Author: kannadanewsnow09

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ತಿಳಿಸಿದರು. ಪರಿಷತನಲ್ಲಿ ಡಿ.08ರಂದು ಪ್ರಶ್ನೋತ್ತರ ವೇಳೆಯಲ್ಲಿ, ಪರಿಷತ್ ಸದಸ್ಯರಾದ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೇಳಿದ್ದಿಷ್ಟು; 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲುಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ…

Read More

ಬೆಳಗಾವಿ ಸುವರ್ಣಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ಕೃಷ್ಣ ಮೃಗಗಳು ‘ಹೆಮರಾಜಿಕ್ ಸೆಫ್ಟಿಸೆಮಿಯಾ’ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಮೇಲ್ನೋಟಕ್ಕೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ ಎಂದರು. ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಮೃತಪಟ್ಟ ಪ್ರಕರಣದಲ್ಲಿ, ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೈವಿಕ ಸಂಸ್ಥೆ, ತಂಡವು ಹೆಬ್ಬಾಳ, ಬೆಂಗಳೂರು ಇಲ್ಲಿಂದ ನುರಿತ ಪಶುವೈದ್ಯಾಧಿಕಾರಿ ಹಾಗೂ ತಜ್ಞರ ಮೃಗಾಲಯಕ್ಕೆ ಭೇಟಿ ನೀಡಿ ಮೃತ ಪ್ರಾಣಿಗಳನ್ನು ಪರಿಶೀಲಿಸಿದ್ದು, ಸಾವಿನ ಕಾರಣ ಪತ್ತೆ ಹಚ್ಚಲು ಮೃತಪಟ್ಟ ಪ್ರಾಣಿಗಳ ಮಾದರಿಯನ್ನು (Blood samples and organs) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ…

Read More

ಬೆಳಗಾವಿ ಸುವರ್ಣಸೌಧ: : ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 13(139)ರ ಮೇಲಿನ ಚರ್ಚೆಯ ವೇಳೆ ಸದಸ್ಯರಾದ ಎಂ ನಾಗರಾಜು ಅವರು ವಿಷಯ ಪ್ರಸ್ತಾಪಿಸಿ, ತಪ್ಪಿತಸ್ಥ ವೈದ್ಯರು‌ ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಿಮ್ಸ್ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರ ನಿರ್ಲಕ್ಷ್ಯದಿಂದ ಒಬ್ಬ ರೋಗಿಯ ಹೊಟ್ಟೆಯ ಗಡ್ಡೆ ಬದಲಿಗೆ ಕರುಳನ್ನು ತೆಗೆದು ಹಾಕಲಾಗಿದೆ ಎಂದು ಸುದ್ದಿಯಾಗಿರುವದು ಸರ್ಕಾರದ ಗಮನಕ್ಕೆ ಬಂದಿದೆ. ಈ ಪ್ರಕರಣದ ಬಗ್ಗೆ ಪರಿಶೀಲಿಸಲಾಗಿ, ರೋಗಿಯು ದೀರ್ಘಕಾಲದ ಮದ್ಯವ್ಯಸನಿ ಹಾಗೂ ತಂಬಾಕು ಅಗಿಯುವ ಇತಿಹಾಸವನ್ನು ಹೊಂದಿದ್ದು, ರೋಗಿಗೆ ಅಪೇಂಡಿಕ್ಸ್ ಕರುಳಿನ ರಂದ್ರ ಇರುವುದು ತಾಲ್ಲೂಕ…

Read More

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ. ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಇಂಥ ಮನಃಸ್ಥಿತಿಯೇ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು. ಈ ಬಗ್ಗೆ ತಮ್ಮನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ. ಮಹಾದೇವಪ್ಪ ಅವರಿಗೆ ತಿರುಗೇಟು ಕೊಟ್ಟ ಸಚಿವರು; ಒಳ್ಳೆಯದು, ಸದ್ವಿಚಾರಗಳನ್ನು ಚರ್ಚೆ ಮಾಡುವುದು, ಮಕ್ಕಳಿಗೆ ಒಳ್ಳೆಯ…

Read More

ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದರು. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ…

Read More

ಬೆಳಗಾವಿ : ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ತಮಗೂ ನೋವು ತಂದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹೊರ ನೋಟಕ್ಕೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ 24 ಗಂಟೆಗಳಲ್ಲಿ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಸೋಂಕು ತಗುಲಿದ ಕೆಲವೇ ಗಂಟೆಗಳಲ್ಲಿ ಸಾವು ಸಂಭವಿಸುವ ಕಾರಣ ಹೆಚ್ಚಿನ ಸಂಖ್ಯೆ ಕೃಷ್ಣಮೃಗ ಮೃತಪಟ್ಟಿದೆ ಎಂಬುದು ತಜ್ಞ ವೈದ್ಯರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು. ಕಿರು ಮೃಗಾಲಯದಲ್ಲಿ ನವೆಂಬರ್ 13ರಿಂದ 17ರವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಶುವೈದ್ಯಕೀಯ ಜೈವಿಕ…

Read More

ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ ಎಂದು ಟೀಕಿಸಿದರು. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆದ್ದರೇ, ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿ ಎಸ್ ಅರುಣ್ ಅವರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶದಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಡಿ ಎಸ್ ಅರುಣ್ ಅವರು ನೂತನವಾಗಿ ಶಿವಮೊಗ್ಗ ವಲಯ ಸಂಚಾಲಕರಾಗಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಗೆಲುವಿಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಲಯದಲ್ಲಿನ ಕ್ರಿಕೆಟ್ ಅಭಿವೃದ್ಧಿ, ತರಬೇತಿ ಮತ್ತು ಪ್ರತಿಭೆಗಳನ್ನು ಬೆಳೆಸುವುದು, ಪಾರದರ್ಶಕ ಮತ್ತು ಪರಿಣಾಮಕಾರಿ ಆಯ್ಕೆ ಪ್ರಕ್ರಿಯೆ, ಕ್ರಿಕೆಟ್ ಪಂದ್ಯಗಳು ಮತ್ತು ಟೂರ್ನಮೆಂಟ್ ಗಳ ಸಮನ್ವಯ, ಮೂಲಸೌಕರ್ಯ ಅಭಿವೃದ್ಧಿ, ಶಿಸ್ತಿನ ಪಾಲನೆಯ ಮತ್ತು ನಿಯಮಾವಳಿ ಅನುಸರಣೆ ಹೀಗೆ ಹಲವು ಗುರಿಗಳನ್ನು ಹೊಂದಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.…

Read More

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದ ಮೊದಲನೇ ದಿನವಾದ ಇಂದು Noise Pollution (Regulation and Control) Rules, 2000 ಉಲ್ಲಂಘನೆಯ ಕುರಿತು ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅರಣ್ಯ,ಜೀವಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಇಲಾಖೆಯಿಂದ ಉತ್ತರ ವಿಳಂಬವಾಗಿರುವುದಕ್ಕೆ ಅವರು ಅಧಿವೇಶನದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಅನೇಕ ಮಸೀದಿಗಳಲ್ಲಿ ಅಝಾನ್ ವೇಳೆ ಲೌಡ್‌ಸ್ಪೀಕರ್‌ಗಳ ಶಬ್ದಮಟ್ಟ ಡೆಸಿಬೆಲ್ ಮಿತಿಯನ್ನು ಮೀರುತ್ತಿದೆ ಎಂಬ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರ ಈ ಮಹತ್ವದ ಸಾರ್ವಜನಿಕ ಪರಿಸರ ಸಂಬಂಧಿತ ವಿಷಯದಲ್ಲಿ ಗಂಭೀರತೆ ತೋರದೆ ಪ್ರಶ್ನೆಯನ್ನು ಮುಂದೂಡುತ್ತಿರುವುದು ನಿರ್ಲಕ್ಷ್ಯ ಎಂದಿದ್ದಾರೆ. ಡಿ.ಎಸ್.ಅರುಣ್ ಅವರು ಧಾರ್ಮಿಕ ಸ್ಥಳಗಳ ಶಬ್ದಮಟ್ಟ ಉಲ್ಲಂಘನೆಗಳ ಜಿಲ್ಲಾವಾರು ಮಾಹಿತಿ, KSPCB ನಡೆಸಿದ ಪರಿಶೀಲನೆಗಳು, Noise Level Testing ವರದಿ, ಪರವಾನಗಿ ಪರಿಶೀಲನೆ ಹಾಗೂ ಮಿತಿಮೀರಿದ ಶಬ್ದ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸ್ಪಷ್ಟ ಉತ್ತರ ಕೇಳಿದ್ದರು. ಸಾರ್ವಜನಿಕ ಮಹತ್ವದ…

Read More

ಶಿವಮೊಗ್ಗ: ನಿನ್ನೆಯ ಭಾನುವಾರದಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹಳ್ಳಿಯ ವೀರಭದ್ರೇಶ್ವರ ದೇವಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ತಾಳಗುಂದ ಗ್ರಾಮಸ್ಥರು ಶಿರಾಳಕೊಪ್ಪ ಆರ್ ಎಫ್ ಓ ಜಾವೆದ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದಂತ ಅವರು ಪರಿಶೀಲಿಸಿದಾಗ ಚಿರತೆ ಕತ್ತಿನಲ್ಲಿ ಉರುಲು ಇರುವುದು ಕಂಡುಬಂದಿದೆ. ಉರುಲಿನ ಕಾರಣ ಚಿರತೆ ಸಾವನ್ನಪ್ಪಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಪಶುವೈದ್ಯರನ್ನು ಕರೆಸಿದಂತ ಆರ್ ಎಫ್ ಓ ಜಾವೆದ್ ಅವರು ಸ್ಥಳದಲ್ಲೇ ಕಾನೂನಿನ ಅನುಸಾರ ಮರಣೋತ್ತರ ಪರೀಕ್ಷೆಯನ್ನು ಮಾಡಿಸಲಾಗಿದೆ. ಈ ವೇಳೆ ಚಿರತೆ ಮೂರು ನಾಲ್ಕು ದಿನದ ಹಿಂದೆಯೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ ಎನ್ನಲಾಗುತ್ತಿದೆ. ಒಂದು ವಾರ, ಹದಿನೈದು ದಿನಗಳ ಹಿಂದೆಯೇ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆ ಉರುಳಿಗೆ ಬಿದ್ದಿದ್ದು ಎಲ್ಲಿ.? ಇಟ್ಟವರು ಯಾರು ಎನ್ನುವ ನಿಟ್ಟಿನಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…

Read More