Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಎಲ್. ಮೂರ್ತಿ 08 /12/ 2025 ರಂದು ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ 10.30ಕ್ಕೆ ಆಗಮಿಸಲಿದ್ದಾರೆ. ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ನಗರಸಭೆ ಪೌರಾಯುಕ್ತ, ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬಳಿಕ 11.30 ಕ್ಕೆ ಮಳವಳ್ಳಿಗೆ ತೆರಳಿ 12.30 ರಿಂದ ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ಪುರಸಭೆ ಮುಖ್ಯಾಧಿಕಾರಿ, ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಸಂಜೆ ಮಂಡ್ಯ ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ
ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು ಕೂಡಾ ಬೇಡ ಅನಿಸುತ್ತಿತ್ತು. ಒಂದು ದಿನ ಆ ಊರಿಗೆ ಒಬ್ಬ ಗುರುಗಳು ಬಂದಿದ್ದಾರೆ ಎನ್ನುವ ಸುದ್ದಿ ಅವನಿಗೆ ಗೊತ್ತಾಯಿತು. ತನ್ನ ಸಮಸ್ಯೆಗೆ ಅವರ ಬಳಿ ಏನಾದರೂ ಪರಿಹಾರ ಇರಬಹುದಾ ಎಂದು ಯೋಚಿಸಿದ. ಯುವಕ ಗುರುಗಳ ಬಳಿಗೆ ಹೋಗಿ, ʻʻಜೀವನದಲ್ಲಿ ನನಗೆ ಹಲವಾರು ಸಮಸ್ಯೆಗಳಿವೆ. ಹಾಗಾಗಿ ಸದಾ ಬೇಸರದಲ್ಲಿ ಕಾಲ ಕಳೆಯುತ್ತಿದ್ದೇನೆ. ನಾನು ಎಲ್ಲರ ಹಾಗೆ ಸಂತೋಷವಾಗಿರೋದು ಹೇಗೆ? ದಯವಿಟ್ಟು ನನ್ನ ಸಮಸ್ಯೆಗೆ ಪರಿಹಾರ ತಿಳಿಸಿʼʼ ಎಂದು ಕೇಳಿದ. ಗುರುಗಳು ಯುವಕ ಹೇಳಿದ್ದೆಲ್ಲವನ್ನೂ ಗಮನವಿಟ್ಟು ಕೇಳಿದರು. ಆದರೆ, ಏನೂ ಉತ್ತರ ನೀಡದೆ ಎದ್ದು ಒಳಗೆ ನಡೆದರು. ಯುವಕನಿಗೆ ಗೊಂದಲವಾಯಿತು. ʻʻನಾನೇನೋ ಇವರಾದರೂ ಪರಿಹಾರ ಹೇಳುತ್ತಾರೆ ಎಂದು ಇಲ್ಲಿಗೆ ಬಂದರೆ ಏನೂ ಹೇಳದೆ ಒಳಗೆ ಹೋಗಿಬಿಟ್ಟರಲ್ಲʼʼ ಅಂತ ಮನಸ್ಸಿನೊಳಗೇ ಹೇಳಿಕೊಂಡ. ಅಷ್ಟು ಹೊತ್ತಿಗೆ ಗುರುಗಳು ಹೊರಗೆ ಬಂದರು. ಅವರ ಒಂದು ಕೈಯಲ್ಲಿ ಒಂದು ಲೋಟ…
ಶಿವಮೊಗ್ಗ: ಸೊರಬದ ಚಂದ್ರಗುತ್ತಿ ದೇವಸ್ಥಾನ, ಸಾಗರದ ಗಣಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅವ್ಯವಹಾರ ನಡೆಸಿದ್ದಾರೆ ಎಂಬುದಾಗಿ ಆರೋಪವನ್ನು ಡಿಸಿ ನೇತೃತ್ವದ ಮುಜರಾಯಿ ಇಲಾಖೆಯ ಸಭೆಯಲ್ಲಿ ಆರೋಪ ಕೇಳಿ ಬಂದಿತ್ತು. ಆದರೆ ವಾಸ್ತವ ಸತ್ಯವೇ ಬೇರೆಯಾಗಿದೆ. ಅದು ಏನು ಅಂತ ಮುಂದಿದೆ ಓದಿ. ಶಿವಮೊಗ್ಗ ಜಿಲ್ಲೆಯ ಸೊರಬ ಚಂದ್ರಗುತ್ತಿ ದೇವಸ್ಥಾನ ಹಾಗೂ ಸಾಗರ ತಾಲ್ಲೂಕಿನ ಗಣಪತಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಮಿಳಾ ಕುಮಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಇಓ ಆಗಿ ಅಧಿಕಾರಿ ವಹಿಸಿಕೊಂಡ ನಂತರ ದೇವಾಲಯಕ್ಕೆ ಆದಾಯ ಹರಿದು ಬರುತ್ತಿದ್ದರೇ, ಅನಗತ್ಯ ಹಣ ದುರ್ಬಳಕೆಗೂ ಬ್ರೇಕ್ ಬಿದ್ದೆದೆ ಎಂಬುದು ಭಕ್ತರ ಮಾತಾಗಿದೆ. ಸೊರಬದ ಚಂದ್ರಗುತ್ತಿ ದೇವಸ್ಥಾನದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಉತ್ತಮ ರೀತಿಯಲ್ಲಿ ನಡೆದಿದೆ. ಶೌಚಾಲಯ, ದೇವಸ್ಥಾನಕ್ಕೆ ಹೊಸ ಟ್ರ್ಯಾಕ್ಟರ್ ತರಿಸುವಲ್ಲಿ ಇಓ ಮಹತ್ವದ ಪಾತ್ರ ವಹಿಸಿದ್ದಾರೆ ಎಂಬುದು ಮುಜರಾಯಿ ಇಲಾಖೆಯ ದಾಖಲೆಗಳೇ ಹೇಳುತ್ತಿವೆ. ಸರ್ಕಾರದಿಂದ ಬಂದಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಲ್ಲಿ ಯಶಸ್ವಿಯಾಗಿರುವ ಇಓ, ಹುಂಡಿ ಹಣವನ್ನು ಸದ್ಬಳಕೆ ಮಾಡುವಲ್ಲಿ…
ಬೆಂಗಳೂರು: ರಾಜ್ಯದ ಸರ್ಕಾರಿ ಆಯುಷ್ ಆಸ್ಪತ್ರೆಗಳಿಗೆ ದಾನಿಗಳು ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೇ ಸರ್ಕಾರ ನಿಗದಿ ಪಡಿಸಿದಂತ ಹಣವನ್ನು ದಾನವಾಗಿ ನೀಡಿದರೇ ಅವರು ಸೂಚಿಸಿದ ಹೆಸರು ಇಡೋಲಾಗುತ್ತದೆ ಅಂತ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಆಸ್ಪತ್ರೆಗಳ/ ಕೇಂದ್ರಗಳಿಗೆ ಸಾರ್ವಜನಿಕರಿಂದ ನಿವೇಶನ, ಕಟ್ಟಡ ಮತ್ತು ಹಣವನ್ನು ದಾನ ರೂಪದಲ್ಲಿ ಸ್ವೀಕರಿಸಲು ಹಾಗೂ ದಾನಿಗಳ ಅಥವಾ ದಾನಿಗಳು ಸೂಚಿಸುವ ಹೆಸರುಗಳನ್ನು ನಾಮಕರಣ ಮಾಡಲು ಷರತ್ತುಗಳೊಂದಿಗೆ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಆಯುಕ್ತರು, ಆಯುಷ್ ಇಲಾಖೆ ಇವರು ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ 2018-19ನೇ ಸಾಲಿಗೆ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಇಲಾಖೆಗೆ 15 ಆಯುಷ್ ಆಸ್ಪತ್ರೆಗಳನ್ನು ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯಡಿ ಮೇಲ್ದರ್ಜೆಗೇರಿಸಲು ಭಾರತ ಸರ್ಕಾರವು ಅನುಮೋದನೆ ನೀಡಿ ಅಗತ್ಯ ಮೂಲಭೂತ…
ಗೋವಾದ ಅರ್ಪೋರಾದಲ್ಲಿರುವ ರೆಸ್ಟೋರೆಂಟ್-ಕಮ್-ಕ್ಲಬ್ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು, ಆದರೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾತ್ರಿಯಿಡೀ ಕೆಲಸ ಮಾಡಿದರು. https://twitter.com/RT_com/status/1997443439584252196?ref_src=twsrc%5Etfw%7Ctwcamp%5Etweetembed%7Ctwterm%5E1997443439584252196%7Ctwgr%5Eb52f9b210168c87a2cd8b3bf61f17ac1462a46d5%7Ctwcon%5Es1_&ref_url=https%3A%2F%2Fapi-news.dailyhunt.in%2F ಗೋವಾ ಡಿಜಿಪಿ ಅಲೋಕ್ ಕುಮಾರ್ ಅವರು ಮಧ್ಯರಾತ್ರಿಯ ನಂತರ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು. “ಅರ್ಪೋರಾದ ರೆಸ್ಟೋರೆಂಟ್-ಕಮ್-ಕ್ಲಬ್ನಲ್ಲಿ ದುರದೃಷ್ಟಕರ ಘಟನೆ ಸಂಭವಿಸಿದೆ. ಬೆಳಿಗ್ಗೆ 12.04 ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿತು, ಮತ್ತು ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಧಾವಿಸಲಾಯಿತು” ಎಂದು ಸುದ್ದಿ ಸಂಸ್ಥೆ ಎಎನ್ಐ ಅವರನ್ನು ಉಲ್ಲೇಖಿಸಿ ಅವರು ಹೇಳಿದರು. “ಬೆಂಕಿ ಈಗ ನಿಯಂತ್ರಣದಲ್ಲಿದೆ, ಮತ್ತು ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಒಟ್ಟು ಸಾವಿನ ಸಂಖ್ಯೆ 23… ಪೊಲೀಸರು ಈ ಘಟನೆಯ ಕಾರಣವನ್ನು ತನಿಖೆ ಮಾಡುತ್ತಾರೆ ಮತ್ತು ಸಂಶೋಧನೆಗಳ ಆಧಾರದ ಮೇಲೆ ನಾವು ಕ್ರಮ…
ಶಿವಮೊಗ್ಗ: ಜಿಲ್ಲೆಯ ಅಡಿಕೆ ಬೆಳೆಗಾರರಿಂದ ಸರಿಯಾದ ಪ್ರಮಾಣದಲ್ಲಿ ವಿಮೆ ಹಣವನ್ನು ಕಟ್ಟಿಸಿಕೊಳ್ಳುತ್ತಿಲ್ಲ. ಹೀಗಾಗಿ ಅಡಿಕೆ ಬೆಳೆಗಾರರ ವಿಮಾ ಪರಿಹಾರದ ಸಮಸ್ಯೆ ಪರಿಹರಿಸುವಂತೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಪತ್ರ ಬರೆದಿರುವಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸಾಗರ ವಿಧಾನಸಭಾ ವ್ಯಾಪ್ತಿಯಲ್ಲಿ 2024ನೇ ಸಾಲಿನ ಡಿಸೆಂಬರ್ ಅತ್ಯಂಕ್ಕೆ 2493.9 ಮಿ.ಮೀ ವಾಡಿಕೆ ಮಳೆ ಆಗಬೇಕಾಗಿದ್ದು, ವಾಸ್ತವವಾಗಿ 3864.7 ಮಿ.ಮೀ ಮಳೆ ಆಗಿರುತ್ತದೆ. 1370.8 ಮಿ.ಮೀ ರಷ್ಟು ಹೆಚ್ಚುವರಿ ಮಳೆ ಆಗಿರುತ್ತದೆ ಎಂದಿದ್ದಾರೆ. ಸಾಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಯು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಅತಿವೃಷ್ಟಿಯಿಂದ ಕೊಳೆ ಹಾನಿಯಾಗಿರುತ್ತದೆ. ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್ಗೆ ರೂ.6400/- ಗಳನ್ನು ವಿಮಾ ಕಂತನ್ನು ಪಾವತಿಸಿಕೊಂಡು 2024-25ನೇ ಸಾಲಿನಲ್ಲಿ ತೋಟಗಾರಿಕಾ ಬೆಳೆಗೆ ವಿಮೆಯ ಹಣಪಾವತಿಯಲ್ಲಿ ಪ್ರತಿ…
ಬೆಂಗಳೂರು: ನಗರದ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದ ಬ್ಯಾಂಗ್ ಕಳವು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧವೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಬೆಂಗಳೂರಿನ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದಂತ ಬ್ಯಾಗ್ ಕಳವು ಆಗಿದೆ. ಹೀಗಾಗಿ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ನೀಡಿದಂತ ದೂರಿನ ಆಧಾರದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ಅವರು ಹಣವಿದ್ದ ಬ್ಯಾಗ್ ಅನ್ನು ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ಎಂಬುವರು ಕದ್ದಿರುವುದಾಗಿ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ಬೆಂಗಳೂರು: ನಗರದ ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ” ಪ್ರಾರಂಭಿಸಲಾಗುವುದೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಕುರಿತು ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ಪಡೆಯುವಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಜಿಬಿಎ ಹೊಸದಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿದರು. ಕಣ್ಗಾವಲು ತಂಡ ನಿಯೋಜನೆ: ಇ-ಖಾತಾ ವಿಚಾರದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ನಿಗಾವಗಿಸಲು 25 ಜನ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ಒಳಗೊಂಡ ಕಣ್ಗಾವಲು ತಂಡವನ್ನು ನಿಯೋಜನೆ ಮಾಡಲಾಗಿದೆ. ಅದರ ಮೂಲಕ ಕಾರಣಗಳಿಲ್ಲದೆ ತಿರಸ್ಕರಿಸಿದವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಾಗುವುದೆಂದು ತಿಳಿಸಿದರು. 8 ಲಕ್ಷ ಇ-ಖಾತಾ ವಿತರಣೆ: ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ 8 ಲಕ್ಷ ಇ-ಖಾತಾ ಪಡೆದಿದ್ದಾರೆ. ಬೆಂಗಳೂರು ಒನ್ ಹಾಗೂ…
ಚಿಕ್ಕಬಳ್ಳಾಪುರ: ಮನೆ ಮಾರಿದ ಹಣದ ವಿಚಾರಕ್ಕಾಗಿ ಗಲಾಟೆಗೆ ಇಳಿದಂತ ಪುತ್ರನೊಬ್ಬ, ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ದೊಡ್ಡಪ್ಪನನ್ನೇ ಹತ್ಯೆಗೈದ ಘಟನೆ ಚಿಂತಾಮಣಿಯ ಗುರ್ರಂಪಲ್ಲಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಗುರ್ರಂಪಲ್ಲಿಯಲ್ಲಿ ಮಾರಾಟ ಮಾಡಿದ ಮನೆ ಹಣಕಾಸಿನ ವಿಚಾರಕ್ಕೆ ದೊಡ್ಡಪ್ಪನನ್ನೇ ಹತ್ಯೆಯನನ್ನು ಪಾಪಿ ಪುತ್ರ ಮಧುಸೂದನ್ ಎಂಬಾತ ಮಾಡಿದ್ದಾನೆ. ಹಣದ ವಿಚಾರಕ್ಕಾಗಿ ದೊಡ್ಡಪ್ಪ ನಾರಾಯಣಸ್ವಾಮಿ ಹಾಗೂ ಪುತ್ರ ಮಧುಸೂದನ್ ನಡುವೆ ಗಲಾಟೆಯಾಗಿದೆ. ಈ ವೇಳೆಯಲ್ಲಿ ನಾರಾಣಯಸ್ವಾಮಿಯನ್ನು ಮಧುಸೂದನ್ ತಳ್ಳಿದ್ದಾನೆ. ಈ ವೇಳೆ ಮನೆ ಗೇಟ್ ತಗುಲಿ ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ದೊಡ್ಡಪ್ಪ ನಾರಾಯಣಸ್ವಾಮಿ ಸಾವನ್ನಪ್ಪುತ್ತಿದ್ದಂತೆ ಮಧುಸೂದನ್ ಸ್ಥಳದಿಂದ ಪಾರಿಯಾಗಿದ್ದಾನೆ. ಈ ಸಂಬಂಧ ಕೆಂಚರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/the-government-has-decided-to-name-a-government-hospital-after-the-person-who-donates-this-much-money-from-now-on-an-official-order-has-been-issued/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ನವದೆಹಲಿ: ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಬಿಸಿ ಬಿಸಿ ಚರ್ಚೆಯಾಗಿದೆ. ಆದ್ರೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಲಾಗುವುದು ಅಂತ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಇಂದು ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/maddur-town-street-to-be-widened-to-80-feet-maddur-mla-k-m-uday/ https://kannadanewsnow.com/kannada/babasaheb-ambedkar-is-the-pioneer-of-social-justice-maddur-mla-k-m-uday/














