Author: kannadanewsnow09

ಶಿವಮೊಗ್ಗ: ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಸೊರಬದ ಶ್ರೀ ಧನಲಕ್ಷ್ಮಿ ಮಹಿಳಾ ಪತ್ತಿನ ಸಹಕಾರ ಸಂಘ ಕಾರ್ಯ‌ ನಿರ್ವಹಿಸುತ್ತಿದೆ ಎಂದು ಸಂಘದ ಅಧ್ಯಕ್ಷೆ ಕೆ.ಜಿ.ಲೋಲಾಕ್ಷಮ್ಮ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಮುರುಘಾ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಶ್ರೀಧನಲಕ್ಷ್ಮಿ ಮಹಿಳಾ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೌಟುಂಬಿಕ ವ್ಯವಸ್ಥೆಯಲ್ಲಿ ಪ್ರತಿ ಮಹಿಳೆಯರು ತಮ್ಮ ಹಿರಿದಾದ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಈ ನಡುವೆಯೂ ಕೆಲವು ಹೆಣ್ಣು ಮಕ್ಕಳಿಗೆ ನೂರಾರು ರೀತಿಯಲ್ಲಿ ಸಂಕಷ್ಟಗಳು ಎದುರಾಗಿ ಕುಟುಂಬ‌ ಮತ್ತು ಮಕ್ಕಳ ವಿದ್ಯಾಭ್ಯಾಸ ಪರದಾಡುತ್ತಿರುವುದನ್ನು ಮನಗಂಡು ಮಹಿಳೆಯರಿಗೆ ಆರ್ಥಿಕ ಸಹಕಾರ ಒದಗಿಸುವ ಹಿನ್ನೆಲೆಯಲ್ಲಿ ಸಂಘ ಸ್ಥಾಪಿಸಲಾಗಿದೆ ಎಂದರು‌. ಷೇರುದಾರರ ಸಹಕಾರದಿಂದ ನಮ್ಮ ಸಂಘವು ಪ್ರತಿ ವರ್ಷದಂತೆ 2024-25ನೇ ಸಾಲಿನಲ್ಲಿಯೂ ಸಹ ಹೆಚ್ಚಿನ ಲಾಭ ಗಳಿಸಿದೆ. ನಮ್ಮ ಸಂಘದಿಂದ ಬಡ ಮಹಿಳರಿಗೆ ಹಾಗೂ ನೊಂದ ಮಹಿಳೆಯರಿಗೆ ಎಲ್ಲಾ ಜಾತಿ ಜನಾಂಗದವರಿಗೂ ಸಾಲವನ್ನು ನೀಡಿ ಅವರ…

Read More

ಶಿವಮೊಗ್ಗ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದಾರೆ. ತಾಲ್ಲೂಕಿನ ಜನರು ಅಭಿವೃದ್ಧಿಗಾಗಿ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆ ಮಾಡಲಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಎಂ.ಡಿ.ಉಮೇಶ್ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ ಅವಧಿಯಲ್ಲಿ ಶಾಸಕರಾಗಿದ್ದಾಗ 2,500 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಡಿ, ಮೂಗೂರು ಹಾಗೂ ಕಚವಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ವರದಾ ನದಿಗೆ ಅಡ್ಡಲಾಗಿ ಜೋಳದಗುಡ್ಡೆ ಸಮೀಪ ಬ್ಯಾರೇಜ್ ನಿರ್ಮಾಣಕ್ಕೆ ಹಣ ಮೀಸಲಿಡಲಾಗಿದೆ. ಹಲವು ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆ ಮಾಡುವಲ್ಲಿ ಇಚ್ಛಾಶಕ್ತಿ ಪ್ರದರ್ಶಿಸಿದ ಧೀಮಂತ ನಾಯಕನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸುತ್ತಿರುವುದು ಹೆಮ್ಮೆ ತಂದಿದೆ ಎಂದು ತಿಳಿಸಿದರು. ತಾಲ್ಲೂಕಿನ…

Read More

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅತಿ ಎಚ್ಚರಿಕೆಯಿಂದ ಸಾಕಬೇಕು. ಕಾಲಕಾಲಕ್ಕೆ ಅವುಗಳಿಗೆ ಬೇಕಾದ ಚಿಕಿತ್ಸೆ ಕೊಡಿಸಿದರೆ ಅವುಗಳಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪಶು ವೈದ್ಯಕೀಯ ಇಲಾಖೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು ಮನೆಯಲ್ಲಿ ಸ್ನೇಹದಿಂದ ಕುಟುಂಬದ ಸದಸ್ಯರಂತೆ ಇರುತ್ತದೆ. ಮನುಷ್ಯರಂತೆ ಅವುಗಳಿಗೂ ಕಾಯಿಲೆಗಳ ಬರುತ್ತದೆ. ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೇಬಿಸ್‌ಗೆ ಸಾಕುಪ್ರಾಣಿಗಳು ಒಳಗಾದರೆ ಸಾಕಿದವರಿಗೂ ಅಪಾಯ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಚುಚ್ಚುಮದ್ದು ಅಭಿಯಾನ ಹಮ್ಮಿಕೊಂಡಿದ್ದು, ಸಾಕುಪ್ರಾಣಿಗಳನ್ನು ಹೊಂದಿರುವವರು ಉಪಯೋಗಿಸಬೇಕು ಎಂದು ಹೇಳಿದರು. ಪಶು ವೈದ್ಯಾಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಮುಂದಿನ ಒಂದು ತಿಂಗಳು ಸಾಕು ಪ್ರಾಣಿಗಳಿಗೆ ಉಚಿತ ರೇಬಿಸ್ ಚುಚ್ಚುಮದ್ದು ನೀಡಲಾಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಬೆಳಿಗ್ಗೆ 9 ರಿಂದ ಚುಚ್ಚುಮದ್ದು ಕೊಡಲು ಪ್ರಾರಂಭವಾಗುತ್ತದೆ. ಇಂದು ಸುಮಾರು 80 ನಾಯಿ…

Read More

ಶಿವಮೊಗ್ಗ : ನವರಾತ್ರಿ ಸಂದರ್ಭದಲ್ಲಿ ನೃತ್ಯ ಸಂಗೀತ ಸೇವೆ ದೇವಿಗೆ ಅತ್ಯಂತ ಪ್ರಿಯವಾದದ್ದು. ಮಾರಿಕಾಂಬಾ ದೇವಿ ಸನ್ನಿಧಿಯಲ್ಲಿ ಧಾರ್ಮಿಕ ಸೇವೆ ಜೊತೆ ಸಾಂಸ್ಕೃತಿಕ ಸೇವೆ ನಡೆಸಿ ಕಲಾವಿದರಿಗೆ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದಿಂದ ನವರಾತ್ರಿ ಅಂಗವಾಗಿ ಐದು ದಿನಗಳ ಕಾಲ ಏರ್ಪಡಿಸಿದ್ದ ಕಲೋಪಾಸನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತ್ರೆ, ಉತ್ಸವಗಳು ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತದೆ. ನಾಡಿನ ಬೇರೆ ಬೇರೆ ಭಾಗದಿಂದ ಕಲಾವಿದರು ಬಂದು ಸಾಂಸ್ಕೃತಿಕ ಕಲೆ ನೀಡುವ ಮೂಲಕ ಸಂಸ್ಕೃತಿ ವಿನಿಮಯವಾಗುತ್ತದೆ. ಸಾಗರ ಅನೇಕ ಕಲೆಗಳಿಗೆ ಆಶ್ರಯತಾಣವಾಗಿದ್ದು, ಕಲಾವಿದರನ್ನು ಗೌರವಿಸಿಕೊಂಡು ಬಂದಿದೆ ಎಂದು ಹೇಳಿದರು. ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಾವನಾ ಸಂತೋಷ್, ನಗರಸಭೆ ಸದಸ್ಯೆ ಮಧುಮಾಲತಿ, ಲಲಿತಮ್ಮ, ಸುಂದರಸಿಂಗ್, ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ…

Read More

ಶಿವಮೊಗ್ಗ : ಕ್ಷಕಿರಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಹೊಸಹೊಸ ಆವಿಷ್ಕಾರಗಳು ಮೊದಲ್ಗೊಳ್ಳುತ್ತಿದ್ದು, ಹೊಸದಾಗಿ ಈ ಕ್ಷೇತ್ರಕ್ಕೆ ಬರುವವರು ಇದರ ಅರಿವು ಹೊಂದಿರಬೇಕು ಎಂದು ಹೊನ್ನಾವರ ರಾಂಜ್ಟನ್ ಪ್ಯಾರಾ ಮೆಡಿಕಲ್ ಸೈನ್ಸ್ ಸಂಸ್ಥೆಯ ಮುಖ್ಯಸ್ಥ ಸುರೇಶ್ ಟಿ. ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೆಜಿಂಗ್ ಅಸೋಶಿಯೇಷನ್, ರಾಂಟ್ಜನ್ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಮತ್ತು ಶಿವಮೊಗ್ಗ ಜಿಲ್ಲಾ ರೆಡಿಯಾಲಜಿ ಅಸೋಶಿಯೇಷನ್ ವತಿಯಿಂದ ಏರ್ಪಡಿಸಿದ್ದ ರೇಡಿಯೇಷನ್ ಪ್ರೊಟೆಕ್ಷನ್ ಇನ್ ಡೈಯಾಗ್ನಸ್ಟಿಕ್ ರೇಡಿಯಾಲಜಿ ಕುರಿತ ವೈಜ್ಞಾನಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು, ರೇಡಿಯಾಲಜಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವೈಜ್ಞಾನಿಕ ತರಬೇತಿ ಅತ್ಯಾಗತ್ಯ. ತಂತ್ರಜ್ಞಾನ ವಿಜ್ಞಾನ ಕ್ಷೇತ್ರದ ಬೆಳವಣಿಗೆ ಅತಿವೇಗವಾಗಿ ಆಗುತ್ತಿದೆ. ಆದರೂ ಗುಣಮಟ್ಟದ ಸುಧಾರಣೆಗೆ ಇನ್ನೂ ಒತ್ತು ನೀಡಬೇಕು. ಬಿಎಸ್ಸಿ., ಎಂಎಸ್ಸಿ. ಪದವಿ ಪಡೆದವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಇರುತ್ತದೆ. ಉದ್ಯೋಗ ಸಿಗುತ್ತದೆ ಎಂದು ಓದುವ ಜೊತೆಗೆ ಹೆಚ್ಚೆಚ್ಚು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಯಾವುದೇ ಅಧಿಕಾರ ಹೊಂದಿಲ್ಲ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಎಲ್ಲ ಕಾನೂನು ಬಾಹಿರ ಕೆಲಸಗಳನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಇದನ್ನೇ ಹೇಳುತ್ತಾರಾ ಎಂದು ಪ್ರಶ್ನಿಸಿದರು.

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ನಾಗರೀಕರ   ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಬೆಂಬಲಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮಾನ್ಯ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭೆಯ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು,  ಹಾಗೂ ಹಿರಿಯ ನಾಯಕರು 25-09-2025 ರ  ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ವಿಭಾಗವಾರು ಸಮಿತಿಗಳನ್ನು ಕೆಳಕಂಡಂತೆ ರಚಿಸಲಾಗಿರುತ್ತದೆ. ಈ ಮೂಲಕ ಜಾತಿಗಣತಿ ಸಮೀಕ್ಷೆಗೆ ಮತ್ತಷ್ಟು ಚುರುಕನ್ನು ಸರ್ಕಾರ ನೀಡಿದೆ. ಸಮಿತಿ-I : ಬೆಂಗಳೂರು ವಿಭಾಗ 1. ಬೈರತಿ ಸುರೇಶ್, ಸಚಿವರು 2. ಎಂ.ಆರ್.ಸೀತಾರಾಮ್, ಶಾಸಕರು 3. ಡಿ.ಟಿ.ಶ್ರೀನಿವಾಸ್, ಶಾಸಕರು 4. ಪುಟ್ಟರಂಗ ಶೆಟ್ಟಿ, ಶಾಸಕರು 5. ಎಂ.ಸಿ.ವೇಣುಗೋಪಾಲ್, ಮಾಜಿ ಶಾಸಕರು 6. ಪಿ.ಆರ್.ರಮೇಶ್, ಮಾಜಿ ಶಾಸಕರು ಸಮಿತಿ -II : ಕಲಬುರ್ಗಿ ವಿಭಾಗ 1. ಬೋಸರಾಜ್, ಸಚಿವರು 2.ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರು 3.ಡಾ.ಅಜಯ್ ಸಿಂಗ್, ಶಾಸಕರು 4. ರಮೇಶ್ ಬಾಬು, ಶಾಸಕರು 5. ತಿಪ್ಪಣ್ಣ ಕಮಕನೂರು, ಶಾಸಕರು 6. ಹೆಚ್.ಆರ್.ಗವಿಯಪ್ಪ, ಶಾಸಕರು ಸಮಿತಿ-III : ಮೈಸೂರು ವಿಭಾಗ 1. ಮಧು ಬಂಗಾರಪ್ಪ, ಸಚಿವರು…

Read More

ಬೆಂಗಳೂರು: ಸೆಪ್ಟೆಂಬರ್ 22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಕರ ಜಾತಿ ಗಣತಿ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರ ನಡುವೆ ಜಾತಿಗಣತಿ ಸಾಗಿದ್ದು, ಈವರೆಗೆ ಬರೋಬ್ಬರಿ 13 ಸಮೀಕ್ಷೆಯನ್ನು ಮಾಡಲಾಗಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಿದ್ದು,  ರಾಜ್ಯದಲ್ಲಿ ಸರ್ವರ್ ಸಮಸ್ಯೆ ನಡುವೆಯೂ ಹೆಣಗಾಡುತ್ತಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಆರಂಭಗೊಂಡು, ಸೆಪ್ಟೆಂಬರ್.27ರ ಇಂದು ಸಂಜೆ 5.30ರವರೆಗೆ 12,87,087 ಮನೆಗಳ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಾಗಿದೆ. ಹೀಗಿದೆ ಜಿಲ್ಲಾವಾರ ಜಾತಿಗಣತಿ ಸಮೀಕ್ಷೆಯ ವಿವರ ಬಾಗಲಕೋಟೆ – 55,459 ಬಳ್ಳಾರಿ – 27,799 ಬೆಳಗಾವಿ -96,167 ಬೆಂಗಳೂರು ಗ್ರಾಮಾಂತರ – 22,984 ಬೆಂಗಳೂರು ಸೌತ್ – 32,610 ಬೆಂಗಳೂರು ನಗರ – 9,586 ಬೀದರ್ – 26,345 ಚಾಮರಾಜನಗರ – 24,688 ಚಿಕ್ಕಬಳ್ಳಾಪುರ – 28,845 ಚಿಕ್ಕಮಗಳೂರು -41,634 ಚಿತ್ರದುರ್ಗ -55,531 ದಕ್ಷಿಣ ಕನ್ನಡ – 24,309 ದಾವಣಗೆರೆ – 62,055 ಧಾರವಾಡ –…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಭಾರತೋಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ವತಿಯಿಂದ ನಡೆದ *15ನೇ ವಿಶ್ವ ಸಂವಹನ ಸಮ್ಮೇಳನ‌ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025 ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದೆ. ಈ ಕೆಳಗಿನ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿದೆ: *ಡಿಜಿಟಲ್ ಮೀಡಿಯಾ ಇನೋವೇಶನ್ ಮತ್ತು ಹೌಸ್ ಜರ್ನಲ್ ಪ್ರಿಂಟ್ (ಪ್ರಾದೇಶಿಕ) ವಿಭಾಗದಲ್ಲಿ ಚಿನ್ನದ ಪದಕ *ಹೆಲ್ತ್ ಕೇರ್ ಕಮ್ಯುನಿಕೇಶನ್ ಫಿಲ್ಮ್ಸ್ ವಿಭಾಗದಲ್ಲಿ ಬೆಳ್ಳಿ ಪದಕ *ವಿಶಿಷ್ಟ ಮಾನವ ಸಂಪನ್ಮೂಲ (HR) ಕಾರ್ಯಕ್ರಮಕ್ಕಾಗಿ ಕಂಚಿನ ಪದಕ *ಗ್ರಾಹಕ ಸೇವಾ ಶ್ರೇಷ್ಠತೆ,ಬ್ಯಾಂಡಿಂಗ್, ವೆಬ್‌ಸೈಟ್ ಮತ್ತು ಮೈಕ್ರೋಸೈಟ್, ಕಾರ್ಪೊರೇಟ್ ಫಿಲ್ಮ್ಸ್, ಮಾರ್ಕೆಟಿಂಗ್ ಕ್ಯಾಂಪೇನ್ ಮತ್ತು ಆಂತರಿಕ ಕಮ್ಯುನಿಕೇಶನ್ ಕ್ಯಾಂಪೇನ್ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿರುತ್ತವೆ. ಈ ಸಾಧನೆಗಳು ನಿಗಮವು ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಮತ್ತು ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದಕ್ಕೆ ಸಾಕ್ಷಿಯಾಗಿದೆ. ಇಂದು ಗೋವಾದ ದ ಫರ್ನ್ ಕದಂಬ ಹೋಟೆಲ್ನಲ್ಲಿ…

Read More

ಶಿವಮೊಗ್ಗ: ಸಾಗರ ಇತಿಹಾಸ ಪ್ರಸಿದ್ದವಾದ ಕೆಳದಿ ಮಠದಲ್ಲಿ ಅ. 2ರಂದು ಇತಿಹಾಸ ಪ್ರಸಿದ್ದ ಪಚ್ಚೆಲಿಂಗು ದರ್ಶನ ಏರ್ಪಡಿಸಿದ್ದು, ಪ್ರಾತಃಕಾಲದಲ್ಲಿ ಪಚ್ಚೆಲಿಂಗಕ್ಕೆ ಅಭಿಷೇಕಾದಿ ವಿಶೇಷ ಪೂಜೆ ನಂತರ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಕೆಳದಿ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಂದಗದ್ದೆ-ಕೆಳದಿ ರಾಜಗುರು ಹಿರೇಮಠದಲ್ಲಿ ಶುಕ್ರವಾರ ವಿಜಯದಶಮಿ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, 2019ರಿಂದ ಶ್ರೀಮಠದಲ್ಲಿ ಪಚ್ಚೆಲಿಂಗು ದರ್ಶನಕ್ಕೆ ಅವಕಾಶ ಕಲ್ಪಿಸುತ್ತಾ ಬರಲಾಗುತ್ತಿದೆ. ಈ ವರ್ಷ ಅ. 2ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ದರ್ಶನ ಇರುತ್ತದೆ. ಪಚ್ಚೆಲಿಂಗು ದರ್ಶನದಿಂದ ಭಕ್ತರ ಅಭಿಷ್ಟೆಗಳು ಈಡೇರುತ್ತದೆ. ಕೆಳದಿ ಅರಸರು ಶ್ರೀಮಠಕ್ಕೆ ಪಚ್ಚೆಲಿಂಗು ಉಡುಗೊರೆಯಾಗಿ ನೀಡಿ ಪ್ರತಿವರ್ಷ ವಿಜಯ ದಶಮಿಯಂದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡುವಂತೆ ಸಂಕಲ್ಪಿಸಿದ್ದರ ಮೇರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು. ನವರಾತ್ರಿ ಅಂಗವಾಗಿ ಶ್ರೀಮಠದಲ್ಲಿ ಪ್ರತಿದಿನ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಅ. 1ರಂದು ಡಾ. ಗುರುಸಿದ್ದದೇವ…

Read More