Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದ ಅಕ್ರಮಗಳ ಪ್ರಕರಣದಲ್ಲಿ ಆರೋಪಿಯಾಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧದ ವಿಚಾರಣೆಗೆ ಸದ್ಯಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಬಗ್ಗೆ ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆ ಡಿಸೆಂಬರ್ 20ರಂದು ನಡೆಯಲಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಬದಿಗಿಡಬೇಕೆಂದು ಕೇಜ್ರಿವಾಲ್ ಕೋರಿದರು ಮತ್ತು ಅಪರಾಧ ನಡೆದಾಗ ಅವರು ಸಾರ್ವಜನಿಕ ಸೇವಕರಾಗಿದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿಯ ಅನುಪಸ್ಥಿತಿಯಲ್ಲಿ ವಿಶೇಷ ನ್ಯಾಯಾಲಯವು ಚಾರ್ಜ್ಶೀಟ್ ಅನ್ನು ಪರಿಗಣಿಸಿದೆ ಎಂದು ವಾದಿಸಿದರು. ಆದಾಗ್ಯೂ, ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಪಡೆಯಲಾಗಿದೆ ಮತ್ತು ಅವರು ಅಫಿಡವಿಟ್…
ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಇದೀಗ ಮತ್ತೆ ಸಾಮಾನ್ಯ ಜಾಮೀನು ಅರ್ಜಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನವೆಂಬರ್.26ಕ್ಕೆ ಮುಂದೂಡಿದೆ. ಈ ಮೂಲಕ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ. ಇಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ಹೆಚ್ಚುವರಿ ಆರೋಪ ಪಟ್ಟಿ ವಿಚಾರಣಾ ಕೋರ್ಟ್ ಗೆ ಸಲ್ಲಿಸಲಾಯಿತು. ಅರ್ಹತೆಯ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಸಬಹುದು ಎಂದು ಹೇಳಿತು. ಅನಾರೋಗ್ಯದಿಂದ ಬಳಲುತ್ತಿದ್ದಂತ ನಟ ದರ್ಶನ್ ಅವರು ವೈದ್ಯಕೀಯ ಮಧ್ಯಂತರ ಜಾಮೀನು ಪಡೆದು, ಜೈಲಿನಿಂದ ಬಿಡುಗಡೆಯಾಗಿ, ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರು ಸಾಮಾನ್ಯ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ನವೆಂಬರ್.26ಕ್ಕೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/karnataka-2nd-largest-producer-of-milk-in-the-country-siddaramaiah/ https://kannadanewsnow.com/kannada/good-news-for-the-homeless-from-the-central-government-here-is-the-information-about-the-application-for-pm-awas-scheme/
ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ರಾಜ್ಯದಲ್ಲಿ ಪ್ರತಿದಿನ 92 ರಿಂದ…
ಬೆಂಗಳೂರು: ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಲಮ್ ನಲ್ಲಿ ವಾಸಿಸಲು ಆಗದ ಜಾಗದಲ್ಲಿ ಏಳು ವಾಸವಾಗಿದ್ದಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಅವರು ತೆರಿಗೆ ಕಟ್ಟುವವರು ಅಂತ ಹೇಳುತ್ತಾರೆ. ಅವರೆಲ್ಲ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು. ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷದಿ , ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತವಾಗುತ್ತವೆ. ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಮುಡಾ ಅಂತ ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿ ಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಇದೇನು ಮುಖ್ಯಮಂತ್ರಿಗಳೆ. ಇದು ಅತ್ಯಂತ ಜನ ವಿರೋಧಿ ಸರ್ಕಾರ. ಇದು ಯುಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಕಾರ್ಡ್ ರದ್ದು ಮಾಡಿರುವುದನ್ನು ವಿರೋಧಿಸಿದ ಮೇಲೆ ಈಗ ವಾಪಸ್ ತೆಗೆದುಕೊಳ್ಳುವ…
ನವದೆಹಲಿ: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ರಾಷ್ಟ್ರದ ರಾಜಧಾನಿ ದೆಹಲಿಗೂ ಕಾಲಿಟ್ಟಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯ ವಿವಿಧೆಡೆಗಳಲ್ಲಿ ನಂದಿನಿ ಉತ್ಪನ್ನ ಮಾರಾಟ ಮಳಿಗೆಯನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಇಲ್ಲಿ ನಂದಿನಿ ಹಾಲು, ಮೊಸರು, ಸಿಹಿತಿನಿಸು ಸೇರಿದಂತೆ ವಿವಿಧ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುವಂತೆ ಆಗಲಿದೆ. https://kannadanewsnow.com/kannada/what-did-deputy-cm-dk-shivakumar-say-about-bpl-card-cancellation-controversy/ https://kannadanewsnow.com/kannada/good-news-for-the-homeless-from-the-central-government-here-is-the-information-about-the-application-for-pm-awas-scheme/
ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ವಾಪಸ್ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು. ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್ ಕಾರ್ಡ್ ಇದ್ದರೂ, 12 ಲಕ್ಷ ಜನರ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ…
ಉಡುಪಿ: ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, “ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ” ಎಂದರು. ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, “ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು…
ಬೆಂಗಳೂರು: ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ.. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ…
ಉಡುಪಿ : “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, “ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ” ಎಂದು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೇ ಎನ್ನುವ ಸಮೀಕ್ಷೆಗಳ ಬಗ್ಗೆ ಕೇಳಿದಾಗ, “ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ” ಎಂದರು. ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ…
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್, ಸಿಬಿಎಸ್ಇ 10 ಮತ್ತು 12 ನೇ ತರಗತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಈಗ cbse.gov.in ರಂದು ಲಭ್ಯವಿದೆ. ಸಿಬಿಎಸ್ಇ ದಿನಾಂಕ ಶೀಟ್ 2025 ಅನ್ನು ಕೆಳಗಿನ ನೇರ ಲಿಂಕ್ನಿಂದ ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿ. ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ, ಸಿಬಿಎಸ್ಇ 10 ನೇ ತರಗತಿ ಬೋರ್ಡ್ ಪರೀಕ್ಷೆಗಳು 2025 ಫೆಬ್ರವರಿ 15 ರಿಂದ ಪ್ರಾರಂಭವಾಗಲಿದ್ದು, ಇಂಗ್ಲಿಷ್ ಮೊದಲ ಪರೀಕ್ಷೆಯಾಗಲಿದೆ. 12ನೇ ತರಗತಿಗೆ ಸಂಬಂಧಿಸಿದಂತೆ, ದೈಹಿಕ ಶಿಕ್ಷಣದ ಮೊದಲ ಪರೀಕ್ಷೆ ಫೆಬ್ರವರಿ 17 ರಂದು ನಡೆಯಲಿದೆ. ಕಳೆದ ಕೆಲವು ವರ್ಷಗಳಿಂದ ಸಿಬಿಎಸ್ಇ ಅನುಸರಿಸುತ್ತಿರುವ ಅಭ್ಯಾಸದಿಂದ ವಿಮುಖವಾಗಿರುವ ಮಂಡಳಿಯು ಆರಂಭದಲ್ಲಿ ದೊಡ್ಡ ಪರೀಕ್ಷೆಗಳನ್ನು ಒಟ್ಟುಗೂಡಿಸಿದೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯವನ್ನು ನೀಡಲು ಸಣ್ಣ ಪತ್ರಿಕೆಗಳನ್ನು ಮಧ್ಯದಲ್ಲಿ ಹರಡಿದೆ. ಆದಾಗ್ಯೂ, 10 ಮತ್ತು 12 ನೇ ತರಗತಿಗಳಿಗೆ ಪ್ರಮುಖ ಪರೀಕ್ಷೆಗಳಿಗೆ ಗಮನಾರ್ಹ ದಿನಗಳ ಕೊರತೆಯಿದೆ. ಪ್ರಮುಖ…