Subscribe to Updates
Get the latest creative news from FooBar about art, design and business.
Author: kannadanewsnow09
ಇಂದಿನ ಯುಗದಲ್ಲಿ ಎಲ್ಲರೂ ಹಣ ಎಂಬ ಕಾಗದದ ಕಡೆಗೆ ಓಡುತ್ತಿದ್ದಾರೆ. ಶಾಂತಿ ನೆಮ್ಮದಿಯಿಂದ ಬದುಕಲು ಹಣ ಸಂಪಾದಿಸುವ ಪರಿಸ್ಥಿತಿ ಬದಲಾಗಿದೆ, ಇಂದು ನಾವು ಹಣ ಸಂಪಾದಿಸಲು ಇವೆಲ್ಲವನ್ನೂ ಕಳೆದುಕೊಳ್ಳುತ್ತೇವೆ. ಇವೆಲ್ಲ ಗೊತ್ತಿದ್ದರೂ ಬೇರೆ ದಾರಿಯಿಲ್ಲದೆ ಓಡಬೇಕಾದ ಪರಿಸ್ಥಿತಿ ನಮ್ಮದು. ಹೀಗೇ ಓಡುತ್ತಿದ್ದರೂ ಹಣ ಬರುತ್ತಿದ್ದರೆ ಅದೂ ಇಲ್ಲ. ಇಂದು ಕಷ್ಟಪಟ್ಟು ದುಡಿಯುವವರೆಲ್ಲ ಕೈಯಲ್ಲಿ ಹಣ ಉಳಿದಿಲ್ಲ. ಇದಕ್ಕೆಲ್ಲ ಕಾರಣ ನಮ್ಮ ದುಷ್ಟ ಗ್ರಹದೋಷ ಮತ್ತು ಇವೆಲ್ಲವನ್ನೂ ಮೀರಿ ಹಣವನ್ನು ಆಕರ್ಷಿಸುವ ಸಾಮರ್ಥ್ಯ ನಮಗಿಲ್ಲ ಎಂದೂ ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ…
ಬೆಂಗಳೂರು: ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ. ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ “ಕಲಬುರಗಿ ರೊಟ್ಟಿ”ಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆ! ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಸ ಸೂಚಿಸಿದ್ದಾರೆ. ‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದಿರುವ ಸಚಿವರು ನಮ್ಮ ‘ಕಾಮ್ ಕಿ ಬಾತ್’ನ ಯಶಸ್ಸನ್ನು ಪ್ರಧಾನಿಯವರು ‘ಮನ್ ಕಿ ಬಾತ್’ ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದಿದ್ದಾರಲ್ಲದೆ, ಕಲಬುರಗಿ ರೊಟ್ಟಿಯ ಯಶಸ್ಸಿನ ಕಥೆಯ ಹಿಂದೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದ್ದಾರೆ. ಬ್ರ್ಯಾಂಡಿಂಗ್ ಗಾಗಿ ರಾಜ್ಯ ಸರ್ಕಾರ ಸೀಡ್ ಫಂಡ್ ಒದಗಿಸಿದೆ – ಸ್ವಸಹಾಯ ಸಂಘಗಳು ಹಾಗೂ ಇತರ ಉತ್ಸಾಹಿ ಮಹಿಳೆಯರಿಗೆ ಸಬ್ಸಿಡಿಯಲ್ಲಿ ಸುಮಾರು 150 ರೊಟ್ಟಿ ಯಂತ್ರಗಳನ್ನು ಒದಗಿಸಲಾಗಿದೆ – ಸಿ.ಎಸ್.ಆರ್ ನಿಧಿಯ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಇಂಗ್ಲೆಂಡ್ ಕ್ರಿಕೆಟ್ನಲ್ಲಿ ದುರಂತ ಸಂಭವಿಸಿದೆ. ನಾರ್ಥಾಂಪ್ಟನ್ಶೈರ್ನ ಮಾಜಿ ಆಟಗಾರ ಮತ್ತು ದಂತಕಥೆ ವೇಯ್ನ್ ಲಾರ್ಕಿನ್ಸ್ (71) ನಿಧನರಾಗಿದ್ದಾರೆ. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದರು. ಯುಕೆಯ ಬೆಡ್ಫೋರ್ಡ್ಶೈರ್ನ ಲಾರ್ಕಿನ್ಸ್ 1979 ಮತ್ತು 1991 ರ ನಡುವೆ ಇಂಗ್ಲೆಂಡ್ ಪರ 13 ಟೆಸ್ಟ್ ಮತ್ತು 25 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 1979 ರ ವಿಶ್ವಕಪ್ನಲ್ಲಿ ರನ್ನರ್ ಅಪ್ ಆಗಿ ಸ್ಥಾನ ಪಡೆದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು ಲಾರ್ಕಿನ್ಸ್. ಅದೇ ರೀತಿ, ಅವರು 1989-90ರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಇಂಗ್ಲೆಂಡ್ ತಂಡವನ್ನು ಅದ್ಭುತ ಜಯಗಳಿಸಿತು. 1989 ರಲ್ಲಿ ಹೈದರಾಬಾದ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಲಾರ್ಕಿನ್ಸ್ (124) ಅಮೋಘ ಶತಕ ಬಾರಿಸಿದರು. ಒಟ್ಟಾರೆಯಾಗಿ, ಅವರು ಇಂಗ್ಲೆಂಡ್ ಪರ 1084 ರನ್ ಗಳಿಸಿದರು. ಆದರೆ, ಲಾರ್ಕಿನ್ಸ್ 1982 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ತಂಡದ ಸದಸ್ಯರಾಗಿದ್ದರು. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಆದೇಶಗಳನ್ನು ಉಲ್ಲಂಘಿಸಿದರು. ಪರಿಣಾಮವಾಗಿ, ಅವರನ್ನು ಮೂರು…
ಬೆಂಗಳೂರು: ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಎಂಬ ಪದ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರು ತೋರಿಸಲಿ. ರಾಹುಲ್ ಗಾಂಧಿ ಒಂದು ಕಡೆ ಜಾತಿ ಸಮೀಕ್ಷೆ ಬೇಕೆಂದು ಹೇಳುತ್ತಾರೆ. ನಂತರ ಜಾತ್ಯತೀತ ಎನ್ನುತ್ತಾರೆ. ಜವಹರಲಾಲ್ ನೆಹರು ಅವರು ಒಂದನೇ ತಿದ್ದುಪಡಿ ತಂದರು. ಒಟ್ಟು 17 ತಿದ್ದುಪಡಿಗಳನ್ನು ಅವರು ಮಾಡಿದ್ದಾರೆ. ನಂತರ ಬಂದ ಇಂದಿರಾಗಾಂಧಿ 26 ತಿದ್ದುಪಡಿ ಮಾಡಿದ್ದಾರೆ. ಬಾಬಾ ಸಾಹೇಬರ ಮೂಲ ಆಶಯಗಳನ್ನೇ ತಿದ್ದುಪಡಿ ಮಾಡಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ 68 ತಿದ್ದುಪಡಿಗಳನ್ನು ಮಾಡಿದೆ ಎಂದರು.…
ನವದೆಹಲಿ: ಮುಂಬರುವ ಜನಗಣತಿಗಾಗಿ ಮನೆಪಟ್ಟಿ ಕಾರ್ಯಾಚರಣೆಗಳು ಏಪ್ರಿಲ್ 1, 2026 ರಿಂದ ಪ್ರಾರಂಭವಾಗಲಿದ್ದು, ಇದು ದಶಕದ ಮೊದಲ ಹಂತದ ಆರಂಭವನ್ನು ಸೂಚಿಸುತ್ತದೆ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಹೇಳಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಜನಗಣತಿ ಆಯುಕ್ತರು ಮತ್ತು ಭಾರತದ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಮನೆಪಟ್ಟಿ ಕಾರ್ಯಾಚರಣೆಗಳು ಮತ್ತು ವಸತಿ ಗಣತಿಯು ಏಪ್ರಿಲ್ 1, 2026 ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದರು. ಅದಕ್ಕೂ ಮೊದಲು ಮೇಲ್ವಿಚಾರಕರು, ಗಣತಿದಾರರ ನೇಮಕಾತಿ ಮತ್ತು ಅವರಲ್ಲಿ ಕೆಲಸದ ವಿತರಣೆಯನ್ನು ರಾಜ್ಯಗಳು ಮತ್ತು ಜಿಲ್ಲಾಡಳಿತದ ಸಹಕಾರದೊಂದಿಗೆ ಮಾಡಲಾಗುತ್ತದೆ ಎಂದು ಅದು ಹೇಳಿದೆ. ಜನಗಣತಿಯು ಎರಡು ಹಂತದ ಪ್ರಕ್ರಿಯೆಯಾಗಿದ್ದು, ಮೊದಲ ಹಂತದಲ್ಲಿ ಅಂದರೆ ಮನೆ ಪಟ್ಟಿ ಕಾರ್ಯಾಚರಣೆ (HLO)ಯಲ್ಲಿ, ಪ್ರತಿ ಮನೆಯ ವಸತಿ ಪರಿಸ್ಥಿತಿಗಳು, ಆಸ್ತಿಗಳು ಮತ್ತು ಸೌಕರ್ಯಗಳನ್ನು ಸಂಗ್ರಹಿಸಲಾಗುತ್ತದೆ. ತರುವಾಯ, ಎರಡನೇ ಹಂತದಲ್ಲಿ ಅಂದರೆ ಜನಸಂಖ್ಯಾ ಗಣತಿ (PE), ಫೆಬ್ರವರಿ 1, 2027 ರಂದು ನಿಗದಿಯಾಗಿರುವ ಪ್ರತಿ…
ಬೆಂಗಳೂರು : ಕಷ್ಟಪಟ್ಚು ದುಡಿದ ಯಾರದ್ದೋ ಮನೆ-ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ಯಾರೋ ಕಬಳಿಸುವುದನ್ನು ತಪ್ಪಿಸಲು ಹಾಗೂ ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬಬೇಕು ಎಂಬ ಏಕೈಕ ಉದ್ದೇಶದಿಂದಲೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಭಾನುವಾರ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನದಲ್ಲಿ ಮಾತನಾಡಿದ ಅವರು, “ಪೇಪರ್ ಖಾತಾ ಚಾಲ್ತಿಯಲ್ಲಿದ್ದ ಸಂದರ್ಭದಲ್ಲಿ ಯಾರು ಬೇಕಾದರೂ ನಕಲಿ ಖಾತಾ ಸೃಷ್ಟಿಸುವ ಅಪಾಯ ಇತ್ತು. ನಕಲಿ ಖಾತೆಗಳ ಮೂಲಕ ಭೂ ಮಾಫಿಯಾದವರು ಹಲವರ ಆಸ್ತಿಗಳನ್ನು ಲಪಟಾಯಿಸಿರುವ ಉದಾಹರಣೆಗಳೂ ಸಾಕಷ್ಟಿವೆ” ಎಂದರು. “ಮಧ್ಯಮ ವರ್ಗದ ಜನ ಕಷ್ಟಪಟ್ಟು ದುಡಿದು ನಗರ ಭಾಗದಲ್ಲಿ ಆಸ್ತಿ ಖರೀದಿಸಿದರೆ, ಅದನ್ನ ಮತ್ಯಾರೋ ನಕಲಿ ದಾಖಲೆ ಸೃಷ್ಟಿಸಿ ಕಬಳಿಸುವುದನ್ನು ಸರ್ಕಾರ ನೋಡುತ್ತಾ ಕೂರಲಾಗದು. ಅಲ್ಲದೆ, ಇಂತಹ ಸಂದರ್ಭದಲ್ಲಿ ಆಸ್ತಿ ಮಾಲೀಕರ ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಅಥವಾ ಮಾರಾಟ ಮಾಡಲು ಮಧ್ಯವರ್ತಿಗಳಿಗೆ ಲಕ್ಷಗಟ್ಟಲೆ ಹಣ ನೀಡಬೇಕಾದ ದುಸ್ಥಿತಿ ಇತ್ತು. ಇದೇ ಕಾರಣಕ್ಕೆ…
ಬೆಂಗಳೂರು: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ಕೇವಲ ಮತಕ್ಕೆ ರಾಜಕಾರಣ ಮಾಡಿದವರಲ್ಲ. ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದು ಹೇಳಿದರು. “ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ…
ಮೈಸೂರು: ಸೆಪ್ಟೆಂಬರ್ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ತುರ್ತು ಪರಿಸ್ಥಿತಿ ಹೇರಿಕೆಗೆ 50 ವರ್ಷ ಸಂದ ಪ್ರಯುಕ್ತ, ಮೈಸೂರಿನ ವಿಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಅಪಾಯಕಾರಿ, ಆದರೆ ಅಧಿಕಾರದಲ್ಲಿ ಇಲ್ಲವಾದರೆ ಇನ್ನಷ್ಟು ಅಪಾಯಕಾರಿ ಎಂದು ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಎಂದು ಹೇಳುತ್ತಾರೆ. ಆದರೆ ಇದೇ ಕಾಂಗ್ರೆಸ್ನವರು ತುರ್ತು ಪರಿಸ್ಥಿತಿ ಹೇರಿದ್ದರು. ಆಗಿನಂತೆ ಈಗ ಯಾವ ಪತ್ರಿಕೆ ಮುಚ್ಚಿದ್ದಾರೆ, ನ್ಯಾಯಾಂಗದ ಮೇಲೆ ಎಲ್ಲಿ ಒತ್ತಡ ಹೇರಿದ್ದಾರೆ, ಯಾವಾಗ ಚುನಾವಣೆ ಮುಂದೂಡಿದ್ದಾರೆ ಎಂದು ತಿಳಿಸಲಿ ಎಂದರು. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಇವರು ಮಕ್ಕಳು ಚುನಾವಣೆಯಲ್ಲಿ ನಿಲ್ಲುವುದನ್ನು ಯಾರೂ ತಡೆದಿಲ್ಲ. ವಿದೇಶಕ್ಕೆ ಹೋಗಿ…
BIG NEWS: ಡಿಸೆಂಬರ್ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ
ಚಿತ್ರದುರ್ಗ: ಕರ್ನಾಟಕದಲ್ಲಿ ಡಿಸೆಂಬರ್ ನಂತ್ರ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಲಿದೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ ಎಂಬುದಾಗಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂಬುದಾಗಿ ಭವಿಷ್ಯ ನುಡಿದರು. 2028ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಬರುತ್ತದೆ ಎಂಬುದಾಗಿ ನಾನು ಹೇಳೋದಿಲ್ಲ. ಆದರೇ ಡಿಸೆಂಬರ್ ವೇಳೆಗೆ ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣೆ ಬರಬಹುದು. ಬಿಜೆಪಿಯು 150 ಶಾಸಕರೊಂದಿಗೆ ಸರ್ಕಾರ ರಚಿಸುವ ಭರವಸೆ ಇದೆ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಒಂದೇ ಒಂದು ಅಭಿವೃದ್ಧಿ ಕೆಲಸವನ್ನೇ ಮಾಡಿಲ್ಲ. ಜನರು ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂಬುದಾಗಿ ತಿಳಿಸಿದರು. ಮತ್ತೊಂದೆಡೆ ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಕೂಡ ಕೆಲವೇ ದಿನಗಳಲ್ಲಿ ಈ ಸರ್ಕಾರ ಪತನವಾಗುತ್ತದೆ. 2026ರಲ್ಲೇ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂಬುದಾಗಿಯೂ ಭವಿಷ್ಯ ನುಡಿದಿದ್ದಾರೆ. ವಿಪಕ್ಷ…
ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳ ಅಡಿಯಲ್ಲಿ ರೈತರಿಗೆ ಆದಾಯ ಹೆಚ್ಚಿಸಿಕೊಳ್ಳೋದಕ್ಕಾಗಿ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ. ಉಚಿತ ತರಬೇತಿಗೆ ರೈತರಾದಂತ ನೀವು ಅರ್ಜಿ ಸಲ್ಲಿಸೋದು ಮರೆಯಬೇಡಿ. ರೈತ ಮತ್ತು ರೈತ ಮಹಿಳೆಯರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಕುರಿತಂತೆ ತರಬೇತಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನೀಡಲಾಗುತ್ತದೆ. ಶುದ್ಧ ಹಾಲು ಉತ್ಪಾದನೆ, ಮಾಂಸ, ಮೊಟ್ಟೆ ಉತ್ಪಾದನೆ, ಜಾನುವಾರ ಉತ್ಪನ್ನಗಳ ಮೌಲ್ಯವರ್ಧನೆ, ಪ್ರಾಣಿ ಕಲ್ಯಾಣ ಯೋಜನೆಗಳು, ಕೊಟ್ಟಿಗೆಗಳ ನೈರ್ಮಲೀಕರಣ, ಜಾನುವಾರುಗಳಲ್ಲಿ ಬೆದೆ ಗುರುತಿಸುವಿಕೆ, ತಳಿ ಸಂವರ್ಧನಾ ಕ್ರಮಗಳು, ಸುಧಾರಿತ ಮೇವುಗಳ ಮಹತ್ವ ಮತ್ತು ನಿರ್ವಹಣೆ, ಸಮತೋಲನ ಆಹಾರ ತಯಾರಿಕೆ, ಜಾನುವಾರ ರೋಗಗಳ ನಿಯಂತ್ರಣ, ಜಂತುಹುಳು ನಿವಾರಣೆ ಇತ್ಯಾದಿಗಳ ಬಗ್ಗೆ ರೈತರಿಗೆ ತರಬೇತಿಯನ್ನು ಆ ಮೂಲಕ ಅರಿವು ಮೂಡಿಸುವಂತ ಕೆಲಸ ಮಾಡಲಾಗುತ್ತದೆ. ಯಾರಿಗೆ ತರಬೇತಿ ನೀಡಲಾಗುವುದು? ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ರೈತರಿಗೆ, ಜಾನುವಾರು ಮಾಲೀಕರಿಗೆ, ಉದ್ಯಮಿಗಳಿಗೆ, ನಿರುದ್ಯೋಗಿ…