Author: kannadanewsnow09

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಸಲಾಗಿತ್ತು ಎಂದು ತಿಳಿಸಿದ್ದಾರೆ. ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ…

Read More

ಶ್ರೀನಗರ: ಪಾಕಿಸ್ತಾನ ನಮ್ಮ ತಲೆಗೆ ಹೊಡೆದ್ರೆ, ನಾವು ಅವರ ಎದೆಯನ್ನೇ ಬಗೆಯುತ್ತೇವೆ ಎನ್ನುವ ಮೂಲಕ, ಪಾಕ್ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಶ್ರೀನಗರದಲ್ಲಿರುವಂತ ಸೇನೆಯ 15 ಕಾರ್ಪ್ಸ್ ಪ್ರಧಾನ ಕಚೇರಿಗೆ ತೆರಳಿ, ಸೇನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ಹೊಡೆದುರುಳಿಸಿದ ನಂತರ ಗಡಿಯಾಚೆಗಿನ ಶೆಲ್ ದಾಳಿಯ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಬೀಳಿಸಲಾದ ಪಾಕಿಸ್ತಾನಿ ಶೆಲ್‌ಗಳನ್ನು ರಾಜನಾಥ್ ಸಿಂಗ್ ಪರಿಶೀಲಿಸಿದರು. ಈ ಬಳಿಕ ಮಾತನಾಡಿದಂತ ಅವರು, ಪಾಕಿಸ್ತಾನದ ಚೌಕಿಗಳನ್ನು ನಾಶಪಡಿಸಿದ್ದಕ್ಕಾಗಿ ಸೈನಿಕರನ್ನು ಶ್ಲಾಘಿಸಿದ ರಾಜನಾಥ್ ಸಿಂಗ್, ಶತ್ರುಗಳು ಆಪ್ ಸಿಂಧೂರ್ ಅನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಪಹಲ್ಗಾಮ್ ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರದ ಜನರು ಪಾಕಿಸ್ತಾನ ಮತ್ತು ಭಯೋತ್ಪಾದಕರ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಿದ ರೀತಿ – ನಾನು ಜಮ್ಮು ಮತ್ತು…

Read More

ಸಾಗರ : ಅತವಾಡಿ ಗ್ರಾಮದ ಮುಸ್ಲೀಂ ಕುಟುಂಬವೊಂದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣವನ್ನು ಸಾಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಖಂಡಿಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆತವಾಡಿ ಗ್ರಾಮದ ಅಬ್ದುಲ್ ಮುಹೀಬ್, ಆತನ ಪತ್ನಿ ಜುಬೇದಾ ಅವರ ಮೇಲೆ ಸಾಗರ ಪಟ್ಟಣದ ಪರಶುರಾಮ್ ಮತ್ತು ಅವರ ಪತ್ನಿ ಸವಿತಾ ಸೇರಿಕೊಂಡು ಇಪ್ಪತ್ತು ಜನರ ತಂಡ ಕಟ್ಟಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು. ಅಬ್ದುಲ್ ಮುಹೀಬ್ ಕುಟುಂಬ ಆತವಾಡಿ ಗ್ರಾಮದಲ್ಲಿ 1.12 ಎಕರೆ ಜಾಗವನ್ನು ಹೊಂದಿದ್ದು, ಬಡತನದ ನಡುವೆಯೂ ಜೀವನ ಸಾಗಿಸುತ್ತಿದ್ದಾರೆ. 2015ರಿಂದಲೂ ಸಾಗರ ಪಟ್ಟಣದ ಪರಶುರಾಮ್ ಎಂಬಾತ ಈ ಜಮೀನು ಕಬಳಿಸಲು ಪ್ರಯತ್ನ ನಡೆಸುತ್ತಿದ್ದರು. ಇದಕ್ಕೆ ಮುಹೀಬ್ ಕುಟುಂಬ ಒಪ್ಪಿರಲಿಲ್ಲ. ಪದೇಪದೇ ಪರಶುರಾಮ್ ಅವರು ತಮ್ಮ ಸಂಗಡಿಗರೊಂದಿಗೆ ಸ್ಥಳಕ್ಕೆ ತೆರಳಿ ಬೆದರಿಕೆ ಹಾಕಿದ್ದಾರೆ ಎಂದರು. ಈಚೆಗೆ ಪರಶುರಾಮ್, ಸವಿತಾ ಅವರು ತಮ್ಮ ಜೊತೆ 20 ಜನರ…

Read More

  ಬೆಂಗಳೂರು: ಪಿಜಿಸಿಇಟಿ-2025ಕ್ಕೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಕೆಇಎ ಗುಡ್ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಪಿಜಿ ಸಿಇಟಿ-2025ಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಅಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ತಕ್ಷಣ ಅರ್ಜಿ ಸಲ್ಲಿಸುವುದು. ಅದರ ನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ ಎಂದಿದೆ. https://twitter.com/KEA_karnataka/status/1922941009190642099

Read More

ಬಳ್ಳಾರಿ: ಜಿಲ್ಲೆಯಲ್ಲಿ ಡಕಾಯಿತಿ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಬಳಿಯಲ್ಲಿ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಂತ ಅಮರೇಶ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/big-news-good-news-for-state-property-owners-the-period-for-issuing-b-khata-has-been-extended-by-3-months/ https://kannadanewsnow.com/kannada/big-news-attention-to-the-rural-people-of-the-state-all-these-services-of-the-gram-panchayat-will-be-available-on-whatsapp-watch-video/

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಹಾನಿಯಾಗುತ್ತಿದೆ. ಮನೆ ಹಾನಿ ಸೇರಿದಂತೆ ಇತರೆ ಹಾನಿಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. https://kannadanewsnow.com/kannada/big-news-attention-to-the-rural-people-of-the-state-all-these-services-of-the-gram-panchayat-will-be-available-on-whatsapp-watch-video/ https://kannadanewsnow.com/kannada/big-news-good-news-for-state-property-owners-the-period-for-issuing-b-khata-has-been-extended-by-3-months/

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. https://kannadanewsnow.com/kannada/if-youre-worried-about-how-the-home-lighting-facility-will-be-if-the-house-is-changed-then-stop-thinking-and-just-do-it-like-this/ https://kannadanewsnow.com/kannada/big-news-attention-to-the-rural-people-of-the-state-all-these-services-of-the-gram-panchayat-will-be-available-on-whatsapp-watch-video/

Read More

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಮನೆ ಬದಲಿಸಿದವರಿಗೂ ಗೃಹ ಜ್ಯೋತಿ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಮನೆ ಬದಲಿಸಿದರೂ ಡಿ-ಲಿಂಕ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ.. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಡಿ-ಲಿಂಕ್‌ ಮಾಡುವುದು ಹೇಗೆ? ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ. ಮನೆ ಬದಲಿಸುವ…

Read More

ರಾಯಚೂರು: ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಂತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರುವಿಹಾಳದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದಂತ 37 ವರ್ಷದ ಆಜ್ಮೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುರುವಿಹಾಳ ಠಾಣೆಯ ಪೊಲೀಸರು ಆರೋಪಿ ಅಜ್ಮೀರ್ ವಶಕ್ಕೆ ಪಡೆದಿದ್ದಾರೆ. ಅಂದಹಾಗೇ ಬಂಧಿತ ಆರೋಪಿ ರಫೇಲ್ ಯುದ್ಧ ವಿಮಾನ, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ, ಈಗ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/on-may-20-the-supreme-court-is-hearing-the-interim-relief-petition-submitted-questioning-the-wakf-amendment-act/ https://kannadanewsnow.com/kannada/big-news-good-news-for-state-property-owners-the-period-for-issuing-b-khata-has-been-extended-by-3-months/

Read More

ನವದೆಹಲಿ: ಮಧ್ಯಂತರ ಪರಿಹಾರದ ಸೀಮಿತ ಉದ್ದೇಶಕ್ಕಾಗಿ, 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಮೇ 20 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ. ಬಳಕೆದಾರರಿಂದ ವಕ್ಫ್, ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರ ನಾಮನಿರ್ದೇಶನ ಮತ್ತು ವಕ್ಫ್ ಅಡಿಯಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸುವುದು – ಮೂರು ವಿಷಯಗಳಲ್ಲಿ ತಡೆಯಾಜ್ಞೆಯ ಮಧ್ಯಂತರ ಪರಿಹಾರ ಅಗತ್ಯವಿದೆಯೇ ಎಂಬುದನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರ ಪೀಠವು ಪರಿಗಣಿಸಲಿದೆ. ಈ ಮಧ್ಯೆ, ಕೇಂದ್ರ ಸರ್ಕಾರವು ಕಾಯ್ದೆಯ ನಿಬಂಧನೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೀಡಿದ ಭರವಸೆ ಮುಂದುವರಿಯುತ್ತದೆ ಎಂದು ನ್ಯಾಯಾಲಯ ಹೇಳಿದೆ. “ನಾವು ಎರಡು ಕಡೆಯವರಿಗೂ ಎರಡು ಗಂಟೆಗಳ ಕಾಲಾವಕಾಶ ನೀಡುತ್ತೇವೆ” ಎಂದು ನ್ಯಾಯಾಲಯವು ಪ್ರಕರಣವನ್ನು ಮುಂದೂಡುವ ಮೊದಲು ಹೇಳಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಹಲವಾರು…

Read More