Author: kannadanewsnow09

ಬೆಂಗಳೂರು: ಇದು ರಾಜ್ಯವೇ ಬೆಚ್ಚಿ ಬೀಳಿಸೋ ಹೀನಾತಿಹೀನ ಸ್ಟೋರಿಯಾಗಿದೆ. ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿರುವಂತ ಘಟನೆ ನಡೆದಿದೆ. ಈ ಕೃತ್ಯವನ್ನು ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಂತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪ್ರಾಪ್ತ ಬಾಲಕಿ ರಕ್ಷಣೆ ಮಾಡಲಾಗಿದ್ದು, ಮಹಿಳೆ ಮತ್ತು ವ್ಯಕ್ತಿಯೊಬ್ಬರನ್ನು ಈ ಘಟನೆ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಶೋಭಾ ಮತ್ತು ತುಳಸಿಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಬೆಂಗಳೂರು ಮೂಲದ ಶೋಭಾ, ತುಳಸಿಕುಮಾರ್ ಅರೆಸ್ಟ್ ಮಾಡಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಆಧರಿಸಿ ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಈ ಕೃತ್ಯವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಹಾಗೇ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುವ ಗ್ಯಾಂಗ್ ಇದಾಗಿದೆ. ಅದರಲ್ಲಿ ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಇವರ ಟಾರ್ಗೆಟ್ ಆಗಿದ್ದಾರೆ. ವಾಟ್ಸ್ ಆಪ್ ನಲ್ಲಿ ಬಾಲಕಿಯರ…

Read More

ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಅದೇ ಶೀಘ್ರವೇ ರಾಜ್ಯ ಸರ್ಕಾರದಿಂದ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗುತ್ತಿದೆ. ಆ ಮೂಲಕ ಮಹಿಳೆಯರಿಗೆ ಸಾಲಸೌಲಭ್ಯ ದೊರಕಿಸಿಕೊಡುವಂತ ಕೆಲಸ ಮಾಡಲಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ‌ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದಿದ್ದಾರೆ. ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಿ ಆದೇಶಿಸಿದೆ. ಜೊತೆಗೆ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಏಕ ಕಡತದಲ್ಲಿ ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಮಾನ್ಯ ಹೆಚ್ಚುವರಿ ಅಡ್ವಕೆಟ್ ಜನರಲ್ ರವರು ನೀಡಿರುವ ಕಾನೂನು ಅಭಿಪ್ರಾಯದಂತೆ, ರಿಟ್ ಅಪೀಲು ಸಂಖ್ಯೆ:1578/2024 ರಲ್ಲಿ ಮಾನ್ಯ ನ್ಯಾಯಾಲಯವು ದಿನಾಂಕ:09-09-2025 ರಂದು ನೀಡಿರುವ ಮಧ್ಯಂತರ ಆದೇಶದ ಅವಲೋಕನೆಗಳಿಗೆ ಒಳಪಟ್ಟು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025- 26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರೆಸಲು ಆದೇಶಿಸಿದೆ. ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತ ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯು ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನವನ್ನು ನೀಡುತ್ತಿದೆ ಎಂದಿದೆ. ಯಾವೆಲ್ಲ ಆರೋಗ್ಯ ತೊಂದರೆಗಳಿಗೆ ಸಹಾಯಧನ ಪಡೆಯಬಹುದು? ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ ಅಲ್ಸರ್ ಚಿಕಿತ್ಸೆ ಮೆದುಳಿನ ರಕ್ತಸ್ತ್ರಾವ ಚಿಕಿತ್ಸೆ ಹೃದಯ ಸಂಬಂಧಿ ಖಾಯಿಲೆ ಡಯಾಲಿಸಿಸ್ ಕಿಡ್ನಿ ಜೋಡಣೆ ಕಿಡ್ನಿ ಶಸ್ತ್ರ ಚಿಕಿತ್ಸೆ ಇ ಎನ್ ಟಿ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆ ಕಣ್ಣಿನ ಶಸ್ತ್ರಚಿಕಿತ್ಸೆ ನರರೋಗ ಶಸ್ತ್ರಚಿಕಿತ್ಸೆ ಮೂಳೆ ಶಸ್ತ್ರಚಿಕಿತ್ಸೆ ವ್ಯಾಸ್ಕ್ಯೂಲರ್ ಶಸ್ತ್ರ ಚಿಕಿತ್ಸೆ ಗರ್ಭಕೋಶ ಶಸ್ತ್ರಚಿಕಿತ್ಸೆ ಅಸ್ತಮಾ ಚಿಕಿತ್ಸೆ ಗರ್ಭಪಾತ ಪ್ರಕರಣಗಳು ಅನ್ನನಾಳದ ಚಿಕಿತ್ಸೆ ಸೇರಿದಂತೆ ಇತರೆ ಖಾಯಿಲೆಗಳ ಚಿಕಿತ್ಸೆಗಳು https://twitter.com/WorkersBoard/status/1972591743863533920 https://kannadanewsnow.com/kannada/nta-releases-important-advice-to-students-regarding-jee-main-exam-2026/ https://kannadanewsnow.com/kannada/shocking-a-sinful-mother-beat-her-own-son-to-death-with-a-stick-for-asking-for-chicken/

Read More

ಬೆಂಗಳೂರು: ಮೈಸೂರು ದಸರಾ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಕೆ ಎಸ್ ಆರ್ ಟಿಸಿ ಹೆಚ್ಚಳ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಈ ಕೆಳಗಿನಂತೆ ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೆ‌ ಎಸ್ ಆರ್ ಟಿ‌ ಸಿ ದಸರಾ ವಿಶೇಷ ಸಂದರ್ಭದಲ್ಲಿ ವಿಶೇಷ ಪ್ರಯಾಣ ದರ ಆಕರಣೆ ಕಳೆದ 20 ವರುಷಗಳಿಂದ ನಿರ್ದಿಷ್ಟ ದಿವಸಗಳವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟ ಪಡಿಸಿದೆ. ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿಶೇಷ ದಿನ/ಜಾತ್ರಾ/ಹಬ್ಬ ಹರಿದಿನಗಳ ರಜೆ ದಿನಗಳಂದು ಆಚರಣೆ ಮಾಡುವ ಕರಾರಸಾ ನಿಗಮದ ವಿಶೇಷ ಸಾರಿಗೆಗಳಿಗೆ ಪ್ರಯಾಣದರಗಳನ್ನು ಹೆಚ್ಚಿಸಲು ಅವಕಾಶವಿರುತ್ತದೆ ಎಂದು ತಿಳಿಸಿದೆ. ಸದರಿ ದಿನಗಳಂದು ವಿಶೇಷ ಸಾರಿಗೆಗಳನ್ನು ಏಕಮುಖ ಸಾರಿಗೆಗಳಾಗಿ (One way) ಆಚರಣೆ ಮಾಡಿ ವಾಪಾಸ್ಸು (Return) ಬರುವಾಗ ಖಾಲಿ/ಕಡಿಮೆ ಪ್ರಯಾಣಿಕರಿಂದ ಕಾರ್ಯಾಚರಣೆ ಮಾಡಬೇಕಾಗಿರುವುದರಿಂದ ಹಾಗೂ ವಿಶೇಷ ವಾಹನಗಳನ್ನು ಇತರೇ ವಿಭಾಗಗಳಿಂದ ಪಡೆದು ಈ ಮಾರ್ಗಗಳಲ್ಲಿ ಆಚರಣೆ ಮಾಡುವುದರಿಂದ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹೆಚ್ ಆರ್ ಎಂ ಎಸ್ ತಂತ್ರಾಂಶದಲ್ಲಿ ಈ ಕೂಡಲೇ ಪಿಎಂಜೆಜೆಬಿವೈ ಮತ್ತು ಪಿಎಂ ಎಸ್ ಬಿ ವೈ ಮಾಹಿತಿಯನ್ನು ದಾಖಲಿಸುವಂತೆ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಸರ್ಕಾರವು,  ಎಲ್ಲಾ ಪ್ರಮುಖ ಬ್ಯಾಂಕ್‌ಗಳಲ್ಲಿ ಒದಗಿಸುತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್‌ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ತಿಳಿಸಿದೆ. ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ ಎರಡು ಅಮೂಲ್ಯವಾದ ವಿಮಾ ಯೋಜನೆಗಳಾದ – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯನ್ನು ತೆರೆಯಲು ಕೋರಲಾಗಿದೆ. ಈ ಯೋಜನೆಯನ್ನು ತಮ್ಮ ವೇತನ ಖಾತೆ ಬ್ಯಾಂಕ್‌ ಮುಖಾಂತರ ಪಡೆಯಬಹುದಾಗಿದೆ. ಹೆಚ್ಚಿನ ವಿವರಕ್ಕಾಗಿ https://www.jansuraksha.gov.in/ ಲಿಂಕ್‌ ಅನ್ನು ಪ್ರವೇಶಿಸಿ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ) ಪ್ರಧಾನಮಂತ್ರಿ ಜೀವನ್‌ ಜ್ಯೋತಿ…

Read More

ಬೆಂಗಳೂರಿನ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ. ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ. ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸುವ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ. ಹಾಗಾಗಿ ಸಾರ್ವಜನಿಕರು ಈ ಸಮೀಕ್ಷೆ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೇ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಬೆಂಗಳೂರು ಗ್ರಾಮಾಂತ: ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿಯಿಂದ ಸಂಗ್ರಹಿಸಲಾದಂತ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡುತ್ತಿಲ್ಲ. ಪ್ರತಿದಿನದಗ್ರಾಮದ ಬಾಶೆಟ್ಟಹಳ್ಳಿ ಕೆರೆಯಲ್ಲಿ ಸುರಿಯುತ್ತಿದ್ದಾರೆ. ಹೀಗೆ ತ್ಯಾಜ್ಯ ಸುರಿಯುತ್ತಿರುವಂತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬಾಶೆಟ್ಟಿಹಳ್ಳಿ ಜನಧ್ವನಿ ವೇದಿಕೆ ಆಗ್ರಹಿಸಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬಾಶೆಟ್ಟಹಳ್ಳಿ ಜನಧ್ವನಿ ವೇದಿಕೆಯ ಮುಖಂಡರಾದಂತ ಸುದರ್ಶನ್, ಕೃಷ್ಣಮೂರ್ತಿ, ಸದಾನಂದ, ಜಿ.ಮುನಿರಾಜ್, ಟೈಲರ್ ಮೂರ್ತಿ, ರಾಜಶೇಖರ್, ಮಧು ಕುಮಾರ್ ಅವರು, ದಿನಂಪ್ರತಿ ಬಾಶೆಟ್ಟಹಳ್ಳಿಯ ಕೆರೆಗೆ  ರಾಶಿಗಟ್ಟಲೇ ಕಸವನ್ನು ಪಟ್ಟಣ ಪಂಚಾಯ್ತಿಯಿಂದ ಸುರಿಯಲಾಗುತ್ತಿದೆ. ಅಲ್ಲದೇ ಸಮೀಪದಲ್ಲಿ ಇರುವಂತ ಕಾರ್ಖಾನೆಗಳಿಂದ ಕೆರೆಗೆ ರಸಾಯನಿಕ ಮಿಶ್ರಿತ ನೀರು ಹರಿದು ಬಂದು ಮತ್ತಷ್ಟು ಕಲುಷಿತಗೊಳ್ಳುತ್ತಿದೆ ಎಂಬುದಾಗಿ ಆಕ್ರೋಶ ಹೊರ ಹಾಕಿದ್ದಾರೆ. ತ್ಯಾಜ್ಯ ನಿರ್ವಹಣೆ ಘಟಕವನ್ನು ನಿರ್ಮಿಸಿ, ಅಲ್ಲಿ ತ್ಯಾಜ್ಯ ಸಂಸ್ಕರಣೆಯನ್ನು ಮಾಡಬೇಕಿದ್ದಂತ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯ್ತಿ ಆ ಕೆಲಸವನ್ನೇ ಮಾಡುತ್ತಿಲ್ಲ. ಇದರ ಬದಲಾಗಿ ಕೆರೆಯ ಬಳಿಯಲ್ಲೇ ಪಟ್ಟಣ ಪಂಚಾಯ್ತಿಯಿಂದ ಕಸ ಸುರಿದು ರಾಶಿ ಮಾಡಲಾಗುತ್ತಿದೆ. ಈ ಕಸದಲ್ಲಿನ ಪೇಪರ್,…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದಂತ ಪೋಟೋ ಜರ್ನಲಿಸ್ಟ್ ಒಬ್ಬರ ಪುತ್ರಿ ಪಿಯುಸಿಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪೆಡದಿದ್ದರು. ಆ ಮೂಲಕ ಮೆಡಿಕಲ್ ಸೀಟ್ ಪಡೆದಿದ್ದರು. ಇಂತಹ ಪೋಟೋ ಜರ್ನಲಿಸ್ಟ್ ಪುತ್ರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, SSLC & PUCಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪಡೆದು KUWJ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದ ತುಮಕೂರು ಜಿಲ್ಲೆಯ ಶಿರಾದ ಫೋಟೋ ಜರ್ನಲಿಸ್ಟ್ ನಾಗರಾಜ್ ಅವರ ಪುತ್ರಿ ಕು.ನಾಗಶ್ರೀ ಅವರು ಮೆರಿಟ್ ಮೇಲೆ ಮೆಡಿಕಲ್ ಸೀಟ್ ಪಡೆದಿದ್ದು ಹೆಮ್ಮೆಯ ಸಂಗತಿ. ನಾಗಶ್ರೀ ಅವರನ್ನು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾಗಿ ತಿಳಿಸಿದ್ದಾರೆ. https://twitter.com/kuwj_r/status/1972682001976000755 https://kannadanewsnow.com/kannada/good-news-for-registered-construction-workers-in-the-state-applications-invited-for-medical-expense-subsidy/ https://kannadanewsnow.com/kannada/breaking-inhuman-incident-in-the-state-womans-hair-pulled-pressed-with-feet-horrific-attack/

Read More

ನವದೆಹಲಿ: 2026 ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮುಖ್ಯ) ಬರೆಯಲು ಯೋಜಿಸುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ಒಂದು ಪ್ರಮುಖ ಸಲಹೆಯನ್ನು ನೀಡಿದೆ. ಯಾವುದೇ ವ್ಯತ್ಯಾಸಗಳು, ದೂರುಗಳು ಅಥವಾ ನಂತರದ ಹಂತದಲ್ಲಿ ನಿರಾಕರಣೆಯನ್ನು ತಪ್ಪಿಸಲು, ಜೆಇಇ ಮುಖ್ಯ 2026 ಕ್ಕೆ ಅರ್ಜಿ ಸಲ್ಲಿಸುವ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನವೀಕರಿಸಲಾಗಿದೆಯೆ ಎಂದು ಎನ್‌ಟಿಎ ಆಕಾಂಕ್ಷಿಗಳನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿದೆ. ಕಳೆದ ಕೆಲವು ವರ್ಷಗಳಂತೆ, ಎನ್‌ಟಿಎ ಜೆಇಇ ಮುಖ್ಯ 2026 ಅನ್ನು ( JEE Main 2026 ) ಎರಡು ಅವಧಿಗಳಲ್ಲಿ ನಡೆಸಲಿದೆ: ಸೆಷನ್ 1 ಜನವರಿ 2026 ರಲ್ಲಿ ನಡೆಯಲಿದೆ ಮತ್ತು ಎರಡನೇ ಅವಧಿ ಏಪ್ರಿಲ್ 2026 ರಲ್ಲಿ ನಡೆಯಲಿದೆ. ಟೈಮ್ಸ್ ನೌ ಡಿಜಿಟಲ್ ವರದಿ ಮಾಡಿರುವಂತೆ, ಜೆಇಇ ಮುಖ್ಯ 2026 ಸೆಷನ್ 1 ರ ಆನ್‌ಲೈನ್ ಅರ್ಜಿ ನಮೂನೆಯು ಅಕ್ಟೋಬರ್ 2025 ರಲ್ಲಿ ಎನ್‌ಟಿಎ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸದ್ಯಕ್ಕೆ, ಆಕಾಂಕ್ಷಿಗಳು ಜನವರಿ ಅವಧಿಗೆ ಮಾತ್ರ…

Read More