Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹನಿಟ್ರ್ಯಾಪ್ ವಿವಾದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಏಳಿಸಿದೆ. ಗಾಳ ಹಾಕಿದ್ದು ಒಬ್ಬ ಸಚಿವರಿಗಷ್ಟೇ ಅಲ್ಲ, ಇನ್ನೂ ಹಲವರಿಗೆ ಎನ್ನುವ ಮಾಹಿತಿ ಇದೆ. ಹೀಗಾಗಿ ವರಿಷ್ಟರಿಗೆ ವಿವರ ನೀಡಲು ಸಿಎಂ ಸಿದ್ಧರಾಮಯ್ಯ ದೆಹಲಿಗೆ ಪಯಣ ಬೆಳಸಲಿದ್ದಾರೆ ಎನ್ನಲಾಗುತ್ತಿದೆ. ಹೌದು.. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತ್ರವಲ್ಲದೆ ರಾಜ್ಯ ಸಚಿವ ಸಂಪುಟದ ಇನ್ನೂ ಮೂರು ಮಂದಿಯನ್ನು ಹನಿ ಟ್ರ್ತಾಪ್ ಜಾಲಕ್ಕೆ ಸಿಲುಕಿಸಲು ಯತ್ನ ನಡೆದಿದ್ದು ಬಟಾ ಬಯಲಾಗಿದೆ. ರಾಜಧಾನಿ ಬೆಂಗಳೂರಿನ ಇಬ್ಬರು ಸಚಿವರು ಮತ್ತು ಮುಂಬೈ-ಕರ್ನಾಟಕ ಭಾಗದ ಪ್ರಭಾವಿ ಸಚಿವರೊಬ್ಬರನ್ನು ಖೆಡ್ಡಾಗೆ ಕೆಡವಲು ಯತ್ನ ನಡೆಸಿದ್ದು ಸದನದಲ್ಲೇ ಹೊರಬಿದ್ದಿದೆ. ಹನಿಟ್ರ್ಯಾಪ್ ನ ಸುಳಿವು ಸಿಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರಿನ ಓರ್ವ ಸಚಿವರು ಹನಿ ಟ್ರ್ಯಾಪ್ ಮಾಡಲು ಬಂದ ತಂಡವನ್ನು ಲಾಕ್ ಮಾಡಿದ್ದರು. ಹೀಗೆ ಲಾಕ್ ಆದ ಹನಿ ಟ್ರ್ಯಾಪ್ ತಂಡ ಧರ್ಮದೇಟು ಬೀಳುತ್ತಿದ್ದಂತೆಯೇ ಕಂಗಾಲು ಆಗಿದ್ದರು. ಹೀಗೆ ಕಂಗಾಲಾದ ಹನಿ ಟ್ರ್ತಾಪ್ ತಂಡದಿಂದ ಬಾಯ್ಬಿಡಿಸಿದ ಬೆಂಗಳೂರಿನ ಆ ಸಚಿವರು ಬಾಯ್ಬಿಡಿಸಿದ್ದು ಮಾತ್ರವಲ್ಲ ತಪ್ಪೊಪ್ಪಿಕೊಂಡ ಹನಿ ಟ್ರ್ಯಾಪ್ ತಂಡದಿಂದ ಇದರ ಸೂತ್ರಧಾರ ಯಾರೆಂಬ ಬಗ್ಗೆ…
ಬೆಂಗಳೂರು: ತನ್ನೊಂದಿಗೆ ವಾಸಿಸಲು ದಿನಕ್ಕೆ 5,000 ರೂ.ಗೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಿ ಸಾಫ್ಟ್ವೇರ್ ಎಂಜಿನಿಯರ್ ತನ್ನ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಕಾಂತ್ ಎಂದು ಗುರುತಿಸಲ್ಪಟ್ಟ ಪತಿ ತನ್ನ ಹೆಂಡತಿ ಬೇಡಿಕೆ ಇಟ್ಟಿರುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಈ ಪ್ರಕರಣವು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಯಿತು. ಈ ವಿಡಿಯೋ ವೈರಲ್ ಆಗಿದ್ದು, ಶ್ರೀಕಾಂತ್ ಅವರ ಪತ್ನಿ ದಿನನಿತ್ಯದ ಪಾವತಿಗಾಗಿ ತಮ್ಮ ಬೇಡಿಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಆನ್ ಲೈನ್ ನಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಸೆಳೆಯಿತು. ಅನೇಕರು ಸಂಬಂಧದ ಸ್ವರೂಪ ಮತ್ತು ದಂಪತಿಗಳ ನಡುವಿನ ಉದ್ವಿಗ್ನತೆಯನ್ನು ಪ್ರಶ್ನಿಸಿದರು. ಶ್ರೀಕಾಂತ್ ತನ್ನ ಹೆಂಡತಿಯ ಬೇಡಿಕೆಗಳು ಹಣಕ್ಕಿಂತ ಹೆಚ್ಚಿವೆ ಎಂದು ಹೇಳಿಕೊಂಡಿದ್ದಾನೆ. ಅವರ ಪ್ರಕಾರ, ಗರ್ಭಧಾರಣೆಯು ತನ್ನ ದೈಹಿಕ ನೋಟದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಳವಳವನ್ನು ಉಲ್ಲೇಖಿಸಿ ಅವಳು ಜೈವಿಕ ಮಕ್ಕಳನ್ನು ಹೊಂದಲು ನಿರಾಕರಿಸಿದಳು. ಬದಲಾಗಿ, ಅವಳು ಮಕ್ಕಳನ್ನು ದತ್ತು ಪಡೆಯಲು ಒತ್ತಾಯಿಸಿದಳು. ಆದರೆ ಶ್ರೀಕಾಂತ್ ಈ…
ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ. ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ. ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು…
ಬೆಂಗಳೂರು : ಪ್ರಸ್ತುತ ವರ್ಷದ ಮಾನ್ಸೂನ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕಾಗಲಿದೆ. ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆಯಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಆದರೆ, ಜೂನ್ನಿಂದ ಸೆಪ್ಟೆಂಬರ್ವರೆಗಿನ ಮಾನ್ಸೂನ್ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ” ಎಂದು ಮಾಹಿತಿ ನೀಡಿದರು. ಮುಂದುವರೆದು, “ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಮಳೆ ನಿರೀಕ್ಷಿಸಬಹುದು. ಅಲ್ಲದೆ, ಭಾರತ ಹವಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ…
ನಮಸ್ಕಾರ ಬಂಧುಗಳೇ ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಹ ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇರುತ್ತಾರೆ ದಿನೇ ದಿನೇ ಎಷ್ಟು ಸಹಿಸಿಕೊಂಡರು ಸಮಸ್ಯೆಗಳು ಕಡಿಮೆ ಆಗುತ್ತಿರುವುದಿಲ್ಲ ಅಂತಹ ಸಂದರ್ಭದಲ್ಲಿ ಪೂಜೆಗಳನ್ನು ಮಾಡಿಸುತ್ತಾರೆ ಅದರ ಜೊತೆಗೆ ಹಲವಾರು ದೇವರಿಗೆ ಹಲವಾರು ಹರಕೆಗಳನ್ನು ಕಟ್ಟಿಕೊಂಡಿರುತ್ತಾರೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್ 2024ರ ಮಾರ್ಚ್ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸರ್ಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಯೂನಿಟ್ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್ಗೆ 36 ಪೈಸೆಯನ್ನು ಏರಿಸಿದೆ. ಎಂದು ಸ್ಪಷ್ಟಪಡಿಸಿದರು. “ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್ನಲ್ಲಿ ಕೆಇಆರ್ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು…
ಬೆಂಗಳೂರು: ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನಿಸಲಾಗಿತ್ತು. ಹನಿಟ್ರ್ಯಾಪ್ ಆಗಿರೋದು ನಿಜ. ಆದರೇ ನಾನು ಒಳಗಾಗಿಲ್ಲ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ. ಆದರೇ ನಾನು ಒಳಗಾಗಿಲ್ಲ. ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಷಯ ಪ್ರಸ್ತಾಪಿಸಿದರು ಎಂದರು. ಈ ರೀತಿಯ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ. ಇದು ಅಂತ್ಯವಾಗಲು ಉನ್ನತ ಮಟ್ಟದ ತನಿಖೆ ಆಗಬೇಕು. ಹನಿಟ್ರ್ಯಾಪ್ ನಲ್ಲಿ ಎಲ್ಲಾ ಪಕ್ಷದವರೂ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದರು. ನಾನೇನೂ ಶ್ರೀರಾಮ ಚಂದ್ರನೂ ಅಲ್ಲ. ಸತ್ಯ ಹರಿಶ್ಚಂದ್ರನೂ ಅಲ್ಲ. ಹನಿಟ್ರ್ಯಾಪ್ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಆಗಲೇ ಸತ್ಯಾಸತ್ಯತೆ ಹೊರಬರಲಿದೆ ಎಂದರು. https://kannadanewsnow.com/kannada/48-people-at-state-and-national-level-have-honeytrap-cds-pen-drives-minister-rajanna/ https://kannadanewsnow.com/kannada/breaking-encounter-between-security-forces-in-bijapur-chhattisgarh-22-naxals-killed-naxal-encounter/
ಬೆಂಗಳೂರು: ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದ 48 ಮಂದಿ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳು ಇದ್ದಾವೆ. ಇವುಗಳಲ್ಲಿ ನ್ಯಾಯಾಧೀಶರದ್ದೂ ಇದೆ. ಹೀಗಾಗಿ ತನಿಖೆಗೆ ಕೊಡಿ ಎಂಬುದಾಗಿ ಸದನದಲ್ಲಿ ಸಚಿವ ಕೆ.ಎನ್ ರಾಜಣ್ಣ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುವುದು ಕೆಟ್ಟ ಸಂಸ್ಕೃತಿಯಾಗಿದೆ. ಕೆಲ ರಾಜಕೀಯ ಪಕ್ಷದಲ್ಲಿ ಇರುವವರು ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯಕ್ಕಾಗಿಯೋ, ಸಿಎಂ ಆಗಬೇಕೆಂಬ ಕಾರಣಕ್ಕೂ ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ನಾನು ಹನಿಟ್ರ್ಯಾಪ್ ವಿಚಾರದಲ್ಲಿ ಲಿಖಿತ ದೂರು ಕೊಡುತ್ತೇನೆ. ಅದನ್ನು ತನಿಖೆ ಮಾಡಿ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಇದಲ್ಲದೇ ನಾನೊಬ್ಬನೇ ಅಲ್ಲ, ರಾಜ್ಯ ಮಾತ್ರವಲ್ಲದೇ ರಾಷ್ಟ್ರ ಮಟ್ಟದ 48 ಮಂದಿಯ ಹನಿಟ್ರ್ಯಾಪ್ ಸಿಡಿ, ಪೆನ್ ಡ್ರೈವ್ ಗಳಿದ್ದಾವೆ. ಇದರಲ್ಲಿ ಜಡ್ಜ್ ಗಳದ್ದೂ ಇದೆ. ತನಿಖೆಗೆ ನೀಡುವಂತೆ…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಇಇಡಿಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ 7ನೇ ವೇತನ ಶ್ರೇಣಿ ಹಾಗೂ ವೇತನವನ್ನು ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಮಾಹಿತಿ ಹಂಚಿಕೊಂಡಿದ್ದು, ವಿಷಯದನ್ವಯ ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಇದುವರೆಗೆ ಒಟ್ಟು 18 ಸೇವೆಗಳನ್ನು ನೌಕರರಿಗೆ ಕಡ್ಡಾಯಗೊಳಿಸಿದ್ದರೂ ಸಹ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ /ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳು ಇ.ಇ.ಡಿ.ಎಸ್ ತಂತ್ರಾಂಶದ ಮೂಲಕ ರಜೆ ಅನುಮತಿ ಸಲ್ಲಿಸದೆ ಇರುವುದು ಇ.ಇ.ಡಿ.ಎಸ್ ವರದಿಗಳಲ್ಲಿ ಕಂಡುಬಂದಿರುತ್ತದೆ ಎಂದು ಹೇಳಿದ್ದಾರೆ. ಇನ್ನು ಮುಂದೆ ಶಾಲಾ/ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ/ಸಿಬ್ಬಂದಿಗಳು (ಬೋದಕ/ಬೋದಕೇತರ) ರಜೆಗೆ ತೆರಳುವ ಮುಂಚಿತವಾಗಿ ಇ.ಇ.ಡಿ.ಎಸ್. ತಂತ್ರಾಂಶದ ಮೂಲಕವೇ ಎಲ್ಲಾ ರೀತಿಯ ರಜಾ ಸೌಲಭ್ಯಗಳಾದ [C.L/R.H/E.L/H.P.L /ಇತರೆ] ರಜಾ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ ಇ.ಇ.ಡಿ.ಎಸ್ ತಂತ್ರಾಂಶದ ಮೂಲಕವೇ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದು, ಬಗರ್ ಹುಕುಂ ಅಡಿಯಲ್ಲಿ ಮಂಜೂರಾತಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಮಂಜೂರಾತಿ ಪತ್ರ ದೊರೆಯಲಿದೆ. ಇದರ ಜೊತೆಗೆ ಜೊತೆಗೆ ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರಾತಿ ಪಡೆದವರಿಗೂ ಸರ್ಕಾರ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಜಮೀನು ಮಂಜೂರು ಮಾಡಿಸಿಕೊಂಡಿದ್ರೆ ಖಾತೆಯಾಗಲ್ವಂತೆ. ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿರುವಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ಬಗರ್ಹುಕುಂ ಅಡಿಯಲ್ಲಿ ಮಂಜೂರಾದ ಜಮೀನುಗಳಿಗೆ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ದೂರು ಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮವಾಗಿ ಮಂಜೂರಾದ ಪ್ರಕರಣಗಳಲ್ಲಿ ಖಾತೆ ಆಗುವುದಿಲ್ಲ. ಕ್ರಮಬದ್ಧವಾಗಿ ಇರುವ ಪ್ರಕರಣಗಳಲ್ಲಿ ಖಾತೆ ಮಾಡಿಕೊಡಲಾಗುತ್ತದೆ ಎಂದಿದ್ದಾರೆ. ಶೀಘ್ರವೇ ಅದನ್ನು ಮುಗಿಸಲು ಕ್ರಮ ಕೈಗೊಳ್ಳಲಾಗುವುದು. ಆದರೇ ಅಕ್ರಮವಾಗಿ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿ ಪಡೆದವರಿಗೆ ಖಾತೆ ಮಾಡಿಕೊಡುವುದಿಲ್ಲ ಅಂತ ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ. https://twitter.com/KarnatakaVarthe/status/1902658313965449711 https://kannadanewsnow.com/kannada/karnataka-govt-finalises-3-locations-for-construction-of-2nd-international-airport-in-bengaluru/ https://kannadanewsnow.com/kannada/not-only-minister-rajanna-but-his-son-mlc-rajendra-also-honey-trapped/