Author: kannadanewsnow09

ಮುಂಬೈ: ಪುಣೆ ಪೋರ್ಷೆ ವಿಮಾನ ದುರಂತ ಪ್ರಕರಣದ ಹದಿಹರೆಯದ ಆರೋಪಿಯನ್ನು ವೀಕ್ಷಣಾ ಗೃಹದಲ್ಲಿ ಮುಂದುವರಿಸುವುದು ಕಾನೂನುಬಾಹಿರ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.ಹದಿಹರೆಯದವರ ಕಸ್ಟಡಿಯನ್ನು ಅವನ ತಂದೆಯ ಚಿಕ್ಕಮ್ಮನಿಗೆ ಹಸ್ತಾಂತರಿಸುವಂತೆ ಎಂದು ಹೈಕೋರ್ಟ್ ನಿರ್ದೇಶಿಸಿದೆ. ನಾವು ಕಾನೂನು, ಬಾಲನ್ಯಾಯ ಕಾಯ್ದೆಯ ಉದ್ದೇಶಗಳು ಮತ್ತು ಉದ್ದೇಶಗಳಿಗೆ ಬದ್ಧರಾಗಿದ್ದೇವೆ ಮತ್ತು ಅಪರಾಧದ ಗಂಭೀರತೆಯ ಹೊರತಾಗಿಯೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಯಾವುದೇ ಮಗುವಿನಂತೆ ಅವನನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮೇ 19 ರಂದು ಪುಣೆಯಲ್ಲಿ ಐಷಾರಾಮಿ ಕಾರಿನೊಂದಿಗೆ ಕುಡಿದ ಅಮಲಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಹದಿಹರೆಯದವರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ್ದರು. https://kannadanewsnow.com/kannada/breaking-delhi-delhi-high-court-stays-bail-order-of-delhi-cm-arvind-kejriwal/ https://kannadanewsnow.com/kannada/david-warners-international-retirement-confirmed-after-australia-exit/

Read More

ಪುಣೆ: ಪುಣೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಈ ಮೂಲಕ ಐಶಾರಾಮಿ ಕಾರು ಅಪಘಾತದ ಬಾಲಾಪರಾಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. https://twitter.com/ANI/status/1805534372134896106 ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಬಾಲಾಪರಾಧಿಯನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ ಮತ್ತು ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸುವ ರಿಮಾಂಡ್ ಆದೇಶಗಳನ್ನು ರದ್ದುಗೊಳಿಸುವಂತೆ ಕೋರಿ ಆತನ ಚಿಕ್ಕಮ್ಮ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಗೆ ಅನುಮತಿ ನೀಡಿದೆ. “ಕಾನೂನುಬಾಹಿರ ಮತ್ತು ನಿರಂಕುಶ” ರೀತಿಯಲ್ಲಿ ಅವನನ್ನು ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಚಿಕ್ಕಮ್ಮ ಹೇಳಿಕೊಂಡಿದ್ದರು. ಮೇ 19 ರ ಮುಂಜಾನೆ, ಅಪ್ರಾಪ್ತ ವಯಸ್ಕನು ಕುಡಿದ ಅಮಲಿನಲ್ಲಿ ಪೋರ್ಷೆ ಕಾರನ್ನು ಅತಿ ವೇಗದಲ್ಲಿ ಓಡಿಸುತ್ತಿದ್ದಾಗ ವಾಹನವು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸಾವನ್ನಪ್ಪಿದ ಘಟನೆ ಪುಣೆಯ ಕಲ್ಯಾಣಿ ನಗರದಲ್ಲಿ ನಡೆದಿದೆ. ಕಸ್ಟಡಿ ಆದೇಶವು ಕಾನೂನುಬಾಹಿರ ಮತ್ತು ನ್ಯಾಯವ್ಯಾಪ್ತಿ ಇಲ್ಲದೆ ಅಂಗೀಕರಿಸಲ್ಪಟ್ಟಿದೆ ಎಂದು ನ್ಯಾಯಾಲಯವು…

Read More

ಬೆಂಗಳೂರು: ಕೆಎಂಎಫ್ ನಿಂದ ರಾಜ್ಯಾಧ್ಯಂತ ನಂದಿನಿ ಹಾಲಿನ ( Nandini Milk ) ದರ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಂದಿನಿ ವಿವಿಧ ಹಾಲಿನ ದರಗಳು ನಾಳೆಯಿಂದ ಹೆಚ್ಚಳವಾಗಲಿದ್ದಾವೆ. ಹಾಗಾದ್ರೇ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ( KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಭಾರತದ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್‌ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ ಎಂದಿದೆ. ಪ್ರಸ್ತುತ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸೋಮವಾರ ರಾತ್ರಿ ಸೇಂಟ್ ವಿನ್ಸೆಂಟ್ನಲ್ಲಿ ಅಫ್ಘಾನಿಸ್ತಾನವು ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಡೇವಿಡ್ ವಾರ್ನರ್ ಅವರ 15 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನವು ಕೊನೆಗೊಂಡಿತು. ಈ ಮೂಲಕ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.  ಇದು ನಂಬಲಾಗದ ಸಂಗತಿಯಾಗಿದೆ. ನಾವು ಖಂಡಿತವಾಗಿಯೂ ಅವರನ್ನು ಗುಂಪಿನಲ್ಲಿ, ಮೈದಾನದ ಹೊರಗೆ ಮತ್ತು ಮೈದಾನದ ಹೊರಗೆ ಕಳೆದುಕೊಳ್ಳುತ್ತೇವೆ – ಅದ್ಭುತ ಆಲ್-ಫಾರ್ಮ್ಯಾಟ್ ವೃತ್ತಿಜೀವನ,” ಎಂದು ಇಎಸ್ಪಿಎನ್ ಕ್ರಿಕ್ಇನ್ಫೋ ಆಸೀಸ್ ಆರಂಭಿಕ ಆಟಗಾರನ ಬಗ್ಗೆ ಜೋಶ್ ಹೇಜಲ್ವುಡ್ ಅವರನ್ನು ಉಲ್ಲೇಖಿಸಿದೆ. ವಾರ್ನರ್ 110 ಪಂದ್ಯಗಳಲ್ಲಿ 3277 ರನ್ ಗಳಿಸಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡವು 2024 ರ ಟಿ 20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೆ ಪ್ರವೇಶಿಸಿದೆ. ಬಾಂಗ್ಲಾದೇಶ ವಿರುದ್ಧದ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಮೊದಲ ಬಾರಿಗೆ ಟಿ 20 ವಿಶ್ವಕಪ್ನ ಸೆಮಿಫೈನಲ್ಗೆ ಅರ್ಹತೆ ಪಡೆಯಿತು. ಈ ಪಂದ್ಯದಲ್ಲಿ ಅಫ್ಘಾನಿಸ್ತಾನದ ಗೆಲುವಿನೊಂದಿಗೆ, ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರಯಾಣ ಕೊನೆಗೊಂಡಿತು. ಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ನಿರ್ಗಮಿಸುವುದರೊಂದಿಗೆ,…

Read More

ಸಾಲದ ಹೊರೆಯನ್ನು ಸಹಿಸಲಾಗಲಿಲ್ಲ. ಕೆಲವರು ಊರು ಬಿಟ್ಟು ಓಡಿ ಹೋಗುವಂತಾಗಿದೆ ಎಂದು ದೂರುವುದನ್ನು ಕೇಳಿದ್ದೇವೆ. ಇಂತಹ ದೊಡ್ಡ ಸಾಲದ ಹೊರೆಯಿಂದ ನರಳುತ್ತಿರುವವರಿಗೂ ಈ ಗಣೇಶ ಪರಿಕರಂ ಪರಿಹಾರ ನೀಡಬಲ್ಲದು. ಸಾಲದ ಹೊರತಾಗಿ ಇತರ ಅಡೆತಡೆಗಳಿವೆ. ಆ ಅಡಚಣೆಯನ್ನು ಮುರಿಯಲು ಈ ಆಚರಣೆಯನ್ನೂ ಮಾಡಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ಬೆಂಗಳೂರು: ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಜಾಮೀನು ಮಂಜೂರಾಗಿದೆ. ಇಂದು ಈ ಪ್ರಕರಣ ಕುರಿತಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಗರದ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ, ನ್ಯಾಯಾಲಯವು ಉದಯನಿಧಿ ಸ್ಟಾಲಿನ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದು ವಿಚಾರಣೆಗೆ ಹಾಜರಾಗುವಂತೆಯೂ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಅವರು ಕೋರ್ಟ್ ಗೆ ಖುದ್ದು ವಿಚಾರಣೆಗೆ ಹಾಜರಾಗಿದ್ದರು. ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಎಲ್ಲಾ ಕೇಸ್ ಗಳನ್ನು ಒಂದೇ ಕಡೆ ವಿಚಾರಣೆ ವರ್ಗಾವಣೆ ಕೋರಿದ್ದಂತ ಅರ್ಜಿಯ ಸಂಬಂಧ ಪ್ರತಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಆಗಸ್ಟ್.8ಕ್ಕೆ ಮುಂದೂಡಿದೆ. ಅಂದಹಾಗೇ ಕಳೆದ ಸೆಪ್ಟೆಂಬರ್.4, 2024ರಂದು ಚೆನ್ನೈನ ತೇನಂ ಪೇಟೆಯಲ್ಲಿ ನಡೆದಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಂತ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದೆ. ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎನ್ನುವ ಕೂಗು ಕೇಳಿ ಬಂದಿದೆ. ಇದಕ್ಕೆ ಸಕಾರಾತ್ಮಕವಾಗೇ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡೋದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಇಂದು ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾದಂತ ರೇಣುಕಾಸ್ವಾಮಿ ಅವರ ತಂದೆ, ತಾಯಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡರು. ಜೊತೆಗೆ ಪೊಲೀಸ್ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗೇ ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/korean-plane-crashes-to-25000-feet-in-15-minutes-13-passengers-hospitalised/ https://kannadanewsnow.com/kannada/big-news-suraj-revanna-to-undergo-medical-examination-today-in-unnatural-sexual-assault-case-suraj-revanna/

Read More

ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಾಳೆ ತುಮಕೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ನಾಳಿನ ತುಮಕೂರು ಬಂದ್ ಗೆ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ರೈತಪರ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ಹೋಟೆಲ್ ಅಸೋಷಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದಾವೆ. ನಾಳೆ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಕಾರರು ತೆರಳಲಿದ್ದಾರೆ. ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಅದರಲ್ಲೂ ಹೇಮಾವತಿ ಲಿಂಕ್ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ನಗರದಲ್ಲಿ ನಾಳೆಯ ಬಂದ್ ಗೆ ಅತಿಹೆಚ್ಚು ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ನಾಳೆ ತುಮಕೂರು ನಗರ ಸೇರಿದಂತೆ 10 ತಾಲ್ಲೂಕಿನಲ್ಲಿ ಹೇಮಾವತಿ ಲಿಂಕ್ ವಿರೋಧಿಸಿ ಬಂದ್…

Read More

ಬೆಂಗಳೂರು: ನಟಿ ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣದಲ್ಲಿ ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅದೇ ಅವರ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನಟಿ ಸಂಜನಾ ಗಲ್ರಾನಿ ಅವರು ತಮ್ಮ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ಅವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಅಂದಹಾಗೇ 2020ರ ಸೆಪ್ಟೆಂಬರ್ ನಲ್ಲಿ ನಟಿ ಸಂಜನಾ ಗಲ್ರಾಣಿ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ದಾಳಿ ನಡೆಸಿ, ಬಂಧಿಸಿತ್ತು. ಆ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇಂತಹ ಎಫ್ಐಆರ್ ಅನ್ನು ಹೈಕೋರ್ಟ್ ಇಂದು ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/here-are-the-highlights-of-todays-revenue-minister-krishna-byre-gowdas-progress-review-meeting/ https://kannadanewsnow.com/kannada/state-government-appoints-gram-panchayat-secretaries-as-deputy-registrars-of-births-and-deaths/ https://kannadanewsnow.com/kannada/i-will-not-run-away-from-channapatna-for-power-dk-shivakumar/

Read More

ಕಲಬುರಗಿ : ಈ ವರ್ಷದ ಮಾನ್ಸೂನ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದ್ದು, ಕೆಲವು ತಾಲೂಕುಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆಗಳಿವೆ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಪಂಚಾಯತ್‌ ಮಟ್ಟದಿಂದಲೂ ಎಲ್ಲಾ ಅಧಿಕಾರಿಗಳೂ ಮುಂಜಾಗ್ರತಾ ಕ್ರಮವಹಿಸಬೇಕು. ಯಾರ ಮೇಲೂ ಬೊಟ್ಟು ತೋರಿಸದೆ ವ್ಯಯಕ್ತಿಕ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಕಲಬುರಗಿ ಸೇರಿದಂತೆ ಈ ಕಂದಾಯ ವಿಭಾಗದ ಹಲವು ತಾಲೂಕುಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ನದಿಪಾತ್ರದ ಕೆಲ ಗ್ರಾಮಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದ್ದು, ಅಧಿಕಾರಿಗಳು ಅವಘಡ ಸಂಭವಿಸುವ ಮುನ್ನ ಮುಜಾಗ್ರತೆ ವಹಿಸಬೇಕು. ಮಳೆ ಬೀಳುವ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಎಲ್ಲಾ ಜೀವಗಳನ್ನೂ ಉಳಿಸುವ ನಿಟ್ಟಿನಲ್ಲಿ ಶ್ರಮವಹಿಸಬೇಕು” ಎಂದರು.…

Read More