Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ: 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು. 2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕøತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಡಿಸಿದರು. ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. 2025ನೇ ಸಾಲಿನ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025ನೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಔಷಧ ಮತ್ತು…

Read More

ಬೆಳಗಾವಿ ಸುವರ್ಣಸೌಧ : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು. ಸಣ್ಣ…

Read More

ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ಮನನೊಂದಂತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ದಾವಣಗೆರೆಯ ಜಗಳೂರು ತಾಲ್ಲೂಕಿನ ಗುಡ್ಡದಲಿಂಗಣ್ಣ ಹಳ್ಳಿಯ ಯುವಕ ಅಂಜಿನಪ್ಪ(26) ಎಂಬಾತನೇ ಆತ್ಮಹತ್ಯೆಗೆ ಶರಣಾದಂತ ಯುವಕನಾಗಿದ್ದಾನೆ. ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೇ ಮೃತ ಅಂಜಿನಪ್ಪ ಪದವಿ ಮುಗಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಆದರೇ ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಸರ್ಕಾರಿ ಕೆಲಸ ಸಿಕ್ಕಿರಲಿಲ್ಲ. ಇದರಿಂದಾಗಿ ಯುವಕ ಅಂಜಿನಪ್ಪ ನೊಂದುಕೊಂಡು, ತನ್ನ ಬೇಸರವನ್ನು ಸ್ನೇಹಿತರ ಬಳಿಯಲ್ಲಿ ಹೇಳಿಕೊಂಡಿದ್ದನು ಎನ್ನಲಾಗಿದೆ.

Read More

ಬೆಳಗಾವಿ : ರಾಜ್ಯ ಸರ್ಕಾರದ 43 ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಉಳಿದಿವೆ. ಇವುಗಳಲ್ಲಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಅನುಮತಿಸಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188,…

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಆರ್ಥಿಕ ಇಲಾಖೆಯಿಂದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 24,300 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ. ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿರುತ್ತದೆ. ರಾಜ್ಯದಲ್ಲಿ ಅನೇಕ ವರ್ಷಗಳಿಂದ ನೇಮಕಾತಿಯಾಗದೇ ನಿರುದ್ಯೋಗಿ ಆಗಿರುವ ಬಿಪಿಎಡ್ ಪದವೀಧರರಿಗೂ ಬಿಎಡ್ ಪದವೀಧರರಂತೆ ವಾರ್ಡನ್ ಅಥವಾ ಪರ್ಯಾಯ ಹುದ್ದೆಗೆ ನೇಮಕಾತಿ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಾರೆ. 2008 ರ ಮೇ 20 ರಂದು ರೈತರ ಉತ್ಪನ್ನ ವೆಚ್ಚ ಆಧರಿಸಿ ಬೆಲೆ ನಿಗದಿಪಡಿಸಬೇಕು, 5,000 ಕೋಟಿ ರೂ. ಆವರ್ತ ನಿಧಿ ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಎರಡೂವರೆ ವರ್ಷದ ಅವಧಿಯಲ್ಲಿ ಈ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಲ್ಲ. ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ, ಪ್ರಕೃತಿ ವಿಕೋಪ ನಿರ್ವಹಣೆಗೆ 5,000 ಕೋಟಿ ರೂ. ನಿಧಿ ಸ್ಥಾಪಿಸಲಾಗುವುದು ಎಂದು ಹೇಳಿದ್ದರು. ಉತ್ತರ ಕರ್ನಾಟಕದ ಬಹಳ ಕಡೆ ಪ್ರವಾಹವಾದರೂ ನಿಧಿ ನೀಡಿಲ್ಲ. ಸಾಲ ಮರುಪಾವತಿ ಮುಂದೂಡಲಾಗುವುದು ಎಂದು ಹೇಳಿದ್ದರು. ಹಾಲಿನ ಪ್ರೋತ್ಸಾಹಧನವನ್ನು 7 ರೂ.ಗೆ ಏರಿಸಲಾಗುವುದು ಎಂದಿದ್ದರು. ಉತ್ತರ ಕರ್ನಾಟಕದಲ್ಲಿ ದ್ರಾಕ್ಷಿ ಬೆಳೆಗಾರರಿಗಾಗಿ 500 ಕೋಟಿ ರೂ. ನೀಡಲಾಗುವುದು ಎಂದಿದ್ದರು. ಆದರೆ…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಮೋದಿ ಅವರು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುತ್ತೇನೆ ಅಂತ ಹೇಳಿದ್ದರು. ಅವರು ಅಧಿಕಾರಕ್ಕೆ ಬಂದು ಇಷ್ಟು ವರ್ಷ ಆಯಿತು. ಆದರೆ ಅನ್ನದಾತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದೇಶದ ರೈತರ ಕಷ್ಟ ತೀರಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿಧಾನ ಪರಿಷತ್ತಿನ ಕಲಾಪದಲ್ಲಿ ಹೇಳಿದರು. ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಎಥೆನಾಲ್‌ ಹಂಚಿಕೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್‌ ಅವರು, ಪ್ರಧಾನಿ ಮೋದಿ ಅವರು ಹೇಳಿದಂತೆ ಏನೂ ಮಾಡಲಿಲ್ಲ. ಇಡೀ ದೇಶದ ರೈತರ ಆದಾಯ ಏರಲಿಲ್ಲ. ಅವರ ಸಮಸ್ಯೆ ಹಾಗೇ ಇದೆ. ಈ ದೇಶದ ಸಾಲದ ಬಗ್ಗೆಯೂ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರ ಹತ್ತುಪಟ್ಟು ಕೊಟ್ಟಿದೆ ಎಂಬುದಕ್ಕೆ ಸ್ಪಷ್ಟೀಕರಣ ಕೊಡಬೇಕು. ಹಾರಿಕೆ ಉತ್ತರ ಕೊಟ್ಟು ಮನಸ್ಸಿಗೆ ಬಂದಂಗೆ ಮಾತನಾಡುವುದಲ್ಲ ಎಂದು ಲಾಡ್‌ ಅವರು ತಿರುಗೇಟು ನೀಡಿದರು. ದೇಶದಲ್ಲಿ ಸಾಲ ಹತ್ತುಪಟ್ಟು…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್ ಅವರು ಇಂದು ವಿಧಾನಸಭೆಯಲ್ಲಿ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಸಾರಿಗೆ ಮತ್ತು ಮುಜರಾಯಿ ಸಚಿವರು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಸನ್ನಿಧಾನದಲ್ಲಿ ನಿರ್ಮಾಣವಾಗಿರುವ ಕರ್ನಾಟಕ ಭವನ ಕಳಪೆ ಕಾಮಗಾರಿ ಕುರಿತು ಈಗಾಗಲೇ ಭೇಟಿ ನೀಡಿ ಪರಿಶೀಲಿಸಲಾಗಿದೆ. ಪ್ರಸ್ತುತ ನಿರ್ವಹಣೆ ಮಾಡುತ್ತಿರುವ ಸಂಸ್ಥೆ ಕನಿಷ್ಟ 3 ಸ್ಟಾರ್ ಮಾದರಿಯಲ್ಲಿ ಸೌಲಭ್ಯ ನೀಡುವಂತೆ ಕ್ರಮ ವಹಿಸಬೇಕಿದೆ. ರಾಜ್ಯದ ಶಾಸಕರುಗಳು ಶಿಫಾರಸ್ಸು ಪತ್ರವನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಟಿ.ಟಿ.ಡಿಯವರಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

Read More

ಬೆಳಗಾವಿ ಸುವರ್ಣಸೌಧ: ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು. ಪರಿಷತ್ತಿನಲ್ಲಿ ಡಿ.09ರಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 30 (235)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಕಪ್ಪುತಲೆಹುಳು ಬಾಧಿತ ತೆಂಗಿನ ಬೆಳೆಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ-2025ರ ಮಾಹೆಯ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕಿತ್ತು. ಆದರೆ, ಮಳೆ ಹಾಗೂ ಇನ್ನಿತರ ಕಾರಣದಿಂದ ಸಮೀಕ್ಷೆ ಅಪೂರ್ಣವಾಗಿದೆ. ಸಮೀಕ್ಷೆ ಕೈಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಸಮೀಕ್ಷೆಗೆ ಅಂದಾಜು 1.94 ಕೋಟಿ ರೂ ಬೇಕಿದೆ ಎಂದು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಿದ್ದೇವೆ. ಜನವರಿಯಿಂದ ಮೇ ವರೆಗೂ ಹೆಚ್ಚಿನ ಉಷ್ಣಾಂಶದಿAದ ಕಪ್ಪುತಲೆ ಹಾಗೂ ಬಿಳಿನೊಣದ ಹಾನಿ ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಸಮೀಕ್ಷೆ ಕೈಗೊಂಡಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಸಮೀಕ್ಷೆಗೆ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿ ತಾಕಿಗೆ ರೂ. 10…

Read More