Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜ್ಯೂರಿಚ್ ನಿಂದ ದೆಹಲಿಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಜ್ಯೂರಿಚ್ ನಲ್ಲೇ ಲ್ಯಾಂಡಿಂಗ್ ಮಾಡಲಾಗಿದೆ. ಸ್ವಿಟ್ಜರ್ಲೆಂಡಿನ ಜ್ಯೂರಿಚ್ ನಿಂದ ದೆಹಲಿಗೆ ತೆರಳುತ್ತಿದ್ದಂತ ಏರ್ ಇಂಡಿಯಾ ವಿಮಾನ ಇದಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣ ಜ್ಯೂರಿಚ್ ನಲ್ಲೇ ಸೇಫ್ ಲ್ಯಾಂಡಿಂಗ್ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/from-today-google-pay-phone-pay-is-faster-what-changes-are-there-here-are-the-details/ https://kannadanewsnow.com/kannada/breaking-a-woman-who-questioned-rash-driving-in-bengaluru-was-attacked-by-a-cab-driver/
ನವದೆಹಲಿ: ಇಂದಿನಿಂದ ಗೂಗಲ್ ಪೇ, ಪೋನ್ ಪೇ ಮೂಲಕ ನೀವು ಮತ್ತಷ್ಟು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಹಾಗಾದ್ರೇ ಏನೆಲ್ಲಾ ಬದಲಾವಣೆ ಎನ್ನುವ ಬಗ್ಗೆ ಮುಂದೆ ಓದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ( NPCI) ಸಿಸ್ಟಮ್ ಅಪ್ ಗ್ರೇಡ್ ಮಾಡಲು ಆರಂಭಿಸಿದೆ. ಹೀಗಾಗಿ ಯುಪಿಐ ವಹಿವಾಟುಗಳನ್ನು ಪೂರ್ಣಗೊಳಿಸಲು ತೆಗೆದುಕೊಳ್ಳುವ ಸಮಯ ಇಂದಿನಿಂದ ಕಡಿಮೆಗೊಳಿಸಲಾಗಿದೆ. ಈ ಹಿಂದೆ ಏಪ್ರಿಲ್ 26, 2025ರಂದೇ ಸುತ್ತೋಲೆಯಲ್ಲಿ ಎಲ್ಲ ಸದಸ್ಯ ಬ್ಯಾಂಕ್, ಪೋನ್ ಪೇ, ಗೂಗಲ್ ಪೇ ಹಾಗೂ ಪೇಟಿಯಂ ಪ್ಲಾಟ್ ಫಾರ್ಮ್ ಗಳಿಗೆ ತಮ್ಮ ಸಿಸ್ಟಮ್ ಅಪ್ ಗ್ರೇಡ್ ಗೆ ಸೂಚಿಸಲಾಗಿತ್ತು. ಅದರಂತೆ ಮಾಡಲಾಗಿದ್ದು, ಹಣ ವರ್ಗಾವಣೆ, ಪರಿಶೀಲನೆ ಮತ್ತು ರಿವರ್ಸಲ್ ಗಳು ಸೇರಿದಂತೆ ವಿವಿಧ ವಹಿವಾಟಿಗೆ 30 ಸೆಕೆಂಡ್ ತೆಗೆದುಕೊಳ್ಳುತ್ತಿದ್ದಂತ ಸಮಯವು ಈಗ 10 ರಿಂದ 15 ಸೆಕೆಂಡುಗಳಲ್ಲಿ ಮುಗಿಯಲಿದೆ. ಇನ್ನೂ ಮೊಬೈಲ್ ಸಂಖ್ಯೆ ಅಥವಾ ಯುಪಿಐ ಐಡಿಗಳನ್ನು 10 ಸೆಕೆಂಡ್ ಗಳಲ್ಲಿ ಪರಿಶೀಲಿಸಬಹುದು. ಅದೇಗೆಂದರೇ ನೀವು ಅಂಗಡಿಗೆ ಹೋಗಿ ವಸ್ತು ಖರೀದಿಸಿ ಕ್ಯೂ ಆರ್…
ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾAಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ…
ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್ಗಳಿAದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಖಾಸಗಿ ಕಾಲೇಜುಗಳ ಸ್ಥಾಪಿಸಲು ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್), ಕೃಷಿ, ಬಿ.ಟೆಕ್. ಕೃಷಿ ಇಂಜಿನಿಯರಿAಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿಎಸ್ಸಿ (ಹಾರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್), ಕಮೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್), ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್), ರೇಷ್ಮೆ ಕೃಷಿ ಪದವಿಯ ವಿಷಯಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು. ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ಅಫಿಲಿಯೇಶ್ಗಾಗಿ ಕನಿಷ್ಟ ಮಾನದಂಡಗಳನ್ನು (ksnuahs-msacr 2025) www.ushs.edu.in ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳAತೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26…
ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಹೈದರಾಬಾದ್ ಅತ್ಯಾಚಾರ ಕೇಸ್ ಗೆ ನ್ಯಾಯಬೇಕು ಎಂಬುದಾಗಿ ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ಒತ್ತಾಯಿಸಲಾಗಿದೆ. ಈ ಸಂಬಂಧ ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಹಾಕಲಾಗಿದ್ದು, ಹೈದರಾಬಾದ್ ಕೇಸ್ ಗೆ ನ್ಯಾಯಕೊಡಿಸಿ. ಇಲ್ಲದೇ ಇದ್ದರೇ ಬಾಂಬ್ ಸ್ಫೋಟಿಸುತ್ತೇವೆ ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ರಾಜ ರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದಲ್ಲಿನ ಖಾಸಗಿ ಶಾಲೆಗಳಿಗೆ ಶಾಲೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. https://kannadanewsnow.com/kannada/big-news-kuws-chairman-vinay-kulakarni-urged-the-chief-minister-to-remove-him-from-the-position/ https://kannadanewsnow.com/kannada/breaking-a-woman-who-questioned-rash-driving-in-bengaluru-was-attacked-by-a-cab-driver/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Council – ICC) ಮಹಿಳಾ ಕ್ರಿಕೆಟ್ ವಿಶ್ವಕಪ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 30 ರಂದು ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 2 ರಂದು ಕೊಲಂಬೊ ಅಥವಾ ಬೆಂಗಳೂರಿನಲ್ಲಿ ನಡೆಯಲಿದೆ. ಆತಿಥೇಯ ಭಾರತ ತಂಡವು 2025 ರ ಐಸಿಸಿ ಮಹಿಳಾ ವಿಶ್ವಕಪ್ನ ( ICC Women’s World Cup 2025 ) ಮೊದಲ ಪಂದ್ಯವನ್ನು ಆಡಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವರು ಶ್ರೀಲಂಕಾ ವಿರುದ್ಧ ಸೆಣಸಲಿದ್ದಾರೆ. ಮರುದಿನ, ಆಸ್ಟ್ರೇಲಿಯಾ ಇಂದೋರ್ನ ಹೋಳ್ಕರ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. 2025 ರ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ…
ಕಲಬುರ್ಗಿ: ಜಿಲ್ಲೆಯಲ್ಲಿ ಕೋರ್ಟ್ ನ ಚೇಂಬರ್ ನಲ್ಲಿದ್ದಂತ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ಕೋರ್ಚ್ ಚೇಂಬರ್ ನಲ್ಲಿದ್ದಾಗಲೇ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದಂತ ವಿಶ್ವನಾಥ ಮುಗುಟಿ(44) ಎಂಬುವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೇ ಅವರು ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಅಂದಹಾಗೇ ಇಂದು ಎಂದಿನಂತೆ ಕೋರ್ಟ್ ಗೆ ನಗು ನಗುತ್ತಲೇ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರು ಆಗಮಿಸಿದ್ದರು. ತಮ್ಮ ಚೇಂಬರ್ ನಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕ, ಕಚೇರಿ ಸಿಬ್ಬಂದಿ ಸಹಾಯದಿಂದ ಕಲಬುರ್ಗಿಯ ಜಯದೇವ ಹದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೇ ಆ ವೇಳೆಗಾಗಲೇ ನ್ಯಾಯಾಧೀಶರು ಮೃತಪಟ್ಟಿದ್ದರು. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರ ನಿಧನಕ್ಕೆ ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಮೂರ್ತಿಗಳು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/mysuru-honey-trap-case-five-accused-including-a-police-constable-arrested/ https://kannadanewsnow.com/kannada/big-news-kuws-chairman-vinay-kulakarni-urged-the-chief-minister-to-remove-him-from-the-position/
ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳು ಹನಿಟ್ರ್ಯಾಪ್ ಖೆಡ್ಡಾವನ್ನು ಬಟ್ಟೆ ಅಂಗಡಿಯ ಮಾಲೀಕ ದಿನೇಶ್ ಎಂಬುವರಿಗೆ ತೋಡಿದ್ದರು. ದಿನೇಶ್ ಕುಮಾರ್ ಅಂಗಡಿಗೆ ಬಟ್ಟೆ ಖರೀದಿಗೆ ತೆರಳಿದ್ದಂತ ಯುವತಿ, ಆತನನ್ನ ಪರಿಚಯಿಸಿಕೊಂಡು ಪೋನ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಗೆ ಇಳಿದು, ಮನೆಯಲ್ಲಿ ಯಾರು ಇಲ್ಲ. ಕಾಪಿಗೆ ಬನ್ನಿ ಎಂಬುದಾಗಿ ದಿನೇಶ್ ಕುಮಾರ್ ಆಹ್ವಾನಿಸಿದ್ದರು. ಯುವತಿ ಮಾತಿಗೆ ಮರುಳಾಗಿ ತೆರಳಿದ್ದಂತ ವೇಳೆಯಲ್ಲಿ ಕಾನ್ಸ್ ಸ್ಟೇಬಲ್ ಶಿವಣ್ಣ, ಮೂರ್ತಿ ದಿಢೀರ್ ಮನೆಗೆ ನುಗ್ಗಿ ಹಿಗ್ಗಾಮುಗ್ಗಾ ದಿನೇಶ್ ಕುಮಾರ್ ಥಳಿಸಿ ವೀಡಿಯೋ ಮಾಡಿದ್ದರು. ಈ ಘಟನೆಯ ನಂತ್ರ ದಿನೇಶ್ ಕುಮಾರ್ ಗೆ ಬ್ಲಾಕ್ ಮೇಲ್ ಮಾಡಿ, ಈ ವಿಷಯ ಯಾರಿಗೂ ಹೇಳದಿರಲು 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಾನ…
ಬೆಂಗಳೂರು: “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ…
ದಾವಣಗೆರೆ : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು. ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು. ಕಾಯ್ದೆಯ ಪ್ರಕಾರ ಮರುಗಣತಿ ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು…