Author: kannadanewsnow09

ಶಿವಮೊಗ್ಗ : 2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(KAR TET-24) ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.26 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂ.30 ರ ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ ಪತ್ರಿಕೆ-1, ಅಪರಾಹ್ನ 2 ರಿಂದ 4.30 ರವರೆಗೆ ಪತ್ರಿಕೆ 2 ಪರೀಕ್ಷೆಗಳು ನಡೆಯಲಿದೆ. 11 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-1 ಹಾಗೂ 17 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-2 ರ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2874 ಮತ್ತು ಎರಡನೇ ಅಧಿವೇಶನದಲ್ಲಿ 4676 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಕೇಂದ್ರ ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಮತ್ತು ಇತರೆ ಸಿಬ್ಬಂದಿಗಳನ್ನು ಪರೀಕ್ಷಾ…

Read More

ಶಿವಮೊಗ್ಗ: ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. https://kannadanewsnow.com/kannada/job-fair-to-be-held-in-shivamogga-on-june-29/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ( Job Fair ) ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/

Read More

ಶಿವಮೊಗ್ಗ : 2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET-2024) ಜೂ. 30 ರಂದು ನಡೆಯಲಿದ್ದು, ಮೊದಲ ಅಧಿವೇಶನಕ್ಕೆ 2874 ಹಾಗೂ 2ನೇ ಅಧಿವೇಶನಕ್ಕೆ 4676 ಅಭ್ಯರ್ಥಿಗಳು ಪರೀಕ್ಷೆ ಬರಿಯಲಿದ್ದಾರೆ. ಪರೀಕ್ಷೆಯು ಬೆಳಗ್ಗಿನ ಅವಧಿ 9.30 ರಿಂದ 12.00ರವರೆಗೆ 11 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನದ ಅವಧಿಯು 2.00 ರಿಂದ 4.30ರವರೆಗೆ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಿಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆ. ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆ ಕಡ್ಡಾಯವಾಗಿ ಯಾವುದಾದರೂ ಗುರುತಿನ ಚೀಟಿ ತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/students-note-pg-cet-2024-exam-scheduled-for-july-13-14-postponed/ https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/

Read More

ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಇಲ್ಲಿ 2024-25 ನೇ ಸಾಲಿನ ಡಿಪ್ಲೊಮಾ ಕೋರ್ಸ್‍ಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್(ಡಿಟಿಡಿಎಂ), ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್(ಡಿಎಂಸಿಹೆಚ್), ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್(ಡಿಪಿಎಂ) ಕೋರ್ಸ್‍ಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೊದಲು ಬಂದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಮೇರೆಗೆ ಸೀಟುಗಳನ್ನು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ಶಿವಮೊಗ್ಗ 577 222 ದೂ.ಸಂ: 08182-269054, 9902232839, 9448307027, 9880141054, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ. https://kannadanewsnow.com/kannada/bengalurus-yelahanka-gas-power-plant-to-be-inaugurated-in-2nd-week-of-july-minister-k-j-george/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/

Read More

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ – ಸಿಇಟಿ) ಮುಂದೂಡಲಾಗಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭವಾಗುತ್ತಿವೆ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ ಪಿಜಿಸಿಇಟಿ -2024 ಪರೀಕ್ಷೆಯನ್ನು ಮುಂದೂಡುವಂತೆ ಅನೇಕ ವಿದ್ಯಾರ್ಥಿಗಳು ಕೆಇಎಗೆ ವಿನಂತಿಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ 2024ರ ಜುಲೈ 13 ಮತ್ತು 14ರಂದು ನಡೆಯಬೇಕಿದ್ದ ಪಿಜಿಸಿಇಟಿ-2024 ಪರೀಕ್ಷೆಯನ್ನು ಮುಂದೂಡಿದ್ದು, ಪರಿಷ್ಕೃತ ದಿನಾಂಕಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಅಂತ ತಿಳಿಸಿದೆ. ಇದಲ್ಲದೆ, ಎಂಬಿಎ, ಎಂಸಿಎ, ಎಂಇ / M.Tech/M.Tech, M.ಆರ್ಕಿಟೆಕ್ಚರ್ ಕೋರ್ಸ್ಗಳ…

Read More

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬೆನ್ನಲ್ಲೇ ದಾಖಲಾಗಿದ್ದಂತ 2ನೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಜೂನ್.22ರಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಜೂನ್.23ರಂದು ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ನಿನ್ನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2ನೇ ಅಸಹಜ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಂದಹಾಗೇ ಮೊದಲ ಪ್ರಕರಣದಲ್ಲಿ ಅರಕಲಗೂಡು ಮೂಲದ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೇ, ನಿನ್ನೆ ಎರಡನೇ ಪ್ರಕರಣವನ್ನು ಹೊಳೆನರಸೀಪುರ ಮೂಲದ ಯುವಕ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದನು. ಈ…

Read More

ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು…

Read More

ನವದೆಹಲಿ: ಚನ್ನಪಟ್ಟಣದ ಶಾಸಕರಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈಗ ಆ ಕ್ಷೇತ್ರದ ಉಪ ಚುನಾವಣೆ ಗರಿಗೆದರಿದೆ. ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಅನ್ನುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು. ಚನ್ನಪಟ್ಟಣಕ್ಕೆ ಎನ್ ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ.…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಮನೆಯ ಮೇಲ್ಛಾವಣಿ ಸರಿ ಮಾಡೋ ಸಂದರ್ಭದಲ್ಲಿ ಕುಸಿದು ಬಿದ್ದ ಪರಿಣಾಮ, ಓರ್ವ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಚಳ್ಳಕೆರೆಯ ರಾಮಜೋಗಿಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಮುರುಳೀಧರ್ (45) ಎಂಬುವರು ತಮ್ಮ ಮನೆಯ ಮೇಲ್ಛಾವಣಿ ಸರಿ ಮಾಡೋದಕ್ಕೆ ಮನೆ ಮೇಲೆ ಹತ್ತಿದ್ದರು. ಮನೆಯ ಮೇಲ್ಛಾವಣಿ ದುರಸ್ಥಿ ವೇಳೆಯಲ್ಲಿ ಕುಸಿದ ಪರಿಣಾಮ, ಅದರಡಿಯಲ್ಲಿ ಸಿಲುಕಿ ಮುರಳೀಧರ್ ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/nadaprabhu-kempegowda-is-the-property-of-kannada-identity-of-kannadigas-union-minister-hd-kumaraswamy/ https://kannadanewsnow.com/kannada/we-have-information-about-who-shared-prajwals-obscene-video-g-parameshwara/

Read More