Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು ಎಂದು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ, ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮುಂದೆ ರಾಜಕೀಯವಾಗಿ ಯಾರು ಬೆಳೆಯಬಾರದು. ಹೀಗಾಗಿ ಅವರ ಅಣ್ಣನ ಮಗ ಪ್ರಜ್ಜಲ್ ರೇವಣ್ಣ ಅವರನ್ನೆ ಜೈಲಿಗೆ ಹಾಕಿಸಿದರು. ನಿಖಿಲ್ ಕುಮಾರಸ್ವಾಮಿಗೆ ಜನತೆ ಮೂರು ಬಾರಿ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ಪ್ರಜ್ಜಲ್ ಜನಪ್ರಿಯತೆ ಸಹಿಸದೆ ಕುಮಾರಸ್ವಾಮಿ ಅವರು ಚುನಾವಣಾ ವೇಳೆ ಪೆನ್ ಮತ್ತು ಡ್ರೈವ್ ಗಳನ್ನು ಸೃಷ್ಟಿಸಿ ಜೈಲಿಗೆ ಹಾಕಿಸಿದರು. ಮಾಜಿ ಪ್ರಧಾನಿ ದೇವೇಗೌಡರು ಮನಸ್ಸು ಮಾಡಿದ್ದರೆ ಹೊರಗೆ ತರಬಹುದಿತ್ತು. ಆದರೆ, ಕುಮಾರಸ್ವಾಮಿ ಕುಮ್ಮಕ್ಕಿನಿಂದ ಪ್ರಜ್ಜಲ್ ರೇವಣ್ಣ ಜೈಲಿನಿಂದ ಹೊರ ಬರಲು ಆಗುತ್ತಿಲ್ಲ ಎಂದು ಕುಟುಕಿದರು. ಜಿಲ್ಲಾ ಮತ್ತು ತಾಲೂಕಿನ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಹೋರಾಟಗಾರರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಹೋರಾಟ…
ಬೆಂಗಳೂರು: ಕಾಂತಾರ ಚಾಪ್ಟರ್-1ರ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಸಂಬಂಧ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ಯುದ್ಧದಿಂದಾಗಿ ಇಂಗ್ಲೇಂಡ್ ನಲ್ಲೇ ರಣವೀರ್ ಸಿಂಗ್ ಪರ ವಕೀಲರು ಉಳಿದಿದ್ದರು. ವಿಮಾನವಿಲ್ಲದೇ ಭಾರತಕ್ಕೆ ವಾಪಾಸಾಗುತ್ತಿಲ್ಲವೆಂದು ಸಜನ್ ಪೂವಯ್ಯ ಹೇಳಿಕೆ ನೀಡಿದರು. ನಟ ರಣವೀರ್ ಸಿಂಗ್ ಗೆ ನೋಟಿಸ್ ನೀಡಿದ್ದೇವೆ. ಸಮಯ ಕೇಳಿದ್ದಾರೆ ಎಂಬುದಾಗಿ ಸರ್ಕಾರದ ಪರ ಹೆಚ್ಚುವರಿ ಎಸ್ ಪಿ ಪಿ ಬಿಎನ್ ಜಗದೀಶ್ ನ್ಯಾಯಾಲಯದ ಗಮನಕ್ಕೆ ತಂದರು. ಹೀಗಾಗಿ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಮಾರ್ಚ್.9ರವರೆಗೆ ಹೈಕೋರ್ಟ್ ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/historic-decision-to-fill-56000-vacant-posts-in-the-state-minister-madhu-bangarappa/ https://kannadanewsnow.com/kannada/114907-applications-approved-under-e-asset-software-across-the-state/
ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗ, ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳು ರಾಜ್ಯಕ್ಕೆ ಬೆಳಕು ನೀಡಿದ ಪುಣ್ಯಭೂಮಿ. ಶರಾವತಿ ಅಣೆಕಟ್ಟು ನಿರ್ಮಾಣವಾಗಿ ದಶಕಗಳೇ ಕಳೆದರೂ, ಆ ಯೋಜನೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ರೈತರು ಇಂದಿಗೂ ‘ಅತಂತ್ರ’ ಸ್ಥಿತಿಯಲ್ಲಿದ್ದಾರೆ. ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳು ಮತ್ತು ಮುಳುಗಡೆ ಸಂತ್ರಸ್ತರ ಹಕ್ಕುಪತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಇತ್ತೀಚೆಗೆ ಮಲೆನಾಡು ರೈತ ಹೋರಾಟ ಸಮಿತಿ ವತಿಯಿಂದ ಸಿಗಂಧೂರು ಸೇತುವೆ ಬಳಿ ನಡೆದ ಬೃಹತ್ ಪ್ರತಿಭಟನೆಯು ಸರ್ಕಾರದ ಕಣ್ಣು ತೆರೆಸುವ ಪ್ರಯತ್ನವಾಗಿದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ್ ಅವರು ಪ್ರಸ್ತುತ ಮತ್ತು ಹಿಂದಿನ ಸರ್ಕಾರಗಳ ವೈಫಲ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಪಕ್ಷವಾಗಲಿ, ಚುನಾವಣಾ ಸಮಯದಲ್ಲಿ ಮಲೆನಾಡಿನ ರೈತರಿಗೆ ನೀಡುವ ಭರವಸೆಗಳು ಕೇವಲ ಮತಬ್ಯಾಂಕ್ ರಾಜಕಾರಣಕ್ಕೆ ಸೀಮಿತವಾಗಿವೆ ಎನ್ನುವುದು ರೈತರ ಆರೋಪ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ…
ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗದ ರೈತರ ಪಾಲಿಗೆ ಭೂಮಿ ಎಂಬುದು ಕೇವಲ ಆಸ್ತಿಯಲ್ಲ, ಅದು ಅವರ ಜೀವನದ ಅಸ್ತಿತ್ವ. ಆದರೆ ಕಳೆದ ಆರು ದಶಕಗಳಿಂದ ಈ ಭಾಗದ ರೈತರು ಅರಣ್ಯ ಹಕ್ಕು, ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡಿರುವ ‘ಮಲೆನಾಡು ರೈತರ ಹೋರಾಟ ಸಮಿತಿ’ಯಿಂದ ಇಂದು ಸಿಗಂದೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ‘ಸೇತುವೆ ರಸ್ತೆ ತಡೆ ಚಳುವಳಿ’ ನಡೆಸಿ, ಹಕ್ಕು ಪತ್ರಕ್ಕಾಗಿ ಒತ್ತಾಯಿಸಲಾಯಿತು. ಈ ಹೋರಾಟವು ಕೇವಲ ಸಾಂಕೇತಿಕ ಪ್ರತಿಭಟನೆಯಲ್ಲ, ಬದಲಾಗಿ ಮಲೆನಾಡಿನ ರೈತರ ಅಸ್ತಿತ್ವಕ್ಕಾಗಿ ನಡೆಯುತ್ತಿರುವ ‘ಅಂತಿಮ ಸಮರ’ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕರಾದಂತ ತೀ.ನ.ಶ್ರೀನಿವಾಸ್ ಘೋಷಿಸಿದರು. ಅಲ್ಲದೇ 15 ದಿನಗಳಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡದೇ ಇದ್ದರೇ, ಜಿಲ್ಲಾಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರಾಜಕೀಯ ಭರವಸೆಗಳ ಸುಳ್ಳಿನ ಕಂತೆ:…
ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯು ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಎ.ಆರ್. ಸಪ್ತಗಿರಿ ಗೌಡ ಅವರು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ನೇಮಕಾತಿಯಲ್ಲಿ ಅತ್ಯಂತ ಗಮನಾರ್ಹ ಅಂಶವೆಂದರೆ, ಖ್ಯಾತ ನಟಿ ಅಮೂಲ್ಯ ಅವರ ಪತಿ ಜಗದೀಶ್ ಆರ್. ಚಂದ್ರ ಅವರಿಗೆ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಜಗದೀಶ್ ಅವರು ಕಳೆದ ಕೆಲವು ಸಮಯದಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಸಂಘಟನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಟಿ ಅಮೂಲ್ಯ ಅವರ ಮಾವ (ಜಿ.ಹೆಚ್. ರಾಮಚಂದ್ರ) ಹಾಗೂ ಪತಿ ಇಬ್ಬರೂ ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಜಗದೀಶ್ ಅವರಿಗೆ ಪ್ರಮುಖ ಹುದ್ದೆ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ಅವರಿಗೆ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ವಿವಿಧ ಮೋರ್ಚಾಗಳ ನೂತನ ಅಧ್ಯಕ್ಷರ ಪಟ್ಟಿ: ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಘಟಕಗಳಿಗೆ…
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಕೂಡಲೇ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು; ಜನಾಭಿಪ್ರಾಯ ಪರಿಗಣಿಸದೆ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ. ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರುವ ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ…
ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜರಸಲೇಮ್ (ಧರ್ಮಕ್ಕಾಗಿ) ಗಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದರು. ಮೂರನೇ ವಿಶ್ವ ಯುದ್ಧ ಆಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ…
ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗ ಮಾತನಾಡಿದ ಅವರು, ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ, ಅವರು ಗೊಂದಲಕ್ಕೆ ಸಿಲುಕಿದ್ದಾರೆ. ನೇಮಕಾತಿಯ ಮೊದಲು ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಆಗಬೇಕು ಎಂದು ಹೇಳಿದರು. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕಾನೂನು ಮಾಡಿದ್ದಾರೆ. ಹಾಗಾಗಿ ಎಲ್ಲ ಸಮುದಾಯದವರೂ ಒಳ ಮೀಸಲಾತಿ ಕೊಡಿ ಅಂತ ಹೇಳಿದ್ದಾರೆ. ಸಮಸ್ಯೆ ಸರಳೀಕರಣ ಮಾಡಬೇಕು. ಕಾನೂನು ತಜ್ಞರ ಸಲಹೆ ಪಡೆದು ಮಾಡಬೇಕು. ಸಂವಿಧಾನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಅಂತ…
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಯು ನಿರೀಕ್ಷೆಗಿಂತಲೂ ವೇಗವಾಗಿ ಗುರಿ ತಲುಪುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್ ಮತ್ತು ಸಿಎನ್ಬಿಸಿ ಸುದ್ದಿ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಒಂದೇ ಏಟಿಗೆ 48 ನಾಯಕರ ಅಂತ್ಯ: ಇರಾನ್ ನಾಯಕತ್ವದ ಮೇಲೆ ಈ ಕಾರ್ಯಾಚರಣೆಯು ಭೀಕರ ಪ್ರಹಾರ ಮಾಡಿದೆ ಎಂದು ಹೇಳಿರುವ ಟ್ರಂಪ್, “ಒಂದೇ ಹೊಡೆತಕ್ಕೆ ಇರಾನ್ನ 48 ಪ್ರಮುಖ ನಾಯಕರು ಬಲಿಯಾಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ. ಇನ್ನು ಎಷ್ಟು ಗುರಿಗಳು ಬಾಕಿ ಇವೆ ಎಂಬುದು ವಾಷಿಂಗ್ಟನ್ಗೆ ತಿಳಿದಿದೆ ಎಂದು ಅವರು ಸುಳಿವು ನೀಡಿದ್ದಾರೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಡಜನ್ಗಟ್ಟಲೆ ಹಿರಿಯ ಕಮಾಂಡರ್ಗಳು ಈ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಪೆಂಟಗನ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು (IDF) ಮೌಲ್ಯಮಾಪನ ಮಾಡುತ್ತಿರುವ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ನಿರೀಕ್ಷೆಗಿಂತ ವೇಗವಾಗಿ ಕಾರ್ಯಾಚರಣೆ:…
ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ ದೊಡ್ಡ ಸಮಸ್ಯೆ ಎನ್ನುವ ಭಾವನೆ ಹಳ್ಳಿ ಜನರಲ್ಲಿ ಮನೆ ಮಾಡಿರುತ್ತದೆ. ಆದರೆ, ಈ ಕಲ್ಪನೆಯನ್ನು ಸುಳ್ಳು ಮಾಡಿ, ಪೊಲೀಸರೇ ಜನರ ಮನೆಬಾಗಿಲಿಗೆ ಬಂದು, ಅವರೊಂದಿಗೆ ಬೆರೆತು, ಅವರ ಸಮಸ್ಯೆಗಳನ್ನು ಆಲಿಸಿದ ಅಪರೂಪದ ಘಟನೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಾಕ್ಷಿಯಾಗಿದೆ. ಆ ಮೂಲಕ ಗ್ರಾಮ ವಾಸ್ತವ್ಯ ಮಾಡಿ, ಪಿಎಸ್ಐ ಪ್ರವೀಣ್ ಎಲ್ಲರಿಗೂ ಮಾದರಿಯಾಗುವಂತ ನಡೆಯನ್ನು ತೋರಿದ್ದಾರೆ. ಹೌದು.. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಈ ‘ಗ್ರಾಮವಾಸ್ತವ್ಯ’ ಕಾರ್ಯಕ್ರಮವು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ಉಳಿಯಲಿಲ್ಲ. ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕುಗ್ಗಿಸುವಲ್ಲಿ ಒಂದು ಮೈಲಿಗಲ್ಲಾಗಿ ಪರಿಣಮಿಸಿ, ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ಸಾಕ್ಷೀಕರಿಸಿತು. ಗ್ರಾಮವಾಸ್ತವ್ಯದ ಹಿನ್ನೆಲೆ ಮತ್ತು ಉದ್ದೇಶ ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವು ಕುಟುಂಬಗಳ ನಡುವೆ ಹಳೆಯ ವೈಷಮ್ಯಗಳಿರುತ್ತವೆ. ಗಡಿ ವಿವಾದ, ಸಣ್ಣಪುಟ್ಟ ಜಗಳಗಳು ಅಥವಾ ಗ್ರಾಮಗಳಲ್ಲಿ…














