Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಕುಗ್ರಾಮವಾದ ತಗಡೂರಿನಲ್ಲಿ ಪ್ರೌಢಶಾಲೆ ಪ್ರಾರಂಭವಾಗಿ 40 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಅಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ ಸೇರಿ, ಇದೇ ಸೆ.19ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದಂತ ಶಾಲೆ ಕೂಡ ಆಗಿದೆ. ಶಾಲೆಯಲ್ಲಿ ಪಾಠ ಹೇಳಿಕೊಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಭದ್ರ ಅಡಿಪಾಯ ಹಾಕಿದ ಸುಮಾರು 30 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಹಳೆ ವಿದ್ಯಾರ್ಥಿಗಳ ವೇದಿಕೆ ಸಂಘಟಿತವಾದ ಪ್ರಯತ್ನ ಮಾಡಿದೆ. ನಾನೂ ಈ ಶಾಲೆಯ ಹಳೆಯ ವಿದ್ಯಾರ್ಥಿ ಎನ್ನುವುದು ಹೆಮ್ಮೆ ಮತ್ತು ಹೆಗ್ಗಳಿಕೆ. ಇಂದು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ನಾ ಮುಂದು, ತಾ ಮುಂದು ಎಂದು ನಿತ್ಯವೂ ಒಂದೇ ಊರಿಗೆ ಆರೇಳು ಬಸ್ಗಳು ಬರುತ್ತವೆ. ಅಂದು ಪ್ರೌಢಶಾಲೆ ವಿದ್ಯಾಭ್ಯಾಸ ಪಡೆಯಲು ಆರೇಳು ಕಿ.ಮೀ. ದೂರದಲ್ಲಿರುವ ನುಗ್ಗೇಹಳ್ಳಿ, ಬಾಗೂರು ಅಥವಾ ಚಿಕ್ಕೋನಹಳ್ಳಿ ಗೇಟ್ಗೆ ಹೋಗಬೇಕಾದ…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಚಾಲಕ ರಾಜೀವ್ ಬೀರಸಾಲ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇಂತಹ ಚಾಲಕನ ಸಾವಿಗೆ ಕಂಬನಿ ಮಿಡಿದಿರುವಂತ ರಾಮಲಿಂಗಾರೆಡ್ಡಿ, ಅವಲಂಬಿತರಿಗೆ ನೌಕರಿ, ಆರ್ಥಿಕ ನೆರವಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ರಾಜೀವ್ ಬೀರಸಾಲ, ಚಾಲಕ- ಕಂ-ನಿರ್ವಾಹಕ ಬಿಲ್ಲೆ. ಸಂಖ್ಯೆ. 2469,ವಯಸ್ಸು-56 ವರ್ಷ, ಸೇವೆಗೆ ಸೇರಿದ ದಿನಾಂಕ: 23.02.2005, ಇವರು ಹರಿಹರ ಘಟಕದ ಅನುಸೂಚಿ ಸಂಖ್ಯೆ 47 BA (ರಾಜಹಂಸ )ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ಹೃದಯಾಘಾತವಾಗಿರುತ್ತದೆ. ಆದರೂ ಬಸ್ಸಿನಲ್ಲಿರುವ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ ಎಂದಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೃತ ಚಾಲಕರ ಆತ್ಮಕ್ಕೆ ಶಾಂತಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಂತ ಗುರುಕೃಷ್ಣ ಶಣೈ ಅವರನ್ನು ಎತ್ತಂಗಡಿ ಮಾಡಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ. ಈ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಸಿಇಓ ಆದೇಶ ಹೊರಡಿಸಿದ್ದು, ಶಿವಪುಕಾಶ್.ಬಿ.ಎಲ್., ಸಹಾಯಕ ಕೃಷಿ ನಿರ್ದೇಶಕರು, ಸಾಗರ ಇವರಿಗೆ ಆಡಳಿತಾತ್ಮಕ ಹಿತ ದೃಷ್ಟಿಯಿಂದ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಸಾಗರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿ ಆದೇಶಿಸಿದ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತ್, ಸಾಗರ ಹುದ್ದೆಯ ಪುಭಾರವನ್ನು ಗುರುಕೃಷ್ಣ ಎಂ ಶೆಣೈ, ಕಾರ್ಯನಿರ್ವಾಹಕ ಅಧಿಕಾರಿ(ಪ್ರಭಾರ) ಇವರಿಂದ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ…
ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ…
ನವದೆಹಲಿ: ಸೋಮವಾರ ಆದಾಯ ತೆರಿಗೆ ಇಲಾಖೆಯು 2025-26ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಗಡುವನ್ನು ಒಂದು ದಿನ ವಿಸ್ತರಿಸಿದೆ. ಅದನ್ನು ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 16ಕ್ಕೆ ಬದಲಾಯಿಸಲಾಗಿದೆ. ಆರಂಭದಲ್ಲಿ ಜುಲೈ 31 ಕ್ಕೆ ನಿಗದಿಪಡಿಸಲಾಗಿದ್ದ ಗಡುವನ್ನು ಈಗಾಗಲೇ ಒಮ್ಮೆ ವಿಸ್ತರಿಸಲಾಗಿತ್ತು. 2025-26ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಜುಲೈ 31, 2025 ಕ್ಕೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ಸೆಪ್ಟೆಂಬರ್ 15, 2025 ಕ್ಕೆ ವಿಸ್ತರಿಸಲಾಗಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು ಈಗ ಸೆಪ್ಟೆಂಬರ್ 16, 2025 ಕ್ಕೆ ವಿಸ್ತರಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ನಲ್ಲಿನ ನಿರಂತರ ತಾಂತ್ರಿಕ ದೋಷಗಳಿಂದಾಗಿ ಅನೇಕ ತೆರಿಗೆದಾರರು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಣಗಾಡಿದ ನಂತರ ಈ ವಿಸ್ತರಣೆ ಮಾಡಲಾಗಿದೆ. ಫೈಲಿಂಗ್ ಉಪಯುಕ್ತತೆಗಳಲ್ಲಿ ಅಗತ್ಯ ನವೀಕರಣಗಳು ಮತ್ತು ಬದಲಾವಣೆಗಳನ್ನು ಸುಗಮಗೊಳಿಸಲು, ಸೆಪ್ಟೆಂಬರ್ 16, 2025 ರಂದು ಬೆಳಿಗ್ಗೆ 12:00 ರಿಂದ 2:30 ರವರೆಗೆ ಇ-ಫೈಲಿಂಗ್ ಪೋರ್ಟಲ್…
ಮಂಡ್ಯ: ಸಾರ್ವಜನಿಕರೆದುರು ಮಾನವೀಯತೆಯನ್ನು ನ್ಯಾಯಾಧೀಶರೊಬ್ಬರು ಮೆರಿದ್ದಾರೆ. ಕೋರ್ಟ್ ಮೆಟ್ಟಿಲೇರಿ ಬರಲಾಗದೇ ಇದ್ದಂತ ವೃದ್ಧನ ಬಳಿಗೆ ತೆರಳಿ, ವಿಚಾರಣೆ ನಡೆಸಿ, ತೀರ್ಪು ನೀಡಿ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರರಾದಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ JMFC ನ್ಯಾಯಾಲಯದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ನಡೆಯಲಾಗದ ಸ್ಥಿತಿಯಲ್ಲಿದ್ದ ವೃದ್ದನ ಬಳಿಗೆ ಬಂದು ನ್ಯಾಯಾಧೀಶೆ ವಿಚಾರಣೆ ಮಾಡಿದ್ದಾರೆ. ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಪಘಾತ ವಿಮಾ ಸಂಬಂಧ ವಿಚಾರಣೆಗೆ ಬಂದಿದ್ದ ವೃದ್ದ ಮಾದೇಗೌಡ. ಅಪಘಾತವಾಗಿ ಕಾಲು ಸ್ವಾಧೀನವಿಲ್ಲದೆ ನಡೆಯಲು ಸಾಧ್ಯವಾಗದೆ ವೃದ್ಧರು ಕುಳಿತಿದ್ದರು. ಕೋರ್ಟ್ ಮೇಲಂತಸ್ಥಿನ ಕಟ್ಟಡದಲ್ಲಿ ನಡೆಯುತ್ತಿದ್ದ ಕೋರ್ಟ್ ಕಲಾಪ ನಡೆಯುತ್ತಿತ್ತು. ವೃದ್ಧರ ವಿಚಾರಣೆ ಬಂದಾಗ ಅವರು ಬಾರದ ಕಾರಣ ತಿಳಿದಂತ ನ್ಯಾಯಾಧೀಶೆ ಹರಿಣಿ ಅವರು, ಕೋರ್ಟ್ ನ ವಿಚಾರಣೆ ವೇಳೆ ಸಂತ್ರಸ್ಥನ ಮಾಹಿತಿ ತಿಳಿದು ಕೆಳಗೆ ಇಳಿದು ಬಂದು ವಿಚಾರಿಸಿದರು. ಅವರ ಅಹವಾಲು ಕೇಳಿದಂತ ನ್ಯಾಯಾಧೀಶೆ ಹರಣಿ ಅವರು ತಕ್ಷಣವೇ ಸ್ಥಳದಲ್ಲಿ ವಿಮಾ ಕಂಪನಿಯಿಂದ ಸಂತ್ರಸ್ಥ ವ್ಯಕ್ತಿಗೆ ಪರಿಹಾರದಲ್ಲಿ 2.5 ಲಕ್ಷ ಹಣ…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR) ಅನುಷ್ಠಾನಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸರ್ಕಾರಿ ನೌಕರರ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ E-SR ನಲ್ಲಿಯೇ ಮುಂದುವರೆಸಲು ತಿಳಿಸಲಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR)ನಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ, ಸೇವಾ ವಹಿಯನ್ನು Electronic Service Register (ESR) ನಲ್ಲಿ ಅನುಷ್ಠಾನಗೊಳಿಸುವ ಕುರಿತು ಈಗಾಗಲೇ ಆನ್ ಲೈನ್ನಲ್ಲಿ, ಹೆಚ್.ಆರ್.ಎಂ.ಎಸ್ -2 ನಿಂದ ತರಬೇತಿ ನೀಡಲಾಗಿರುತ್ತದೆ. ಆದರೂ ಸಹ ಇದುವರೆಗೂ ಶಾಲಾ ಶಿಕ್ಷಣ ಇಲಾಖೆ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 16.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡ್ನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. 66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.09.2025 (ಬುಧವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ,…
ನವದೆಹಲಿ: ದೇಶದಲ್ಲಿ, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಎರಡು ರಾಷ್ಟ್ರೀಯ ಶಾಲಾ ಮಂಡಳಿಗಳಿವೆ, ಅವುಗಳೆಂದರೆ CBSE ಮತ್ತು NIOS. CBSE ಮುಖಾಮುಖಿ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದ್ದರೆ, NIOS ಮುಕ್ತ ಮತ್ತು ದೂರ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದೆ. CBSE ನಡೆಸುವ ಮಂಡಳಿ ಪರೀಕ್ಷೆಗಳಲ್ಲಿ ಹಾಜರಾಗಲು ಅಗತ್ಯವಾದ ಅವಶ್ಯಕತೆಗಳು ಈ ಕೆಳಗಿನಂತಿವೆ. 1. X ತರಗತಿ ಮತ್ತು XII ತರಗತಿಗಳು ಕ್ರಮವಾಗಿ IX ಮತ್ತು X ತರಗತಿ ಮತ್ತು XII ಮತ್ತು XII ತರಗತಿಗಳನ್ನು ಒಳಗೊಂಡಿರುವ ಎರಡು ವರ್ಷಗಳ ಕಾರ್ಯಕ್ರಮವಾಗಿದೆ. ಅದರಂತೆ, ಪರೀಕ್ಷೆಗಳಿಗೆ ಹಾಜರಾಗಲು ಅರ್ಹತೆ ಪಡೆಯಲು ಎಲ್ಲಾ ವಿಷಯಗಳು ವಿದ್ಯಾರ್ಥಿಯು 2 ವರ್ಷಗಳ ಕಾಲ ಅಧ್ಯಯನ ಮಾಡಿರಬೇಕು. 2. ವಿದ್ಯಾರ್ಥಿಗಳು ಕನಿಷ್ಠ 75% ಹಾಜರಾತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. 3. CBSE ನೀಡುವ ಎಲ್ಲಾ ವಿಷಯಗಳಲ್ಲಿ, ಆಂತರಿಕ ಮೌಲ್ಯಮಾಪನವು NEP-2020 ರ ಪ್ರಕಾರ ಮೌಲ್ಯಮಾಪನದ ಕಡ್ಡಾಯ ಅವಿಭಾಜ್ಯ ಅಂಗವಾಗಿದೆ. ಇದು 2 ವರ್ಷಗಳ ದೀರ್ಘ ಪ್ರಕ್ರಿಯೆಯಾಗಿದೆ. ಒಬ್ಬ ವಿದ್ಯಾರ್ಥಿ ಶಾಲೆಗೆ ಹೋಗದಿದ್ದರೆ,…