheating) ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದ್ದು, ತಮಿಳುನಾಡಿನಲ್ಲಿ ನಿರ್ಮಾಪಕರೊಬ್ಬರ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 420 ಅಡಿಯ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ. ತೀರ್ಪಿನ ಪ್ರಮುಖ ಅಂಶಗಳು: ಸಿನಿಮಾ ವ್ಯವಹಾರದ ರಿಸ್ಕ್: ಸಿನಿಮಾ ವ್ಯವಹಾರದಲ್ಲಿ ಲಾಭ ಮತ್ತು ನಷ್ಟ ಎರಡೂ ಸಾಮಾನ್ಯ. “ಯಾರೂ ಕೂಡ ಸಿನಿಮಾ ಲಾಭ ಗಳಿಸುತ್ತದೋ ಅಥವಾ ಫ್ಲಾಪ್ ಆಗುತ್ತದೋ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಸಿನಿಮಾದಲ್ಲಿ ಲಾಭದ ಆಸೆಗೆ ಹೂಡಿಕೆ ಮಾಡುವವರು, ಅದು ಶೂನ್ಯ ಲಾಭ ನೀಡುವ ಅಪಾಯವನ್ನೂ ಒಪ್ಪಿಕೊಂಡಿರುತ್ತಾರೆ” ಎಂದು…

Read More

ನವದೆಹಲಿ: ದೇಶದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ಜಾಲತಾಣಗಳ ವಿರುದ್ಧ ಕೇಂದ್ರ ಸರ್ಕಾರ ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಸುಮಾರು 300ಕ್ಕೂ ಹೆಚ್ಚು ಜಾಲತಾಣ ಹಾಗೂ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ (ಬ್ಲಾಕ್ ಮಾಡಿದೆ). ಯುವಜನತೆಯನ್ನು ವ್ಯಸನ ಮತ್ತು ಆರ್ಥಿಕ ಸಂಕಷ್ಟದಿಂದ ರಕ್ಷಿಸಲು ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಯಾವೆಲ್ಲಾ ಸೈಟ್‌ಗಳ ಮೇಲೆ ಕ್ರಮ? ಸರ್ಕಾರವು ಮುಖ್ಯವಾಗಿ ಈ ಕೆಳಗಿನ ಐದು ವರ್ಗದ ಜಾಲತಾಣಗಳನ್ನು ಗುರಿಯಾಗಿಸಿಕೊಂಡಿದೆ: ಆನ್‌ಲೈನ್ ಕ್ರೀಡಾ ಬೆಟ್ಟಿಂಗ್: ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳ ಮೇಲೆ ಹಣ ಕಟ್ಟಿ ಆಡುವ ಪ್ಲಾಟ್‌ಫಾರ್ಮ್‌ಗಳು. ಆನ್‌ಲೈನ್ ಕ್ಯಾಸಿನೊಗಳು: ಸ್ಲಾಟ್ಸ್, ರೌಲೆಟ್ ಮತ್ತು ಲೈವ್ ಡೀಲರ್ ಟೇಬಲ್ ಸೌಲಭ್ಯ ನೀಡುವ ಸೈಟ್‌ಗಳು. ಬೆಟ್ಟಿಂಗ್ ಎಕ್ಸ್‌ಚೇಂಜ್‌ಗಳು: ಒಬ್ಬರಿಗೊಬ್ಬರು (p-2-p) ಬೆಟ್ಟಿಂಗ್ ಕಟ್ಟಲು ಅವಕಾಶ ನೀಡುವ ವೇದಿಕೆಗಳು. ಸಟ್ಟಾ/ಮಟ್ಕಾ ಜಾಲಗಳು: ಸಂಪ್ರದಾಯಿಕ ಮಟ್ಕಾ ಜೂಜಿನ ಆನ್‌ಲೈನ್ ಆವೃತ್ತಿಗಳು. ರಿಯಲ್-ಮನಿ ಗೇಮ್ ಆಪ್‌ಗಳು: ಹಣ ಪಣಕ್ಕಿಟ್ಟು ಆಡುವ ಇಸ್ಪೀಟು ಮತ್ತು ಕ್ಯಾಸಿನೊ…

Read More

ಮೈಸೂರು: ಗದಗ–ಹೊಟಗಿ ವಿಭಾಗದ ನಡುವೆ ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳು ಭಾಗಶಃ ರದ್ದುಪಡಿಸಲಾಗಿದೆ ಹಾಗೂ ನಿಯಂತ್ರಣಕ್ಕೆ ಒಳಪಡಿಸಲಾಗುತ್ತದೆ, ವಿವರಗಳು ಕೆಳಗಿನಂತಿವೆ: ಭಾಗಶಃ ರದ್ದುಪಡಿಸಲಾದ ರೈಲುಗಳು ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್‌ಪ್ರೆಸ್ ರೈಲು 19 ಮಾರ್ಚ್ ರಿಂದ 24 ಮಾರ್ಚ್ 2026ರವರೆಗೆ ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ರೈಲು ಸಂಖ್ಯೆ 17377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು 20 ಮಾರ್ಚ್ ರಿಂದ 25 ಮಾರ್ಚ್ 2026ರವರೆಗೆ ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು, ವಿಜಯಪುರ ಬದಲು ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ. ರೈಲು ಸಂಖ್ಯೆ 16547 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ರೈಲು 23 ಮತ್ತು 24 ಮಾರ್ಚ್ 2026 ರಂದು ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆವರೆಗೆ ಸಂಚರಿಸಲಿದೆ. ರೈಲು…

Read More

ಹುಬ್ಬಳ್ಳಿ: ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 62ರ ಕಾಮಗಾರಿಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ, ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ, ಈ ಕೆಳಗಿನ ರೈಲು ಸೇವೆಗಳನ್ನು ಎಂದಿನಂತೆ ಸಂಚರಿಸಲು ನಿರ್ಧರಿಸಲಾಗಿದೆ. ಈ ಮೊದಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದ ವಿಶೇಷ ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ ಮಾರ್ಚ್ 22ರಂದು ಹಾಗೂ ವಿಶೇಷ ರೈಲು ಸಂಖ್ಯೆ 07330 ವಿಜಯಪುರ–ಎಸ್‌ಎಸ್‌ಎಸ್ ಹುಬ್ಬಳ್ಳಿ ಮಾರ್ಚ್ 23ರಂದು ಪೂರ್ಣ ಮಾರ್ಗದಲ್ಲಿ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. ನಿಯಂತ್ರಣ ರದ್ದು ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (ಗೇಟ್ ಸಂಖ್ಯೆ 62) ಬಳಿ ಕಾಮಗಾರಿ ಹಿನ್ನೆಲೆಯಲ್ಲಿ, ಧಾರವಾಡದಿಂದ ಸೊಲ್ಲಾಪುರಕ್ಕೆ ತೆರಳುವ ಪ್ಯಾಸೆಂಜರ್ ರೈಲು (56904) ಮಾರ್ಚ್ 21 ಮತ್ತು 22ರಂದು ಮಾರ್ಗಮಧ್ಯೆ ಸುಮಾರು 30 ನಿಮಿಷಗಳ ನಿಯಂತ್ರಣ ರದ್ದುಪಡಿಲಾಗಿದ್ದು , ಈ ರೈಲು ನಿಗದಿತ ಸಮಯದ ಅನುಸಾರ ಸಂಚರಿಸಲಿದೆ. ಭಾಗಶಃ ರದ್ದು…

Read More

ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್’ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದಿದ್ದಾರೆ. https://kannadanewsnow.com/kannada/warning-lure-of-%e2%82%b93-lakh-loan-in-the-name-of-mudra-scheme-dont-fall-prey-to-fake-letter-asking-for-insurance-fee/ https://kannadanewsnow.com/kannada/man-who-went-to-withdraw-rs-10000-gets-rs-3-lakh-due-to-atm-error/

Read More

ನವದೆಹಲಿ: ಪ್ರಧಾನಮಂತ್ರಿ ಮುದ್ರಾ ಯೋಜನೆಯ (PMMY) ಹೆಸರಿನಲ್ಲಿ ಸಾರ್ವಜನಿಕರನ್ನು ದೋಚುವ ಹೊಸ ವಂಚನಾ ಜಾಲವೊಂದು ಸಕ್ರಿಯವಾಗಿದೆ. “ನಿಮಗೆ ₹3,00,000 ಸಾಲ ಮಂಜೂರಾಗಿದೆ” ಎಂಬ ನಕಲಿ ಪತ್ರವನ್ನು ಸೃಷ್ಟಿಸಿ, ಅದರ ವಿಮೆ ಶುಲ್ಕದ (Insurance Charge) ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ವಂಚನೆಯ ಜಾಲ ಹೇಗಿದೆ? ವಂಚಕರು ಅಧಿಕೃತವಾಗಿ ಕಾಣುವ ನಕಲಿ ಮಂಜೂರಾತಿ ಪತ್ರವನ್ನು ಸಾರ್ವಜನಿಕರಿಗೆ ಕಳುಹಿಸುತ್ತಿದ್ದಾರೆ. ಈ ಪತ್ರದಲ್ಲಿ ₹3 ಲಕ್ಷ ಸಾಲ ಅನುಮೋದನೆಯಾಗಿದೆ ಎಂದು ನಂಬಿಸಿ, ಈ ಹಣವನ್ನು ಪಡೆಯಲು ವಿಮೆ ಶುಲ್ಕವಾಗಿ ₹7,699 ಪಾವತಿಸುವಂತೆ ಕೇಳಲಾಗುತ್ತಿದೆ. ಒಮ್ಮೆ ಗ್ರಾಹಕರು ಈ ಹಣ ಪಾವತಿಸಿದರೆ, ವಂಚಕರು ಸಂಪರ್ಕಕ್ಕೆ ಸಿಗದೆ ಹಣದೊಂದಿಗೆ ಪರಾರಿಯಾಗುತ್ತಿದ್ದಾರೆ. https://twitter.com/PIBBengaluru/status/2034892182243746034 ಪಿಐಬಿ ಫ್ಯಾಕ್ಟ್ ಚೆಕ್ (PIB Fact Check) ನೀಡಿದ ಸ್ಪಷ್ಟನೆ: ಈ ವಂಚನೆಯ ಕುರಿತು ಕೇಂದ್ರ ಸರ್ಕಾರದ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ತನಿಖೆ ನಡೆಸಿದ್ದು, ಈ ಕೆಳಗಿನ ಪ್ರಮುಖ ಅಂಶಗಳನ್ನು ಸ್ಪಷ್ಟಪಡಿಸಿದೆ: ಪತ್ರ ಸಂಪೂರ್ಣ ನಕಲಿ: ಮುದ್ರಾ ಯೋಜನೆ ಅಡಿಯಲ್ಲಿ ಯಾವುದೇ…

Read More

ಗಾಂಧೀನಗರ: ಎಟಿಎಂನಿಂದ ಹಣ ವಿತ್‌ಡ್ರಾ ಮಾಡಲು ಹೋದ ಗ್ರಾಹಕನೊಬ್ಬನಿಗೆ ತಾಂತ್ರಿಕ ದೋಷದಿಂದ ಹಣ ಕೈ ಸೇರದಿದ್ದರೂ ಖಾತೆಯಿಂದ ಕಡಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಂಬತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ಗ್ರಾಹಕನಿಗೆ ಐತಿಹಾಸಿಕ ಜಯ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾ ಈಗ ತನ್ನ ಗ್ರಾಹಕನಿಗೆ ಮೂಲ ಮೊತ್ತದ 30 ಪಟ್ಟು ಅಂದರೆ ಸುಮಾರು 3.3 ಲಕ್ಷ ರೂ. ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಏನಿದು ಪ್ರಕರಣ? ಈ ಘಟನೆ 2017ರ ಫೆಬ್ರವರಿ 18ರಂದು ಗುಜರಾತ್‌ನ ಸೂರತ್‌ನಲ್ಲಿ ನಡೆದಿತ್ತು. ಉಧ್ನಾ ಪ್ರದೇಶದ ಗ್ರಾಹಕರೊಬ್ಬರು ಎಸ್‌ಬಿಐ (SBI) ಎಟಿಎಂನಿಂದ 10,000 ರೂ. ವಿತ್‌ಡ್ರಾ ಮಾಡಲು ಪ್ರಯತ್ನಿಸಿದ್ದರು. ಆದರೆ ಯಂತ್ರದಿಂದ ಹಣವೂ ಬರಲಿಲ್ಲ, ರಶೀದಿಯೂ ಮುದ್ರಿತವಾಗಲಿಲ್ಲ. ಆದರೆ ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ 10,000 ರೂ. ಡೆಬಿಟ್ ಆಗಿದೆ ಎಂಬ ಸಂದೇಶ ಬಂದಿತ್ತು. ಗ್ರಾಹಕನ ಸುದೀರ್ಘ ಹೋರಾಟ: ದೂರು ಸಲ್ಲಿಕೆ: ಹಣ ಕಳೆದುಕೊಂಡ ಗ್ರಾಹಕ ಫೆಬ್ರವರಿ 21, 2017 ರಂದು ಬ್ಯಾಂಕ್ ಆಫ್ ಬರೋಡಾದ ದುಂಭಾಲ್ ಶಾಖೆಯಲ್ಲಿ…

Read More