Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರಿಗೆ ಶನಿವಾರ ನೋಟಿಸ್ ನೀಡಲಾಗಿದ್ದು, ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಸೆಪ್ಟೆಂಬರ್ 27ರಂದು ದಾಖಲಾದ ಎಫ್ಐಆರ್ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೈಸೂರು ಮೂಲದ ಆರ್ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ನ್ಯಾಯವ್ಯಾಪ್ತಿಯ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. https://kannadanewsnow.com/kannada/pushpa-2-trailer-released/ https://kannadanewsnow.com/kannada/are-you-expecting-to-get-drone-training-heres-a-golden-opportunity/
ಬೆಂಗಳೂರು: 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿರುತ್ತದೆ. ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ [ನಿ] ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/pushpa-2-trailer-released/ https://kannadanewsnow.com/kannada/hd-kumaraswamy-assures-to-discuss-beml-outsourced-workers-issue-with-defence-minister/
‘ಪುಷ್ಪಾ 2: ದಿ ರೂಲ್’ ಚಿತ್ರದ ಟ್ರೈಲರ್ ಅನ್ನು ನವೆಂಬರ್ 17 ರಂದು ಬಿಹಾರದ ಪಾಟ್ನಾದಲ್ಲಿ ಬಿಡುಗಡೆ ಮಾಡಲಾಯಿತು. ಗ್ರ್ಯಾಂಡ್ ಟ್ರೈಲರ್ನಲ್ಲಿ ಅಲ್ಲು ಅರ್ಜುನ್ ಕೆಂಪು ಶ್ರೀಗಂಧದ ಕಳ್ಳಸಾಗಾಣಿಕೆದಾರನ ನಾಮಮಾತ್ರದ ಪಾತ್ರವನ್ನು ಪುನರಾವರ್ತಿಸಿದರೆ, ರಶ್ಮಿಕಾ ಅವರ ಪ್ರೇಮಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಾಮಾ, ಮಿಸ್ಟರಿ, ಆಕ್ಷನ್, ಸಂಗೀತ, ಪ್ರಣಯ ಮತ್ತು ಸಂಸ್ಕೃತಿ ಹೀಗೆ ಎಲ್ಲದರ ಡೋಸ್ ನೊಂದಿಗೆ ಟ್ರೈಲರ್ ಭರವಸೆದಾಯಕವಾಗಿದೆ. ಮತ್ತೇನು? ಈ ಬಾರಿ ನಮಗೆ ದೊಡ್ಡ ಖಳನಾಯಕ ಸಿಗುತ್ತಾನೆ. ಪುಷ್ಪಾ: ದಿ ರೈಸ್ ಚಿತ್ರದಲ್ಲಿ ಕಡಿಮೆ ಸ್ಕ್ರೀನ್ ಟೈಮ್ ಹೊಂದಿದ್ದ ನಟ ಫಹಾದ್ ಫಾಸಿಲ್, ಪುಷ್ಪಾ: ದಿ ರೂಲ್ ಚಿತ್ರದಲ್ಲಿ ಬಲವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನಿಷ್ಠ ಅದನ್ನೇ ಟ್ರೈಲರ್ ಸೂಚಿಸುತ್ತದೆ. ಅವರು ಕ್ರಿಯಾತ್ಮಕವಾಗಿ ಕಾಣುತ್ತಾರೆ, ಪುಷ್ಪಾ ಅವರ ಭಾಷಾವೈಶಿಷ್ಟ್ಯಗಳು ಮತ್ತು ಸ್ವಾಗ್ ಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತಾರೆ. ಟ್ರೈಲರ್ ಶಿಳ್ಳೆ-ಯೋಗ್ಯ ಸಂಭಾಷಣೆಗಳಿಂದ ಕೂಡಿದೆ. ಇದರಲ್ಲಿ ಅಪ್ರತಿಮ ಸಂಭಾಷಣೆಯೂ ಸೇರಿದೆ, ಇದನ್ನು ಈಗ ಹೆಚ್ಚು ‘ಕಾಡು’ ಎಂದು ಧ್ವನಿಸಲು ಮಾರ್ಪಡಿಸಲಾಗಿದೆ. ಇದನ್ನು ಮಾದರಿಯಾಗಿ ತೆಗೆದುಕೊಳ್ಳಿ: “ಪುಷ್ಪಾ…
ಕೆಜಿಎಫ್/ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಭರವಸೆ ನೀಡಿದರು. ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟ ಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು ಸಚಿವರು. “ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ (ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ) ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ…
ಶಿವಮೊಗ್ಗ: ಸಾಗರ ನಗರದಲ್ಲಿ ಅಕ್ಷಯಸಾಗರ ಸೌಹಾರ್ದ ಸಹಕಾರಿ ಸಂಘದ ನೂತನ ಅಕ್ಷಯಸಾಗರ ಬೆಳ್ಳಿ ಭವನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಿನೋಬನಗರ, ಸಣ್ಣಮನೆ ಬಡಾವಣೆಯಲ್ಲಿ ಅಕ್ಷಯಸಾಗರ ಸೌಹಾರ್ದ ಸಹಕಾರಿ ಸಂಘದ ನೂತನ ಅಕ್ಷಯಸಾಗರ ಬೆಳ್ಳಿ ಭವನವನ್ನು ನಿರ್ಮಿಸಲಾಗಿತ್ತು. ಇಂತಹ ನೂತನ ಭವನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಿಬ್ಬನ್ ಕಟ್ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು. ಅಲ್ಲದೇ ಕಟ್ಟಡದ ಒಳಗೆ ತೆರಳಿ, ಇರಿಸಲಾಗಿದ್ದಂತ ದೇವರ ಪೋಟೋಗಳಿಗೆ ಪುಷ್ಪಾರ್ಚನೆ ಮಾಡಿದರು. ಈ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಾನು ಶಿಕಾರಿಪುರದಲ್ಲಿ ವೀರಶೈವ ಸಹಾಕರ ಸಂಘದ ಅಧ್ಯಕ್ಷನಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟಿದ್ದೆ. ಇದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ರಾಜ್ಯದಲ್ಲಿ 1905ರಲ್ಲಿ ಸಹಕಾರ ಚಳುವಳಿ ಪ್ರಾರಂಭವಾಯಿತು. ಸಹಕಾರಿ ಕ್ಷೇತ್ರ ಜಾತಿ, ಮತ, ಪಂಥಗಳನ್ನು ಮೀರಿದ್ದಾಗಿದೆ. ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರವು ಇಷ್ಟು ವಿಸ್ತಾರವಾಗಿ ಬೆಳೆದಿದೆ ಎಂಬುದನ್ನು ಕಂಡರೆ ಸಂತೋಷವಾಗುತ್ತದೆ ಎಂದರು. ಸ್ಥಳೀಯವಾಗಿ ಹೆಚ್ಚು…
ಉಡುಪಿ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟೈಲರಿಂಗ್ ಸೇರಿದಂತೆ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಬ್ರಹ್ಮಾವರದಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಸ್ಥೆಯು, ಉಡುಪಿಯ ಬ್ರಹ್ಮಾವರ ಬಳಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಹಿಳಾ 30 ದಿನಗಳ ಟೈಲರಿಂಗ್ ತರಬೇತಿಯನ್ನು ದಿನಾಂಕ 25.11.2024 ರಿಂದ 24.12.2024ರವರೆಗೆ ಆಯೋಜಿಸಲಾಗಿದೆ ಎಂದಿದೆ. ಇದಲ್ಲದೇ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆ ತರಬೇತಿಯು ದಿನಾಂಕ 15.12.2024 ರಿಂದ 24.12.24ರ ವರೆಗೆ (10ದಿನ) ನಡೆಯುತ್ತದೆ ಎಂದು ಮಾಹಿತಿ ನೀಡಿದೆ. ತರಬೇತಿಯ ಅವಧಿಯಲ್ಲಿ ವಸತಿ, ಊಟ, ತರಬೇತಿ ಉಚಿತವಾಗಿರುತ್ತದೆ. ಆಸಕ್ತ 18-45 ವರ್ಷದ ಒಳಗಿನವರು ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. ಆಸಕ್ತರು https://forms.gle/ks4rqz9kFq89FKKPA ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ 9844086383, 7022560492 ಸಂಖ್ಯೆಗಳಿಗೆ ಕರೆಮಾಡಿ ಪಡೆಯಬಹುದು. ಅಲ್ಲದೇ ಸಂಸ್ಥೆಯ ಅಧಿಕೃತ ವೆಬ್…
ನವದೆಹಲಿ: ಹೆಚ್ಚಿನ ಸೇವೆಗಳನ್ನು ಆನ್ಲೈನ್ನಲ್ಲಿ ಪ್ರವೇಶಿಸಬಹುದಾದ ಯುಗದಲ್ಲಿ, ಆಧಾರ್ ಕಾರ್ಡ್ ನಿರ್ಣಾಯಕ ಗುರುತಿನ ದಾಖಲೆಯಾಗಿ ಉಳಿದಿದೆ. ಇದು ನೋಂದಣಿಗೆ ಹೆಚ್ಚು ನೇರ ವಿಧಾನದ ಅಗತ್ಯವಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಆಗದಿದ್ದರೂ, ವ್ಯವಸ್ಥೆಯು ವಿಕಸನಗೊಳ್ಳುತ್ತಲೇ ಇದೆ. ಇದು ಭಾರತದ ಎಲ್ಲಾ ನಿವಾಸಿಗಳಿಗೆ ಸುಲಭ ಪ್ರವೇಶವನ್ನು ಖಚಿತಪಡಿಸುತ್ತದೆ. ಆದರೆ ಈ ಪ್ರಮುಖ ದಾಖಲೆಯನ್ನು ಪಡೆಯಲು ಏನು ಬೇಕು? ಮೊದಲ ಬಾರಿಗೆ ಆಧಾರ್ ಕಾರ್ಡ್ ಪಡೆಯುವಲ್ಲಿ ಒಳಗೊಂಡಿರುವ ಪ್ರಮುಖ ಹಂತಗಳನ್ನು ನೋಡೋಣ. ಡಿಜಿಟಲ್ ಕ್ರಾಂತಿಯ ಹೊರತಾಗಿಯೂ, ಆಧಾರ್ ಕಾರ್ಡ್ ಅನ್ನು ಮೊದಲಿನಿಂದ ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ರಚಿಸಲು ಸಾಧ್ಯವಿಲ್ಲ. ಆದಾಗ್ಯೂ, ನೀವು ಭಾರತದ ನಿವಾಸಿಯಾಗಿದ್ದರೆ ಮತ್ತು ಮೊದಲ ಬಾರಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬಯಸಿದರೆ, ಪ್ರಕ್ರಿಯೆಯನ್ನು ಸರಳ ಮತ್ತು ಹೆಚ್ಚು ಪ್ರವೇಶಿಸುವಂತೆ ಮಾಡಲಾಗಿದೆ. ಒಳಗೊಂಡಿರುವ ಹಂತಗಳನ್ನು ಅರ್ಥಮಾಡಿಕೊಳ್ಳಲು ನಿಮಗೆ ಸಹಾಯ ಮಾಡಲು ತ್ವರಿತ ಮಾರ್ಗದರ್ಶಿ ಇಲ್ಲಿದೆ. ಆಧಾರ್ ಕಾರ್ಡ್ ಪಡೆಯುಲು ಈ ಹಂತ ಅನುಸರಿಸಿ ಹಂತ 1: ನೋಂದಣಿ ಕೇಂದ್ರಕ್ಕೆ ಭೇಟಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX) ರ 8 ನೇ ಪ್ರಕರಣವನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 8 ರೊಂದಿಗೆ ಓದಿಕೊಂಡು ಅದೇ ಅಧಿನಿಯಮದ (3)ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಮುಂದಿನ ಕರಡನ್ನು ರಚಿಸಲು…
ಕೆಎನ್ಎನ್ ಸಿನಿಮಾ ಡೆಸ್ಕ್: ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರಾ: ಚಾಪ್ಟರ್ 1 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ಕಾಂತಾರಾ ತಯಾರಕರು ನವೆಂಬರ್.17ರಂದು ಈ ಸುದ್ದಿಯನ್ನು ಘೋಷಿಸಿದರು. ಕಾಂತಾರಾ ಅವರ ಅಧಿಕೃತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಮುಂಬರುವ ಚಿತ್ರದ ಕುತೂಹಲಕಾರಿ ಪೋಸ್ಟರ್ ಅನ್ನು ಹಂಚಿಕೊಂಡಿದೆ ಮತ್ತು ಕಾಂತಾರಾ: ಚಾಪ್ಟರ್ 1 ಅಕ್ಟೋಬರ್ 2, 2025 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿತು. https://twitter.com/hombalefilms/status/1858094631000449074 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಆರೋಗ್ಯಕರ ಮನರಂಜನೆಯನ್ನು ಒದಗಿಸಿದ್ದಕ್ಕಾಗಿ ಕಾಂತಾರಾ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗಳಿಸಿತು ಮತ್ತು ಅತ್ಯುತ್ತಮ ಜನಪ್ರಿಯ ಚಿತ್ರವೆಂದು ಗುರುತಿಸಲ್ಪಟ್ಟಿತು. https://kannadanewsnow.com/kannada/nhm-contractual-outsourced-employees-of-health-department-protest-against-state-government-decide-to-go-on-strike/ https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/
ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ‘ಆರೋಗ್ಯ ಇಲಾಖೆ’ಯ NHM ಗುತ್ತಿಗೆ, ಹೊರಗುತ್ತಿಗೆ ನೌಕರರು: ಮುಷ್ಕರಕ್ಕೆ ನಿರ್ಧಾರ
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ NHM ಗುತ್ತಿಗೆ, ಹೊರಗುತ್ತಿಗೆ ನೌಕರರು, ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ, ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಅನಿರ್ಧಿಷ್ಠಾವಧಿ ಮುಷ್ಕರ ಮಾಡಲು ನೋಟಿಸನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು, ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಸಾಕಷ್ಟು ಬಾರಿ ಹೋರಾಟಗಳನ್ನು ಮಾಡಿದ್ದು ಸರ್ಕಾರದಿಂದ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಆದರೆ ಇಲ್ಲಿಯವರೆಗೂ ಬೇಡಿಕೆಗಳ ಅನುಷ್ಟಾನದಲ್ಲಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ವರದಿಯನ್ನೂ ಸಂಪೂರ್ಣವಾಗಿ ಅನುಷ್ಠಾನಗೊಳಿಸಿರುವುದಿಲ್ಲ ಎಂಬುದಾಗಿ ಹೇಳಿದ್ದಾರೆ. ಕಾನೂನಿನಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶ ಇದೆ ಎಂದಾದ…