Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ರೆಸಾರ್ಟ್ ನಲ್ಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಳ ತಿಳಿಯದೇ ಈಜು ಬಾರದಂತ ಮೂವರು ಯುವತಿಯರು ಸಾವನ್ನಪ್ಪಿದ ಘಟನೆಯ ನಂತ್ರ, ಜಿಲ್ಲಾ ಆಡಳಿತವು ರೆಸಾರ್ಟ್ ನ ಪರವಾನಗಿಯನ್ನು ರದ್ದುಗೊಳಿಸಿದೆ. ಈ ಕುರಿತಂತೆ ಮಂಗಳೂರು ಎಸಿ ಹರ್ಷವರ್ಧನ್ ಸುದ್ದಿಗಾರರೊಂದಿಗೆ ಮಾತನಾಡಿ, ಅವೈಜ್ಞಾನಿಕವಾಗಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ, ಮೂವರು ಯುವತಿಯರ ಸಾವಿಗೆ ಕಾರಣವಾದಂತ ರೆಸಾರ್ಟ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದುಗೊಳಿಸುತ್ತಿರುವುದಾಗಿ ತಿಳಿಸಿದರು. ಮಂಗಳೂರಿನ ಉಳ್ಳಾಲ ಸಮೀಪದ ಸಾಯಿರಾಂ ವಾಝ್ಕೋ ರೆಸಾರ್ಟ್ ಗೆ ಮೈಸೂರಿನಿಂದ ಪ್ರವಾಸಕ್ಕೆಂದು ಶನಿವಾರದಂದು ಮೂವರು ಯುವತಿಯರಿ ತೆರಳಿದ್ದರು. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಕೊಠಡಿಯಲ್ಲಿ ಉಳಿದುಕೊಂಡು, ಆ ಬಳಿಕ ಈಜು ಕೊಳದಲ್ಲಿ ಈಜಲು ತೆರಳಿದ್ದರು. ಈವೇಳೆ ಅವೈಜ್ಞಾನಿಕತೆಯಿಂದ ಕೂಡಿದ್ದಂತ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ಆಳ ತಿಳಿಯದೇ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದರು. ಈ ಸಂಬಂಧ ಉಳ್ಳಾಲ ಠಾಣೆಯ ಪೊಲೀಸರು ಮಾಲೀಕ ಮನೋಹರ್ ಹಾಗೂ ಪುತ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/
ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದಂತ ಮೈಸೂರು ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಮುಳುಗಿ ಸಾವನ್ನಪ್ಪಿದ್ದರು. ಈ ಸಂಬಂಧ ರೆಸಾರ್ಟ್ ಮಾಲೀಕ ಸೇರಿದಂತೆ ಇಬ್ಬರನ್ನು ಉಳ್ಳಾರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉಳ್ಳಾಲ ಸಮೀಪದ ಸಾಯಿರಾಂ ವಾಝ್ಕೋ ರೆಸಾರ್ಟ್ ಗೆ ಮೈಸೂರಿನಿಂದ ಪ್ರವಾಸಕ್ಕೆಂದು ಶನಿವಾರದಂದು ಮೂವರು ಯುವತಿಯರಿ ತೆರಳಿದ್ದರು. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಕೊಠಡಿಯಲ್ಲಿ ಉಳಿದುಕೊಂಡು, ಆ ಬಳಿಕ ಈಜು ಕೊಳದಲ್ಲಿ ಈಜಲು ತೆರಳಿದ್ದರು. ಈವೇಳೆ ಅವೈಜ್ಞಾನಿಕತೆಯಿಂದ ಕೂಡಿದ್ದಂತ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ಆಳ ತಿಳಿಯದೇ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದರು. ಈ ಸಂಬಂಧ ಉಳ್ಳಾಲ ಠಾಣೆಯ ಪೊಲೀಸರು ಮಾಲೀಕ ಮನೋಹರ್ ಹಾಗೂ ಪುತ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಮಂಗಳೂರು ನಗರ ಎಸಿ ಹರ್ಷವರ್ಧನ್ ಅವರು ತಾತ್ಕಾಲಿಕವಾಗಿ ರೆಸಾರ್ಟ್ ಪರವಾನಗಿಯನ್ನು ರದ್ದುಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/ https://kannadanewsnow.com/kannada/drinking-too-much-water-is-dangerous-can-be-life-threatening-doctors/
ನೀರು ಕುಡಿಯುವುದು ಎಷ್ಟು ಮುಖ್ಯ ಎಂಬುದರ ಬಗ್ಗೆ ನಾವು ಬಹಳಷ್ಟು ಕೇಳುತ್ತೇವೆ, ಸಾಮಾಜಿಕ ಮಾಧ್ಯಮಗಳಿಂದ ಅಥವಾ ಪೋಷಕರು ನಮಗೆ ನೆನಪಿಸುವುದರಿಂದ (ಅಥವಾ ಬೈಯುವುದರಿಂದ). ಆದರೆ ಹೆಚ್ಚು ನೀರು ಕುಡಿಯುವುದು ಅಪಾಯಕಾರಿ ಎಂದು ತಿಳಿದುಕೊಳ್ಳುವುದು ಸಹ ಮುಖ್ಯ. ಆದ್ದರಿಂದ, ಹೈಡ್ರೇಟ್ ಆಗಿ ಉಳಿಯುವುದು ಅತ್ಯಗತ್ಯವಾದರೂ, ಸರಿಯಾದ ಸಮತೋಲನವನ್ನು ಕಂಡುಹಿಡಿಯುವುದು ಮುಖ್ಯವಾಗಿದೆ. ನೀರಿನ ಮಾದಕತೆ ನಿಜ ಗುರುಗ್ರಾಮದ ಸಿಕೆ ಬಿರ್ಲಾ ಆಸ್ಪತ್ರೆಯ ಆಂತರಿಕ ಔಷಧ ಸಲಹೆಗಾರ ಡಾ.ತುಷಾರ್ ತಯಾಲ್, “ಹೈಪೋನಾಟ್ರೇಮಿಯಾ ಎಂದೂ ಕರೆಯಲ್ಪಡುವ ನೀರಿನ ಮಾದಕತೆಯು ಅಲ್ಪಾವಧಿಯಲ್ಲಿ ಅತಿಯಾದ ನೀರನ್ನು ಸೇವಿಸಿದಾಗ ಸಂಭವಿಸುತ್ತದೆ, ಇದು ರಕ್ತದಲ್ಲಿನ ಸೋಡಿಯಂ ಸಾಂದ್ರತೆಯನ್ನು ದುರ್ಬಲಗೊಳಿಸುತ್ತದೆ” ಎಂದು ಹೇಳಿದರು. ಸೋಡಿಯಂ ಒಂದು ನಿರ್ಣಾಯಕ ಎಲೆಕ್ಟ್ರೋಲೈಟ್ ಆಗಿದ್ದು, ಇದು ಜೀವಕೋಶಗಳ ಒಳಗೆ ಮತ್ತು ಹೊರಗೆ ದ್ರವಗಳ ಸಮತೋಲನವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಅವರು ವಿವರಿಸುತ್ತಾರೆ. “ಮೂತ್ರಪಿಂಡಗಳು ಹೆಚ್ಚುವರಿ ನೀರನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ಸಾಧ್ಯವಾಗದಿದ್ದರೆ, ಹೆಚ್ಚುವರಿ ನೀರು ಜೀವಕೋಶಗಳನ್ನು ಪ್ರವೇಶಿಸುತ್ತದೆ, ಇದರಿಂದಾಗಿ ಅವು ಉಬ್ಬಿಕೊಳ್ಳುತ್ತವೆ” ಎಂದು ವೈದ್ಯರು ಹೇಳುತ್ತಾರೆ. ಇದಕ್ಕೆ ಗುರುಗ್ರಾಮದ…
ಹೃದಯಾಘಾತದ ನೋವನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಲಾಗುತ್ತದೆ, ಏಕೆಂದರೆ ಇದು ಸಾಮಾನ್ಯ ತೀಕ್ಷ್ಣವಾದ ನೋವು ಅಲ್ಲ ಆದರೆ ಹರಡಿದ ಅಸ್ವಸ್ಥತೆಯ ಸಂವೇದನೆಯಾಗಿದೆ. ಈ ಅಸ್ವಸ್ಥತೆಯು ವಿಶಾಲವಾಗಿದೆ ಮತ್ತು ನಿರ್ದಿಷ್ಟ ಸ್ಥಳಕ್ಕೆ ಗುರುತಿಸಲಾಗುವುದಿಲ್ಲ. ಹೃದಯಾಘಾತದ ರೋಗಲಕ್ಷಣಗಳನ್ನು ಅನುಭವಿಸುವ ವ್ಯಕ್ತಿಗಳು ಸಾಮಾನ್ಯವಾಗಿ ನಿಖರವಾದ ಸ್ಥಳವನ್ನು ಸೂಚಿಸುವ ಬದಲು ತಮ್ಮ ಎದೆಯ ಮೇಲೆ ಮುಚ್ಚಿದ ಮುಷ್ಟಿಯನ್ನು ಇರಿಸುತ್ತಾರೆ. ಹೃದಯಾಘಾತದ ನೋವನ್ನು ಆಮ್ಲೀಯತೆಯಿಂದ ಹೇಗೆ ಪ್ರತ್ಯೇಕಿಸುವುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ, ಆದರೂ ಇದು ಸವಾಲಿನದ್ದಾಗಿರಬಹುದು. ಆಂಟಾಸಿಡ್ ಗಳನ್ನು ತೆಗೆದುಕೊಳ್ಳಿ ಆಂಟಾಸಿಡ್ಗಳು ಮತ್ತು ನೀರಿಗೆ ಅಸ್ವಸ್ಥತೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಒಂದು ಪ್ರಮುಖ ಸೂಚಕವಾಗಿದೆ. ಆಂಟಾಸಿಡ್ ಅಥವಾ ನೀರನ್ನು ಸೇವಿಸಿದ ನಂತರ ಅಸ್ವಸ್ಥತೆಯನ್ನು ನಿವಾರಿಸಿದರೆ, ಅದು ಆಮ್ಲೀಯತೆಯಿಂದಾಗಿರುವ ಸಾಧ್ಯತೆಯಿದೆ. ಈ ಪರಿಹಾರವು ಸಮಸ್ಯೆಯು ಹೃದಯಕ್ಕಿಂತ ಹೊಟ್ಟೆಗೆ ಸಂಬಂಧಿಸಿದೆ ಎಂದು ಸೂಚಿಸುತ್ತದೆ. ಆದಾಗ್ಯೂ, ಆಂಟಾಸಿಡ್ಗಳನ್ನು ತೆಗೆದುಕೊಂಡ ನಂತರ ಯಾವುದೇ ಪರಿಹಾರವಿಲ್ಲದಿದ್ದರೆ, ಅದು ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುವ ಹೃದಯದ ಸಮಸ್ಯೆಯನ್ನು ಸೂಚಿಸುತ್ತದೆ. ದೈಹಿಕ ಶ್ರಮವನ್ನು ಪರೀಕ್ಷಿಸಿ ಗುರುಗ್ರಾಮದ ಮರೆಂಗೊ ಏಷ್ಯಾ ಆಸ್ಪತ್ರೆಯ…
ಹಾವೇರಿ: ಇಲ್ಲಿನ ಎಪಿಎಂಸಿಯೊಂದರ ಗೋದಾಮಿನಲ್ಲಿ ಇರಿಸಿದ್ದಂತ ಹಳೆಯ ಬ್ಯಾಲೆಟ್ ಬಾಕ್ಸ್ ಗಳನ್ನು ಕದ್ದಿದ್ದಂತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್.13ರಂದು ಶಿಗ್ಗಾವಿ ಕ್ಷೇತ್ರದ ಯತ್ನಿನಹಳ್ಳಿ ಬಳಿಯ ಕಾಲುವೆಯಲ್ಲಿ ಹಳೆಯ ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿದ್ದವು. ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲೇ ಪತ್ತೆಯಾದಂತ ಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಹಲವು ಅನುಮಾನಗಳಿಗೂ ಕಾರಣವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಹಾವೇರಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದರು. ಹಾವೇರಿಯ ಎಪಿಎಂಸಿ ಗೋದಾಮಿನಲ್ಲಿ ಸಂಗ್ರಹಿಸಿ ಇರಿಸಲಾಗಿದ್ದಂತ ಹಳೆಯ ಬ್ಯಾಲೆಟ್ ಬಾಕ್ಸ್ ಗಳು ಎಂಬುದಾಗಿ ಪತ್ತೆಯಾಗಿತ್ತು. ಈ ಬಳಿಕ ಆರೋಪಿಗಳ ಪತ್ತೆಗೆ ಇಳಿದಿದ್ದರು. ಇಂದು ಪ್ರಕರಣ ಸಂಬಂಧ ಆರೋಪಿಗಳಾದಂತ ಸಂತೋಷ್ ಮಾಳಗಿ, ಮುತಪ್ಪ ದೇವಿ ಹೊಸೂರು, ಗಣೇಶ್ ಹರಿಜನ, ಕೃಷ್ಣ ಹರಿಜನ ಹಾಗೂ ಮೊಹಮ್ಮದ್ ಜಾವೆದ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಐವರು ಆರೋಪಿಗಳಿಂದ 27 ಬ್ಯಾಲೆಟ್ ಬಾಕ್ಸ್, ಕೃತ್ಯಕ್ಕೆ ಬಳಸಿದಂತ 1 ಆಟೋವನ್ನು ಜಪ್ತಿ ಮಾಡಿದ್ದಾರೆ. https://kannadanewsnow.com/kannada/udupi-congress-leaders-son-hits-and-runs-away-man-dies-on-the-spot/ https://kannadanewsnow.com/kannada/big-news-forcing-wife-to-leave-work-is-equal-to-cruelty-high-court-important-verdict/
ಉಡುಪಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಕಾರನ್ನು ವೇಗವಾಗಿ ಚಲಾಯಿಸಿ ವ್ಯಕ್ತಿಯೊಬ್ಬರಿಗೆ ಗುದ್ದಿ ಪರಾರಿಯಾಗಿರುವಂತ ಘಟನೆ ನಡೆದಿದೆ. ಕಾರು ಹಿಟ್ ಅಂಡ್ ರನ್ ಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಡುಪಿಯ ಕಾಂಗ್ರೆಸ್ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಎಂಬುವರೇ ಕಾರನ್ನು ವೇಗವಾಗಿ ಚಲಾಯಿಸಿ, ವ್ಯಕ್ತಿಯೊಬ್ಬರಿಗೆ ಗುದ್ದಿ, ಸಾವಿಗೆ ಕಾರಣವಾಗಿರುವಂತವರು ಎಂಬುದಾಗಿ ತಿಳಿದು ಬಂದಿದೆ. ಬೆಳಪು ಮಿಲಿಟರಿ ಕಾಲೋನಿ ಬಳಿಯಲ್ಲಿ ಮುಂಜಾನೆ ಕೆಲಸಕ್ಕೆ ಹೋಗುತ್ತಿದ್ದಂತ ಮೊಹಮ್ಮದ್ ಹುಸೇನ್ ಎಂಬುವರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರು ಡಿಕ್ಕಿಯ ರಬಸಕ್ಕೆ ಮೂರು ಪಲ್ಟಿಯಾಗಿ ಚರಂಡಿಯಲ್ಲಿ ಬಿದ್ದಿದ್ದಾರೆ. ಅಪಘಾತದ ಬಳಿಕ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ್ದರೇ ಪುತ್ರ ಮೊಹಮ್ಮದ್ ಹುಸೇನ್ ಸಾವನ್ನಪ್ಪುತ್ತಿರಲಿಲ್ಲ ಎಂಬುದಾಗಿ ಅವರ ತಂದೆ ಉಮರಬ್ಬ ಆರೋಪಿಸಿದ್ದಾರೆ. ಒಂದು ಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಒದ್ದಾಡಿ ಮೊಹಮ್ಮದ್ ಹುಸೇನ್ ಸಾವನ್ನಪ್ಪಿದ್ದಾನೆ. ಆತ ಸಾವಿಗೆ ಕಾರಣವಾದಂತ ಪ್ರಜ್ವಲ್ ಶೆಟ್ಟಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಆಗ್ರಹಿಸಿದ್ದಾರೆ. https://kannadanewsnow.com/kannada/three-drowns-while-swimming-in-resort-swimming-pool-in-ullal/ https://kannadanewsnow.com/kannada/big-news-forcing-wife-to-leave-work-is-equal-to-cruelty-high-court-important-verdict/
ಮಂಗಳೂರು: ಇಲ್ಲಿನ ಉಳ್ಳಾಲದ ಬಳಿಯಲ್ಲಿರುವಂತ ರೆಸಾರ್ಟ್ ಒಂದರ ಈಜುಕೊಳದಲ್ಲಿ ಈಜೋದಕ್ಕೆ ಇಳಿದಂತ ಮೂವರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲ-ಸೋಮೇಶ್ವರದಲ್ಲಿರುವಂತ ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಈಜಲು ಇಳಿದಂತ ಯುವತಿಯೊಬ್ಬಳು ಅದು ಆಳವಾಗಿದ್ದರಿಂದ ಈಜು ಬಾರದೇ ಮುಳುಗಿದ್ದಳು. ಅವಳನ್ನು ರಕ್ಷಿಸೋದಕ್ಕೆ ಇಳಿದಂತ ಮತ್ತೆ ಇಬ್ಬರು ಸೇರಿ ಮೂವರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮೃತರನ್ನು ನಿಶ್ಚಿತ ಎಂ.ಡಿ (21), ಪಾರ್ವತಿ.ಎಸ್(20) ಹಾಗೂ ಕೀರ್ತನಾ.ಎನ್ (21) ಎಂಬುದಾಗಿ ಗುರುತಿಸಲಾಗಿದೆ. ಈ ಮೂವರು ಮೈಸೂರು ಮೂಲದವರಾಗಿದ್ದು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಬೆಳಿಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿದಂತ ಮೂವರು ಯುವತಿಯರು, ಆ ಬಳಿಕ ಈಜಲೆಂದು ಸ್ವಿಮ್ಮಿಂಗ್ ಪೂಲ್ ಗೆ ಇಳಿದಿದ್ದರು. ಈ ವೇಳೆ ಆಳವಿದ್ದ ಕಾರಣ, ಈಜು ಬಾರದೇ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಾವಿಗೆ ರೆಸಾರ್ಟ್ ನ ಅವೈಜ್ಞಾನಿಕ ಸ್ವಿಮ್ಮಿಂಗ್ ಪೂಲ್ ನಿರ್ಮಾಣವೇ ಕಾರಣ ಎಂಬುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/lokayukta-report-proves-40-commission-allegations-false-r-ashoka/ https://kannadanewsnow.com/kannada/big-news-forcing-wife-to-leave-work-is-equal-to-cruelty-high-court-important-verdict/
ಬೆಂಗಳೂರು : ರಾಜ್ಯದ ಜನರಿಗೆ 40 ಪರ್ಸೆಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ತಮ್ಮ 40 ವರ್ಷದ ಜೀವನ ತೆರೆದ ಪುಸ್ತಕ ಅಂದವರು. ಇವತ್ತು ಅವರ ತೆರೆದ ಪುಸ್ತಕ ಪುಟಗಳು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ. ಸಿದ್ದರಾಮಯ್ಯ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಯಿಂದ ವಿಚಾರಣೆ ಎದುರಿಸುತ್ತಿರುವುದು ಕನ್ನಡಿಗರ ದುರ್ದೈವ. ಅಬಕಾರಿ ಇಲಾಖೆಯಲ್ಲಿ ನಡೆದಿರುವ 700 ಕೋಟಿ ಭ್ರಷ್ಟಾಚಾರದ ಬಗ್ಗೆ ಮಹಾರಾಷ್ಟ್ರದ ಚುನಾವಣಾ ಪ್ರಚಾರದ ವೇಳೆ ಪ್ರದಾನ ಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ. ಅದು ಪ್ರಧಾನಿ ಮೋದಿ ಅವರು ಮಾಡಿರುವ ಆರೋಪವಲ್ಲ. ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ. ಮದ್ಯ ಮಾರಾಟಗಾರರ…
ಬೆಂಗಳೂರು : ನಮ್ಮಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು 40 ಪರ್ಸೆಂಟ್ ಆರೋಪ ಮಾಡಿದ್ದೇವೆ. ನೋಂದಾಯಿತ ಸಂಘವು ಅಧಿಕೃತವಾಗಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಾಗ ನಾವು ಕೂಡ ಪಕ್ಷವಾಗಿ ಜನರ ಹಿತ ದೃಷ್ಟಿಯಿಂದ ಪ್ರಶ್ನೆ ಮಾಡಿದ್ದೇವೆ. ಯಾವ ಆಧಾರದ ಮೇಲೆ 40 ಪರ್ಸೆಂಟ್ ನಡೆದಿಲ್ಲ ಎನ್ನುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಬರೀ 40 ಪರ್ಸೆಂಟ್…
ಶಿವಮೊಗ್ಗ: ಸಾಗರ ತಾಲ್ಲೂಕಿನ ವಿವಿಧ ಸರ್ಕಾರಿ ಇಲಾಖೆಯ ನಿರ್ದೇಶಕರು ನನ್ನ ಮೇಲೆ ನಂಬಿಕೆಯಿಟ್ಟು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಸಾಗರ ತಾಲ್ಲೂಕಿನ ಸರ್ಕಾರಿ ನೌಕರರ ಹಿತ ಕಾಯುವಂತ ಕೆಲಸ ಮಾಡಲಿದ್ದೇನೆ. ನೌಕರರ ಬೇಡಿಕೆ ಈಡೇರಿಸೋ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ನೂತನ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ತಿಳಿಸಿದರು. ಇಂದು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಖಜಾಂಚಿ ಸ್ಥಾನಕ್ಕೆ ಸಹದೇವ್ ಎಸ್ ಬಡಿಗೇರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದಂತ ಅಧ್ಯಕ್ಷರು, ರಾಜ್ಯಪರಿಷತ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ 25 ಮತಗಳನ್ನು ಪಡೆದಂತ ಸಂತೋಷ್ ಕುಮಾರ್.ಎನ್ ಅವರು ಭರ್ಜರಿ ಗೆಲುವು ಸಾಧಿಸಿ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಪರಿಷತ್ ಸ್ಥಾನಕ್ಕೆ ದೇವೇಂದ್ರಪ್ಪ.ಕೆ, ನಾಗರಾಜ.ಕೆ ಹಾಗೂ ಮಂಜುನಾಥ ಎಂ.ಎಸ್ ಕಣದಲ್ಲಿದ್ದರು. ದೇವೇಂದ್ರಪ್ಪ – 24 ಮತಗಳನ್ನು, ನಾಗರಾಜ್ 7 ಮತ ಹಾಗೂ ಮಂಜುನಾಥ 2 ಮತಗಳನ್ನು ಪಡೆದರು. ಅತಿ ಹೆಚ್ಚು ಮತಗಳನ್ನು ಪಡೆದಂತ ದೇವೇಂದ್ರಪ್ಪ.ಕೆ ಅವರು ರಾಜ್ಯ ಪರಿಷತ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. https://youtu.be/M4oMeCBVP18?si=Gg1bhSWrJ5Ek467m ಈ ಚುನಾವಣೆಯ…