Author: kannadanewsnow09

ಮಂಡ್ಯ: ಕುಮಾರಣ್ಣ ಅತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ ಎಂಬುದಾಗಿ ಕೇಂದ್ರ ಸಚಿವ ಹೆಚ್ಡಿಕೆ ಬಹಿರಂಗ ಸವಾಲ್ ಅನ್ನು ಶಾಸಕ ಗಣಿಗ ರವಿಕುಮಾರ್ ಹಾಕಿದ್ದಾರೆ. ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ ಪತ್ರ ಬರೆದಿದ್ದಾರೆ, ಸ್ವಾಗತ ಕೋರುತ್ತೇನೆ. ಇದು ಸುಮಲತಾ ಎಂಪಿ ಆಗಿದ್ದಾಗ ಬಂದಂತಹ ಕಾರ್ಯಕ್ರಮವಾಗಿದೆ. ಮಂಡ್ಯದ ಆಸ್ಪತ್ರೆಯ ಪಕ್ಕದಲ್ಲೇ ಜಾಗ ಕೊಡಲು ಸಿದ್ದ ಇದ್ದೇವೆ. ಕೇಂದ್ರ ಸರ್ಕಾರ ಕುಂಟುತ್ತಾ ಇದಕ್ಕೆ ಒಪ್ಪಲಿಲ್ಲ. ನೂರೆಂಟು ಸಬೂಬೂ ಹೇಳಿ ಸ್ಟಾಪ್ ಮಾಡಿದ್ರು. ನಮ್ಮ ಪ್ರಭಾವಿ ಕೇಂದ್ರ ಸಚಿವ ಹೆಚ್ಡಿಕೆ ಅವರು ಜಾಗ ಕೇಳಿದ್ದಾರೆ. ಕಳೆದ ಕೆಡಿಪಿ ಸಭೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಅನ್ನ ಮದ್ದೂರಿಗೆ ಶಾಸಕರು ಕೇಳಿದ್ರು. ಸಚಿವ ಚಲುವರಾಯಸ್ವಾಮಿ ಕೂಡ ಒಪ್ಪಿಗೆ ಸೂಚಿಸಿದ್ರು. ಆದ್ರೇ ಕೇಂದ್ರ ಸಚಿವರು ಮದ್ದೂರಿಗೆ ನಿರಾಕರಿಸಿದ್ರೆ ನಾವು ಜಾಗ ಕೊಡಲು ರೆಡಿ…

Read More

ನವದೆಹಲಿ: ಡ್ಯಾನಿಶ್ ಔಷಧ ಕಂಪನಿ ನೊವೊ ನಾರ್ಡಿಸ್ಕ್ ಅಂತಿಮವಾಗಿ ತನ್ನ ಜನಪ್ರಿಯ ಮಧುಮೇಹ ಔಷಧ ಓಜೆಂಪಿಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. 0.25 ಮಿಗ್ರಾಂ ಆರಂಭಿಕ ಡೋಸ್‌ನ ಬೆಲೆಯನ್ನು ವಾರಕ್ಕೆ ₹2,200 ಕ್ಕೆ ನಿಗದಿಪಡಿಸಿದೆ. ರಾಯಿಟರ್ಸ್ ವರದಿಯ ಪ್ರಕಾರ, ಕಂಪನಿಯು ದೇಶದಲ್ಲಿ ಚುಚ್ಚುಮದ್ದಿನ ಔಷಧವನ್ನು 0.25 ಮಿಗ್ರಾಂ, 0.5 ಮಿಗ್ರಾಂ ಮತ್ತು 1 ಮಿಗ್ರಾಂ ಸಾಮರ್ಥ್ಯದಲ್ಲಿ ಮಾರಾಟ ಮಾಡಲಿದೆ. ಗಮನಾರ್ಹವಾಗಿ, ಓಜೆಂಪಿಕ್ ಟೈಪ್ 2 ಮಧುಮೇಹಕ್ಕೆ ಚುಚ್ಚುಮದ್ದಿನ ಔಷಧವಾಗಿದೆ ಮತ್ತು ವಾರಕ್ಕೊಮ್ಮೆ ತೆಗೆದುಕೊಳ್ಳಬೇಕು. ಭಾರತದಲ್ಲಿ ಓಜೆಂಪಿಕ್ ಬೆಲೆ ಟೈಪ್ 2 ಮಧುಮೇಹ ಹೊಂದಿರುವ ಜನರಿಗೆ 2017 ರಲ್ಲಿ ಯುಎಸ್ ಆಹಾರ ಮತ್ತು ಔಷಧ ಆಡಳಿತವು ಸಾಪ್ತಾಹಿಕ ಇಂಜೆಕ್ಷನ್ ಅನ್ನು ಅನುಮೋದಿಸಿತು. ಅಂದಿನಿಂದ, ಇದು ಜಾಗತಿಕವಾಗಿ ಹೆಚ್ಚು ಮಾರಾಟವಾದ ಔಷಧವಾಗಿದೆ. ಅದರ ಹಸಿವು ಕಡಿಮೆ ಮಾಡುವ ಪರಿಣಾಮಗಳಿಂದಾಗಿ ತೂಕ ನಷ್ಟಕ್ಕೆ ಹೆಚ್ಚಾಗಿ ಲೇಬಲ್‌ನಿಂದ ಹೊರಗೆ ಬಳಸಲಾಗುತ್ತದೆ. ಔಷಧದ ಕಡಿಮೆ ಡೋಸ್ ಅನ್ನು ವಾರಕ್ಕೆ ₹2,200 ಬೆಲೆಗೆ ಮಾರಾಟ ಮಾಡಲಾಗುವುದು. ರಾಯಿಟರ್ಸ್ ವರದಿಯ ಪ್ರಕಾರ…

Read More

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಸ್ಟೇಷನ್ ಮಹೋತ್ಸವವನ್ನು ಬಾಗೇಶಪುರ ರೈಲು ನಿಲ್ದಾಣದಲ್ಲಿ ಸ್ಥಳೀಯರು ಸೇರಿ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ರೈಲ್ವೆ ನೌಕರರಾದ ಗೋವಿಂದ ಗೌಡ ಮತ್ತು ದೂರದರ್ಶಕ ಪ್ರದರ್ಶನಕ್ಕಾಗಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷಿಯನ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗಳನ್ನು ಪಡೆದ ಕು. ಗಗನ್ ಬಿ.ಎಲ್. ಅವರನ್ನು ಗೌರವಿಸಲಾಯಿತು. ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಮೆರಗು ನೀಡಿದವು. 1960ರಲ್ಲಿ ನಿರ್ಮಿಸಲಾದ ಬಾಗೇಶಪುರ ರೈಲು ನಿಲ್ದಾಣವು ವಸಾಹತುಶಾಹಿ ವಾಸ್ತುಶಿಲ್ಪ ಹಾಗೂ ಜನಪದ ವಾಸ್ತುಶೈಲಿಗಳ ವಿಶಿಷ್ಟ ಸಂಯೋಜನೆಯನ್ನು ಪ್ರತಿಬಿಂಬಿಸುತ್ತದೆ. ಹಳೆಯ ಮೈಸೂರು ಪ್ರದೇಶದ ಅನೇಕ ಪಾರಂಪರಿಕ ರೈಲು ನಿಲ್ದಾಣಗಳಿಗೆ ಸೇರಿರುವ ಸಂಯುಕ್ತ ವಾಸ್ತು ವಿನ್ಯಾಸವನ್ನು ಈ ನಿಲ್ದಾಣದ ಕಟ್ಟಡ ಹೊಂದಿದೆ. ಮುಖ್ಯ ಕಟ್ಟಡವು ನಾಲ್ಕು ದಿಕ್ಕುಗಳಿಗೆ ವಿಸ್ತರಿಸಿರುವ ಮಂಗಳೂರು ಟೈಲ್ಸ್‌ನ ಗೇಬಲ್ ಛಾವಣಿಯನ್ನು ಹೊಂದಿದ್ದು, ಪ್ರತಿಯೊಂದು ಗೇಬಲ್‌ನಲ್ಲಿ ವೃತ್ತಾಕಾರದ ಗಾಜಿನ ಕಿಟಕಿಯು ಅಲಂಕರಿಸಿದೆ. ಸಣ್ಣ ವರಾಂಡಾ ಮತ್ತು ಕಟ್ಟಡದ ಸುತ್ತಲಿನ ಕಡಪ ಕಲ್ಲಿನ ನೆಲಹಾಸು…

Read More

ಬೆಳಗಾವಿ: ಜಿಲ್ಲೆಯಲ್ಲಿ ಸಚಿವ ಮಂಕಾಳು ವೈದ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ರೈತರು ತಮ್ಮ ಆಕ್ರೋಶವನ್ನು ಹೊರ ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿಯಲ್ಲಿ ಅಧಿವೇಶನದ 5ನೇ ದಿನವೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದೆ. ಸುವರ್ಣ ಸೌಧದ ಹೊರಗೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಬೆಳಗಾವಿಯ ಆಲಾರವಾಡ್ ಕ್ರಾಸ್ ಬಳಿಯಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಸಚಿವ ಮಂಕಾಳು ವೈದ್ಯ ಕಾರಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ರೈತರ ಸಮಸ್ಯೆ ಆಲಿಸಿ ವಾಪಾಸ್ ಆಗುವಾಗ ಸಚಿವ ಮಂಕಾಳು ವೈದ್ಯಗೆ ರೈತರು ಮುತ್ತಿಗೆ ಹಾಕಿದ್ದಾರೆ. ಸುವರ್ಣ ವಿಧಾನಸೌಧದ ಬಳಿಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಆಗಮಿಸಿರುವಂತ ರೈತರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/steps-to-make-belgaums-mini-zoo-more-attractive-crocodiles-and-snakes-will-be-introduced-minister-ishwar-khandre/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/

Read More

ಬೆಳಗಾವಿ : ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶೀಘ್ರವೇ ಸರೀಸೃಪ (ಹಾವು) ಹಾಗೂ ಮೊಸಳೆಗಳ ಆವರಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿ ಮೊಸಳೆ ಮತ್ತು ಸರೀಸೃಪಗಳ ಆವರಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, 50 ಲಕ್ಷ ರೂ. ವೆಚ್ಚದಲ್ಲಿ ಮೊಸಳೆ ಆವರಣ ಮತ್ತು 40.8ಲಕ್ಷ ವೆಚ್ಚದಲ್ಲಿ ಸರೀಸೃಪಗಳ ಆವರಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಶೀಘ್ರವೇ 2 ಮೊಸಳೆ ಹಾಗೂ ಹೆಬ್ಬಾವು, ಕಾಳಿಂಗ ಸರ್ಪ, ಮಂಡಲ ಸೇರಿದಂತೆ 12 ಹಾವುಗಳನ್ನು ಈ ಆವರಣದಲ್ಲಿ ಬಿಡಲಾಗುವುದು ಎಂದು ವಿವರಿಸಿದರು. ಇದರ ಜೊತೆಗೆ ಮೃಗಾಲಯಕ್ಕೆ ಬರುವ ಸಂದರ್ಶಕರಿಗೆ ವನ್ಯಜೀವಿಗಳ ಬಗ್ಗೆ ಮತ್ತು ಮೃಗಾಲಯದ ಬಗ್ಗೆ ಮಾಹಿತಿ ನೀಡುವ ಸಾಕ್ಷ್ಯಚಿತ್ರಪ್ರದರ್ಶನ ಮಾಡಲು ಆಪ್ತ ಚಿತ್ರಮಂದಿರ ನಿರ್ಮಿಸಲಾಗಿದ್ದು ಶೀಘ್ರವೇ ಇದನ್ನು ಲೋಕಾರ್ಪಣೆ ಮಾಡಲಾಗುವುದು ಎಂದೂ ತಿಳಿಸಿದರು. ಮೃಗಾಲಯದ ಆವರಣದಲ್ಲಿ ಸಂದರ್ಶಕರ ವಾಹನ ನಿಲುಗಡೆಗೆ ವಿಶಾಲ ಸ್ಥಳ, ವೀರವನಿತೆ ಕಿತ್ತೂರು ರಾಣಿ…

Read More

ಬೆಳಗಾವಿ ಸುವರ್ಣಸೌಧ : ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮೇಲ್ಮನೆಗಿಂದು ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ ಒಳಗಾಗಿ ವೆಬ್ ಲಿಂಕ್ ಅಥವಾ ದೂರವಾಣಿ ಮುಖಾಂತರ ಮಾಹಿತಿ ನೀಡಬೇಕು ಎಂಬ ಷರತ್ತಿದೆ. ಆದರೆ ಖಾಸಗಿ ಕಂಪನಿಗಳ ಫೋನ್ ಮತ್ತು ವೆಬ್ ಲಿಂಕ್ ಕಾರ್ಯ ನಿರ್ವಹಿಸುವುದಿಲ್ಲ. ಬೆಳೆ ಹಾನಿಯಾದವರು ಮಾಹಿತಿ ನೀಡಿಲ್ಲ ಎಂದು ಪರಿಹಾರ ನೀಡುವುದಿಲ್ಲ. ಇಂತಹ ಸಾಕಷ್ಟು ನ್ಯೂನತೆಗಳಿವೆ ಎಂದರು. ಬೆಳೆ ಕಟಾವು ಪ್ರಯೋಗದಲ್ಲಿ 7 ವರ್ಷದ ಅಂದಾಜಿನಲ್ಲಿ 5 ವರ್ಷದ ಇಳುವರಿಯ ಸರಾಸರಿ ತೆಗೆದುಕೊಳ್ಳುವ ವಿಚಾರದಲ್ಲೂ ವೈಜ್ಞಾನಿಕವಾಗಿ ನಿಗದಿ ಮಾಡುವುದಿಲ್ಲ…

Read More

ಮಂಡ್ಯ: ರಾಜ್ಯ ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಮಂಡ್ಯ ಜಿಲ್ಲೆಯಲ್ಲಿ 12 ಆಸ್ಪತ್ರೆಗಳು ಸೇರ್ಪಡೆಯಾಗಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಗೆ ಸ್ವಯಂ ಪ್ರೇರಣೆಯಿಂದ ಒಳಪಡಬೇಕೆಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು (ಡಿ.12) ದಿನ ಜಿಲ್ಲಾಧಿಕಾರಿಗಳ ಕಚೇರಿಯ ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರ ಹಾಗೂ ಮುಖ್ಯಸ್ಥರ, ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು. ಜಿಲ್ಲೆಯಲ್ಲಿರುವ 18 ಸಾವಿರ ಸರ್ಕಾರಿ ನೌಕರರಿದ್ದಾರೆ. ಅವರ ಮಾನಸಿಕ, ದೈಹಿಕ ಆರೋಗ್ಯವು ಉತ್ತಮ ಆಡಳಿತ ದೃಷ್ಠಿಯಿಂದ ಮುಖ್ಯವಾಗಿದೆ. ಸರ್ಕಾರವು ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಆರೋಗ್ಯ ಯೋಜನೆಯ ಲಾಭವು ನಮ್ಮ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ತಲುಪಿಸಿ, ಯಶಸ್ವಿಗೊಳಿಸಲು ಖಾಸಗಿ ಆಸ್ಪತ್ರೆಗಳ ಸಹಕಾರವು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಪ್ರತಿನಿತ್ಯ ಜಿಲ್ಲೆಯ…

Read More

ಬೆಳಗಾವಿ ಸುವರ್ಣಸೌಧ : ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭ ಶಾಸಕರಾದ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 98 ಜನರಿಗೆ ರೈತರ ಹೆಸರಿನಲ್ಲಿ ಸಾಗುವಳಿ ಚೀಟಿ ನೀಡಿರುವ ಪ್ರಕರಣ ಇಲಾಖೆ ಗಮನದಲ್ಲಿದೆ. ಈ ನಕಲಿ ಸಾಗುವಳಿ ಚೀಟಿ ಮೇಲೆ ಖಾತೆಗೆ ಅರ್ಜಿ ಸಲ್ಲಿಸಿದ ಭೂ ಕಬಳಿಕೆದಾರರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲು ಮಾಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು. “ರೈತರ ಹೆಸರಲ್ಲಿ ನಕಲಿ ಭೂ ಸಾಗುವಳಿ ಚೀಟಿ…

Read More

ಬೆಳಗಾವಿ ಸುವರ್ಣಸೌಧ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು. ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್ಡಿಆರ್ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ ರೂ.257.90 ಕೋಟಿ ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ. 245.75 ಕೋಟಿ ಪರಿಹಾರ ಹಣ ಸೇರಿ ಒಟ್ಟಾರೆ ರೂ.498.73 ಕೋಟಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು. “ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, “ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14,21,000 ರೈತರಿಗೆ ಎಸ್ಡಿಆರ್ಎಫ್ ನಿಯಮದ ಪ್ರಕಾರ ರೂ.1,218 ಕೋಟಿ…

Read More

ನವದೆಹಲಿ : ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಸಂಖ್ಯೆಯೂ ಸೇವ್ ಆಗದಿದ್ದರೆ ಮತ್ತು ಅಪರಿಚಿತ ಸಂಖ್ಯೆಯಿಂದ ನಿಮಗೆ ಕರೆ ಬಂದರೆ, ನಿಮ್ಮ ಮನಸ್ಸಿಗೆ ಬರುವ ಮೊದಲ ಪ್ರಶ್ನೆಯೆಂದರೆ ಕರೆ ಮಾಡುವವರು ಯಾರು ಎಂಬುದಾಗಿತ್ತು. ಆದರೇ ಇದಕ್ಕೆ ಗುಡ್ ಬಾಯ್ ಹೇಳಲಾಗಿದೆ. ಈಗ ಕರೆ ಮಾಡಿದವರ ಹೆಸರು ನಿಮ್ಮ ಮೊಬೈಲ್ ನಲ್ಲಿಯೇ ಪ್ರದರ್ಶನವಾಗಲಿದೆ. ಹೌದು. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ದೇಶಾದ್ಯಂತದ ಟೆಲಿಕಾಂ ಕಂಪನಿಗಳಿಗೆ ಕರೆ ಮಾಡುವ ಹೆಸರು ಪ್ರದರ್ಶಿಸುವುದನ್ನು ಜಾರಿಗೊಳಿಸಿದೆ. ಹೀಗಾಗಿ ಈಗ ಅಪರಿಚಿತ ವ್ಯಕ್ತಿಗಳು ನಿಮ್ಮ ಫೋನ್ ಗೆ ಕರೆ ಮಾಡಿದರೆ, ನಿಮ್ಮ ಫೋನಿನ ಪರದೆಯ ಮೇಲೆ ಅವರ ಹೆಸರನ್ನು ಕಾಣಬಹುದಾಗಿದೆ. ಸ್ಮಾರ್ಟ್ಫೋನ್ ಬಳಕೆದಾರರು ತಮ್ಮ ಫೋನ್ಗಳಲ್ಲಿ ಅಪರಿಚಿತ ಕರೆಗಳ ಬಗ್ಗೆ ಮಾಹಿತಿ ಪಡೆಯಲು ಥರ್ಡ್-ಪಾರ್ಟಿ ಅಪ್ಲಿಕೇಶನ್ಗಳನ್ನ ಬಳಸುತ್ತಿದ್ದರು.  ಇದರಲ್ಲಿ ಅನೇಕ ಬಳಕೆದಾರರು ಟ್ರೂ ಕಾಲರ್ ಆಗಿತ್ತು.. ಥರ್ಡ್ ಪಾರ್ಟಿ ಅಪ್ಲಿಕೇಶನ್’ಗಳು ತಮ್ಮ ಸೌಲಭ್ಯಗಳನ್ನ ಒದಗಿಸಲು ಅನುಸ್ಥಾಪನಾ ಸಮಯದಲ್ಲಿ ಸಾಕಷ್ಟು ಅನುಮತಿಗಳನ್ನ ಕೇಳುತ್ತವೆ. ಇದರಲ್ಲಿ ಸಂಪರ್ಕ ವಿವರಗಳು, ಫೋನ್ ಗ್ಯಾಲರಿ,…

Read More