Author: kannadanewsnow09

ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿಋತಿ(ರಾಕ್ಷಸ)- ನೈಋುತ್ಯ. ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ. ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ ಕರೆಯುತ್ತಾರೆ. ಈತ ದಕ್ಷಿಣ ದಿಕ್ಕಿನ ಅಧಿಧಿಪತಿ. ಇವನು…

Read More

ನವದೆಹಲಿ: ಎರೋಸ್ ನಲ್ಲಿರುವಂತ ಸ್ವದೇಶ್ ಫ್ಲ್ಯಾಗ್ ಶಿಪ್ ಅಂಗಡಿಯಲ್ಲಿ ಸ್ವದೇಶಿ ಉತ್ಪನ್ನಗಳ ಕುರಿತು ವಿಶೇಷ ಆಚರಣೆ ನಡೆಸಲಾಗುತ್ತಿದೆ. ಈ ವೇಳೆಯಲ್ಲಿ ನೀತಾ ಅಂಬಾನಿಯವರು ನವಿಲು ನೀಲಿ ಬನಾರಸಿ ಸೀರೆಯುಟ್ಟು ಗಮನ ಸೆಳೆದರು. ನೀತಾ ಅಂಬಾನಿ ಭಾರತದ ಕಲಾವಿದರು ಮತ್ತು ಕುಶಲಕರ್ಮಿಗಳ ಗೌರವಾರ್ಥವಾಗಿ ಈರೋಸ್‌ನಲ್ಲಿರುವ ಸ್ವದೇಶ್ ಫ್ಲ್ಯಾಗ್‌ಶಿಪ್ ಅಂಗಡಿಯಲ್ಲಿ ವಿಶೇಷ ಆಚರಣೆಯನ್ನು ಆಯೋಜಿಸಿದ್ದರು. ಅವರು ಸ್ವದೇಶ್‌ನ ನವಿಲು ನೀಲಿ ಬನಾರಸಿ ಸೀರೆಯನ್ನು ಧರಿಸಿದ್ದರು. ಇದು ಸಂಕೀರ್ಣವಾದ ಮೀನಾ ಲಕ್ಷಣಗಳು ಮತ್ತು ಸಾಂಪ್ರದಾಯಿಕ ಕಧುವಾ ನೇಯ್ಗೆ ತಂತ್ರವನ್ನು ಒಳಗೊಂಡಿತ್ತು. ಅವರ ಕಸ್ಟಮ್ ಮನೀಶ್ ಮಲ್ಹೋತ್ರಾ ಬ್ಲೌಸ್ ಪೋಲ್ಕಿ ಬಾರ್ಡರ್, ಕೈಯಿಂದ ಚಿತ್ರಿಸಿದ ದೇವತೆ ಗುಂಡಿಗಳು ಮತ್ತು ಅವರ ವೈಯಕ್ತಿಕ ಸಂಗ್ರಹದಿಂದ ವಿಂಟೇಜ್ ಸ್ಪಿನೆಲ್ ಟಸೆಲ್ ಅನ್ನು ಹೊಂದಿತ್ತು. ಅವರು 100 ವರ್ಷಗಳಿಗಿಂತ ಹಳೆಯದಾದ ಪ್ರಾಚೀನ ಕುಂದನ್ ಪೋಲ್ಕಿ ಕಿವಿಯೋಲೆಗಳು, ಸ್ವದೇಶ್‌ನಿಂದ ಕರಕುಶಲ ಜಾಡೌ ಪಕ್ಷಿ ಉಂಗುರ ಮತ್ತು ಅವರ ತಾಯಿಯ ಪರಂಪರೆಯ ಹಾತ್ ಫೂಲ್ – ಅಮೂಲ್ಯವಾದ ಕುಟುಂಬ ವಸ್ತುಗಳನ್ನು ಧರಿಸಿ, ಎಲ್ಲರ ನೋಟವನ್ನು…

Read More

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಅಕ್ಟೋಬರ್‌ 24ರಂದು ಕೆಇಎ ಪ್ರಕಟಿಸಿದ್ದ ತಾತ್ಕಾಲಿಕ ಫಲಿತಾಂಶ ವನ್ನು ಹೈಕೋರ್ಟ್ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರಿಷ್ಕೃತ ತಾತ್ಕಾಲಿಕ ಫಲಿತಾಂಶಕ್ಕೆ ಏನಾದರು ಆಕ್ಷೇಪಣೆಗಳು ಇದ್ದಲ್ಲಿ ಡಿ.7ರಂದು ಮಧ್ಯಾಹ್ನ 3ಗಂಟೆಯೊಳಗೆ ಇ-ಮೇಲ್ ( keauthority-ka@nic.in ) ಮೂಲಕ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ. ಡಿ. 8ರಂದು ಬೆಳಿಗ್ಗೆ‌ 11ರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು‌ ಹಂಚಿಕೆಯಾದವರು ಡಿ.10ರೊಳಗೆ ಶುಲ್ಕ ಪಾವತಿಸಬೇಕು (ಈಗಾಗಲೇ ಪಾವತಿಸಿರುವ ಶುಲ್ಕವನ್ನು ಕಡಿತಗೊಳಿಸುವ ಮೂಲಕ). ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು, ಡಿ.11ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿಗಳು ಈಗಾಗಲೇ ದಾಖಲಿಸಿರುವ ಇಚ್ಚೆ/ಆಯ್ಕೆಗಳನ್ನು ಪರಿಗಣಿಸಿ ಸೀಟು ಹಂಚಿಕೆ ಮಾಡಲಾಗಿದೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಸಂಬಂಧಪಟ್ಟ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಡಿ.7ರ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 07.12.2025 ರ ಭಾನುವಾರದಂದು ತುರ್ತು ಕೆಲಸದ ನಿಮಿತ್ತ ಎಫ್-7 ಮಂಗಳಬೀಸು, ಚಂದ್ರಮಾವಿನಕೊಪ್, ಇಂಡಸ್ಟ್ರಿಯಲ್ ಏರಿಯಾ, ಕೆ.ಎ.ಐ.ಡಿ.ಬಿ ಇಂಡಸ್ಟ್ರಿಯಲ್ ವಸಾಹತು, ಅಗ್ರಹಾರ, ಹೆರಿಗೆ ಆಸ್ಪತ್ರೆ ಸುತ್ತ ಮುತ್ತ ಬೆಳಲಮಕ್ಕಿ, ಬಸವನಹೊಳೆ, ಜಂಬುಗಾರು ತ್ಯಾಗರ್ತಿ ಕ್ರಾಸ್ ಹಾಗೂ ಗ್ರಾಮೀಣ ಭಾಗದ ಎಫ್-18 ಬಳಸಗೋಡು ಪೀಡರ್‌ ವ್ಯಾಪ್ತಿಯ ವಾಲ, ಬಳಸಗೋಡು, ಎಳವರಸೆ, ಜೋಗಿನಗದ್ದೆ ಹಾಗೂ ಪುರ್ಲೇಮಕ್ಕಿ ಪ್ರದೇಶಗಳಿಗೆ ಬೆಳಗ್ಗೆ 10:00 ಘಂಟೆಯಿಂದ ಸಂಜೆ 5:00 ಘಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದಿದೆ. https://kannadanewsnow.com/kannada/aviation-ministry-orders-uniform-ticket-prices-for-all-airlines/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/

Read More

ನವದೆಹಲಿ: ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರವನ್ನು ಏರ್ ಲೈನ್ಸ್ ಕಂಪನಿಗಳು ಹೆಚ್ಚಳ ಮಾಡಿದ್ದವು. ಇವುಗಳಿಗೆ ಶಾಕ್ ಎನ್ನುವಂತೆ ಎಲ್ಲಾ ಐರ್ ಲೈನ್ಸ್ ಗಳಿಗೆ ಏಕರೂಪದ ದರವನ್ನು ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶಿಸಿದೆ. ಹೌದು ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿರೋ ಏರ್ ಲೈನ್ಸ್ ಗಳಿಗೆ ವಿಮಾನಯಾನ ಸಚಿವಾಲಯ ಶಾಕ್ ನೀಡಿದೆ. ಏಕರೂಪದ ದರ ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ ಮಾಡಿದೆ. ಎಲ್ಲಾ ಏರ್ ಲೈನ್ಸ್ ಗಳಿಗೆ ಅನ್ವಯವಾಗುವಂತೆ ಏಕರೂಪದ ದರವನ್ನು ನಿಗದಿಗೊಳಿಸಲಾಗಿದೆ. ಹೀಗಾಗಿ ವಿಮಾನ ರದ್ದುಗೊಂಡು, ಟಿಕೆಟ್ ದರ ಏರಿಕೆಯ ಶಾಕ್ ನಲ್ಲಿ ಇದ್ದಂತ ಪ್ರಯಾಣಿಕರಿಗೆ ವಿಮಾನಯಾನ ಸಚಿವಾಲಯವು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. https://kannadanewsnow.com/kannada/i-will-not-be-a-minister-in-dk-shivakumars-cabinet-if-he-becomes-cm-former-minister-kn-rajanna/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/

Read More

ತುಮಕೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ, ನನಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದಾದರೇ ಬೇಡವೇ ಬೇಡ ಎಂಬುದಾಗಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಭಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟರೇ ಬೇಡವೇ ಬೇಡ. ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ. ಹಾಗಂತ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂಬುದಾಗಿ ಹೇಳಿದ್ದಾರೆ. ರಾಜಣ್ಣಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರ ಬೇಡಿಕೆ ವಿಚಾರವಾಗಿ ಮಾತನಾಡಿ, ಯಾರು ನನ್ನ ಪರವಾಗಿ ಹೋರಾಟ ಮಾಡ್ತಿದ್ದಾರೋ ಅವರಿಗೆ ಚಿರಋಣಿ. ನನಗೆ ಅಧಿಕಾರದ ದಾಹ ಇಲ್ಲ ಎಂಬುದಾಗಿ ತಿಳಿಸಿದರು. ನಾನು ಮೊದಲೇ ಹೇಳಿದ್ದೇನೆ ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ. ಮತ್ತೆ ಅದನ್ನೇ ಹೇಳ್ತೀನಿ. ನನ್ನ ಪರ ಅಭಿಪ್ರಾಯ, ವಿಶ್ವಾಸ ವ್ಯಕ್ತಪಡಿಸಿದವರಿಗೆ ಅಭಾರಿಯಾಗಿರುವೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ. ಅಧಿಕಾರ…

Read More

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಕೃತ್ಯಗಳಲ್ಲಿ ಪೊಲೀಸರೇ ಭಾಗಿಯಾಗಿ, ಇಲಾಖೆಗೆ ಕೆಟ್ಟ ಹೆಸರು ತರುವಂತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇವುಗಳನ್ನು ನಿಯಂತ್ರಿಸಲು ಖಡಕ್ ಆದೇಶವನ್ನು ಡಿಜಿ ಮತ್ತು ಐಜಿಪಿ ಸಲೀಂ ಮಾಡಿದ್ದಾರೆ. ಅದರಂತೆ ಇನ್ಮುಂದೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಬಿದ್ರೆ, ಕಾನೂನು ಕ್ರಮ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರಾದಂತ ಡಾ.ಎಂ.ಎ ಸಲೀಂ ಅವರು ಆದೇಶ ಹೊರಡಿಸಿದ್ದು, ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು ತೀರಾ ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರವೃತ್ತಿಗಳು ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆಯಾಗುವುದರೊಂದಿಗೆ ಇಲಾಖೆಯನ್ನು ಅಪಕೀರ್ತಿಗೆ ಗುರಿ ಮಾಡುತ್ತವೆ ಎಂಬುದಾಗಿ ಹೇಳಿದ್ದಾರೆ. ಈ ರೀತಿಯ ದುಷ್ಕೃತ್ಯಗಳು ಸಾರ್ವಜನಿಕರಿಗೆ ಪೊಲೀಸರ ಮೇಲಿನ ನಂಬಿಕೆಯನ್ನು ಕುಂದಿಸುವುದಲ್ಲದೆ, ಕಾನೂನು ಜಾರಿಯ ಸಂಪೂರ್ಣ ವ್ಯವಸ್ಥೆಯ ಮೂಲ ಸಿದ್ಧಾಂತಗಳನ್ನೇ ಸಂಶಯಾಸ್ಪದವಾಗಿ ನೋಡುವಂತಹ ಸನ್ನಿವೇಶವನ್ನು ನಿರ್ಮಾಣ ಮಾಡುತ್ತದೆ. ಆದ್ದರಿಂದ ಇಂತಹ ಘಟನೆಗಳನ್ನು ಸಮರ್ಥವಾಗಿ ತಡೆಗಟ್ಟಿ, ಹೊಣೆಗಾರಿಕೆಯನ್ನು…

Read More

ಬೆಂಗಳೂರು: ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳೂ ವಿಸ್ತರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸರ್ಕಾರಿ ನೌಕರರು, ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆಯನ್ನು ಜಾರಿಗೊಳಿಸಿರೋದಕ್ಕೆ ನೌಕರರ ಸಂಘದ ಪರವಾಗಿ ಧನ್ಯವಾದವನ್ನು ಸಲ್ಲಿಸಿದ್ದಾರೆ. ರಾಜ್ಯಾಧ್ಯಂತ ಇರುವಂತ ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರು, ಲಿಪಿಕ ವೃಂದದ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವಂತೆ ತಮ್ಮಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರು ಮನವಿ ಮಾಡಿಕೊಂಡಿರೋದಾಗಿ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ…

Read More

ನವದೆಹಲಿ: ಇಂಡಿಗೋ ವಿಮಾನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡುತ್ತಿರುವುದರಿಂದ, ನಾಗರಿಕ ವಿಮಾನಯಾನ ಸಚಿವಾಲಯವು ಶನಿವಾರ ವಿಮಾನಯಾನ ಸಂಸ್ಥೆಗೆ ನಿರ್ದೇಶನ ನೀಡಿದ್ದು, ರದ್ದಾದ ವಿಮಾನಗಳ ಟಿಕೆಟ್ ಮರುಪಾವತಿ ಪ್ರಕ್ರಿಯೆಯನ್ನು ಭಾನುವಾರ ಸಂಜೆಯೊಳಗೆ ಪೂರ್ಣಗೊಳಿಸಬೇಕು ಮತ್ತು ಪ್ರಯಾಣಿಕರಿಂದ ಬೇರ್ಪಟ್ಟ ಸಾಮಾನುಗಳನ್ನು ಮುಂದಿನ ಎರಡು ದಿನಗಳಲ್ಲಿ ತಲುಪಿಸುವಂತೆ ನೋಡಿಕೊಳ್ಳಬೇಕು. ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಶನಿವಾರ 1,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿ ಐದನೇ ದಿನಕ್ಕೆ ಅಡ್ಡಿಪಡಿಸಿದ ಒಂದು ದಿನದ ನಂತರ, ಮರುಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಅಥವಾ ಅನುಸರಣೆಯ ಕೊರತೆಯು ತಕ್ಷಣದ ನಿಯಂತ್ರಕ ಕ್ರಮಕ್ಕೆ ಕಾರಣವಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ರದ್ದಾದ ಅಥವಾ ಅಡ್ಡಿಪಡಿಸಿದ ಎಲ್ಲಾ ವಿಮಾನಗಳಿಗೆ ಮರುಪಾವತಿ ಪ್ರಕ್ರಿಯೆಯನ್ನು ಭಾನುವಾರ ರಾತ್ರಿ 8 ಗಂಟೆಯೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ರದ್ದತಿಯಿಂದ ಪ್ರಯಾಣ ಯೋಜನೆಗಳು ಪರಿಣಾಮ ಬೀರಿದ ಪ್ರಯಾಣಿಕರಿಗೆ ಯಾವುದೇ ಮರುಹೊಂದಿಸುವ ಶುಲ್ಕವನ್ನು ವಿಧಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ” ಎಂದು ಅದು ಹೇಳಿದೆ. ಶನಿವಾರ, ವಿವಿಧ ವಿಮಾನ…

Read More

ಮೈಸೂರು: ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿ ಮೈಸೂರು–ಟ್ಯುಟಿಕೊರಿನ್ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 06283: ಮೈಸೂರು–ಟ್ಯುಟಿಕೊರಿನ್ ವಿಶೇಷ ಎಕ್ಸ್‌ಪ್ರೆಸ್ ಈ ರೈಲು 2025ರ ಡಿಸೆಂಬರ್ 23 ಮತ್ತು 27ರಂದು (ಮಂಗಳವಾರ ಮತ್ತು ಶನಿವಾರ) ಸಂಜೆ 18:35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 11:00ಕ್ಕೆ ಟ್ಯುಟಿಕೊರಿನ್ ತಲುಪಲಿದೆ. ಮರಳಿ ಸಂಚರಿಸುವ ರೈಲು ಸಂಖ್ಯೆ 06284: ಟ್ಯುಟಿಕೊರಿನ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ 2025ರ ಡಿಸೆಂಬರ್ 24 ಮತ್ತು 28ರಂದು (ಬುಧವಾರ ಮತ್ತು ಭಾನುವಾರ) ಮಧ್ಯಾಹ್ನ 14:00ಕ್ಕೆ ಟ್ಯುಟಿಕೊರಿನ್ ನಿಂದ ಹೊರಟು, ಮರುದಿನ ಬೆಳಗ್ಗೆ 07:45ಕ್ಕೆ ಮೈಸೂರು ತಲುಪಲಿದೆ. ಮಾರ್ಗಮಧ್ಯೆ ಈ ವಿಶೇಷ ರೈಲು ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಕೆಂಗೇರಿ, ಕೆ.ಎಸ್.ಆರ್. ಬೆಂಗಳೂರು, ಬೆಂಗಳೂರು ಕ್ಯಾಂಟ್, ಹೊಸೂರು, ಧರ್ಮಪುರಿ, ಸೇಲಂ, ನಮಕ್ಕಲ್, ಕರೂರು, ದಿಂಡಿಗಲ್, ಮಧುರೈ, ವಿರುದುನಗರ, ಸತೂರ್, ಕೋವಿಲ್ಪಟ್ಟಿ ಮತ್ತು ಟುಟಿಮೇಲುರ್ ಸ್ಟೇಷನ್‌ಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲು…

Read More