Author: kannadanewsnow09

ಬೆಂಗಳೂರು: ಈಗ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಬಸವಣ್ಣನ ಅನುಯಾಯಿಗಳೆಲ್ಲರೂ ಸಮೀಕ್ಷೆಯ ‘ಇತರೆ’ ಕಾಲಿನಲ್ಲಿ ‘ಲಿಂಗಾಯತ ಧರ್ಮ’ ಎಂದು ಬರೆಸಿ, ಜಾತಿ ಕಾಲಂನಲ್ಲಿ ತಮ್ಮತಮ್ಮ ಉಪಜಾತಿ/ಪಂಗಡಗಳ ಹೆಸರು ಬರೆಸಲು ಹೇಳಿದ್ದು, ಅದೇ ರೀತಿ ರಾಜ್ಯದ ಎಲ್ಲೆಡೆ ಮಾಡುತ್ತಿದ್ದಾರೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥರಾಗಿರುವ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ. ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಜಾತಿ ಗಣತಿಯಲ್ಲಿ ನಮ್ಮ ಸಮಾಜದವರೆಲ್ಲ ಲಿಂಗಾಯತ ಧರ್ಮ ಎಂದೇ ನಮೂದಿಸುವಂತೆ ಸಮುದಾಯದ ಸದಸ್ಯರಿಗೆ ಹೇಳಿದ್ದೇವೆ. ನಮ್ಮ ಒಕ್ಕೂಟದಲ್ಲಿ 400 ಸ್ವಾಮೀಜಿಗಳಿದ್ದಾರೆ. ಈ ವಿಚಾರದಲ್ಲಿ ಒಕ್ಕೂಟ ಒಮ್ಮತವನ್ನು ತಾಳಿದೆ. ಇದರಲ್ಲಿ ಬೇರೆಯವರು ಅನಗತ್ಯವಾಗಿ ಗೊಂದಲ ಹುಟ್ಟಿಸುತ್ತಿದ್ದಾರೆ’ ಎಂದು ಅವರು ನುಡಿದಿದ್ದಾರೆ. ‘ಅ.5ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ 500ಕ್ಕೂ ಹೆಚ್ಚು ಬಸವಪರ ಶ್ರೀಗಳು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ,…

Read More

ಬೆಂಗಳೂರು: ವಿಶ್ವ ಕಾಫಿ ದಿನದ ಪ್ರಯುಕ್ತ ಕಾಫಿ ಹೃದಯಭಾಗವಾದ ಕೊಡಗಿನಲ್ಲಿ ಜಾವಾ ಯೆಡ್ಜಿ ಮೋಟಾರ್‌ ಸೈಕಲ್‌ ವತಿಯಿಂದ “ಹೋಮ್‌ಕಮಿಂಗ್ ರೈಡ್‌ನೊಂದಿಗೆ “ಪ್ರೀಮಿಯಂ ಲಿಮಿಟೆಡ್-ಎಡಿಷನ್ ಸಿಂಗಲ್-ಒರಿಜಿನ್ ಯೆಜ್ಡಿ ಕಾಫಿ”ಬಿಡುಗಡೆ ಮಾಡಿದೆ. ಕಂಪನಿಯು ತನ್ನ ಐಕಾನಿಕ್ ಜಾವಾ ಯೆಜ್ಡಿ ನೊಮ್ಯಾಡ್ಸ್ ರೈಡಿಂಗ್ ಕಾರ್ಯಕ್ರಮವನ್ನು ಪುನರುಜ್ಜೀವನಗೊಳಿಸಿದ್ದು, ಲೆವಿಸ್ಟಾ ಕಾಫಿಯೊಂದಿಗೆ ತಮ್ಮ SLN ಕಾಫಿ ಎಸ್ಟೇಟ್‌ನಲ್ಲಿ ಸಹಭಾಗಿತ್ವದಲ್ಲಿ ಏಕ-ಮೂಲದ, ಗೌರ್ಮೆಟ್ ‘ಯೆಜ್ಡಿ ಕಾಫಿ’ಯನ್ನು ಪ್ರಾರಂಭಿಸಿದೆ. 2018 ರಲ್ಲಿ, ಕಂಪನಿಯು ಕಾರ್ಯಕ್ಷಮತೆಯ ಕ್ಲಾಸಿಕ್ ಮೋಟಾರ್‌ಸೈಕಲ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಮಧ್ಯಮ ಗಾತ್ರದ ವಿಭಾಗದಲ್ಲಿ ಐಕಾನಿಕ್ ಬ್ರ್ಯಾಂಡ್‌ಗಳಾದ ಜಾವಾ ಮತ್ತು ಯೆಜ್ಡಿಗಳ ಮರಳುವಿಕೆಯನ್ನು ಗುರುತಿಸಿತು. ಸಾಂಪ್ರದಾಯಿಕ ಮಾರ್ಗದಿಂದ ಸವಾರಿ ಮಾಡುವ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಹಂಚಿಕೆಯ ಮೌಲ್ಯಗಳ ಸುತ್ತ ಸಮುದಾಯಗಳು ಮತ್ತು ಉಪಸಂಸ್ಕೃತಿಗಳನ್ನು ನಿರ್ಮಿಸುವತ್ತ ಗಮನಹರಿಸಿತು. ವಿಶೇಷ ಆವೃತ್ತಿಯ ಯೆಜ್ಡಿ x ಲೆವಿಸ್ಟಾ ಕಾಫಿ ಪ್ಯಾಕ್ ಕೂರ್ಗ್‌ನ ಶ್ರೀಮಂತ ಕಾಫಿ ಪರಿಣತಿಯನ್ನು ಸೆರೆಹಿಡಿಯಲು ಅಸಾಧಾರಣವಾಗಿ ರಚಿಸಲಾದ ಎರಡು ಪ್ರಭೇದಗಳನ್ನು ನೀಡುತ್ತದೆ. ಒಂದು ಮೈಸೂರು ನುಗ್ಗೆಟ್ಸ್ ಎಕ್ಸ್‌ಟ್ರಾ ಬೋಲ್ಡ್, ಎಎಎ-ದರ್ಜೆಯ ಬೀನ್ಸ್‌ನಿಂದ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ. ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಮಾಜಿ ಪ್ರಧಾನಿಗಳು; ನೆರೆ ಪರಿಹಾರ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಪ್ರವಾಹದಿಂದ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ 3-4 ದಿನಗಳಲ್ಲಿ ನಾನೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಈ ಸರಕಾರ ಏನೆಲ್ಲಾ ಪರಿಹಾರವನ್ನು ಒದಗಿಸಿದೆ ಎಂಬುದನ್ನು ಖುದ್ದು ನೋಡುತ್ತೇನೆ ಎಂದರು. ಸಾಧ್ಯವಿರುವ ಕಡೆಗಳಿಗೆ ನಾನು ರಸ್ತೆಯ ಮೂಲಕವೇ ತೆರಳಿ ನೆರೆ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಅವರಿಂದ ಮಾಹಿತಿ ಪಡೆಯುತ್ತೇನೆ. ಆಗಿರುವ ನಷ್ಟದ ಬಗ್ಗೆ ವಿವರ ಪಡೆದು ಅದಕ್ಕೆ ತಕ್ಕಂತೆ ರಾಜ್ಯ ಸರಕಾರ ನೆರವಿಗೆ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ…

Read More

ಬೆಂಗಳೂರು ಗ್ರಾಮಾಂತರ: ಜಲ್ಲಿಕಲ್ಲು ಇದ್ದಿದ್ದರಿಂದ ರಸ್ತೆಗೆ ಪಲ್ಟಿಯಾದ ಯುವತಿಯರಿಬ್ಬರ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಶಿವನಾಪುರ ಕ್ರಾಸ್ ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರದಲ್ಲಿ ಜಲ್ಲಿಕಲ್ಲು ರಸ್ತೆಯಲ್ಲಿದ್ದ ಕಾರಣ ಸ್ಕಿಡ್ ಆಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಇಬ್ಬರು ಯುವತಿಯರು ರಸ್ತೆಗೆ ಬಿದ್ದಿದ್ದಾರೆ. ಇವರ ಹಿಂದೆಯೇ ಬರುತ್ತಿದ್ದಂತ ಕ್ಯಾಂಟರ್ ನಿಯಂತ್ರಣ ಕಳೆದುಕೊಂಡು ಯುವತಿಯರ ಮೇಲೆ ಹರಿದಿದೆ. ಈ ಪರಿಣಾಮ ಯುವತಿಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದವರನ್ನು ಶೈಲಾ(25) ಹಾಗೂ ಶ್ವೇತಾ(22) ಎಂಬುದಾಗಿ ಗುರುತಿಸಲಾಗಿದೆ. ಶಿವನಾಪುರ ಕ್ರಾಸ್ ಬಳಿಯಲ್ಲಿ ಸಂಭವಿಸಿದಂತ ಈ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣ ಹೊಂದಿದ್ದಾರೆ. https://kannadanewsnow.com/kannada/alert-smokers-beware-cigarettes-can-cause-these-serious-diseases/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/

Read More

ಬೆಂಗಳೂರು: ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ನಲ್ಲಿ ಸಿಲಿಂಡರ್ ಸ್ಫೋಟ ಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇಂದು ವಿಷಯ ತಿಳಿದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದಂತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಅಲ್ಲದೇ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೃತರಾದ ಹಾಲಪ್ಪ ಹಾಗೂ ಗಂಗಮ್ಮ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಈ ವೇಳೆ ಮಾತನಾಡಿದಂತ ಅವರು, ಈ ಘಟನೆಯಿಂದ ಮನೆಗೆ ಹಾನಿಯಾಗಿದ್ದು ವೈಯಕ್ತಿಕ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿದರು. ನಂತರ ಆಂಬುಲೆನ್ಸ್ ಮೂಲಕ ಪಾರ್ಥಿ ವ ಶರೀರ ಸ್ವ ಗ್ರಾಮಕ್ಕೆ ಕಳುಹಿಸಿಕೊಡಲು ಸಚಿವರು ವ್ಯವಸ್ಥೆ ಮಾಡಿಕೊಟ್ಟರು. ಅಂತ್ಯಕ್ರಿಯೆಗೆ ಎಲ್ಲ ರೀತಿಯ…

Read More

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ 25 ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಶಿವಮೊಗ್ಗದಲ್ಲಿ ಇಂದು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಸಂವಿಧಾನದ ಪೀಠಿಕೆಯನ್ನು ಓದಿ ಪ್ರಮಾಣ ಮಾಡಿದಂತೆ, ನಮ್ಮ ಶಿಕ್ಷಕರು ಈ ಕೆಲಸವನ್ನು ಅತ್ಯುತ್ತಮವಾಗಿ ಮಾಡಿದ್ದಾರೆ. ಇದು ಕೇವಲ ಸಮೀಕ್ಷೆ ಅಲ್ಲ, ಸಂವಿಧಾನವನ್ನು ಎತ್ತಿ ಹಿಡಿಯುವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕೆಲಸವಾಗಿದೆ” ಎಂದರು. ಜಿಲ್ಲೆಯಲ್ಲಿ ಸಮೀಕ್ಷೆಯ ಪ್ರಗತಿಯನ್ನು ಮೆಚ್ಚಿದ ಅವರು, ರಾಜ್ಯದ ಸರಾಸರಿ 54% ರಷ್ಟಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ 63.46% ರಷ್ಟು ಗಣತಿ ಪೂರ್ಣಗೊಂಡಿದೆ.…

Read More

ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ. ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ. ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯನ್ನು ನುಡಿಯಲಾಗಿದ್ದು ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ, ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದ ಇರಬೇಕು ಪರಾಕ್ ಎಂಬುದಾಗಿ ನುಡಿಯಲಾಗಿದೆ. https://kannadanewsnow.com/kannada/nifty-nears-24900-sensex-rises-200-points/ https://kannadanewsnow.com/kannada/alert-smokers-beware-cigarettes-can-cause-these-serious-diseases/

Read More

ನವದೆಹಲಿ: ಅಕ್ಟೋಬರ್ 3 ರಂದು ಭಾರತೀಯ ಮಾನದಂಡ ಸೂಚ್ಯಂಕಗಳು ನಿಫ್ಟಿಯೊಂದಿಗೆ 24,900 ಕ್ಕೆ ಏರಿಕೆಯಾಗಿ ಕೊನೆಗೊಂಡವು. ಸೆನ್ಸೆಕ್ಸ್ 200 ಅಂಕಗಳಿಗೆ ಏರಿಕೆಯಾಗಿದೆ. ಟಾಟಾ ಸ್ಟೀಲ್, ಪವರ್ ಗ್ರಿಡ್ ಕಾರ್ಪ್, ಹಿಂಡಾಲ್ಕೊ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಎಲ್ & ಟಿ ಪ್ರಮುಖ ಲಾಭ ಗಳಿಸಿದವುಗಳಲ್ಲಿ ಸೇರಿವೆ, ಆದರೆ ಮ್ಯಾಕ್ಸ್ ಹೆಲ್ತ್‌ಕೇರ್, ಕೋಲ್ ಇಂಡಿಯಾ, ಮಾರುತಿ ಸುಜುಕಿ, ಟೆಕ್ ಮಹೀಂದ್ರಾ ಮತ್ತು ಎಸ್‌ಬಿಐ ಲೈಫ್ ಇನ್ಶುರೆನ್ಸ್ ನಷ್ಟ ಅನುಭವಿಸಿದವು. ಫಾರ್ಮಾ, ರಿಯಾಲ್ಟಿ, ಎಫ್‌ಎಂಸಿಜಿ ಹೊರತುಪಡಿಸಿ, ಇತರ ಎಲ್ಲಾ ವಲಯ ಸೂಚ್ಯಂಕಗಳು ಲೋಹವು ಶೇಕಡಾ 2 ರಷ್ಟು ಮತ್ತು ಪಿಎಸ್‌ಯು ಬ್ಯಾಂಕ್ ಶೇಕಡಾ 1 ರಷ್ಟು ಏರಿಕೆಯಾಗಿ ಕೊನೆಗೊಂಡಿತು. ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕವು ಶೇಕಡಾ 0.8 ರಷ್ಟು ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕವು ಶೇಕಡಾ 1 ರಷ್ಟು ಏರಿಕೆಯಾಗಿದೆ. https://kannadanewsnow.com/kannada/the-central-government-is-patting-itself-on-the-back-by-cutting-the-gst-it-itself-had-increased-cm-siddaramaiah-sarcastically/ https://kannadanewsnow.com/kannada/alert-smokers-beware-cigarettes-can-cause-these-serious-diseases/

Read More

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು. ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ ಕೇಂದ್ರದಿಂದ…

Read More

ಬೆಳಗಾವಿ : ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದಲ್ಲಿ ವಿವಿಧೆಡೆ ಮಳೆ ಹಾನಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಷ್ಕಿಗೆ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನೀಡಿದರೂ. ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿದ್ದಾರೆ. ನಾನೂ ಸೇರಿದಂತೆ ಬಿಜೆಪಿ ನಾಯಕರು ಪ್ರವಾಹವಾದ ಕಡೆಗಳಲ್ಲಿ ಪ್ರವಾಸ ಮಾಡಿದ್ದೇವೆ. ಆದರೆ ಸರ್ಕಾರದ ವತಿಯಿಂದ ಯಾರೂ ಪ್ರವಾಸ ಮಾಡಿಲ್ಲ. ಬಿಜೆಪಿ ಅವಧಿಯಲ್ಲಿ ಹಾನಿಯಾದಾಗ, ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಬೆಳೆ ಪರಿಹಾರ ಹಾಗೂ ಮನೆ ಹಾನಿ ಪರಿಹಾರವನ್ನು ಡಬಲ್‌ ಮಾಡಲಾಗಿತ್ತು. ಮನೆ ಬಾಗಿಲಿಗೆ ನೀರು ಬಂದರೂ 24 ಗಂಟೆಯೊಳಗೆ ಪರಿಹಾರ ನೀಡಲಾಗಿತ್ತು. ಜೊತೆಗೆ ಪ್ರತಿ ಮನೆಗೆ ಆಹಾರ ಕಿಟ್‌ಗಳನ್ನು ನೀಡಲಾಗಿತ್ತು.…

Read More