Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ಶೇಖರಿಸಿಟ್ಟಿದ್ದಂತ ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಕೊಬ್ಬರಿ ಸುಟ್ಟು ಕರಕಲಾಗಿದೆ. ಮಂಡ್ಯ ತಾಲ್ಲೂಕಿನ ಗುನ್ನಾಯಕನಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟುಕರಕಲಾಗಿದೆ. ಗ್ರಾಮಸ್ಥರಾದಂತ ಪ್ರಸನ್ನ ಎಂಬುವರಿಗೆ ಸೇರಿದ ಕೊಬ್ಬರಿ ಶೆಡ್ ಇದಾಗಿದೆ. ಸುತ್ತಮುತ್ತಲಿನ ಗ್ರಾಮದ ರೈತರಿಂದ ಕೊಬ್ಬರಿ ಖರೀದಿಸಿ ಶೇಖರಿಸಿದ್ದರು. ಗೋದಾಮಿನಲ್ಲಿ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು. ಗೋದಾಮಿಗೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. 16 ಟನ್ ಕೊಬ್ಬರಿ, 6 ಟನ್ ಗ್ರೌಟ್ ಸುಟ್ಟು ಕರಕಲು ಆಗಿದೆ. ಈ ಘಟನೆಯಿಂದ 55 ಲಕ್ಷ ಮೌಲ್ಯದ ಕೊಬ್ಬರಿ ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸೋ ಕೆಲಸದಲ್ಲಿ ತೊಡಗಿದ್ದಾರೆ. https://kannadanewsnow.com/kannada/who-has-the-guts-to-change-siddaramaiah-minister-zameer-ahmed/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/
ಬೆಳಗಾವಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರೋದು ಪಕ್ಷದ ಹೈಕಮಾಂಡ್ ಗೆ ಮಾತ್ರವೇ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರವರೆಗೂ ಸಿದ್ಧರಾಮಯ್ಯ ಅವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/cm-siddaramaiah-spends-crores-of-rupees-on-helicopter-and-plane-travel/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರೋದಾಗಿ ಹೇಳಲಾಗುತ್ತಿದೆ. 2023ರಿಂದ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನ ಬಳಕೆ ಮಾಡಿದ್ದಾರೆ. ಇದಕ್ಕಾಗಿ 47,38,24,347 ಕೋಟಿ ರೂಪಾಯಿ ಖರ್ಚು ಮಾಡಿರೋದಾಗಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. 2023ರಿಂದ 2025ರ ನವೆಂಬರ್ ವರೆಗಿನ ವಿಮಾನ ಪ್ರಯಾಣದ ವೆಚ್ಚ ಈ ಮೇಲಿನದ್ದು ಆಗಿದೆ. ಈ ಹಿಂದೆ ಕಾವೇರಿ ನಿವಾಸ ನವೀಕರಣದಿಂದ ಸುದ್ದಿಯಾಗಿದ್ದಂತ ಸಿಎಂ ಸಿದ್ಧರಾಮಯ್ಯ, ಕೋಟಿ ಕೋಟಿ ಅನುದಾನ ವೆಚ್ಚ ಮಾಡಿದ್ದು ವರದಿಯಾಗಿತ್ತು. ಇದೀಗ ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್.ರವಿಕುಮಾರ್ ಕೇಳಿದಂತ ಚುಕ್ಕೆ ರಹಿತ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ಅವರು ಹೆಲಿಕಾಪ್ಟರ್ ಹಾಗೂ ವಿಮಾನ ವೆಚ್ಚದ ಬಗ್ಗೆ ಸರ್ಕಾರ ಉತ್ತರ ನೀಡಲಾಗಿದೆ. ವಿಮಾನಯಾನಕ್ಕೆ ಸಿದ್ಧರಾಮಯ್ಯ 47 ಕೋಟಿಗೂ ಹೆಚ್ಚು ವೆಚ್ಚ ಮಾಡಿದ್ದಾರೆ. ಇದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹೋಗಲು ಹೆಲಿಕಾಪ್ಟರ್, ವಿಮಾನ ಬಳಕೆ ಮಾಡಿರುವುದು ಸೇರಿದೆ. https://kannadanewsnow.com/kannada/lok-sabha-extends-term-of-committee-examining-one-nation-one-election-bills/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/
ನವದೆಹಲಿ: ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಪರಿಚಯಿಸುವ ಮಸೂದೆಗಳನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ ಗುರುವಾರ ವಿಸ್ತರಿಸಿದೆ. ಸಂವಿಧಾನದ ಜಂಟಿ ಸಮಿತಿ (129 ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ರ ಅವಧಿಯನ್ನು 2026 ರ ಬಜೆಟ್ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಕೋರಿ ಸಮಿತಿಯ ಅಧ್ಯಕ್ಷ ಪಿ ಪಿ ಚೌಧರಿ ಪ್ರಸ್ತಾವನೆಯನ್ನು ಮಂಡಿಸಿದರು. ಲೋಕಸಭೆಯು ಧ್ವನಿ ಮತದ ಮೂಲಕ ಈ ಪ್ರಸ್ತಾವನೆಯನ್ನು ಅಂಗೀಕರಿಸಿತು. ಕಳೆದ ಡಿಸೆಂಬರ್ನಲ್ಲಿ ಸಮಿತಿಯನ್ನು ರಚಿಸಿದಾಗಿನಿಂದ, ಸಾಂವಿಧಾನಿಕ ತಜ್ಞರು, ಅರ್ಥಶಾಸ್ತ್ರಜ್ಞರು, ಕಾನೂನು ಆಯೋಗದ ಅಧ್ಯಕ್ಷ ದಿನೇಶ್ ಮಹೇಶ್ವರಿ ಸೇರಿದಂತೆ ಇತರರನ್ನು ಸಮಿತಿ ಭೇಟಿ ಮಾಡಿದೆ. https://kannadanewsnow.com/kannada/bjp-to-fight-against-hate-speech-law-mp-basavaraj-bommai/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದವಿದೆ. ನಾವು ಇದನ್ನು ಖಂಡಿಸುತ್ತೇವೆ ಅಲ್ಲದೇ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು, ಆದರೆ, ಹತ್ತು ವರ್ಷದ ಶಿಕ್ಷೆ ಕಾನೂನು ತಂದು ಸರ್ಕಾರದ ವಿರುದ್ದ, ಅವರ ಪಕ್ಷದ ವಿರುದ್ದ ಮಾತನಾಡುವವರಿಗೆ ನಾನ್ ಬೆಲೆಬಲ್ ವಾರೆಂಟ್ ತಂದು ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿ ಇದೆ. ಇದು ಪ್ರಜಾಪ್ರಭುತ್ವ ವಿರುದ್ದ ಎಂದು ಆರೋಪಿಸಿದ್ದಾರೆ. ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಅಂತ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಎಲ್ಲ ರಂಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ದೀನ ದಲಿತರ ಹಣವನ್ನು ಲಪಟಾಯಿಸಿರುವ…
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಇತ್ತೀಚಿಗೆ ನಡೆಸಿದ “ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ʼʼ ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ರವಾನಿಸುವ ಮೂಲಕ ಹೊಸ ತಂತ್ರಜ್ಞಾನ ಪದ್ಧತಿಯನ್ನು ಅವಳಡಿಸಿಕೊಂಡಿದೆ. ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ವಿಷಯವಾರು ವಿಭಾಗಗಳಲ್ಲಿ 3,913 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಎಲ್ಲ ವಿದ್ಯಾರ್ಥಿಗಳಿಗೆ ತಾವು ಈ ಮೊದಲೇ ನೋಂದಾಯಿಸಿದ್ದ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ವೇಳೆ ಅಂಕಪಟ್ಟಿಯ ಲಿಂಕ್ ಸಹ ನೀಡಲಾಗಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಲಿಂಕ್ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ” ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರ್ಸ್ ವರ್ಕ್ನ ಫಲಿತಾಂಶವನ್ನು ಮೊಬೈಲ್ ಸಂದೇಶದ ಮೂಲಕ ಕಳುಹಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಹುಡುಕಾಟ ನಡೆಸುವ ಅವಶ್ಯಕತೆ ಇಲ್ಲ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪಿಎಚ್.ಡಿ ಮುಂದುವರಿಸಬಹುದಾಗಿದೆ” ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಯು.ಜೆ.ಉಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/number-of-stray-dogs-in-bengaluru-increases-threefold/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ತಾತ್ಕಾಲಿಕ ಆಶ್ರಯ ತಾಣಗಳಾಗಿ ಪರಿವರ್ತಿಸಬಹುದಾದ ಬಳಕೆಯಾಗದ ಸರ್ಕಾರಿ ಆಸ್ತಿಗಳನ್ನು ಹುಡುಕಲು ಐದು ನಿಗಮಗಳನ್ನು ಕೇಳಲಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪೂರೈಸಲು ಧಾವಿಸುವಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸೂಚನೆಗಳನ್ನು ನೀಡಿದೆ. ಇದರ ನಡುವೆ ಬೆಂಗಳೂರಲ್ಲಿ ಬೀದಿ ನಾಯಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಳವಾಗಿರುವಂತ ಶಾಕಿಂಗ್ ಮಾಹಿತಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ. GBA ಸುಮಾರು 1,000 ನಾಯಿಗಳಿಗೆ ಆಶ್ರಯ ನೀಡಬಹುದು. ಆದರೆ ಅದರ ಸಮೀಕ್ಷೆಯಲ್ಲಿ ನ್ಯಾಯಾಲಯದ ನಿರ್ದೇಶನದ ಪ್ರಕಾರ 3,000 ಕ್ಕೂ ಹೆಚ್ಚು ನಾಯಿಗಳಿಗೆ ಆಶ್ರಯ ಅಗತ್ಯವಿದೆ ಎಂದು ಕಂಡುಬಂದಿದೆ. ಕಳೆದ ತಿಂಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆಗೆದುಹಾಕಿ, ಕ್ರಿಮಿನಾಶಕ ಮತ್ತು ಲಸಿಕೆ ಹಾಕಿದ ನಂತರ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತು. ಬೀದಿ ನಾಯಿಗಳ ಸಂಖ್ಯೆಯನ್ನು ಒದಗಿಸಲು ಮತ್ತು ಪ್ರಾಣಿಗಳ ಪ್ರವೇಶವನ್ನು ತಡೆಯಲು GBA 2,637…
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ ಕೃತಕ ಬುದ್ಧಿಮತ್ತೆ ಸಮಿತಿಯನ್ನು ಪುನರ್ರಚಿಸಿದ್ದಾರೆ. ಉನ್ನತ ನ್ಯಾಯಾಂಗ ಮತ್ತು ಅಧೀನ ನ್ಯಾಯಾಲಯಗಳಲ್ಲಿ AI ಪರಿಕರಗಳ ಅಳವಡಿಕೆ, ಅಭಿವೃದ್ಧಿ ಮತ್ತು ನಿಯೋಜನೆಯನ್ನು ಮುನ್ನಡೆಸುವ ಅಧಿಕಾರವನ್ನು ಅದಕ್ಕೆ ವಹಿಸಿದ್ದಾರೆ ಎಂದು ಬುಧವಾರ ಅಧಿಕೃತ ಹೇಳಿಕೆ ತಿಳಿಸಿದೆ. ಹೇಳಿಕೆಯ ಪ್ರಕಾರ, ಪರಿಷ್ಕೃತ ಸಮಿತಿಯು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸಂಜೀವ್ ಸಚ್ದೇವ, ಕೇರಳ ಹೈಕೋರ್ಟ್ನ ನ್ಯಾಯಮೂರ್ತಿ ರಾಜಾ ವಿಜಯರಾಘವನ್ ವಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿ ಅನೂಪ್ ಚಿತ್ಕಾರ ಮತ್ತು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಅದರ ಸದಸ್ಯರಾಗಿದ್ದಾರೆ. ಸುಪ್ರೀಂ ಕೋರ್ಟ್ನ OSD (ರಿಜಿಸ್ಟ್ರಾರ್) (ತಂತ್ರಜ್ಞಾನ) ಅನುಪಮ್ ಪಾತ್ರಾ ಅವರು ಸಮಿತಿಯ ಸದಸ್ಯ-ಕಾರ್ಯದರ್ಶಿ ಮತ್ತು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ, ಸುಪ್ರೀಂ ಕೋರ್ಟ್ನ ಇ-ಸಮಿತಿಯ ಸದಸ್ಯ (ವ್ಯವಸ್ಥೆಗಳು) ಆಶಿಶ್ ಜೆ ಶಿರಾಧೋಂಕರ್ ಅವರನ್ನು ವಿಶೇಷ ಆಹ್ವಾನಿತರಾಗಿ ಸೇರಿಸಲಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹೀಗಾಗೇ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು. ಮಲಗಿ ಮಲಗಿ ಜನ ಒದ್ದೋಡಿಸುವವರೆಗೂ ಏಳಬೇಡಿ ಎಂಬುದಾಗಿ ಡಿಕೆಶಿಯನ್ನು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು ಎಂಬುದಾಗಿ ವ್ಯಂಗ್ಯವಾಡಿದ್ದಾರೆ. “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ”, ಎಂದು ಸ್ವಾಮಿ ವಿವೇಕಾನಂದರು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನಾಯಕರ ವರಸೆ “ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ” ಎನ್ನುವಂತಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಛೇಡಿಸಿದ್ದಾರೆ. https://twitter.com/RAshokaBJP/status/1998932165023965364 https://kannadanewsnow.com/kannada/another-shock-for-prajwal-revanna-supreme-court-rejects-plea-to-transfer-rape-case-to-another-court/
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಲಾಗಿದೆ. ಅತ್ಯಾಚಾರ ಕೇಸ್ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದೆ.














