Author: kannadanewsnow09

ಬೆಂಗಳೂರು: ರಾಜ್ಯಾಧ್ಯಂತ ಕೃತಕ ಬಣ್ಣವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಂದರೆ ಕಬಾಬ್, ಫಿಶ್, ಚಿಕನ್ ಗೆ ಬಳಸುವಂತ ಕೃತಕ ಬಣ್ಣವನ್ನು ರಾಜ್ಯಾಧ್ಯಂತ ನಿಷೇಧ ಮಾಡಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ. – ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The…

Read More

ನವದೆಹಲಿ: ಎಡ್ಟೆಕ್ ಬೈಜುಸ್ನಲ್ಲಿ ತನ್ನ ಷೇರುಗಳ ಮೌಲ್ಯವನ್ನು ಶೂನ್ಯಕ್ಕೆ ಇಳಿಸಿದೆ ಮತ್ತು ಕಂಪನಿಯಲ್ಲಿ ಹೂಡಿಕೆ ಮಾಡಿದ ಕಾರಣ 493 ಮಿಲಿಯನ್ ಡಾಲರ್ ನ್ಯಾಯಯುತ ಮೌಲ್ಯದ ನಷ್ಟವನ್ನು ದಾಖಲಿಸಿದೆ ಎಂದು ಟೆಕ್ ಹೂಡಿಕೆದಾರರು ಜೂನ್ 24 ರಂದು ತಮ್ಮ ಹಣಕಾಸು ವರ್ಷ 24 ರ ವಾರ್ಷಿಕ ವರದಿಯಲ್ಲಿ ತಿಳಿಸಿದ್ದಾರೆ. ಕಂಪನಿಯ ಹಕ್ಕುಗಳ ವಿತರಣೆಗೆ ಮೊದಲು ಇದು ಬೈಜುಸ್ನಲ್ಲಿ ಶೇಕಡಾ 9.6 ರಷ್ಟು ಪರಿಣಾಮಕಾರಿ ಪಾಲನ್ನು ಹೊಂದಿತ್ತು. “ನಾವು 2024ರ ಹಣಕಾಸು ವರ್ಷದ ಕೊನೆಯಲ್ಲಿ ಬೈಜುಸ್ ಅನ್ನು ಶೂನ್ಯಕ್ಕೆ ಇಳಿಸಿದ್ದೇವೆ. ಕಂಪನಿಯ ಆರ್ಥಿಕ ಆರೋಗ್ಯ, ಹೊಣೆಗಾರಿಕೆಗಳು ಮತ್ತು ಭವಿಷ್ಯದ ದೃಷ್ಟಿಕೋನದ ಬಗ್ಗೆ ನಮಗೆ ಅಸಮರ್ಪಕ ಮಾಹಿತಿ ಇರುವುದರಿಂದ ನಾವು ಬೈಜುಸ್ ಅನ್ನು ಬರೆದಿದ್ದೇವೆ” ಎಂದು ಪ್ರೊಸಸ್ ವಕ್ತಾರರು ತಿಳಿಸಿದ್ದಾರೆ. ಹೂಡಿಕೆದಾರರಿಗೆ ಸ್ಲೈಡ್ ಶೋನಲ್ಲಿ, ಬೈಜುಸ್ನಲ್ಲಿನ ಹೂಡಿಕೆಯಿಂದ ಆಂತರಿಕ ರಿಟರ್ನ್ ದರವನ್ನು (ಐಆರ್ಆರ್) ಮೈನಸ್ (-) 100 ಪ್ರತಿಶತ ಎಂದು ಗುರುತಿಸಲಾಗಿದೆ. ಐಆರ್ಆರ್ ಎಂಬುದು ಹೂಡಿಕೆಯ ಲಾಭದಾಯಕತೆಯ ಅಳತೆಯಾಗಿದೆ. ಹೂಡಿಕೆಯ ಜೀವಿತಾವಧಿಯಲ್ಲಿ ಯೋಜಿತ ಒಳಬರುವ ನಗದು…

Read More

ಬ್ರಿಟನ್: ಭಾನುವಾರ ನಡೆದ ಘಟನೆಯ ನಂತರ ಕಿಂಗ್ ಚಾರ್ಲ್ಸ್ ಅವರ ಕಿರಿಯ ಸಹೋದರಿ ರಾಜಕುಮಾರಿ ಅನ್ನಿ ಅವರಿಗೆ ಸಣ್ಣಪುಟ್ಟ ಗಾಯಗಳು ಮತ್ತು ಆಘಾತವಾಗಿದ್ದು, ಮುನ್ನೆಚ್ಚರಿಕೆಯಾಗಿ ಆಸ್ಪತ್ರೆಯಲ್ಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ. “ಅವರ ರಾಜವಂಶಸ್ಥರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ, ಆರಾಮದಾಯಕ ಸ್ಥಿತಿಯಲ್ಲಿದ್ದಾರೆ ಮತ್ತು ಹೆಚ್ಚಿನ ವೀಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ” ಎಂದು ಬಕಿಂಗ್ಹ್ಯಾಮ್ ಅರಮನೆಯ ವಕ್ತಾರರು ತಿಳಿಸಿದ್ದಾರೆ. ದಿವಂಗತ ರಾಣಿ ಎಲಿಜಬೆತ್ ಅವರ ಏಕೈಕ ಪುತ್ರಿಯಾಗಿರುವ 73 ವರ್ಷದ ಎಲಿಜಬೆತ್ ಅವರು ತಮ್ಮ ಮನೆ ಇರುವ ಗ್ಯಾಟ್ಸ್ಕೊಂಬೆ ಪಾರ್ಕ್ ಎಸ್ಟೇಟ್ನ ಮೈದಾನದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರ ತಲೆಗೆ ಸಣ್ಣ ಗಾಯಗಳಾಗಿವೆ ಎಂದು ರಾಜಮನೆತನದ ಮೂಲಗಳು ತಿಳಿಸಿವೆ. ರಾಜನಿಗೆ ನಿಕಟ ಮಾಹಿತಿ ನೀಡಲಾಗಿದೆ ಮತ್ತು ರಾಜಕುಮಾರಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಪ್ರೀತಿಯ ಪ್ರೀತಿ ಮತ್ತು ಶುಭಾಶಯಗಳನ್ನು ಕಳುಹಿಸುವಲ್ಲಿ ಇಡೀ ರಾಜಮನೆತನದೊಂದಿಗೆ ಸೇರಿಕೊಳ್ಳುತ್ತಾರೆ” ಎಂದು ಬಕಿಂಗ್ಹ್ಯಾಮ್ ಅರಮನೆಯ ಹೇಳಿಕೆ ತಿಳಿಸಿದೆ. https://kannadanewsnow.com/kannada/actor-darshan-shifted-from-parappana-agrahara-to-tumkur-jail/ https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈಗ ನಟ ರೇಣುಕಾಸ್ವಾಮಿ ಸೇರಿದಂತೆ ಕೆಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹ ಜೈಲಿಗೆ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ಅವರನ್ನು ಸ್ಥಳಾಂತರ ಕೋರಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಜೈಲು ಅಧಿಕಾರಿಗಳು ಕೋರಿದ್ದರು. ಇದಕ್ಕೆ ಕೋರ್ಟ್ ಸಮ್ಮತಿಸಿದ ಕಾರಣ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.2 ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಿದ್ದಾರೆ. ಅಂದಹಾಗೆ ರೇಣುಕಾಸ್ವಾಮಿ ಕೊಲೆಯ ಬಳಿಕ ಆರೋಪಿಗಳಾದಂತ ಕಾರ್ತಿಕ್, ಕೇಶವ್ ಹಾಗೂ ನಿಖಿಲ್ ಪೊಲೀಸರ ಮುಂದೆ ಖುದ್ದು ಶರಣಾಗಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿತ್ತು.…

Read More

ರಾಮನಗರ: ನಾನು ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ. ಪೋಡಿ, ಜಮೀನು ಖಾತೆ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ವಸತಿ ರಹಿತರ ಸಮಸ್ಯೆ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಪಿಂಚಣಿ ಸಮಸ್ಯೆ, ರಸ್ತೆ ದುರಸ್ತಿ, ಬಸ್ ವ್ಯವಸ್ಥೆ, ದೇವಾಲಯ ಜೀರ್ಣೋದ್ಧಾರ, ಕುಡಿಯುವ ನೀರಿನ ಸಮಸ್ಯೆ, ಸರ್ಕಾರಿ ಯೋಜನೆಗಳ ಸಮಸ್ಯೆ, ಪೊಲೀಸರಿಂದ ತೊಂದರೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನಮಗೆ ಅರ್ಜಿ ಸಲ್ಲಿಸಿ. ನಿಮ್ಮ ಅರ್ಜಿಯನ್ನು ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ. ಈ ಯೋಜನೆ ಮೂಲಕ ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಇದಾಗಿದೆ. ಬೇರೆ ಪಕ್ಷಕ್ಕೆ ಮತಹಾಕಿದ್ದೇನೆ, ಬೇರೆ ಪಕ್ಷದ ಜತೆ ಗುರುತಿಸಿಕೊಂಡಿದ್ದೇನೆ. ಶಿವಕುಮಾರ್ ಬಳಿ ಹೋಗಿ ಹೇಗೆ ಅರ್ಜಿ ನೀಡಲಿ ಎಂಬ ಮುಜುಗರ, ಹಿಂಜರಿಕೆ ಬೇಡ. ನಾವು ಎಲ್ಲರ ಸಮಸ್ಯೆಗಳನ್ನೂ…

Read More

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ…

Read More

ಬೆಂಗಳೂರು: ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಮತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ…

Read More

ಬೆಂಗಳೂರು: ಅಂಗನವಾಡಿಗಳಲ್ಲಿ LKG, UKG ಆರಂಭಗೊಂಡ ನಂತ್ರ ಅಲ್ಲಿನ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುತ್ತೇವೆ ಎಂಬುದು ಸತ್ಯಕ್ಕೆ ದೂರವಾದಂತ ಮಾತಾಗಿದೆ. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ…

Read More

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು. ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ…

Read More

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಸದನದ ನಾಯಕರನ್ನಾಗಿ ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯ ನಾಯಕರಾಗಿ ಜೆ.ಪಿ ನಡ್ಡಾ ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿಮಂಡಲದ ಸದಸ್ಯರು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಭರ್ತೃಹರಿ ಮಹತಾಬ್ ಅವರು ಸದನದ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಾರಿ ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದ್ದರೆ, ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 234 ಸ್ಥಾನಗಳನ್ನು ಹೊಂದಿದೆ. ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರು ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಎದ್ದು ನಿಂತರು. ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸುವಾಗ ಅವರು ಮತ್ತೆ ಸಂವಿಧಾನದ ಪ್ರತಿಗಳನ್ನು ಎತ್ತಿ ಹಿಡಿದರು. ಉತ್ತರದಾಯಿತ್ವವಿಲ್ಲದೆ ಪ್ರಧಾನಿ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು…

Read More