Author: kannadanewsnow09

ನವದೆಹಲಿ: ಜುಲೈ 24, 2024 ರಂದು ಸ್ಥಿರವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ತೀವ್ರ ಕುಸಿತ ಕಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 6 ಕ್ಕೆ ಇಳಿಸಿದ ನಂತರ ದೇಶದಲ್ಲಿ ಚಿನ್ನದ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ಮತ್ತೆ 22k/100 ಗ್ರಾಂ ಚಿನ್ನದ ಬೆಲೆ ರೂ 9,500 ರಷ್ಟು ಕುಸಿತಗೊಂಡಿದೆ. ಹಣಕಾಸು ಸಚಿವರ ಈ ಕ್ರಮವು ದಾಖಲೆಯ ಉನ್ನತ ಮಟ್ಟಕ್ಕೆ ಏರುತ್ತಿರುವ ಹಳದಿ ಲೋಹದ ಬೆಲೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಗ್ರಾಹಕರು ಹಳದಿ ಲೋಹವನ್ನು ಖರೀದಿಸುವುದನ್ನು ತಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 64,000ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 ರು ಇಳಿಕೆಯಾಗಿ 68,000ರು ನಷ್ಟಿದೆ. 22 ಕ್ಯಾರೆಟ್ ಅಮೂಲ್ಯ ಲೋಹದ ಬೆಲೆಗಳು ಶೇಕಡಾವಾರು ಲೆಕ್ಕದಲ್ಲಿ 1.48% ರಷ್ಟು ತೀವ್ರ ಕುಸಿತಕ್ಕೆ ಸಾಕ್ಷಿಯಾಗಿವೆ. ಜುಲೈ 22, 2024 ರಿಂದ…

Read More

ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು. “ನಿಗಮ ಮಂಡಳಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ನಾವು ಅವಕಾಶ ಕಲ್ಪಿಸಿದ್ದೆವು. ಅವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಬಿಜೆಪಿಯವರು ತಮ್ಮ ಕಾಲದಲ್ಲಿ ಆಗಿದ್ದ ಹಗರಣಗಳನ್ನು ಬಚ್ಚಿಟ್ಟಿದ್ದರು. ಅವುಗಳು ಬಹಿರಂಗವಾಗಬಾರದು…

Read More

ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು. ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ…

Read More

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತ್ತು. ಈ ಬಳಿಕ ವಿಧಾನಪರಿಷತ್ತಿನಲ್ಲೂ ಮಂಡನೆಯಾಗಿದ್ದಂತ ನೀಟ್ ವಿರುದ್ಧದ ನಿರ್ಣಯಕ್ಕೆ ಅಂಗೀಕಾರ ದೊರೆತಿದೆ. ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು. ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ…

Read More

ಶಿವಮೊಗ್ಗ : 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಭದ್ರಾವತಿ ತಾಲ್ಲೂಕಿಗೆ ವಿವಿಧ ಕಾರ್ಯಕ್ರಮಗಳು ಮಂಜೂರಾಗಿದ್ದು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳು ಅನುಮೋದನೆಗೊಂಡಿದ್ದು, ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಅಂಗಾಂಶ ಬಾಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಪ್ಯಾಕ್‌ಹೌಸ್, ಅಡಿಕೆ ಪ್ರಾಥಮಿಕ ಸಂಸ್ಕರಣಾ ಘಟಕ ಇತ್ಯಾದಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ. ಆಯಾ ಕಾರ್ಯಕ್ರಮಗಳಿಗೆ ನಿಗದಿಯಾದ ಮಾರ್ಗಸೂಚಿಯನ್ವಯ ಅರ್ಜಿಯನ್ನು ಪರಿಗಣಿಸಲಾಗುವುದು. ಯೋಜನೆಯ ಲಾಭ ಪಡೆಯಲಿಚ್ಚಿಸುವ ರೈತರು ತಮ್ಮ ಹೆಸರನ್ನು ಆಯಾ ತಾಲ್ಲೂಕಿನಲ್ಲಿ ತೋಟಗಾರಿಕೆ ಇಲಾಖೆ ಕಚೇರಿಗಳಲ್ಲಿ ಆಗಸ್ಟ್ ೫ ರೊಳಗೆ ನೋಂದಾಯಿಸಬಹುದು. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಜೇಷ್ಟತೆಯ ಪ್ರಕಾರ ಹಾಗೂ ನಿಗದಿತ ಮೀಸಲಾತಿಯಂತೆ ಫಲಾನುಭವಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಭದ್ರಾವತಿ ಇಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/one-and-a-half-year-old-girl-raped-murdered-in-a-diabolical-act-in-the-state/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/

Read More

ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳುಸುವಂತೆ ರಾಜ್ಯದಲ್ಲೇ ಪೈಶಾಚಿಕ ಕೃತ್ಯ ಎನ್ನುವಂತೆ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ವೆಸಗಿರೋ ಶಂಕೆ ವ್ಯಕ್ತವಾಗಿದೆ. ಹೀಗೆ ಪೈಶಾಚಿಕ ಕೃತ್ಯಕ್ಕೆ ಒಳಗಾಗಿದ್ದಂತ ಪುಟ್ಟ ಕಂದಮ್ಮನನ್ನು ಪಾವಿಗಳು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಪೈಶಾಚಿಕ ಕೃತ್ಯಕ್ಕೆ ಒಳಗಾಗಂತ ಮಗುವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ದುರುಶರ ಅಟ್ಟ ಹಾಸದ ಕುರುಹುಗಳು ಪತ್ತೆಯಾಗಿವೆ ಎನ್ನಲಾಗುತ್ತಿದೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ, ಕೊಲೆ ಪ್ರಕರಣ ದಾಖಲಾಗಿದೆ. https://kannadanewsnow.com/kannada/nta-releases-neet-ug-final-revised-merit-list-check-here/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ನೀಟ್ ಯುಜಿ 2024 ರ ( NEET UG 2024 ) ಅಂತಿಮ, ಪರಿಷ್ಕೃತ ಫಲಿತಾಂಶದ ಸ್ಕೋರ್ಕಾರ್ಡ್ಗಳನ್ನು ಜುಲೈ 25, 2024 ರಂದು ಪ್ರಕಟಿಸಿದೆ. ಇದಕ್ಕೂ ಮುನ್ನ ಜುಲೈ 23, 2024 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್ ಯುಜಿ 2024 ರ ಪರಿಷ್ಕೃತ ಅಂತಿಮ ಫಲಿತಾಂಶವನ್ನು ಮುಂದಿನ ಎರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದ್ದರು. ಎನ್ಟಿಎ ಅಂತಿಮ ಮೆರಿಟ್ ಪಟ್ಟಿಯನ್ನು ಘೋಷಿಸಿದ ನಂತರ, ಅಭ್ಯರ್ಥಿಗಳು ಅದನ್ನು exams.nta.ac.in ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ನೀಟ್ ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸಲು ಮತ್ತು ಮರು ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 23 ರಂದು ವಜಾಗೊಳಿಸಿತ್ತು. ಪರೀಕ್ಷಾ ಫಲಿತಾಂಶಗಳಲ್ಲಿ ವ್ಯವಸ್ಥಿತ ಸಮಸ್ಯೆಯನ್ನು ಸೂಚಿಸುವ ಯಾವುದೇ ಗಣನೀಯ ಪುರಾವೆಗಳನ್ನು ನ್ಯಾಯಾಲಯ ಕಂಡುಕೊಂಡಿಲ್ಲ. ವಿಚಾರಣೆಯ ಸಮಯದಲ್ಲಿ, ನೀಟ್ ಯುಜಿ 2024 ಪರೀಕ್ಷೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ. ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಸಿ, ಜೈಲು ಊಟ ಬೇಡ, ಮನೆಯೂಟ ಬೇಕು ಎನ್ನುವ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅಂದಹಾಗೇ ನಟ ದರ್ಶನ್ ಜೈಲು ಊಟದಿಂದ ತೂಕ ಕಳೆದುಕೊಳ್ಳುತ್ತಿದ್ದಾರೆ. ಆಗಾಗ ಪುಡ್ ಪಾಯಿಸನ್ ಕೂಡ ಆಗುತ್ತಿದೆ. ಹೀಗಾಗಿ ಮನೆ ಊಟ ಬೇಕು. ಹಾಸಿಗೆ ಬೇಕು. ಅದಕ್ಕೆ ಅನುಕೂಲ ಮಾಡಿಕೊಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ…

Read More

ಬೆಂಗಳೂರು: ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಅವರು ಜೈಲೂಟ ಬೇಡ. ಮನೆಯೂಟ ಬೇಕು ಅಂತ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲು ಊಟವೇ ಗತಿ ಎನ್ನುವಂತೆ ಆಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವಂತ ನಟ ದರ್ಶನ್ ಅವರು, ತಮಗೆ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೇ ಕೋರ್ಟ್ ವಾದ- ಪ್ರತಿವಾದವನ್ನು ಆಲಿಸಿದ ನಂತ್ರ, ತೀರ್ಪನ್ನು ಜುಲೈ.25ಕ್ಕೆ ಕಾಯ್ದಿರಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಸಿತು. ಅಂತಿಮವಾಗಿ ಮನೆಯೂಟದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅಂದಹಾಗೇ ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಓದೋದಕ್ಕೆ ಪುಸ್ತಕ, ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವರನ್ನು ಕೋರಿದ್ದರು. ಬೆಂಗಳೂರಿನ…

Read More

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪ್ರಾಧಿಕಾರಗಳ ರಚನೆಯ ಉದ್ದೇಶವು ಸಸಿಯೊಂದು ಹೆಮ್ಮರವಾಗಿ ಬೆಳೆದು ಜನರಿಗೆ ನೆರಳು ಮತ್ತು ಫಲ ನೀಡುವಂತಹ ಕಲ್ಪನೆ ಹೊಂದಿದೆ. ಪ್ರಾಧಿಕಾರಗಳ ರಚನೆಯೊಂದಿಗೆ ಸಮಗ್ರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾಂದಿ‌ ಹಾಡಲಿದೆ. ಇದನ್ನು ಮನಗೊಂಡಿರುವ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಕಳೆದ ಒಂದು ವರ್ಷದ ಅವಧಿಯಲ್ಲಿ ಚಾಮುಂಡಿ ಬೆಟ್ಟ ಕ್ಷೇತ್ರ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ,ಹುಲಿಗೆಮ್ಮ ಕ್ಷೇತ್ರಗಳನ್ನು ಪ್ರಾಧಿಕಾರಗಳಾಗಿ ರಚಿಸಿದ್ದಾರೆ. ಆ ನಿಟ್ಟಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ನೂತನವಾಗಿ ಸೇರ್ಪಡೆಯಾಗುತ್ತಿದೆ ಎಂದಿದ್ದಾರ ಅಂದಹಾಗೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವು “ಎ” ವರ್ಗದ ದೇವಸ್ಥಾನವಾಗಿದೆ. ಒಟ್ಟು 88. 37 ಎಕರೆ ವಿಸ್ತೀರ್ಣ ಹೊಂದಿದೆ. ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿನಿಯಮ ಮತ್ತು ಉದ್ದೇಶಿತ ಪ್ರಾಧಿಕಾರದೊಂದಿಗೆ Master Plan ಅಭಿವೃದ್ಧಿಪಡಿಸಿ ಭಕ್ತಾಧಿಗಳಿಗೆ‌…

Read More