Author: kannadanewsnow09

ಇಸ್ಲಮಾಬಾದ್: ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದಂತ ಮತ್ತಿಬ್ಬರು ಪಾಕಿಸ್ತಾನದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದಾಗಿ ಪಾಕ್ ದೃಢಪಡಿಸಿದೆ. ಹೀಗಾಗಿ ಭಾರತದ ದಾಳಿಯಲ್ಲಿ ಸಾವನ್ನಪ್ಪಿದ ಪಾಕಿಸ್ತಾನದ ಸೈನಿಕರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮೇ 6-7 ರಂದು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ವಾಯುದಾಳಿ (ಆಪರೇಷನ್ ಸಿಂಧೂರ್)ದಲ್ಲಿ ತನ್ನ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಬುಧವಾರ (ಮೇ 14) ದೃಢಪಡಿಸಿದೆ. ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ದೃಢಪಡಿಸಿದ ನಂತರ, ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯಲ್ಲಿ ಸಾವನ್ನಪ್ಪಿದ ಪಾಕಿಸ್ತಾನಿ ಸೈನಿಕರ ಸಂಖ್ಯೆ 13 ಕ್ಕೆ ತಲುಪಿದ್ದು, ಗಾಯಗೊಂಡವರ ಸಂಖ್ಯೆ 78 ಆಗಿದೆ. https://kannadanewsnow.com/kannada/controversial-statement-about-colonel-sophia-court-orders-filing-of-fir-against-bjp-minister/ https://kannadanewsnow.com/kannada/there-is-big-sweet-news-for-the-doctors-and-staff-nurses-who-will-be-appointed-under-the-nhm-scheme-in-the-state/

Read More

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸಚಿವ ವಿಜಯ್ ಶಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ. ಆಪರೇಷನ್ ಸಿಂಧೂರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕ ವಿಜಯ್ ಶಾ ದೊಡ್ಡ ವಿವಾದವನ್ನು ಹುಟ್ಟುಹಾಕಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನಮ್ಮ ಸಹೋದರಿಯರ ಸಿಂಧೂರವನ್ನು (ಸಿಂಧೂರ) ಅಳಿಸಿಹಾಕಿದ ಜನರು (ಭಯೋತ್ಪಾದಕರು). ಈ ‘ಕೇಟ್-ಪೈಟ್’ ಜನರನ್ನು ನಾಶಮಾಡಲು ಅವರ ಸಹೋದರಿಯನ್ನು ಕಳುಹಿಸುವ ಮೂಲಕ ನಾವು ಸೇಡು ತೀರಿಸಿಕೊಂಡಿದ್ದೇವೆ ಎಂದು ಇಂದೋರ್ ಬಳಿಯ ರಾಮಕುಂಡ ಗ್ರಾಮದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು ಹೇಳಿದರು. ಅವರು (ಭಯೋತ್ಪಾದಕರು) ನಮ್ಮ ಹಿಂದೂ ಸಹೋದರರನ್ನು ಬಟ್ಟೆ ಬಿಚ್ಚುವಂತೆ ಮಾಡಿ ಕೊಂದರು. ಪ್ರಧಾನಿ ಮೋದಿ ಅವರು ತಮ್ಮ (ಭಯೋತ್ಪಾದಕರ) ಸಹೋದರಿಯನ್ನು ಸೇನಾ ವಿಮಾನದಲ್ಲಿ ಕಳುಹಿಸಿ ಅವರ ಮನೆಗಳ ಮೇಲೆ ದಾಳಿ ಮಾಡಿದರು. ಅವರು…

Read More

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ನಾಯಕ ಮತ್ತು ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದೆ. ಭಾರತೀಯ ನ್ಯಾಯ ಸಂಹಿತಾ, 2023 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಸಚಿವರ ವಿರುದ್ಧ ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಯಾವುದೇ ಕೃತ್ಯವನ್ನು ಅಪರಾಧೀಕರಿಸುವ ಬಿಎನ್‌ಎಸ್‌ನ ಸೆಕ್ಷನ್ 152 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧವನ್ನು ಮಾಡಿದೆ ಎಂದು ತೀರ್ಪು ನೀಡಿದೆ. ಬಿಎನ್‌ಎಸ್‌ನ ಸೆಕ್ಷನ್ 192 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧವನ್ನು ಮಾಡಲಾಗಿದೆ, ಇದು ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಅಥವಾ ಜಾತಿಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದನ್ನು ವ್ಯವಹರಿಸುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಇಸ್ಲಾಂ ಧರ್ಮದ ಅನುಯಾಯಿಯಾದ ಕರ್ನಲ್…

Read More

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ. ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ…

Read More

ಬೆಂಗಳೂರು: ದೇಶದ ವಿಚಾರದಲ್ಲೂ ಕಾಂಗ್ರೆಸ್ಸಿಗರು ಪಾಕಿಸ್ತಾನಕ್ಕೆ ಸಹಾಯ ಆಗುವಂತೆ ಮಾತನಾಡುತ್ತಾರೆ. ಯಾಕೆ ಹೀಗೆ? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಇದೆ. ನಾವು ಯಾವತ್ತೂ ನಮ್ಮ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿಲ್ಲ. ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ; ಯುದ್ಧರಂಗಕ್ಕೆ ಹೋದವರು ಸೈನಿಕರೇ ಎಂದರು. ಕಾಂಗ್ರೆಸ್ಸಿನವರು ಹಿಂದೆ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದೀರಲ್ಲವೇ ಎಂದು ಕೇಳಿದರು. ಆಗ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿದ್ದೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮಗೆ ಆಗ ಸೈನಿಕರ ಬಗ್ಗೆ ನಂಬಿಕೆ ಎಲ್ಲಿ ಹೋಗಿತ್ತು? ಎಂದರಲ್ಲದೆ, ನಾವು ನಮ್ಮ ಸೈನಿಕರನ್ನು ನಂಬುತ್ತೇವೆ; ಅವರ ಬಗ್ಗೆ ನಮಗೆ ಹೆಮ್ಮೆಯೂ ಇದೆ ಎಂದು ನುಡಿದರು. 1962ರ ಭಾರತ- ಚೀನಾ ಯುದ್ಧವನ್ನು ಹೊರತುಪಡಿಸಿ ಇನ್ಯಾವುದೇ ಯುದ್ಧದಲ್ಲಿ ನಮ್ಮ ಸೈನಿಕರು ಯುದ್ಧಭೂಮಿಯಲ್ಲಿ ಸೋತಿಲ್ಲ ಎಂದು ವಿವರಿಸಿದರು. ಆಗ ಯುದ್ಧ ನಿಲ್ಲಿಸಿದ್ದೇಕೆ? 1948ರಲ್ಲಿ ಯುದ್ಧದ…

Read More

ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು. 108 ಅಂಬ್ಯುಲೆನ್ಸ್ ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ.. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು.‌ ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು…

Read More

ಸಾಗರ: ಪ್ರಾಣಿ ಜನನ ನಿಯಂತ್ರಣ ನಿಯಮ 2001ನ್ನು ಕಡ್ಡಾಯವಾಗಿ ಪಾಲಿಸುವಂತೆ ಒತ್ತಾಯಿಸಿ ಬುಧವಾರ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಸದಸ್ಯರು ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ಅವರಿಗೆ ಮನವಿ ಸಲ್ಲಿಸಿದರು. ಭಾರತ ಸರ್ಕಾರ ಪ್ರಾಣಿ ಜನನ ನಿಯಂತ್ರಣ ನಿಯಮಗಳು 2001 (ನಾಯಿಗಳು) ಜಾರಿಗೊಳಿಸಿರುತ್ತದೆ. ಸದರಿ ನಿಯಮ ಪ್ರಕಾರ ಪ್ರಾದೇಶಿಕ ಹೊಣೆಗಾರಿಕೆಯನ್ನು ಸಾಗರ ನಗರಸಭೆ ಹೊಂದಿರುತ್ತದೆ. ಸದರಿ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ಮೂಲಕ ಸಾರ್ವನಿಕರ ನೆಮ್ಮದಿಗೆ ಮತ್ತು ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಗರಸಭೆಯದ್ದೇ ಆಗಿರುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಆದರೆ ಸಾಗರ ನಗರಸಭೆ ಭಾರತ ಸರ್ಕಾರ ಅನುಷ್ಟಾನಗೊಳಿಸಿರುವ ಪ್ರಾಣಿ ಜನನ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುತ್ತದೆ. ಈ ಹಿಂದೆ ಒಂದೆರಡು ಬಾರಿ ಕಾನೂನು ಜಾರಿಗೆ ಪ್ರಯತ್ನ ನಡೆಸಿದ್ದಾಗ್ಯೂ ಅದು ಯಶಸ್ವಿಯಾಗಿಲ್ಲ. ಆದ್ದರಿಂದ ತಕ್ಷಣ ನಿಯಮವನ್ನು ಜಾರಿಗೆ ತರಬೇಕು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಬೇಕು. ಸಮಿತಿಯ ಸಲಹೆ ಸೂಚನೆ ಮೇರೆಗೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.…

Read More

ನವದೆಹಲಿ: ಇಂದು ಹೂಡಿಕೆದಾರರಿಗೆ ಸಂತಸದ ಸುದ್ದಿಯನ್ನು ಶೇರು ಮಾರುಕಟ್ಟೆ ತಂದಿದೆ. ನಿಫ್ಟಿ 50 ಸೂಚ್ಯಂಕವು 0.36% ರ್ಯಾಲಿ ಅಥವಾ 88-ಪಾಯಿಂಟ್‌ಗಳ ಏರಿಕೆಯೊಂದಿಗೆ 24,666 ಕ್ಕೆ ಮುಕ್ತಾಯವಾಯಿತು, ಆದರೆ ಸೆನ್ಸೆಕ್ಸ್ 82,429 ಪಾಯಿಂಟ್‌ಗಳಲ್ಲಿ ಮುಕ್ತಾಯವಾಯಿತು, ಇದು ಹಿಂದಿನ ಮುಕ್ತಾಯಕ್ಕಿಂತ 182 ಪಾಯಿಂಟ್‌ಗಳು ಅಥವಾ 0.22% ಹೆಚ್ಚಾಗಿದೆ. ಆದಾಗ್ಯೂ, ವಿಶಾಲ ಮಾರುಕಟ್ಟೆಯು ಅಸ್ಥಿರ ಅವಧಿಯಲ್ಲಿ ಮುಂಚೂಣಿಯ ಸೂಚ್ಯಂಕಗಳನ್ನು ಮೀರಿಸುವಲ್ಲಿ ಯಶಸ್ವಿಯಾಯಿತು, ನಿಫ್ಟಿ ಮಿಡ್‌ಕ್ಯಾಪ್ 100 ಸೂಚ್ಯಂಕವು 1.13% ಮತ್ತು ನಿಫ್ಟಿ ಸ್ಮಾಲ್‌ಕ್ಯಾಪ್ 100 ಸೂಚ್ಯಂಕವು 1.36% ಏರಿಕೆಯಾಯಿತು. ಸೋಮವಾರ ನಾಲ್ಕು ವರ್ಷಗಳಲ್ಲಿ ತನ್ನ ಅತ್ಯುತ್ತಮ ಇಂಟ್ರಾಡೇ ಜಿಗಿತವನ್ನು ದಾಖಲಿಸಿದ ನಂತರ ಭಾರತೀಯ ಷೇರು ಮಾರುಕಟ್ಟೆ ಇನ್ನೂ ದಿಕ್ಕನ್ನು ಕಂಡುಹಿಡಿಯಲು ಹೆಣಗಾಡುತ್ತಿರುವಾಗ, ದೇಶೀಯ ರಕ್ಷಣಾ ಷೇರುಗಳು ಸತತ ಮೂರನೇ ದಿನವೂ ಆವೇಗವನ್ನು ಹೆಚ್ಚಿಸುತ್ತಿವೆ. ಯಾವುದೇ ದೌರ್ಬಲ್ಯದ ಲಕ್ಷಣಗಳನ್ನು ತೋರಿಸುತ್ತಿಲ್ಲ. ಏತನ್ಮಧ್ಯೆ, ಏಪ್ರಿಲ್‌ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು ಆರು ವರ್ಷಗಳಲ್ಲಿಯೇ ಅತ್ಯಂತ ನಿಧಾನಗತಿಗೆ ಇಳಿದಿದ್ದು, ಆಹಾರ ಬೆಲೆಗಳು ಕಡಿಮೆಯಾಗಿರುವುದರಿಂದ ಇದು ಸಂಭವಿಸಿದೆ. ಇದು ಮಾರುಕಟ್ಟೆಯ ಭರವಸೆಯನ್ನು ಹೆಚ್ಚಿಸಿದೆ. ಭಾರತೀಯ…

Read More

ಇಸ್ಲಮಾಬಾದ್: ಪಾಪಿ ಪಾಕಿಸ್ತಾನದ ಮತ್ತೊಂದು ಕರಾಳ ಮುಖ ಬಯಲಾಗಿದೆ. ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನದಿಂದ 14 ಕೋಟಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ಅಜರ್ ಹತ್ಯೆ ಮಾಡಲಾಗಿತ್ತು. ಹೀಗೆ ಹತ್ಯೆಯಾದಂತ ಉಗ್ರ ಮಸೂದ್ ಅಜರ್ ಗೆ ಪಾಕಿಸ್ತಾನವು 14 ಕೋಟಿ ಪರಿಹಾರವನ್ನು ಘೋಷಿಸಿದೆ. ಅಂದಹಾಗೇ ಮಸೂದ್, ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನಾಗಿದ್ದನು. ಭಾರತದ ದಾಳಿಯಲ್ಲಿ ಉಗ್ರ ಮಸೂದ್ ಸೇರಿದಂತೆ ಕುಟುಂಬದ 14 ಜನರು ಬಲಿಯಾಗಿದ್ದರು. ಹೀಗೆ ಹತ್ಯೆಯಾದಂತ ಉಗ್ರರ ಕುಟುಂಗಳಿಗೆ ತಲಾ 1 ಕೋಟಿ ಪರಿಹಾರವನ್ನು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ ಮಸೂದ್ ಅಜರ್ ಮನೆ ಮರು ನಿರ್ಮಾಣ ಮಾಡಲಾಗುತ್ತಿದೆ. https://kannadanewsnow.com/kannada/helicopter-service-to-the-vaishno-devi-temple-in-jammu-and-kashmir-has-been-resumed/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/

Read More

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಪುನರಾರಂಭಿಸಲಾಗಿದೆ. ಜಮ್ಮು-ಕಾಶ್ಮೀರದ ಐತಿಹಾಸಿಕ ದೇವಾಲಯಗಳಲ್ಲಿ ವೈಷ್ಣೋದೇವಿ ದೇವಾಲಯವೂ ಒಂದಾಗಿದೆ. ಈ ದೇವಾಲಯಕ್ಕೆ ಕೆಲವರು ನಡೆದು ಸಾಗಿದರೇ ಮತ್ತೆ ಕೆಲವರು ಹೆಲಿಕಾಪ್ಟರ್ ಸೇವೆ ಬಳಸಿ ತೆರಳುತ್ತಾರೆ. ಇಂತಹ ಹೆಲಿಕಾಪ್ಟರ್ ಸೇವೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಕಾರಣ ಸ್ಥಗಿತಗೊಳಿಸಲಾಗಿತ್ತು. ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ 7 ದಿನಗಳ ಬಳಿಕ ಮತ್ತೆ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆಯನ್ನು ಪುನರಾರಂಭಿಸಲಾಗಿದೆ. https://kannadanewsnow.com/kannada/union-cabinet-approves-the-6th-semiconductor-unit-worth-%e2%82%b93706-crores/ https://kannadanewsnow.com/kannada/breaking-from-now-on-the-108-ambulance-service-will-be-provided-by-the-government-a-significant-decision-by-the-health-department/

Read More