Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಮೈಸೂರು ವಿಭಾಗದ ನೈರುತ್ಯ ರೈಲ್ವೆ ವಿಭಾಗದಲ್ಲಿನ ಎಕ್ಸ್ಪ್ರೆಸ್, ಸೂಪರ್ಫಾಸ್ಟ್ ಹಾಗೂ ಪ್ರಯಾಣಿಕ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮೈಸೂರು ವಿಭಾಗದ ಮೂಲಕ ಸಂಚರಿಸುವ ಹಾಗೂ ಮೈಸೂರು ವಿಭಾಗದಿಂದ ಆರಂಭವಾಗುವ/ಅಂತ್ಯಗೊಳ್ಳುವ ಹಲವು ಎಕ್ಸ್ಪ್ರೆಸ್, ಸೂಪರ್ಫಾಸ್ಟ್, ಮೆಮು ಮತ್ತು ಪ್ರಯಾಣಿಕ ರೈಲುಗಳ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಈ ಪರಿಷ್ಕರಣೆಯಡಿ ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂಚಿತಗೊಳಿಸಲಾಗಿದ್ದು, ಕೆಲವು ರೈಲುಗಳ ಸಂಚಾರ ಸಮಯವನ್ನು ಮುಂದೂಡಲಾಗಿದೆ. ಈ ಬದಲಾವಣೆಗಳು ವಿವಿಧ ದಿನಾಂಕಗಳಿಂದ 01.01.2026ರಿಂದ ಜಾರಿಗೆ ಬರಲಿವೆ. ಉತ್ತಮ ಕಾರ್ಯಾಚರಣಾ ದಕ್ಷತೆ, ಸಮಯಪಾಲನೆಯ ಸುಧಾರಣೆ ಹಾಗೂ ವಿಭಾಗೀಯ ಸಂಚಾರವನ್ನು ಸಮರ್ಪಕವಾಗಿ ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಈ ವೇಳಾಪಟ್ಟಿ ಪರಿಷ್ಕರಣೆ ಕೈಗೊಳ್ಳಲಾಗಿದೆ. ಈ ಬದಲಾವಣೆಗಳ ವ್ಯಾಪ್ತಿಯಲ್ಲಿ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಅರಸೀಕೆರೆ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಯಶವಂತಪುರ, ಬೆಂಗಳೂರು, ಚೆನ್ನೈ, ತಿರುಪತಿ, ಅಜ್ಮೀರ್, ವಾರಾಣಸಿ, ಗಾಂಧಿಧಾಮ್, ಬಾರ್ಮೇರ್, ಉದಯಪುರ, ಚಂಡೀಗಢ ಹಾಗೂ ಹಜ್ರತ್ ನಿಜಾಮುದ್ದೀನ್ ನಗರಗಳನ್ನು ಸಂಪರ್ಕಿಸುವ ದೀರ್ಘ ದೂರದ ರೈಲುಗಳನ್ನು ಸೇರಿದಂತೆ…
ಶಿವಮೊಗ್ಗ: ಜಡತ್ವದಿಂದ ಹೊಂದಿರುವ ಜನರಿಗೆ ದುಡಿಮೆಯನ್ನು ಯೋಜನೆ ಕಲಿಸಿಕೊಟ್ಟಿದೆ ಪ್ರತಿಯೊಬ್ಬರಲ್ಲಿಯೂ ನಾನು ನನ್ನ ಕುಟುಂಬವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದನ್ನು ಸ್ವ ಸಹಾಯ ಗುಂಪುಗಳ ಮೂಲಕ ಜನರು ಅರಿತಿದ್ದಾರೆ. ಜಾತಿ ಮತ ಭೇದ ಇಲ್ಲದೇ ಎಲ್ಲರೂ ಸಮಾನತೆಯಿಂದ ಬದುಕುವ ವಾತಾವರಣ ನಿರ್ಮಾಣ ಆಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಲ್ಲರಿಗೂ ಅಬಿವೃದ್ಧಿ ಹೊಂದಲು ಸಮಾನ ಅವಕಾಶ ಕಲ್ಪಿಸಿದೆ. ಈ ಕಾರಣದಿಂದಾಗಿ ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸೋಮವಾರದಂದು ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಗರ ತಾಲೂಕು, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಆನಂದಪುರ ವಲಯದ ಶ್ರೀ ವೀರಾಂಜನೇಯ ಸಭಾಭವನದಲ್ಲಿ ಆಯೋಜಿಸಲಾದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮದ್ಯ ವರ್ಜನಾ ಶಿಬಿರಗಳ…
ಮಂಡ್ಯ : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೋಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಪ್ರವಾಸಿ ತಾಣಗಳಿಗೆ ಅತಿ ಹೆಚ್ಚು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಿಲ್ಲಾಡಳಿತ ಕೈಗೊಂಡಿದ್ದು, ಪ್ರವಾಸಿಗರಿಗೂ ಸಹ ಹಲವು ಸೂಚನೆಗಳನ್ನು ನೀಡಲಾಗಿದೆ. ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ ಜನವರಿ 1 ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಮಂಡ್ಯ ಜಿಲ್ಲೆಯ ಕಡೆ ಹೋಗಿ ಹೊಸ ವರ್ಷಾಚರಣೆ ಮಾಡುವವರಿದ್ದರೆ ಈ ಕುರಿತು ನೀವು ಮಾಹಿತಿ ತಿಳಿದು ಪ್ರವಾಸ ಮಾಡುವುದು ಉತ್ತಮ. ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷದ ಪ್ರಯುಕ್ತ ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೆ.ಆರ್.ಸಾಗರ ಅಣೆಕಟ್ಟು, ಕಾವೇರಿ ಹಿನ್ನೀರು ಮತ್ತು ನದಿ ಪಾತ್ರದ…
ಬೆಂಗಳೂರು: ನಗರದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಿಜಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಇರುವಂತ ಪಿಜಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟದಲ್ಲಿ ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ. ಇನ್ನೂ ಈ ದುರ್ಘಟನೆಯಲ್ಲಿ ದೇವಿ, ವಿಶಾಲ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಜೊತೆಗೆ ವೆಂಕಟೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು: ಹೊಸ ವರ್ಷದ ಪ್ರಯುಕ್ತ ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ಸೇರಿದಂತೆ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಡಿಸೆಂಬರ್.31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಲರಾಯನ ದುರ್ಗ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗಿರಿ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್,…
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ…
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2025 ರಂದು ಬೆಂಗಳೂರಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಜಾನೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2025 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. ಕ್ರ. ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಬಸ್ಸುಗಳ ಸಂಖ್ಯೆ ವಲಯ 1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ 6 ಪೂರ್ವ 2 G-4 ಜಿಗಣಿ 6 ದಕ್ಷಿಣ 3 G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ 6 ದಕ್ಷಿಣ 4 G-6 ಕೆಂಗೇರಿ KHB ಕ್ವಾರ್ಟ್ರ್ಸ್ 4 ಪಶ್ಚಿಮ 5 G-7 ಜನಪ್ರಿಯ ಟೌನ್ ಶಿಪ್…
ಶಿವಮೊಗ್ಗ: ಮಲೆನಾಡಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಅನ್ನೋದು ಹಲವರ ಪ್ಲಾನ್ ಆಗಿರುತ್ತೆ. ಆ ಪ್ಲಾನ್ ಗೆ ಅವಕಾಶವನ್ನು ಸಾಗರದ ಗ್ರೀನ್ ಎಂಬಾಸ್ಸಿ ಹೋಟೆಲ್ ಒದಗಿಸಿಕೊಡುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೃದಯ ಭಾಗದಲ್ಲಿರುವಂತ ಗ್ರೀನ್ ಎಂಬಾಸ್ಸಿ ಹೋಟೆಲ್. ಸಾಗರದಲ್ಲೇ ತುಂಬಾ ಪ್ರಸಿದ್ಧವಾಗಿರೋ ಈ ಹೋಟೆಲ್ ಬಿಹೆಚ್ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಪಕ್ಕದಲ್ಲೇ ಇದೆ. ಈ ಹೋಟೆಲ್ ನಲ್ಲಿ ನೂತನ ವರ್ಷದ ಆಚರಣೆಗೆ ಅವಕಾಶ ನೀಡುತ್ತಿದೆ. 2026ರ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ನೂತನ ವರ್ಷವನ್ನು ಸಡಗರ ಸಂಭ್ರಮದಿಂದ ಸ್ವಾಗತಿಸೋದಕ್ಕೆ ಜನರನ್ನು ಸೆಳೆಯುತ್ತಿದೆ. ಫ್ಲಾನ್ ಮಾಡಿ, ತಪ್ಪದೇ ಎಂಬಾಸ್ಸಿಯಲ್ಲೇ ಹೊಸ ವರ್ಷ ಆಚರಿಸಿ ಫ್ಯಾಮಿಲಿ, ಸ್ನೇಹಿತರ ಜೊತೆಗೆ ಹೊಸ ವರ್ಷಾಚರಣೆ ಮಾಡೋದಕ್ಕೂ ಗ್ರೀನ್ ಎಂಬಾಸ್ಸಿಯಲ್ಲಿ ಅವಕಾಶವಿದೆ. ವೆಜ್, ನಾನ್ ವೆಜ್ ತರಾವರಿ ಊಟವು ನಿಮ್ಮ ಸಂಭ್ರಮಾಚರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಜೊತೆಗೆ ಲೈವ್ ಡಿಜೆ ಕೂಡ ಇದ್ದು, ಕುಣಿದು ಕುಪ್ಪಳಿಸಿ, ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಬಹುದಾಗಿದೆ. ತಂಪು ಪಾನೀಯ…
ಮಂಡ್ಯ : ಮದ್ದೂರು ತಾಲೂಕಿನ ಅಬಲವಾಡಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳಲು ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ. ಹಲವು ವರ್ಷಗಳಿಂದ ಶ್ರೀ ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್, ಆಡಳಿತ ಮಂಡಳಿ ದೇಗುಲದ ನಿರ್ವಹಣೆಯನ್ನು ಮಾಡಿಕೊಂಡು ಬರುತ್ತಿದ್ದರು. ಏಕಾಏಕಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಹಾಗೂ ಅಧಿಕಾರಿಗಳು ಮುಜರಾಯಿ ಇಲಾಖೆಗೆ ದೇಗುಲವನ್ನು ಒಳಪಡಿಸಿಕೊಂಡು ಹುಂಡಿಯನ್ನು ದೇಗುಲದಲ್ಲಿ ಇಡಲು ಮುಂದಾದಾಗ ದೇಗುಲದ ಆವರಣದಲ್ಲಿ ನೂರಾರು ಮಂದಿ ಭಕ್ತಾಧಿಗಳು ಹಾಗೂ ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ಸುಮಾರು 3 ಗಂಟೆಗಳ ಕಾಲ ಅಡ್ಡಗಟ್ಟಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಹಶೀಲ್ದಾರ್ ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಗ್ರಾಮಸ್ಥರ ಜೊತೆ ಮಾತನಾಡಿ, ಈ ದೇವಾಲಯವು ಸಿ ಶ್ರೇಣಿಗೆ ಸೇರಿದ್ದು, ಇದನ್ನು ಮುಜರಾಯಿ ಇಲಾಖೆಗೆ…
ಮಾಸ್ಕೋ: ಮಾಸ್ಕೋ ಮತ್ತು ಸೇಂಟ್ ಪೀಟರ್ಸ್ಬರ್ಗ್ ನಡುವಿನ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಕೈವ್ ಡ್ರೋನ್ಗಳನ್ನು ಹಾರಿಸಿದೆ ಎಂದು ರಷ್ಯಾ ಸೋಮವಾರ ಆರೋಪಿಸಿದೆ. “ಭಯೋತ್ಪಾದಕ ದಾಳಿ”ಯ ನಂತರ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ತನ್ನ ಮಾತುಕತೆಯ ನಿಲುವನ್ನು “ಪರಿಷ್ಕರಿಸುವುದಾಗಿ” ಘೋಷಿಸಿದೆ. ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ “ಅಧಿಕೃತ ನಿವಾಸ”ದ ಮೇಲೆ ಉಕ್ರೇನ್ 91 ಡ್ರೋನ್ಗಳನ್ನು ಹಾರಿಸಿದೆ ಎಂದು ಹೇಳಿದರು, ಅವೆಲ್ಲವನ್ನೂ ವಾಯು ರಕ್ಷಣಾ ಪಡೆಗಳು ನಾಶಪಡಿಸಿವೆ ಎಂದು ಹೇಳಿದರು. “ಪ್ರತೀಕಾರದ ದಾಳಿ” ಗಾಗಿ ರಷ್ಯಾ ಉಕ್ರೇನ್ನಲ್ಲಿ ಗುರಿಗಳನ್ನು ಆಯ್ಕೆ ಮಾಡಿದೆ ಮತ್ತು ಮಾಸ್ಕೋದ “ಮಾತುಕತೆಯ ಸ್ಥಾನವನ್ನು ಪರಿಷ್ಕರಿಸಲಾಗುವುದು” ಎಂದು ಲಾವ್ರೊವ್ ಘೋಷಿಸಿದರು. ಇದಕ್ಕೂ ಮೊದಲು, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಫ್ಲೋರಿಡಾ ರೆಸಾರ್ಟ್ನಲ್ಲಿ ಝೆಲೆನ್ಸ್ಕಿಯನ್ನು ಆತಿಥ್ಯ ವಹಿಸಿದರು ಮತ್ತು ಉಕ್ರೇನ್ ಮತ್ತು ರಷ್ಯಾ ಶಾಂತಿ ಇತ್ಯರ್ಥಕ್ಕೆ “ಹಿಂದೆಂದಿಗಿಂತಲೂ ಹತ್ತಿರದಲ್ಲಿವೆ” ಎಂದು ಒತ್ತಾಯಿಸಿದರು. ಆದಾಗ್ಯೂ, ಉಕ್ರೇನ್ನಲ್ಲಿರುವ ಎಲ್ಲಿಂದ…














