Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ; ಅದು ಹೀಗೆ ಹಾಗೆ ಎಂದು ಹೇಳಿದರೆ ಸಾಕೇ ಎಂದಿದ್ದಾರೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೃಷ್ಣಬೈರೇಗೌಡ, ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗಳನ್ನು ಗಮನಿಸಿದರೆ ‘ಆಪರೇಷನ್ ಸಿಂದೂರ’ದ ಕುರಿತು ಅಪಪ್ರಚಾರದ ಟಾಸ್ಕನ್ನೇ ಇವರಿಗೆ ಕೊಟ್ಟಂತೆ ಕಾಣುತ್ತಿದೆ. ಸೇನಾ ಕಾರ್ಯಾಚರಣೆ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣುತ್ತಿದೆ ಎಂದು ಆಕ್ಷೇಪಿಸಿದರು. ‘ಆಪರೇಷನ್ ಸಿಂದೂರ’ದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದೇಕೆ? ಒಂದು ಕಡೆ ಶಶಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಿಜಯ್ ಕುಮಾರ್ ಅವರ ಪಾರ್ಕಿಂಗ್ ಮಾಡಿದ್ದಂತ ಕಾರಿನಲ್ಲಿದ್ದಂತ ದುಬಾರಿ ಬೆಲೆ ಬಾಳುವ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದಂತ ಕಾರು ಚಾಲಕನನ್ನು ಬಂಧಿಸಲಾಗಿದೆ. ಮೇ.11ರಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ತೆರಳಿದ್ದರು. ಕಾರು ಪಾರ್ಕ್ ಮಾಡಿ ವಾಕಿಂಗ್ ಗೆ ಹೋಗುವಾಗ, ಲಾಕ್ ಮಾಡೋದು ಮರೆತಿದ್ದರು. ಇದನ್ನು ಗಮನಿಸಿದಂತ ಕ್ಯಾಬ್ ಚಾಲಕ ಮೊಹಮ್ಮದ್, ನಟಿ ರುಕ್ಮಿಣಿ ಕಾರಿನಲ್ಲಿದ್ದಂತ ದುಬಾರಿ ಬೆಲೆಯ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದನು. ವಾಕಿಂಗ್ ಮುಗಿಸಿ ವಾಪಾಸ್ ಬಂದಾಗ ಕಾರಿನಲ್ಲಿದ್ದಂತ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು ಗಮನಿಸಿದಾಗ ಹ್ಯಾಂಡ್ ಬ್ಯಾಗ್, ಡೈಮಂಡ್ ರಿಂಗ್ ಕಳ್ಳತನವಾಗಿದ್ದು ಬೆಳಕಿಗೆ ಬಂದಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪಾರ್ಕಿಂಗ್ ಸ್ಥಳದಲ್ಲಿದ್ದಂತ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದರು. ಈ ವೇಳೆ ಮೊಹಮ್ಮದ್ ಕಳ್ಳತನ ಮಾಡಿದ್ದ ವಿಷಯ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಮೊಹಮ್ಮದ್…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಬೇಕರಿ ಅಂಗಡಿಗಳಿಗೆ ತಿನಿಸು ಸರಬರಾಜು ಮಾಡುವಂತ ವ್ಯಕ್ತಿಗೆ ದಾರಿಯಲ್ಲಿ ರೂ.6,500 ಹಣ ಸಿಕ್ಕಿದೆ. ಅದನ್ನು ಸಾಗರ ಟೌನ್ ಠಾಣೆಗೆ ತೆರಳಿ ಸಂಬಂಧಿಸಿದಂತವರಿಗೆ ತಲುಪಿಸುವಂತೆ ನೀಡಿದ್ದಾರೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಈ ಬಗ್ಗೆ ಕನ್ನಡ ನ್ಯೂಸ್ ನೌಗೆ ಮಾಹಿತಿ ಹಂಚಿಕೊಂಡ ಸಾಗರ ಟೌನ್ ಠಾಣೆ ಪಿಎಸ್ಐ ನಾಗರಾಜು ಅವರು, ಆರುಮುಖ ಎಂಬುವರು ಉಡುಪಿಯಿಂದ ಸಾಗರದ ವಿವಿಧ ಬೇಕರಿಗಳಿಗೆ ಬೇಕರಿ ತಿನಿಸು ಸರಬರಾಜು ಮಾಡುತ್ತಾರೆ. ಇಂದು ಮಾರಿಕಾಂಬಾ ದೇವಸ್ಥಾನದ ರಸ್ತೆಯ ಜೈಹಿಂದ್ ಸಮೀಪದ ದಾರಿಯಲ್ಲಿ ರೂ.6,500 ಹಣ ಸಿಕ್ಕಿದೆ. ಅದನ್ನು ಕಂಡು ಕೂಡಲೇ ಸಾಗರ ಟೌನ್ ಠಾಣೆಗೆ ತಂದು ಸಂಭವಿಸಿದವರಿಗೆ ನೀಡಲು ಮನವಿ ಮಾಡಿದ್ದಾರೆ ಎಂದರು. ಆರಮುಖ ನೀಡಿರುವಂತ ರೂ.6,500 ಸಾಗರ ಟೌನ್ ಠಾಣೆಯಲ್ಲಿ ಇರುತ್ತದೆ. ಸಾಗರ ನಗರ, ತಾಲ್ಲೂಕಿನ ಜನರು ಯಾರಾದರೂ ಕಳೆದುಕೊಂಡಿದ್ದರೇ ಸೂಕ್ತ ದಾಖಲೆ, ಮಾಹಿತಿ ಒದಗಿಸಿ ಪಡೆಯಬಹುದು ಎಂದು ತಿಳಿಸಿದ್ದಾರೆ. ಸೋ ಸಾಗರದ ಜನರು ಯಾರಾದರೂ ಮಾರಿಕಾಂಬಾ ರಸ್ತೆಯ ಜೈಹಿಂದ್ ಬೇಕರಿ ಸಮೀಪದಲ್ಲಿ ರೂ.6,500…
ಶ್ರೀನಗರ: ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ ಭಯೋತ್ಪಾದಕನ ವೀಡಿಯೊದಲ್ಲಿ, ಅವನ ತಾಯಿ ಶರಣಾಗುವಂತೆ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಭಯೋತ್ಪಾದಕ ಅಮೀರ್ ನಜೀರ್ ವಾನಿ ತನ್ನ ತಾಯಿಯೊಂದಿಗೆ ಮಾತನಾಡುವಾಗ ಎಕೆ -47 ಹಿಡಿದುಕೊಂಡಿರುವುದನ್ನು ಕಾಣಬಹುದು. ಅಂತಿಮ ವೀಡಿಯೊ ಕರೆಯಲ್ಲಿ, ಅಮೀರ್ನ ತಾಯಿ ಶರಣಾಗುವಂತೆ ಹೇಳಿದರು. ಆದರೆ ಅವನು ನಿರಾಕರಿಸಿದನು. ಸೈನ್ಯವು ಮುಂದೆ ಬರಲಿ, ನಂತರ ನಾನು ನೋಡುತ್ತೇನೆ ಎಂದು ಅವನು ಉತ್ತರಿಸಿದನು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರಲ್ಲಿ ಅಮೀರ್ ಕೂಡ ಒಬ್ಬ. ಎನ್ಕೌಂಟರ್ನಲ್ಲಿ ಹತರಾದ ಮೂವರು ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು. ಗುಂಡಿನ ಚಕಮಕಿ ಪ್ರಾರಂಭವಾಗುವ ಮೊದಲು ಅಮೀರ್ ಅವರು ಅಡಗಿಕೊಂಡಿದ್ದ ಮನೆಯಿಂದ ವೀಡಿಯೊ ಕರೆ ಮಾಡಿದರು.…
ಬೆಂಗಳೂರು: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧರಿಸಿತ್ತು. ಈ ಅವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. https://twitter.com/KarnatakaVarthe/status/1922927883963494467 ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ. ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ…
ಬಿಹಾರ: ಇಲ್ಲಿನ ದರ್ಭಾಂಗಾ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಅನುಮತಿಯಿಲ್ಲದೆ ‘ಶಿಕ್ಷಾ, ನ್ಯಾಯ ಸಂವಾದ’ ಜನಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು 100ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ಗುರುವಾರ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಬೇಡ್ಕರ್ ಹಾಸ್ಟೆಲ್ನಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ನ ರಾಜ್ಯಾದ್ಯಂತ ಸಾರ್ವಜನಿಕ ಭಾಗವಹಿಸುವಿಕೆ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದಕ್ಕೂ ಮೊದಲು, ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ಪರ್ಯಾಯ ಸ್ಥಳವನ್ನು ಪ್ರಸ್ತಾಪಿಸಿತು. ಕಾಂಗ್ರೆಸ್ ಈ ಸಲಹೆಯನ್ನು ತಿರಸ್ಕರಿಸಿತು. ಇದು ಬಿಕ್ಕಟ್ಟಿಗೆ ಕಾರಣವಾಯಿತು. ಆಡಳಿತ ಮತ್ತು ಭದ್ರತಾ ಸಿಬ್ಬಂದಿಯ ಆಕ್ಷೇಪಣೆಗಳ ಹೊರತಾಗಿಯೂ, ರಾಹುಲ್ ಗಾಂಧಿ ಬೇರೆ ಮಾರ್ಗದ ಮೂಲಕ ಹಾಸ್ಟೆಲ್ ಆವರಣವನ್ನು ಪ್ರವೇಶಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದರ್ಭಾಂಗಾ ಜಿಲ್ಲಾಡಳಿತವು “ಜಿಲ್ಲಾ ಕಲ್ಯಾಣ ಅಧಿಕಾರಿ (ಮ್ಯಾಜಿಸ್ಟೀರಿಯಲ್ ಅಧಿಕಾರ ಹೊಂದಿರುವವರು) ಲಹೇರಿಯಾಸರೈ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಕಾರ್ಯಕ್ರಮಕ್ಕೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಚಿತ್ರದ ಪೋಸ್ಟ್ ಶೇರ್ ಮಾಡಿದಂತ ಆರೋಪಿಯ ವಿರುದ್ಧ FIR ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕಾರ್ಗಲ್ ಠಾಣೆ ಪಿಎಸ್ಐ ಹೊಳೆಬಸಪ್ಪ ಅವರು, ದಿನಾಂಕ 15-05-2025ರಂದು ಮಧ್ಯಾಹ್ನ ಕಾರ್ಗಲ್ ನ ಶಕೀರ್ ಎಂಬಾತ ಪ್ರಜಾ ಪ್ರತಿನಿಧಿ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮುಂದೆ ಮಂಡಿಯೂರಿ ಕುಳಿತಂತೆ ಇರುವಂತ ವ್ಯಂಗ್ಯ ಚಿತ್ರವನ್ನು ಶೇರ್ ಮಾಡಿದ್ದನು. ಈ ಮೂಲಕ ಗಲಭೆ ಏಳುವಂತೆ ಪ್ರಚೋದಿಸುವ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವಂತ ಪೋಟೋ ಶೇರ್ ಮಾಡಿದ್ದನು ಎಂದಿದ್ದಾರೆ. ಆರೋಪಿ ಶಕೀರ್ ಹುಸೇನ್ ಶೇರ್ ವಾಟ್ಸ್ ಆಪ್ ಗ್ರೂಪಿನಲ್ಲಿ ಶೇರ್ ಮಾಡಿದಂತ ಪೋಟೋ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಶಕೀರ್ ಹುಸೇನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು. ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4) ಬಿಎನ್ಎಸ್ 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಈ ಪ್ರಕರಣದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂತಹ ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/the-accused-who-used-abusive-language-and-made-caste-insults-against-a-woman-in-the-sea-has-been-arrested-and-sent-to-jail/ https://kannadanewsnow.com/kannada/big-news-attention-to-the-rural-people-of-the-state-all-these-services-of-the-gram-panchayat-will-be-available-on-whatsapp-watch-video/
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಸಾರ್ವಜನಿಕ ಸ್ಥಳದಲ್ಲೇ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಸಂಬಂಧ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಾಗರ ಟೌನ್ ಠಾಣೆಯಲ್ಲಿ ಬಿಎನ್ಎಸ್-2023ರ ಅಡಿಯ ಕಲಂ 3(1)(ಆರ್), 3(1)(ಎಸ್), 3(2)(ವಿಎ) ಹಾಗೂ ಎಸ್ಸಿ, ಎಸ್ಟಿ ಅಮೆಂಡ್ ಮೆಂಟ್ ಆಕ್ಟ್ 2015ರಡಿ ರವಿ ಭಟ್ಟ ಆಲಿಯಾಸ್ ರವೀಂದ್ರ ಬಿನ್ ಕೇಶವಮೂರ್ತಿ(66) ಹಾಗೂ ಸಮರ್ಥ್ ಹೆಗಡೆ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹಿಳೆ ನೀಡಿದ ದೂರಿನಲ್ಲಿ ಏನಿದೆ.? ದಿನಾಂಕ:-11-04-2025 ರಂದು 9-30 ಪಿ.ಎಂ ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ಗಣಕೀಕೃತ ದೂರಿನ ಸಾರಾಂಶವೇನೆಂದರೆ ಪಿರ್ಯಾದಿದಾರರು ರವೀಂದ್ರ ಭಟ್ಟ ರವರ ಹತ್ತಿರ 15,000 ರೂಗಳನ್ನು ಸಾಲವಾಗಿ ಪಡೆದುಕೊಂಡಿದ್ದು ಅದಕ್ಕೆ ಪಿರ್ಯಾದಿದಾರರಿಂದ ಖಾಲಿ ಚೆಕ್ ನ್ನು ಪಡೆದುಕೊಂಡಿದ್ದು ಪಿರ್ಯಾದಿದಾರರು ಸಾಲ ಕೊಡುವುದು ತಡವಾಗಿದ್ದರಿಂದ ಆರೋಪಿ ಪಿರ್ಯಾದಿ ಕೊಟ್ನ ಖಾಲಿ ಚೆಕ್ ಗೆ 2,20,000 ರೂಗಳನ್ನು ನಮೂದಿಸಿ ಸಾಗರ ನ್ಯಾಯಾಲಯದಲ್ಲಿ ಸಮರ್ಥ ಹೆಗಡೆ ಎಂಬ…
ನವದೆಹಲಿ:ಭಾರತ, ಪಾಕ್ ಕದನ ವಿರಾಮ ಒಪ್ಪಂದವನ್ನು ವಿಸ್ತರಿಸಿದ್ದು, ಎರಡು ರಾಷ್ಟ್ರಗಳು ‘ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು’ ಡಿಜಿಎಂಒಗಳು ಒಪ್ಪಿಗೆ ಸೂಚಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮೇ 10 ರಂದು ಮಾಡಿಕೊಂಡ ತಿಳುವಳಿಕೆಯ ನಂತರ, ಗಡಿಯಲ್ಲಿ ಜಾಗರೂಕತೆಯ ಮಟ್ಟವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ಗುರುವಾರ ತಿಳಿಸಿದೆ. https://TWITTER.com/ANI/status/1923029377203241352 ಏತನ್ಮಧ್ಯೆ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿರುವ ಪ್ರಕಾರ, ಭಾನುವಾರದವರೆಗೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ. ಬುಧವಾರ ಮತ್ತು ಗುರುವಾರ ಎರಡೂ ಕಡೆಯವರು “ಮಿಲಿಟರಿ-ಮಿಲಿಟರಿ ಸಂವಹನ” ನಡೆಸಿದ್ದಾರೆ. “ಇಂದು ನಾವು ಮಾತುಕತೆ ನಡೆಸಿದ್ದೇವೆ ಮತ್ತು ಇದು ಮೇ 18 ರವರೆಗೆ ಕದನ ವಿರಾಮವಾಗಿದೆ ಎಂದು ಸಚಿವರು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಗೆ ತಿಳಿಸಿದರು. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26…