Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಅವರು ಹೇಳಿದ್ದಾರೆ. https://kannadanewsnow.com/kannada/nurses-are-the-backbone-of-health-system-dinesh-gundu-rao/ https://kannadanewsnow.com/kannada/eat-more-amla-in-winter-and-get-this-benefit/
ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಎಚ್ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದರೆ, ದಾದಿಯರು ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಆಗುವವರೆಗೂ ಆರೈಕೆ ಮಾಡುತ್ತಾರೆ. ದಾದಿಯರ ಕೆಲಸ ಗೌರವಾನ್ವಿತ ವೃತ್ತಿಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಎಂದು ಹೇಳಿದರು. ಭಾರತವು ನರ್ಸಿಂಗ್ ವೃತ್ತಿಯಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ, ನಮ್ಮ ದಾದಿಯರು ತಮ್ಮ ಪರಿಣತಿ ಮತ್ತು ಬದ್ಧತೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ನಾವು ಅವರಿಗೆ ನೀಡಬೇಕಾದ…
ಬೆಂಗಳೂರು: ದಿನಾಂಕ 26.11.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/state-president-alone-not-responsible-for-bjps-defeat-in-bypolls-mlc-ravikumar/ https://kannadanewsnow.com/kannada/eat-more-amla-in-winter-and-get-this-benefit/
ಬೆಂಗಳೂರು: ರಾಜ್ಯದಲ್ಲಿ ನಡೆದ 3 ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸೋಲಿಗೆ ಪಕ್ಷವೇ ಜವಾಬ್ದಾರಿ ಹೊರಲಿದೆ. ಪಕ್ಷವು ಇದನ್ನು ಸವಾಲಾಗಿ ತೆಗೆದುಕೊಳ್ಳಲಿದೆ; ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸದಿಂದ ತಿಳಿಸಿದರು. ಕಾಂಗ್ರೆಸ್ಸಿಗರು ವಾಮ ಮಾರ್ಗದ ಮೂಲಕ, ವಕ್ರ ಮಾರ್ಗದ ಮೂಲಕ, ಹಣವನ್ನು ಹರಿಸುವ ಮೂಲಕ, ಜಾತಿ ವಿಷಬೀಜವನ್ನು ಬಿತ್ತಿ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಒಗ್ಗಟ್ಟು ಮಾಡಿ, ಮುಖ್ಯಮಂತ್ರಿಗಳು ತಾನು ಸಿಎಂ ಆಗಿ 5 ವರ್ಷ ಇರಬೇಕೋ ಬೇಡವೋ ಎಂದು ಮಂತ್ರಿಗಳಿಗೆ, ಶಾಸಕರಿಗೆ ಕೇಳಿ, ಭಯವನ್ನುಂಟು ಮಾಡಿ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆದ್ದಿದ್ದಾರೆ. ಎನ್ಡಿಎ 3 ಸೀಟುಗಳನ್ನು ಸೋತಿದೆ. ಸೋಲಿನ ಅವಲೋಕನ ಮಾಡಿ ಬಿಜೆಪಿಯನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿ ನಾವು…
ಶಿವಮೊಗ್ಗ: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ (ರಿ)ಯ ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಸಾಗರದ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ಆಯ್ಕೆ ಮಾಡಲಾಯಿತು. ಡಿಸೆಂಬರ್.15, 2024ರಂದು ಬೆಂಗಳೂರಿನ ಗಾಂಧಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ನೂತನ ಪದಾಧಿಕಾರಿಗಳು ಪದಗ್ರಹಣ, ಅಧಿಕಾರ ಸ್ವೀಕಾರವನ್ನು ಮಾಡಲಿದ್ದಾರೆ. ಇಂದು ನಡೆದಂತ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಪರಶುರಾಮ್ ಬಗಲಿ ಅವರು ಪಾಲ್ಗೊಂಡಿದ್ದರು. ಈ ಸರ್ವ ಸದಸ್ಯರ ಸಭೆಯಲ್ಲೇ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಘವೇಂದ್ರ ತಾಳಗುಪ್ಪ ಯಾರು.? ಸಾಗರ ಸೇರಿದಂತೆ…
ಹುಬ್ಬಳ್ಳಿ: ಇಲ್ಲಿನ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿತು. ಮಾಲತಿ ಪಟ್ಟಣಶೆಟ್ಟಿ, ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯ ಪ್ರಕಾಶ್ ಶಾಸ್ತ್ರಿ, ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು, ನೈರುತ್ಯ ರೈಲ್ವೆ ಕನ್ನಡ ಸಂಘದ ಅಧ್ಯಕ್ಷ ಮಹಾಂತಪ್ಪ ನಂದೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಡಾ.ಮಾಲತಿ ಪಟ್ಟಣಶೆಟ್ಟಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಶ್ಲಾಘಿಸಿದರು ಮತ್ತು ಕನ್ನಡ ಪುಸ್ತಕ “ನುಡಿ ತೋರಣ” ವನ್ನು ಅನಾವರಣಗೊಳಿಸಿದರು. ಸಾಮಾನ್ಯ ಜನರ ಜೀವನಾಡಿಯಾಗಿ ರೈಲ್ವೆ ಸೇವೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ರೈಲ್ವೆ ಇಲಾಖೆಯಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿರುವುದನ್ನು ಶ್ಲಾಘಿಸಿದರು. ರಾಷ್ಟ್ರವನ್ನು ಸಂಪರ್ಕಿಸುವಲ್ಲಿ ರೈಲ್ವೆಯ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೈಋತ್ಯ ರೈಲ್ವೆ ಆಡಳಿತದ ಕೊಡುಗೆಗಳನ್ನು ಒತ್ತಿ ಹೇಳಿದರು. ರೈಲ್ವೆ ಆಡಳಿತದಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ನೌಕರರ ಪ್ರಾತಿನಿಧ್ಯ ಹೆಚ್ಚುತ್ತಿರುವುದನ್ನು ಸತ್ಯ ಪ್ರಕಾಶ್ ಶಾಸ್ತ್ರಿ…
ಜೀವನದಲ್ಲಿ ಏನಾಗುತ್ತದೋ ಇಲ್ಲವೋ ಎಂಬ ಭಯದಲ್ಲಿ ಬದುಕುತ್ತಿರುವವರು ಅನೇಕರಿದ್ದಾರೆ. ಮನದಲ್ಲಿ ಭಯವಿದ್ದರೆ ಚಿಂತೆ, ಅವಾಂತರಗಳು.. ಎಂತಹ ಭಯ, ಚಿಂತೆ, ಕಷ್ಟಗಳು ಬಂದರೂ ಅವೆಲ್ಲವನ್ನೂ ಹೋಗಲಾಡಿಸುವ ಆಪದ್ಬಾಂಧವನಾಗಿ ಸಹಾಯಕ್ಕೆ ಬರುವವನು ನರಸಿಂಹ. ಮನೆಯಲ್ಲಿ ನರಸಿಂಹನನ್ನು ಪೂಜಿಸಿ ಪೂಜೆ ಮಾಡಿದರೆ ಹೇಗೆ ಫಲ ಸಿಗುತ್ತದೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನೋಟದಲ್ಲಿ ಉಗ್ರನಾದರೂ ನರಸಿಂಹ ಹೃದಯದಲ್ಲಿ…
ಶ್ರೀರಂಗಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್ ಚಿಟ್ ಎನ್ನುತ್ತಿದ್ದಾರೆ. ಇದು ಕ್ಲೀನ್ ಚಿಟ್ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದರು. ಚುನಾವಣಾ ಫಲಿತಾಂಶವನ್ನು ಕ್ಲೀನ್ ಚಿಟ್ ಎನ್ನಲಾಗುವುದಿಲ್ಲ. ಕ್ಲೀನ್ ಚಿಟ್ ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅದನ್ನು ಬಡವರಿಗೆ ನೀಡಬೇಕಿತ್ತು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಆರೋಪಕ್ಕೆ ಸಾಕ್ಷಿ ಇಲ್ಲದೆ ಪ್ರಕರಣ…
ಕನಕಪುರ : “ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ ‘ಮಾಝಿ ಲಡಕಿ ಬಹಿನ್ ಯೋಜನಾ’ ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು. ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ…
ಸೌದಿ: ಬಹುನಿರೀಕ್ಷಿತ ಐಪಿಎಲ್ ಹರಾಜು ಇಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಪ್ರಾರಂಭವಾಯಿತು. ಮಾರ್ಕ್ಯೂ ಸೆಟ್ನಲ್ಲಿ ಮೊದಲ 12 ಆಟಗಾರರು ಸಾಕಷ್ಟು ಹಣವನ್ನು ಖರ್ಚು ಮಾಡಿದರು. ರಿಷಭ್ ಪಂತ್ ಹರಾಜು ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರನ್ನು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ.ಗೆ ಖರೀದಿಸಿದರೆ, ಶ್ರೇಯಸ್ ಅಯ್ಯರ್ ಅವರನ್ನು ಪಂಜಾಬ್ ಕಿಂಗ್ಸ್ 26.75 ಕೋಟಿ ರೂ.ಗೆ ಖರೀದಿಸಿತು. ಈವರೆಗೆ ಯಾವ ಆಟಗಾರ, ಯಾವ ತಂಡಕ್ಕೆ ಎಷ್ಟು ಕೋಟಿಗೆ ಮಾರಾಟ ಎನ್ನುವ ಪಟ್ಟಿ ಈ ಕೆಳಗಿದೆ ಅರ್ಷ್ದೀಪ್ ಸಿಂಗ್ ಪಿಬಿಕೆಎಸ್ (ಆರ್ಟಿಎಂ) 18 ಕೋಟಿ ಕಗಿಸೊ ರಬಾಡ ಜಿಟಿ 10.75 ಕೋಟಿ ಶ್ರೇಯಸ್ ಅಯ್ಯರ್ ಪಿಬಿಕೆಎಸ್ 26.75 ಕೋಟಿ ಜೋಸ್ ಬಟ್ಲರ್ ಜಿಟಿ 15.75 ಕೋಟಿ ಮಿಚೆಲ್ ಸ್ಟಾರ್ಕ್ ಡಿಸಿ 11.75 ಕೋಟಿ ರಿಷಭ್ ಪಂತ್ ಎಲ್ಎಸ್ಜಿ 27 ಕೋಟಿ ಮೊಹಮ್ಮದ್ ಶಮಿ ಎಸ್ಆರ್ಹೆಚ್ 10 ಕೋಟಿ ಡೇವಿಡ್ ಮಿಲ್ಲರ್ ಎಲ್ಎಸ್ಜಿ 7.5 ಕೋಟಿ ಯಜುವೇಂದ್ರ ಚಾಹಲ್…