Author: kannadanewsnow09

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವು ಶುಕ್ರವಾರ ಜಾರ್ಖಂಡ್ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ತಡೆಹಿಡಿಯಲ್ಪಟ್ಟಿದೆ. ಈ ದೋಷದಿಂದಾಗಿ ಮೋದಿ ದೆಹಲಿಗೆ ಮರಳುವ ವಿಮಾನ ವಿಳಂಬವಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬುಡಕಟ್ಟು ಜನಾಂಗದವರಿಗಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲು ಪ್ರಧಾನಮಂತ್ರಿಯವರು ಬಿಹಾರದ ಜಮುಯಿಯಲ್ಲಿದ್ದರು. ಈ ಸಂದರ್ಭವು ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯ ಆಚರಣೆಯ ಪ್ರಾರಂಭವಾಗಿತ್ತು. https://kannadanewsnow.com/kannada/bengaluru-police-inspector-caught-accepting-rs-2-lakh-bribe/ https://kannadanewsnow.com/kannada/breaking-good-news-for-state-aided-primary-female-teachers-employees-govt-orders-to-grant-parental-leave/

Read More

ಬೆಂಗಳೂರು: ಪ್ರಕರಣವೊಂದನ್ನು ಕ್ಲೋಸ್ ಮಾಡೋದಕ್ಕೆ ವ್ಯಕ್ತಿಯೊಬ್ಬರಿಂದ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್ ಅರುಣ್ ಕುಮಾರ್.ಜಿ.ಬಿ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದ ಎಸ್ಐ. ಶ್ರೀದೇವಿ ಎಂಬುವರ ಕೇಸ್ ಕ್ಲೋಸ್ ಮಾಡೋದಕ್ಕೆ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಬೆಂಗಳೂರಿನ ಥಣೀಸಂದ್ರ ಬಳಿಯಲ್ಲಿ ಸ್ನೇಹಿತ ನಂದೀಶ್ ಎಂಬುವರ ಮೂಲಕ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಷಿ ಅವರ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. https://kannadanewsnow.com/kannada/good-news-parenting-leave-sanctioned-to-women-teachers-employees-of-the-state-state-government-order/ https://kannadanewsnow.com/kannada/breaking-good-news-for-state-aided-primary-female-teachers-employees-govt-orders-to-grant-parental-leave/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ಅಕ್ಷಯಸಾಗರ ಸೌಹಾರ್ದ ಸಹಕಾರಿ ಸಂಘದ ನೂತನ ಅಕ್ಷಯ ಬೆಳ್ಳಿ ಭವನವನ್ನು ನವೆಂಬರ್.17ರಂದು ಲೋಕಾರ್ಪಣೆಗೊಳಿಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡತ ಅಕ್ಷಯ ಸಾಗರ ಸೌಹಾರ್ದ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಬಿ.ಜಿ ದಿನೇಶ್ ಬರದವಳ್ಳಿ ಅವರು, ದಿನಾಂಕ 17-11-2024ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ವಿನೋಬ ನಗರದ ಸಣ್ಣಮನೆ ಬಡಾವಣೆಯಲ್ಲಿ ನಿರ್ಮಿಸಿರುವಂತ ಅಕ್ಷಯ ಬೆಳ್ಳಿ ಭವನವನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ ಎಂದರು. 25ನೇ ವರ್ಷಕ್ಕೆ ಸಂಘವು ಕಾಲಿಡುತ್ತಿರುವ ಹಿನ್ನಲೆಯಲ್ಲಿ ಗಿರರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಲೋಕಾರ್ಪಣೆ ಮಾಡಲಿದ್ದಾರೆ. ಜಡೆ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಸಮ್ಮುಖದಲ್ಲಿ ಅಕ್ಷಯ ಬೆಳ್ಳಿ ಭವನ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರು ಬಸವ ಪಂಡಿತಾರಾಧ್ಯ ಮಹಾಂತ ದೇಶಿ ಕೇಂದ್ರ ಸ್ವಾಮೀಜಿಗಳು ಕೂಡ ಸಾನಿಧ್ಯ ವಹಿಸಲಿದ್ದಾರೆ. ಅಕ್ಷಯ ಬೆಳ್ಳಿ ಭವನ್ನು ಮಾಜಿ ಸಿಎಂ…

Read More

ಬೆಂಗಳೂರು : ಹಾವೇರಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಸೂರ್ಯ ಅವರು ಸಲ್ಲಿಸಿದ ಅರ್ಜಿಯಲ್ಲಿ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದರು, ಆರೋಪಗಳಿಗೆ ಆಧಾರವಿಲ್ಲ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಸಮರ್ಥಿಸಿಕೊಂಡರು. ಆರಂಭಿಕ ವಾದಗಳನ್ನು ಪರಿಶೀಲಿಸಿದ ಗೌರವಾನ್ವಿತ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಈ ಪ್ರಕರಣದಲ್ಲಿ ಸೂರ್ಯ ವಿರುದ್ಧ ಮುಂದಿನ ಕ್ರಮವನ್ನು ಪರಿಣಾಮಕಾರಿಯಾಗಿ ತಡೆಹಿಡಿದರು. ಸೂರ್ಯ ಪರ ವಾದ ಮಂಡಿಸಿದ ಹಿರಿಯ ವಕೀಲೆ ಅರುಣಾ ಶ್ಯಾಮ್, ‘ಕಂದಾಯ ಇಲಾಖೆ ಏಕಪಕ್ಷೀಯವಾಗಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ, ಹಲವು ಜಿಲ್ಲೆಗಳಲ್ಲಿ ರೈತರ ಮಾಲೀಕತ್ವದ ಬದಲಿಗೆ ಕರ್ನಾಟಕ ವಕ್ಫ್ ಮಂಡಳಿಯ ಹೆಸರನ್ನು ಸೇರಿಸಿದೆ. ಈ ಬದಲಾವಣೆಗಳು ಪೀಡಿತ ರೈತರಿಂದ ವ್ಯಾಪಕ ಆತಂಕ ಮತ್ತು ಪ್ರತಿಭಟನೆಗಳನ್ನು ಪ್ರಚೋದಿಸಿದವು. ಕರ್ನಾಟಕ ಸರ್ಕಾರವು ಈ ನಮೂದುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಲು ಮತ್ತು ಸಂಬಂಧಿತ ನೋಟಿಸ್ಗಳನ್ನು ಹಿಂತೆಗೆದುಕೊಳ್ಳಲು ಪ್ರೇರೇಪಿಸಿತು ಎಂದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನಲ್ಲಿ ಸರ್ಕಾರಿ ನೌಕರರಿಗೆ ಸಿಗುವಂತ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹಾಗಾದ್ರೇ ಸಾರ್ವತ್ರಿಕ, ಪರಿಮಿತ ರಜೆಗಳು ಎಷ್ಟು ಎನ್ನುವ ಪಟ್ಟಿ ಮುಂದಿದೆ ಓದಿ. ಈ ಕುರಿತಂತೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತ ಸರ್ಕಾರದ ಒಳಾಡಳಿ ತ ವ್ಯವಹಾರಗಳ ಇಲಾಖೆಯ ದಿನಾಂಕ:15.06.1957ರ ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿರುವ ನೆಗೋಷಿಯಬಲ್ ಇನ್ನುಮೆಂಟ್ ಆಕ್ಟ್ 1881ರ (1881ರ ಅಧಿನಿಯಮ ಸಂಖ್ಯೆ:26) 25ನೇ ಸೆಕ್ಷನ್ ನಲ್ಲಿರುವ ವಿವರಣೆಯಂತೆ 2024ನೇ ವರ್ಷದಲ್ಲಿ ಈ ಕೆಳಗಿನ ದಿನಗಳನ್ನು ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಗಳೆಂದು ಘೋಷಿಸಲಾಗಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಹಾಗೂ ಈ ಕೆಳಕಂಡ ದಿನಗಳು ಎಂದಿದೆ. ಇಲ್ಲಿದೆ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ದಿನಾಂಕ 14-01-2025 ಮಂಗಳವಾರ – ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ದಿನಾಂಕ 26-02-2025 ಬುಧವಾರ – ಮಹಾ ಶಿವರಾತ್ರಿ ದಿನಾಂಕ 31-03-2025 ಸೋಮವಾರ – ಖುತುಬ್ ಎ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನಲ್ಲಿ 20 ಪರಿಮಿತ ರಜೆಗಳು, 19 ಸಾರ್ವತ್ರಿಕ ರಜಾ ದಿನಗಳನ್ನು ನೀಡಲಾಗಿದೆ. ಹೀಗಿದೆ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ ಪರಿಮಿತ ರಜಾ ದಿನಗಳ ಪಟ್ಟಿ 1. ಶ್ರೀ ರಾಮನವಮಿ (06.04.2025) ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿ (07.09.2025) ಭಾನುವಾರದಂದು ಹಾಗೂ ಋಗ್ ಉವಕರ್ಮ ಮತ್ತು ಯಜುರ್ ಉಪಕರ್ಮ (09.08.2025) ಎರಡನೇ ಶನಿವಾರದಂದು ಬರುವುದರಿಂದ ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ. 2. ಸೌರಮಾನ ಯುಗಾದಿ (14.04.2025) ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ತಿರುಓಣಂ (05.09.2025) ಶುಕ್ರವಾರ ಈದ್-ಮಿಲಾದ್ ನಿಮಿತ್ತ ಘೋಷಿಸಿರುವ ಸಾರ್ವತ್ರಿಕ ರಜಾ ದಿನಗಳಂದು ಬರುವುದರಿಂದ ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ. https://kannadanewsnow.com/kannada/state-cabinet-approves-setting-up-of-centre-of-excellence-in-artificial-intelligence/ https://kannadanewsnow.com/kannada/cm-siddaramaiah-gives-good-news-to-school-students-participating-in-sports/

Read More

ಸಾಲವು ನಮ್ಮ ಜೀವನದಲ್ಲಿ ಅನೇಕ ತೊಂದರೆಗಳನ್ನು ಉಂಟುಮಾಡುವ ಸಮಸ್ಯೆಯಾಗಿದೆ. ಈ ಸಾಲದ ಸಮಸ್ಯೆ ನಮ್ಮ ಜೀವನದಲ್ಲಿ ಬಂದರೆ ನಮಗೆ ಶಾಂತಿ, ಸಂತೋಷ, ಸಂತೋಷ ಇರುವುದಿಲ್ಲ. ಹೇಗಾದರೂ ಹಣ ಗಳಿಸಬೇಕು, ಹೇಗಾದರೂ ಬಡ್ಡಿ ಕಟ್ಟಬೇಕು, ಅಸಲು ಕೊಡಬೇಕು ಎಂದು ಓಡುತ್ತಲೇ ಇರುತ್ತೇವೆ. ನಮ್ಮ ಮನಸ್ಸು ಬೇರೆ ಯಾವುದರ ಬಗ್ಗೆಯೂ ಯೋಚಿಸದ ಪರಿಸ್ಥಿತಿಗೆ ನಾವು ಬಲವಂತವಾಗಿ ಬಂದಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ತಾಂತ್ರಿಕ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ಪ್ರಮುಖ ಉಪಕ್ರಮಗಳಿಗೆ ಅನುಮೋದನೆ ನೀಡಲಾಯಿತು. 28 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವ ಐಟಿ/ಬಿಟಿ ಇಲಾಖೆಯ ಪ್ರಸ್ತಾವನೆಗೆ ಕ್ಯಾಬಿನೆಟ್ ಹಸಿರು ನಿಶಾನೆ ತೋರಿತು. ಹೆಚ್ಚುವರಿಯಾಗಿ, ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಕಾರ್ಯಾಚರಣೆಗಳನ್ನು ಸ್ಥಾಪಿಸಲು ಕರ್ನಾಟಕವನ್ನು ಆದ್ಯತೆಯ ತಾಣವಾಗಿ ಇರಿಸುವ ಗುರಿಯನ್ನು ಹೊಂದಿರುವ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸಮಗ್ರ ನೀತಿಯನ್ನು ಸಚಿವ ಸಂಪುಟ ಅನುಮೋದಿಸಿತು. https://kannadanewsnow.com/kannada/cm-siddaramaiah-gives-good-news-to-school-students-participating-in-sports/ https://kannadanewsnow.com/kannada/are-they-horses-donkeys-or-donkeys-to-buy-mlas-mlc-ct-ravi/

Read More

ಬೆಂಗಳೂರು : ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು. ಕ್ರೀಡೆಗಳಲ್ಲಿ, ಒಲಂಪಿಕ್ಸ್ ನಲ್ಲಿ ಭಾಗವಹಿಸುವುದೇ ಪ್ರಶಸ್ತಿ. ಹೀಗಾಗಿ ಒಲಂಪಿಕ್ ನಲ್ಲಿ ಪ್ರಶಸ್ತಿ ಪಡೆಯುವುದೇ ಮುಖ್ಯ ಅಲ್ಲ. ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯ. ರಾಜ್ಯ, ರಾಷ್ಟ್ರ ಮತ್ತು‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪಂದ್ಯಾವಳಿಗಳು ಆಯೋಜನೆಗೊಳ್ಳುತ್ತವೆ. ಕ್ರೀಡಾಪಟು ಆಗುವವರಿಗೆ ಪರಿಶ್ರಮ ಮತ್ತು ಉತ್ತಮ ತರಬೇತಿ ಅಗತ್ಯ. ಸರ್ಕಾರ ಮತ್ತು ಕ್ರೀಡಾ ಸಂಸ್ಥೆಗಳು ಅವಕಾಶಗಳನ್ನು ಕಲ್ಪಿಸಬೇಕು. ಶಿಕ್ಷಣ ಮತ್ತು ಕ್ರೀಡೆ ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಅತ್ಯಂತ ಅಗತ್ಯ. ಶಿಸ್ತು ಇಲ್ಲದ ಕ್ರೀಡಾಪಟುವನ್ನು ಕಾಣಲು ಸಾಧ್ಯವಿಲ್ಲ. ಶಿಸ್ತು , ಪರಿಶ್ರಮ ಇಲ್ಲದವರು ಉತ್ತಮ ಕ್ರೀಡಾಪಟು ಆಗಲು ಸಾಧ್ಯವಿಲ್ಲ. ಕ್ರೀಡೆ ಜೊತೆಗೆ ಓದು, ಶಿಕ್ಷಣ ಕೂಡ ಅಷ್ಟೇ ಮುಖ್ಯ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಇಂದು ನಡೆದ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ, ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಶೌಚಾಲಯಗಳ ನಿರ್ಮಾಣವನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸಚಿವರು ಸೂಚನೆ ನೀಡಿದರು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿರುವುದರಿಂದ ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್‌, ಗ್ರಾಮೀಣ ನೀರು ಸರವರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರಪ್ರಸಾದ್‌ ಹಾಗೂ…

Read More