Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ತಾತ್ಕಾಲಿಕ ಆಶ್ರಯ ತಾಣಗಳಾಗಿ ಪರಿವರ್ತಿಸಬಹುದಾದ ಬಳಕೆಯಾಗದ ಸರ್ಕಾರಿ ಆಸ್ತಿಗಳನ್ನು ಹುಡುಕಲು ಐದು ನಿಗಮಗಳನ್ನು ಕೇಳಲಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪೂರೈಸಲು ಧಾವಿಸುವಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸೂಚನೆಗಳನ್ನು ನೀಡಿದೆ. ಇದರ ನಡುವೆ ಬೆಂಗಳೂರಲ್ಲಿ ಬೀದಿ ನಾಯಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಳವಾಗಿರುವಂತ ಶಾಕಿಂಗ್ ಮಾಹಿತಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. GBA ಸುಮಾರು 1,000 ನಾಯಿಗಳಿಗೆ ಆಶ್ರಯ ನೀಡಬಹುದು. ಆದರೆ ಅದರ ಸಮೀಕ್ಷೆಯಲ್ಲಿ ನ್ಯಾಯಾಲಯದ ನಿರ್ದೇಶನದ ಪ್ರಕಾರ 3,000 ಕ್ಕೂ ಹೆಚ್ಚು ನಾಯಿಗಳಿಗೆ ಆಶ್ರಯ ಅಗತ್ಯವಿದೆ ಎಂದು ಕಂಡುಬಂದಿದೆ. ಕಳೆದ ತಿಂಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆಗೆದುಹಾಕಿ, ಕ್ರಿಮಿನಾಶಕ ಮತ್ತು ಲಸಿಕೆ ಹಾಕಿದ ನಂತರ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತು. ಬೀದಿ ನಾಯಿಗಳ ಸಂಖ್ಯೆಯನ್ನು ಒದಗಿಸಲು ಮತ್ತು ಪ್ರಾಣಿಗಳ ಪ್ರವೇಶವನ್ನು ತಡೆಯಲು GBA 2,637…
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ ಕೃತಕ ಬುದ್ಧಿಮತ್ತೆ ಸಮಿತಿಯನ್ನು ಪುನರ್ರಚಿಸಿದ್ದಾರೆ. ಉನ್ನತ ನ್ಯಾಯಾಂಗ ಮತ್ತು ಅಧೀನ ನ್ಯಾಯಾಲಯಗಳಲ್ಲಿ AI ಪರಿಕರಗಳ ಅಳವಡಿಕೆ, ಅಭಿವೃದ್ಧಿ ಮತ್ತು ನಿಯೋಜನೆಯನ್ನು ಮುನ್ನಡೆಸುವ ಅಧಿಕಾರವನ್ನು ಅದಕ್ಕೆ ವಹಿಸಿದ್ದಾರೆ ಎಂದು ಬುಧವಾರ ಅಧಿಕೃತ ಹೇಳಿಕೆ ತಿಳಿಸಿದೆ. ಹೇಳಿಕೆಯ ಪ್ರಕಾರ, ಪರಿಷ್ಕೃತ ಸಮಿತಿಯು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸಂಜೀವ್ ಸಚ್ದೇವ, ಕೇರಳ ಹೈಕೋರ್ಟ್ನ ನ್ಯಾಯಮೂರ್ತಿ ರಾಜಾ ವಿಜಯರಾಘವನ್ ವಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿ ಅನೂಪ್ ಚಿತ್ಕಾರ ಮತ್ತು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಅದರ ಸದಸ್ಯರಾಗಿದ್ದಾರೆ. ಸುಪ್ರೀಂ ಕೋರ್ಟ್ನ OSD (ರಿಜಿಸ್ಟ್ರಾರ್) (ತಂತ್ರಜ್ಞಾನ) ಅನುಪಮ್ ಪಾತ್ರಾ ಅವರು ಸಮಿತಿಯ ಸದಸ್ಯ-ಕಾರ್ಯದರ್ಶಿ ಮತ್ತು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ, ಸುಪ್ರೀಂ ಕೋರ್ಟ್ನ ಇ-ಸಮಿತಿಯ ಸದಸ್ಯ (ವ್ಯವಸ್ಥೆಗಳು) ಆಶಿಶ್ ಜೆ ಶಿರಾಧೋಂಕರ್ ಅವರನ್ನು ವಿಶೇಷ ಆಹ್ವಾನಿತರಾಗಿ ಸೇರಿಸಲಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹೀಗಾಗೇ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು. ಮಲಗಿ ಮಲಗಿ ಜನ ಒದ್ದೋಡಿಸುವವರೆಗೂ ಏಳಬೇಡಿ ಎಂಬುದಾಗಿ ಡಿಕೆಶಿಯನ್ನು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು ಎಂಬುದಾಗಿ ವ್ಯಂಗ್ಯವಾಡಿದ್ದಾರೆ. “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ”, ಎಂದು ಸ್ವಾಮಿ ವಿವೇಕಾನಂದರು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನಾಯಕರ ವರಸೆ “ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ” ಎನ್ನುವಂತಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಛೇಡಿಸಿದ್ದಾರೆ. https://twitter.com/RAshokaBJP/status/1998932165023965364 https://kannadanewsnow.com/kannada/another-shock-for-prajwal-revanna-supreme-court-rejects-plea-to-transfer-rape-case-to-another-court/
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಲಾಗಿದೆ. ಅತ್ಯಾಚಾರ ಕೇಸ್ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸದರಿ ಸುತ್ತೋಲೆಗೆ ಹಲವು ಅಂಶಗಳನ್ನು ಸೇರ್ಪಡೆಗೊಳಿಸಬೇಕಿರುವ ಅವಶ್ಯಕತೆಯನ್ನು ಮನಗಂಡು ಈ ಸುತ್ತೋಲೆಯನ್ನು ಕೆಳಂಕಂಡಂತೆ ಸೇರಿಸಲಾಗಿದೆ ಎಂದಿದ್ದಾರೆ. ಸರ್ಕಾರಿ ಪ್ರಾಯೋಜಿತ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರಿಗೆ ಸ್ಮರಣಿಕೆ, ಟ್ರೋಫಿ ಮತ್ತು ಇನ್ನಿತರೇ ಸ್ಮರಣಾರ್ಥ ವಸ್ತುಗಳನ್ನು ನೀಡುವುದು ನಿಯಮಿತ ಅಭ್ಯಾಸವಾಗಿರುತ್ತದೆ. ಈ ಪದ್ಧತಿಯು ಆರಂಭದಲ್ಲಿ ಸದ್ಭಾವನೆ ಮತ್ತು ಮೆಚ್ಚುಗೆಯ ಸಂಕೇತದ ಉದ್ದೇಶವಾಗಿದ್ದರೂ ಸಹ ಗಣ್ಯರನ್ನು ಸನ್ಮಾನಿಸುವ ಇಂತಹ ಅಭ್ಯಾಸವು ಆರ್ಥಿಕ ಮಿತವ್ಯಯ, ಪರಿಸರ…
ಬೆಂಗಳೂರು: ಕೇಂದ್ರ ಸರ್ಕಾರವು ಸ್ಪ್ಯಾನ್ ಕರೆಗಳಿಗೆ ಬ್ರೇಕ್ ಹಾಕುವಂತ ನಿರ್ಧಾರ ಕೈಗೊಂಡಿತ್ತು. ಇದರ ಭಾಗವಾಗಿ ಟ್ರಾಯ್ಡ್ ಗೆ ಖಡಕ್ ಸೂಚನೆ ಕೂಡ ನೀಡಲಾಗಿತ್ತು. ಅದರಂತೆ ಈಗ ಸ್ಪ್ಯಾಮ್ ಕರೆಗಳಿಗೆ ಬ್ರೇಕ್ ಬಿದ್ದಿದ್ದು, ಈಗ ನಿಮಗೆ ಬರುವಂತ ಕರೆ ಯಾರದ್ದೆಂದು ಹೆಸರೇ ನಿಮ್ಮ ಪೋನಿನಲ್ಲಿ ಡಿಸ್ಪ್ಲೆ ಆಗುವಂತೆ ಆಗಿದೆ. ಹೌದು.. ಇದನ್ನು ಬರುತೇಕರು ಗಮನಿಸೇ ಇರೋದಿಲ್ಲ. ನಿಮ್ಮ ಮೊಬೈಲ್ ಕಾಂಟ್ಯಾಕ್ಟ್ ನಲ್ಲಿ ನಂಬರ್ ಸೇವ್ ಇರದ ಸಂಖ್ಯೆಗಳಿಂದ ಕರೆ ಬಂದರೇ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎಂಬುದಾಗಿ ಪ್ರದರ್ಶಿಸಲ್ಪಡುತ್ತಿದೆ. ಟೆಲಿಕಾಂ ಕಂಪನಿಗಳಿಗೆ ಸಿಮ್ ಖರೀದಿಸುವಂತ ಸಂದರ್ಭದಲ್ಲಿ ಗ್ರಾಹಕರು ನೀಡಿದಂತ ದಾಖಲೆಯ ಆಧಾರದಲ್ಲಿ ಹೆಸರನ್ನು ನೋಂದಾಯಿಸಲಾಗಿರುತ್ತದೆ. ಗ್ರಾಹಕರ ದಾಖಲೆಯಲ್ಲಿ ಇರುವಂತ ಹೆಸರಿನಂತೆಯೇ ಈಗ ಅನಾಮದೇಯ ನಂಬರ್ ಗಳಿಂದ ಕರೆ ಬಂದರೂ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎನ್ನುವುದನ್ನು ಮೊಬೈಲ್ ಡಿಸ್ಪ್ಲೆ ಮೇಲೆ ತೋರಿಸಲಾಗುತ್ತಿದೆ. ನಿಮ್ಮ ಮೊಬೈಲ್ ಗಳಲ್ಲಿ ನಂಬರ್ ಸೇವ್ ಮಾಡಿಕೊಳ್ಳದೇ ಇರುವಂತ ಸಂಖ್ಯೆಯಿಂದ ಕರೆ ಬಂದರೂ, ಅತ್ತಲಿಂದ ಕರೆ ಮಾಡುತ್ತಿರುವಂತ…
ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದರು. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ…
ಬೆಂಗಳೂರು: ಹೊಸ ಹೆಚ್ ಆರ್ ಪಾಲಿಸಿಯಿಂದಾಗಿ ರಾಜ್ಯದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಆತಂಕದಲ್ಲಿ ಇದ್ದರು. ಕೆಲಸ ಕಳೆದುಕೊಳ್ಳುವಂತ ಭೀತಿ ಕೂಡ ಎದುರಾಗಿತ್ತು. ಈ ಸಂದರ್ಭದಲ್ಲೇ ಎನ್ ಹೆಚ್ ಎಂ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡದಂತೆ ಸೂಚಿಸಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರ ಮೂಲಕ KSHCOEA ಸಂಘವು ಭೇಟಿ ಮಾಡಲಾಗಿತ್ತು. ರಾಜ್ಯದ ಎನ್ ಹೆಚ್ ಎಂ ಸಿಬ್ಬಂದಿಗಳಿಗಾಗಿ ಜಾರಿಗೊಳಿಸಲು ಹೊರಟಿಸುವಂತ ಹೆಚ್ ಆರ್ ಪಾಲಿಸಿ, ಅದರಿಂತ ನೌಕರರಿಗೆ ಆಗುವಂತ ತೊಂದರೆಗಳ ಬಗ್ಗೆ ಸಂಘದಿಂದ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ತರಲಾಯಿತು. ರಾಷ್ಟೀಯ ಆರೋಗ್ಯ ಅಭಿಯಾನದ 30 ಸಾವಿರ ಸಿಬ್ಬಂದಿಗಳನ್ನು ಕಡ್ಡಾಯ ವರ್ಗಾವಣೆ ಮತ್ತು ಮರು ನೇಮಕಾತಿ ಮಾಡುವ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ದಿನಾಂಕ 28.10.2025 ರಂದು ಪ್ರಸ್ತಾವನೆ ಸಲ್ಲಿಸಲು ಆದೇಶ ಹೊರಡಿಸಿದ್ದನ್ನು KSHCOEA ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿಗಳ ಮುಂದೆ ಕೂಲಂಕುಶವಾಗಿ…
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ…
ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ. ಆರ್ ಟಿ ಓ ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಆರ್ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ…














