Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರೋದಾಗಿ ಹೇಳಲಾಗುತ್ತಿದೆ. ಈ ಮೂಲಕ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಗ್ ಶಾಕ್ ನೀಡಲಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ, ಬಿಜೆಪಿ ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯ ಹೆಚ್ಚಾಗಿದೆ. ಈ ಹೊತ್ತಿನಲ್ಲೇ ಬಿಜೆಪಿಯ ಕೇಂದ್ರೀಯ ಶಿಸ್ತು ಪರಿಶೀಲನಾ ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವಿವಾದಾತ್ಮಕ ಹೇಳಿಕೆ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಸಂಬಂಧ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ ಎಂಬುದಾಗಿ ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/ https://kannadanewsnow.com/kannada/district-taluk-panchayat-elections-to-be-held-soon-dk-shivakumar/
ರಾಮನಗರ: ಇಂದು ಬಿಡದಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಜತೆ ಸಭೆ ನಡೆಸಿದರು. ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೊಂದಣಿ ಪುನಾರಂಭವಾಗಬೇಕು ಎಂದು ಸಚಿವರು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದರು.ಇದೇ ವೇಳೆ ಉಪಚುನಾವಣೆಯಲ್ಲಿ ತ್ಯಾಗಮಯವಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಶ್ಲಾಘನೆ ವ್ಯಕ್ತಪಡಿಸಿದರು. ನೀವು ಪಟ್ಟ ಶ್ರಮದಿಂದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಇದು ಮುಂದಿನ ಸವಾಲುಗಳಿಗೆ ತಯಾರಾಗಲು ಸೂಚನೆ ಎಂದರು. ಸದಸ್ಯತ್ವ ಚಾಲನೆ ಪುನಾರಂಭ “ಪ್ರತಿ ಬೂತ್ಗಳಲ್ಲಿ ಸದಸ್ಯತ್ವ ನೊಂದಣಿ ಚಾಲನೆ ಆಗಬೇಕು. ಇನ್ನು ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು.ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನ ತೀರ್ಮಾನಿಸುವುದಿಲ್ಲ ಸಚಿವರು ತಿಳಿಸಿದರು. 2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ 75 ಸ್ಥಾನಗಳಿಗೆ ಕುಸಿಯಿತು. ಸಾಮಾನ್ಯ ಚುನಾವಣೆಯ ಚಿತ್ರವೇ…
ಬೆಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ಕುಟುಂಬ ಪಿಂಚಣಿ ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅರ್ಜಿಯೊಂದಿಗೆ ಕೆಲ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅವುಗಳು ಯಾವುವು ಅಂತ ಮುಂದೆ ಓದಿ. ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಈ ಅಗತ್ಯ ದಾಖಲೆಗಳ ಸಲ್ಲಿಕೆ ಕಡ್ಡಾಯ ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ ಪಿಂಚಣಿ ಮಂಜೂರಾತಿ ಆದೇಶ ರೇಷನ್ ಕಾರ್ಡ್ ಪ್ರತಿ ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ಬ್ಯಾಂಕ್ ಖಾತೆ ವಿವರ ಮರಣ ಪ್ರಮಾಣಪತ್ರ ಮೃತ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ ಅರ್ಜಿದಾರರ ಕೋರಿಕೆ ಪತ್ರ https://twitter.com/WorkersBoard/status/1862395717672734958 https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/ https://kannadanewsnow.com/kannada/breaking-tremors-felt-in-western-ghats-region-including-sirsi/
ಚೆನ್ನೈ: ಫೆಂಗಲ್ ಚಂಡಮಾರುತದ ಮಧ್ಯೆ ಪ್ರತಿಕೂಲ ಹವಾಮಾನದಿಂದಾಗಿ ಇಂಡಿಗೊ ಏರ್ಲೈನ್ಸ್ನ ಏರ್ಬಸ್ ಎ 320 ನಿಯೋ ವಿಮಾನವು ಶನಿವಾರ ಸಂಜೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಪರದಾಡಿ, ನೆಲ ಸ್ಪರ್ಷಿಸಿ, ಮತ್ತೆ ಆಗಸಕ್ಕೆ ಹಾರಿದಂತ ಘಟನೆಗೆ ಸಾಕ್ಷಿಯಾಯಿತು. ವಿಮಾನವು ರನ್ವೇಯಲ್ಲಿ ಇಳಿಯುವುದನ್ನು ಪೂರ್ಣಗೊಳಿಸಲು ಹೆಣಗಾಡಿತು ಎಂದು ವೈರಲ್ ವೀಡಿಯೊ ತೋರಿಸಿದೆ. ವಿಮಾನವು ಇಳಿಯಲು ಸಿದ್ಧವಾದಾಗ ಮತ್ತು ಅದರ ಚಕ್ರಗಳು ನೆಲಕ್ಕೆ ಇಂಚುಗಳಷ್ಟು ಹತ್ತಿರ ಬಂದಾಗ, ಅದು ಲ್ಯಾಂಡಿಂಗ್ ಅನ್ನು ನಿಲ್ಲಿಸಿ ಮತ್ತೆ ಟೇಕ್ ಆಫ್ ಆಯಿತು. “ಫೆಂಗಲ್ ಚಂಡಮಾರುತವು ಪುದುಚೇರಿ ಬಳಿ ಭೂಕುಸಿತವನ್ನು ಉಂಟುಮಾಡುವುದರಿಂದ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸವಾಲಿನ ಪರಿಸ್ಥಿತಿಗಳು ಮತ್ತು ಮುಂದಿನ ಮೂರರಿಂದ ನಾಲ್ಕು ಗಂಟೆಗಳಲ್ಲಿ ತಮಿಳುನಾಡು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ” ಎಂದು ವಿಮಾನಯಾನ ಖಾತೆಯೊಂದು ವೀಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿದೆ. https://twitter.com/aviationbrk/status/1862940770426061005 ಚಂಡಮಾರುತವು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯನ್ನು ತಂದಿದ್ದು, ಮನೆಗಳು ಮತ್ತು ಆಸ್ಪತ್ರೆಗಳನ್ನು ಮುಳುಗಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆನ್ನೈ ವಿಮಾನ ನಿಲ್ದಾಣದ…
ಲಂಡನ್: ಕರ್ನಾಟಕದ ಕೈಗಾರಿಕಾ ಮತ್ತು ನವೀಕರಿಸಬಹುದಾದ ಇಂಧನ ವಲಯಗಳನ್ನು ಮುನ್ನಡೆಸುವ ನಿಟ್ಟಿನಲ್ಲಿ ಹೀರೊ ಫ್ಯೂಚರ್ ಎನರ್ಜೀಸ್ ಪ್ರೈವೇಟ್ ಲಿಮಿಟೆಡ್ (ಎಚ್ಎಫ್ಇಪಿಎಲ್) ಇಲ್ಲಿ ಕರ್ನಾಟಕ ಸರ್ಕಾರದ ಜೊತೆಗೆ ₹ 11,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಸಿದ್ಧತೆ ಅಂಗವಾಗಿ ಲಂಡನ್ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ರೋಡ್ ಷೋದಲ್ಲಿ ಈ ಒಪ್ಪಂದ ಕಾರ್ಯಗತಗೊಂಡಿದೆ. ʼಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ, ಪರಿಸರ ಸ್ನೇಹಿ ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ₹11,000 ಕೋಟಿ ಬಳಕೆ ಆಗಲಿದೆ. ಎಚ್ಎಫ್ಇಪಿಎಲ್- ನ ಈ ಪ್ರಸ್ತಾವಿತ ಯೋಜನೆಗಳು ರಾಜ್ಯದಲ್ಲಿ 2025-26 ರಿಂದ ಕಾರ್ಯಾರಂಭಗೊಳ್ಳಲಿವೆ. 2 ರಿಂದ 3 ವರ್ಷಗಳಲ್ಲಿ ಈ ಮೊತ್ತದ ಹೂಡಿಕೆ ಆಗಲಿದೆ. ಈ ಒಪ್ಪಂದದ ಫಲವಾಗಿ ಕರ್ನಾಟಕದಲ್ಲಿ ಸುಮಾರು 3,000 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ʼಪರಿಸರ ಸ್ನೇಹಿ ಇಂಧನ ಪರಿಹಾರ ಮತ್ತು ಸುಸ್ಥಿರ ಕೈಗಾರಿಕಾ…
ಲಕ್ನೋ : ಸಯ್ಯದ್ ಮೋದಿ ಇಂಟರ್ನ್ಯಾಷನಲ್ 2024 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಭಾರತದ ಹಿರಿಯ ಶಟ್ಲರ್ ಪಿ.ವಿ.ಸಿಂಧು ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಸೈನಾ ಫೈನಲ್ನಲ್ಲಿ ಚೀನಾದ ಲುವೊ ಯು ವು ಅವರನ್ನು 21-14, 21-16 ನೇರ ಗೇಮ್ಗಳಲ್ಲಿ ಸೋಲಿಸಿ ಮೂರನೇ ಸೈಯದ್ ಮೋದಿ ಇಂಟರ್ನ್ಯಾಷನಲ್ ಪ್ರಶಸ್ತಿಯನ್ನು ಗೆದ್ದರು. ಸಿಂಧು ಸಾಕಷ್ಟು ಬಲಶಾಲಿಯಾಗಿ ಕಾಣಿಸಿಕೊಂಡರು ಮತ್ತು ಪಂದ್ಯದುದ್ದಕ್ಕೂ ಚೀನಾದ ಎದುರಾಳಿಯ ಮೇಲೆ ಪ್ರಾಬಲ್ಯ ಸಾಧಿಸಿದರು. ಅವಳು ತನ್ನ ಶಾಟ್ ಗಳನ್ನು ಚೆನ್ನಾಗಿ ಹಾರಿಸಿದಳು ಮತ್ತು ಯು ವುಗೆ ಅವಕಾಶ ನೀಡಲಿಲ್ಲ. ಜುಲೈ 2022 ರಲ್ಲಿ ಸಿಂಗಾಪುರ್ ಓಪನ್ ಗೆದ್ದ ನಂತರ ಇದು ಅವರ ಮೊದಲ ಪ್ರಶಸ್ತಿಯಾಗಿದೆ. ಸಿಂಧು ಈ ವರ್ಷ ಆಡಿದ 14 ಪಂದ್ಯಗಳಲ್ಲಿ ಇದು ಎರಡನೇ ಫೈನಲ್ ಆಗಿದೆ. ಈ ಹಿಂದೆ ಪ್ಯಾರಿಸ್ ಒಲಿಂಪಿಕ್ಸ್ನ 16ನೇ ಸುತ್ತಿನಲ್ಲಿ ಮಲೇಷ್ಯಾ ಮಾಸ್ಟರ್ಸ್ನಲ್ಲಿ ಚೀನಾದ ಝಿ ಯಿ ವಾಂಗ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು. https://kannadanewsnow.com/kannada/not-only-yatnal-but-the-entire-bjp-is-tarnishing-basavannas-image-deputy-cm-d-k-shivakumar/ https://kannadanewsnow.com/kannada/breaking-tremors-felt-in-western-ghats-region-including-sirsi/
ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದೀರಾ ಎಂದು ಕೇಳಿದಾಗ, “ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ ಮಾಡಬೇಕಲ್ಲವೇ. ಚುನಾವಣೆ ಸಧ್ಯದಲ್ಲೇ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಸಮಾವೇಶ ಹಾಸನಕ್ಕೆ ಸೀಮಿತವೇ ಅಥವಾ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ರಾಜ್ಯಾದ್ಯಂತ ತಲುಪಬೇಕು. ಹಾಸನ ಕಾರ್ಯಕ್ರಮ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ನಾಳೆ ಸಭೆ ಮಾಡಿ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದರು. ಯಾವುದೇ ಸ್ಥಾನ ಖಾಲಿ ಇಲ್ಲ: ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ ಎಂದು ಕೇಳಿದಾಗ, “ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ಅಧಿವೇಶನವಿದೆ. ಒಂದು ಸಚಿವ…
ಬೆಂಗಳೂರು : “ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು. “ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನು ನಾವು ಸ್ವೀಕರಿಸುತ್ತೇವೆ. ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ನಾಲ್ಕು ಜಿಲ್ಲೆಗಳ ನಾಯಕರು ಹಾಗೂ ಪದಾಧಿಕಾರಿಗಳ ಜತೆ ಇದರ ಪೂರ್ವಭಾವಿ ಸಭೆಯನ್ನು ಭಾನುವಾರ (ಇಂದು) ಕೆಪಿಸಿಸಿ…
ಬೆಂಗಳೂರು : “ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. “ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ ಪಕ್ಷದ ಆಂತರಿಕ ವಿಚಾರ. ಅದಕ್ಕೆ ನಾವು ತಲೆ ಹಾಕುವುದಿಲ್ಲ. ಯತ್ನಾಳ್ ಹೇಳಿಕೆಯನ್ನು ಯಡಿಯೂರಪ್ಪ, ವಿಜಯೇಂದ್ರ, ಅಶೋಕ, ಕೇಂದ್ರ ಸಚಿವ ಸೋಮಣ್ಣ ಹಾಗೂ ಬೊಮ್ಮಾಯಿ ಅವರ್ಯಾರು ಖಂಡಿಸಿದ್ದಾರೆಯೇ? ಯಾರೂ ಸಹ ಖಂಡಿಸಿಲ್ಲ. ಇದು ಬಿಜೆಪಿ ಬಸವಣ್ಣನವರ ವಿರೋಧಿ ಎಂಬುದನ್ನು ನಿರೂಪಿಸುತ್ತದೆ” ಎಂದು ಹೇಳಿದರು. “ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಅನೇಕ ಮಠಾಧೀಶರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಮಾಡಲಾಗಿದ್ದು, ನವೆಂಬರ್.30. 2024ರವರೆಗೆ ನೀಡಲಾಗಿದ್ದಂತ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಡಿಸೆಂಬರ್.30, 2024ರವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಹಳೆಯ ವಾಹನಗಳಿದ್ದಾವೆ. ಇವುಗಳಲ್ಲಿ ಕೇವಲ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿರೋದು ಕೇವಲ 55 ಲಕ್ಷ ಮಾತ್ರವೇ ಆಗಿವೆ. ಹೀಗಾಗಿ ರಾಜ್ಯ ಸರ್ಕಾರದಿಂದ ದಿನಾಂಕ 31-12-2024ರವರೆಗೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ. https://kannadanewsnow.com/kannada/sbi-launches-nation-wide-drive-to-promote-inoperative-account-activation/ https://kannadanewsnow.com/kannada/breaking-tremors-felt-in-western-ghats-region-including-sirsi/