Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರದ ಪರಿಣಿತಿ ಕಲಾಕೇಂದ್ರ(ರಿ)ಯಿಂದ 10ನೇ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತ ಮಹೋತ್ಸವವನ್ನು ನವೆಂಬರ್.23, 24ರಂದು ಆಯೋಜಿಸಲಾಗಿದೆ. ಈ ಬಗ್ಗೆ ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಪರಿಣಿತಿ ಕಲಾ ಕೇಂದ್ರದ ಪ್ರೋಗ್ರಾಂ ಡೈರೆಕ್ಟರ್ ವಿದ್ವಾನ್ ಎಂ.ಗೋಪಾಲ್ ಅವರು, ದಿನಾಂಕ 23-11-2024 ಮತ್ತು 24-11-2024ರಂದು ಎರಡು ದಿನ 10ನೇ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತ ಮಹೋತ್ಸವ 2024 ಆಯೋಜಿಸಲಾಗಿದೆ. ಸಾಗರದ ಗಾಂಧಿ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ವಾದ್ಯಗಳನ್ನು ನುಡಿಸುವುದು, ರಾಜ್ಯ, ಹೊರ ರಾಜ್ಯಗಳ ಕಲಾವಿಧರಿಂದ ಕಲಾ ಪ್ರದರ್ಶನ ಕೂಡ ಆಯೋಜಿಸಲಾಗಿದೆ ಎಂದು ಹೇಳಿದರು. ದಿನಾಂಕ 23-11-2024ರಂದು ಸಂಜೆ 5 ಗಂಟೆಗೆ ಸಾಗರದ ಗಾಂಧಿ ಮೈದಾನದಲ್ಲಿನ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಬೆಂಗಳೂರಿನ ಹಿರಿಯ ಸಂಗೀತ ವಿದ್ವಾನ್ ಕರ್ನಾಟಕ ಕಲಾಶ್ರೀ ವಿ.ಆನೂರು ಆರ್ ಅನಂತಕೃಷ್ಣ ಶರ್ಮ ಅವರು ಉದ್ಘಾಟಿಸಲಿದ್ದಾರೆ. ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷರಾದಂತ ವೀಣಾ ಬೆಳೆಯೂರು ಅಧ್ಯಕ್ಷತೆ…
ಶಿವಮೊಗ್ಗ: ಜಿಲ್ಲಾ ಮಟ್ಟದ ಸಂಘಟನೆಯಾಗಿರುವಂತ ಸಾಗರದ ಹೆಚ್.ಗಣಪತಿಯಪ್ಪ ರೈತ ಸಂಘವನ್ನು ರಾಜ್ಯ ಮಟ್ಟದ ಸಂಘಟನೆಯಾಗಿ ಪರಿವರ್ತಿಸಲಾಗುತ್ತಿದೆ. ಈ ಸಂಘವನ್ನು ಕರ್ನಾಟಕ ರಾಜ್ಯ ರೈತ ಸಂಘದ ಜೊತೆಗೆ ಸೇರ್ಪಡೆಗೊಳಿಸುತ್ತಿರುವುದಾಗಿ ಹೆಚ್.ಗಣಪತಿಯಪ್ಪ ಸ್ಥಾಪಿತ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾಗರದ ಹೆಚ್.ಗಣಪತಿಯಪ್ಪ ಸ್ಥಾಪಿತ ರೈತ ಸಂಘವನ್ನು ರಾಜ್ಯ ಮಟ್ಟದ ಸಂಘಟನೆಯೊಂದಿಗೆ ಸೇರ್ಪಡೆಗೊಳಿಸುವ ಬಗ್ಗೆ ಈಗಾಗಲೇ ಎರಡು ಮೂರು ಸುತ್ತಿನ ಮಾತುಕತೆಯಾಗಿದೆ. ನಮ್ಮ ಸಂಘದ ಪದಾಧಿಕಾರಿಗಳು, ಸದಸ್ಯರ ಜೊತೆಗೂ ಈಗಾಗಲೇ ಸಭೆ ನಡೆಸಿ, ಚರ್ಚಿಸಿ ಅಂತಿಮಗೊಳಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಸುಮಾರು 6 – 7 ವರ್ಷಗಳಿಂದ ಸಾಗರದಲ್ಲಿ ಹೆಚ್.ಗಣಪತಿಯಪ್ಪ ಸಾಗರ ತಾಲ್ಲೂಕು ರೈತ ಸಂಘಟನೆಯು ರೈತರ ಪರ ಹೋರಾಟ ನಡೆಸಿಕೊಂಡು ಬಂದಿದೆ. ಮುಂದೆಯೂ ಇದು ಮುಂದುವರೆಯಲಿದೆ. ಜಿಲ್ಲಾ ಮಟ್ಟದ ಸಂಘಟನೆಯನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು. ಸಾಗರ ತಾಲ್ಲೂಕು ಸಂಘವಾಗಿ ಶುರುವಾದಂತ…
ಬೆಂಗಳೂರು: ಕುಡಿಯುವ ನೀರು ಸೇರಿದಂತೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ಮಾರ್ಚ್ ಅಂತ್ಯದವರೆಗೆ ನೀರು ಒದಗಿಸಲು ತುಂಗಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಎರಡನೇ ಬೆಳೆಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ನೀರು ಒದಗಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಡಿ.1ರಿಂದ ಡಿಸೆಂಬರ್ 15 ರವರೆಗೆ 1500 ಡಿ. 16 ರಿಂದ 31ರವರೆಗೆ 2000 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಜ.1ರಿಂದ 31 ವರೆಗೆ 3800 ಕ್ಯೂಸೆಕ್ಸ್ ನಂತೆ, ಫೆ.1ರಿಂದ 28 ರವರಿಗೆ 3800 ಕ್ಯೂಸೆಕ್ಸ್ ಹಾಗೂ ಮಾರ್ಚ್ 1ರಿಂದ 31ರವರೆಗೆ 3800 ಕ್ಯೂ ಸೆಕ್ಸ್ ನಂತೆ ಮತ್ತು ಕುಡಿಯುವ ನೀರಿಗಾಗಿ ಏ. ಒಂದರಿಂದ ಹತ್ತರವರೆಗೆ 1650 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿರುವಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ವಿಶೇಷ ಚೇತನರಿಗೆ ವೀಲ್ ಚೇರ್ ವಿತರಿಸುವ ಮೂಲಕ ಸಾಮಾಜಿಕ ಸೇವೆಯ ನಡೆಯನ್ನು ತೋರಿದೆ. ಸಾಗರ ನಗರದಲ್ಲಿ ವಿಶೇಷ ಚೇತನ ಆಗಿದ್ದಂತ ನಿವೇದನ್ ಎಂಬುವರಿಗೆ ವೀಲ್ ಚೇರ್ ಅವಶ್ಯಕತೆ ಇದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ನೀಡುವಂತೆ ತಾಲ್ಲೂಕು ಯೋಜನಾಧಿಕಾರಿ ಶಾಂತಾ ನಾಯಕ್ ಗೆ ಪೋಷಕರು ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದಂತ ಅವರು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅನುಮತಿ ಪಡೆದಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಡಿಯಲ್ಲಿ ನೂತನವಾಗಿ ಸಂಘದಿಂದ ಖರೀದಿಸಿದ್ದಂತ ವೀಲ್ ಚೇರ್ ಅನ್ನು ಸಾಗರದ ಎಸ್ ಎನ್ ನಗರದ ನಿವಾಸಿ ವಿನೇದನ್ ಎಂಬ ವಿಶೇಷ ಚೇತನನಿಗೆ ಇಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವಲಯ ಮೇಲ್ವಿಚಾರಕರಾದಂತ ದಿನೇಶ್.ಎಸ್, ಒಕ್ಕೂಟ ಅಧ್ಯಕ್ಷರಾದ ನಾಗರತ್ನ, ಸೇವಾ ಪ್ರತಿನಿಧಿ ಕುಸುಮ, ಗಿರಿಜಾ ರಾಣಿ ಉಪಸ್ಥಿತರಿದ್ದರು. ವರದಿ: ವಸಂತ ಬಿ…
ಯಾವುದೇ ಕಂಪನಿಯ ಆಹಾರದ ತಿನಿಸಾದರೂ ಗ್ರಾಹಕರು ಗುಣಮಟ್ಟವನ್ನು ಇಷ್ಟ ಪಡುತ್ತಾರೆ. ಇದಕ್ಕೆ ಕಂಪನಿಗಳು ಒತ್ತು ನೀಡುತ್ತಾವೆ. ಹಾಗೆಯೇ ಆಹಾರ ಪದಾರ್ಥಗಳನ್ನು ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತದೆ. ಆದರೇ ಇಲ್ಲೊಂದು ಕಂಪನಿಯ ಪ್ರೊಡಕ್ಟ್ ಮಾತ್ರ ಮ್ಯಾನುಯಲ್ ಕಾರಣ ಪ್ಲಾಸ್ಟಿಕ್ ವಸ್ತು, ವಯರ್ ಎಲ್ಲಾ ಸಿಕ್ಕಿವೆ. ಅದ್ಯಾವುದು ಕಂಪನಿ.? ಏನುದ ಕತೆ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಮಾರಿಗುಡಿ ದೇವಸ್ಥಾನದ ಸಮೀಪದಲ್ಲಿರುವಂತ ಗಜಾನನ ರೈಸ್ ಸ್ಟೋರ್ ನಿಂದ ವ್ಯಕ್ತಿಯೊಬ್ಬರು ಸ್ಪರ್ಶ್ ಬಾದಾಪ್ ಪೌಡರ್ ಅನ್ನು ಖರೀದಿಸಿದ್ದಾರೆ. ಅದನ್ನು ತೆಗೆದುಕೊಂಡು ಹೋಗಿ ಮಗಳಿಗೆ ನೀಡಿದ್ದಾರೆ. ಸ್ಪರ್ಶ್ ಬಾದಾಮ್ ಪೌಡರ್ ಅನ್ನು ಬಟ್ಟಲಿಗೆ ಹಾಕಿಕೊಂಡು ತಿನ್ನುವಂತ ಸಂದರ್ಭದಲ್ಲಿ ಮೊದಲಿಗೆ ಪ್ಲಾಸ್ಟಿಕ್ ವಯರ್ ಮಾದರಿಯ ವಸ್ತುವೊಂದು ಪತ್ತೆಯಾಗುತ್ತದೆ. ಅದನ್ನು ಪೋಷಕರ ಗಮನಕ್ಕೆ ತಂದಿದ್ದಾರೆ. ಇದನ್ನು ಕಂಡಂತ ಅವರಿಗೆ ಅಚ್ಚರಿಯಾಗಿದೆ. ಕೆಲವೊಮ್ಮೆ ಹೀಗೆ ಆಗುತ್ತದೆ ಅಂತ ಸಮಾಧಾನಿಸಿ, ತೆಗೆದು ಬಿಸಾಡಿದ ಬಳಿಕ, ಬಾದಾಮ್ ಪೌಡರ್ ತಿನ್ನಲು ಹೇಳಿದ್ದಾರೆ. ಆದರೇ ಇನ್ನುಳಿದಂತ ಸ್ಪರ್ಶ್ ಕಂಪನಿಯ ಬಾದಾಮ್ ಪೌಡರ್ ತಿನ್ನುವ ವೇಳೆಯಲ್ಲಿ…
ಬೆಂಗಳೂರು: ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ ಮಾಡುವ ಹಾಗೂ ಸಂಬಂಧಿತ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ಬಡಾವಣೆಗಳಲ್ಲಿನ ರಸ್ತೆ, ಉದ್ಯಾನವನ ಹಾಗೂ ಆಟದ ಮೈದಾನಗಳಿಗೂ ಇ-ಖಾತಾ ಮಾಡಿಕೊಳ್ಳುವ ಸಂಬಂಧ ಇದ್ದ ಕೆಲ ಗೊಂದಲಗಳಿಗೆ ಪರಿಹಾರ ನೀಡಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ- ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ-ಪೌರಾಡಳಿತ ಇಲಾಖೆ ಒಟ್ಟಾಗಿ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ನಗರ ಅಭಿವೃದ್ಧಿಗೆ ಸಂಬಂಧಿಸಿ ಇ-ಖಾತಾ ಹಾಗೂ ನೋಂದಣಿಗೆ ಸಂಬಂಧಿಸಿದ ಕೆಲ ಪ್ರಮುಖ ಗೊಂದಲಗಳಿಗೂ ತೆರೆ ಎಳೆದಿದೆ. 1) ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ: ಭೂಪರಿವರ್ತನೆಯ ನಂತರದಲ್ಲಿ ಭೂಪರಿವರ್ತಿತ ಜಮೀನುಗಳ ಪಹಣಿಗಳಿಗೆ ಭೂಕಂದಾಯ ಕಡಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ/ ನಗರ ಸ್ಥಳೀಯ ಸಂಸ್ಥೆಗಳು/ನಗರಾಭಿವೃದ್ಧಿ ಪ್ರಾಧಿಕಾರಗಳು ಆಸ್ತಿ ಗುರುತಿನ ಸಂಖ್ಯೆಯನ್ನು (ಇ-ಖಾತಾ) ನೀಡಬೇಕಾಗಿರುತ್ತದೆ. ಆದರೆ ಭೂಪರಿವರ್ತನೆ ನಂತರ ಆಸ್ತಿ ಗುರುತಿನ ಸಂಖ್ಯೆ (ಇ-ಖಾತಾ) ನೀಡಲು ಕಾಲಾವಕಾಶ ಬೇಕಾಗಿರುತ್ತದೆ ಹಾಗೂ ಕೆಲವೊಮ್ಮೆ ಸಾರ್ವಜನಿಕರು ಇ-ಖಾತಾ ಮಾಡಲು ಕೋರಿ…
BREAKING: ಮಂಡ್ಯದಲ್ಲಿ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಅಪಘಾತ: ಅಯ್ಯಪ್ಪ ಭಕ್ತರಿಗೆ ಗಾಯ, ಪ್ರಾಣಾಪಾಯದಿಂದ ಪಾರು
ಮಂಡ್ಯ : ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಅಯ್ಯಪ್ಪನ ಭಕ್ತರು ಸಂಚರಿಸುತ್ತಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಅಯ್ಯಪ್ಪನ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಿಂದ ಗುರುವಾರ ಸಂಜೆ 24 ಮಂದಿ ಅಯ್ಯಪ್ಪ ಭಕ್ತರು ಶಬರಿಮಲೆಗೆ ತೆರಳುತ್ತಿದ್ದ ವೇಳೆ ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಆಗಮಿಸುತ್ತಿದ್ದಂತೆ ವಾಹನದ ಆಕ್ಸಲ್ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ರಾಷ್ಟ್ರೀಯ ಹೆದ್ದಾರಿ ಬದಿಯ ತಂತಿ ಬೇಲಿಗೆ ಹೊರಳಿ ನಿಂತುಕೊಂಡಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಗಾಯಾಳುವನ್ನು ಸ್ಥಳೀಯರು ಹಾಗೂ ವಾಹನ ಸವಾರರು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಮಂಡ್ಯ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/more-than-rs-73000-crore-to-be-invested-in-karnataka-siddaramaiah/ https://kannadanewsnow.com/kannada/note-if-you-have-a-ration-card-you-can-get-the-benefits-of-these-government-schemes/
ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ…
ಬೆಂಗಳೂರು: ರಾಜ್ಯದಲ್ಲಿನ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಏಕಕಾಲಕ್ಕೆ 2,200 ಲೈನ್ ಮ್ಯಾನ್ ಗಳ ನೇಮಕ ಮಾಡಿಕೊಳ್ಳುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್ಮ್ಯಾನ್ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದಿದ್ದಾರೆ. ಹಿಂದೆ ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ, ಇಂತಹ ಸಮಸ್ಯೆಗಳು ತಲೆದೋರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. https://twitter.com/KarnatakaVarthe/status/1859471845600481786 https://kannadanewsnow.com/kannada/home-minister-g-parameshwara-moves-sc-against-grant-of-bail-to-actor-darshan/ https://kannadanewsnow.com/kannada/note-if-you-have-a-ration-card-you-can-get-the-benefits-of-these-government-schemes/ https://kannadanewsnow.com/kannada/good-news-for-the-homeless-from-the-central-government-here-is-the-information-about-the-application-for-pm-awas-scheme/
ಮೈಸೂರು: ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವಂತ ನಟ ದರ್ಶನ್ ಜೈಲಿಗೆ ಹೋಗಬೇಕು. ಅವರಿಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದೇವೆ ಅಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ನ್ಯಾಯಾಲಯದಿಂದ ಮೂರು ತಿಂಗಳು ಜಾಮೀನು ನೀಡಲಾಗಿದೆ. ಅವರಿಗೆ ಜಾಮೀನು ಅವಧಿ ವಿಸ್ತರಿಸುವಂತ ವಿಷಯ ನನಗೆ ಗೊತ್ತಿಲ್ಲ ಎಂದರು. ರಾಜ್ಯ ಸರ್ಕಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮುಂದುವರೆಸಲಾಗುತ್ತದೆ. ಸಾಕ್ಷ್ಯ ಸಂಗ್ರಹದ ನಂತ್ರ ದೋಷಾರೋಪಪಟ್ಟಿಯನ್ನು ಸಲ್ಲಿಸಲಾಗುವುದು ಎಂದರು. ಎಕ್ಸಿಟ್ ಪೋಲ್ಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು. ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಹಳಷ್ಟು ಕಾರಣಗಳಿವೆ. ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ಅಕ್ರಮ ನಡೆದಿದೆ. ಡಾ.…