Author: kannadanewsnow09

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಬಾರಿ 30 ಮಂದಿ ಸಾಧಕರಿಗೆ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳಿಗೆ ಹಾಗೂ ದತ್ತಿ ಪ್ರಶಸ್ತಿಗಳಿಗೆ ಈ ಕೆಳಕಂಡ ಪತ್ರಕರ್ತರನ್ನು ದಿನಾಂಕ 08-01-2026ರ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಪುರಸ್ಕೃತರ ಪಟ್ಟಿ ಡಿ.ಕುಮಾರಸ್ವಾಮಿ ಬನಶಂಕರ ಆರಾಧ್ಯ ಹೇಮಾ ವೆಂಕಟ್ ಮಂಜುನಾಥ್ ವೈ.ಎಲ್ ಅನಂತ ನಾಡಿಗ್ ಗುರುರಾಜ್ ವಾಮನರಾವ್ ಜಮಖಂಡಿ ಎಂ.ಎಂ ಪಾಟೀಲ್ ಎಲ್ ವಿವೇಕಾನಂದ ಆರ್.ಪಿ ಭರತ್ ರಾಜ್ ಸಿಂಗ್ ಪ್ರೊ.ಪೂರ್ಣಾನಂದ ಮೊಹಮ್ಮದ್ ಅಸದ್ ತುಂಗರೇಣುಕಾ ಮೊಹಿಯುದ್ದೀನ್ ಪಾಷಾ ರುದ್ರಪ್ಪ ಅಸಂಗಿ ಸತೀಶ್ ಆಚಾರ್ಯ ಸೋಮಶೇಖರ ಪಡುಕೆರೆ ಗುಲ್ನಾರ್ ಮಿರ್ಝಾ ಗಣೇಶ ಹೆಗಡೆ ಇಟಗಿ ಆರತಿ ಹೆಚ್.ಎನ್ ಕೆ.ಲಕ್ಷ್ಮಣ ಉಮಾ…

Read More

ಹಾಸನ: ಯಗಚಿ ನಾಲೆಗಾಗಿ ಭೂಮಿ ನೀಡಿದ್ದಂತ ರೈತರಿಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದ್ದರೂ ಡಿಸಿ ಮಾತ್ರ ಡೋಂಟ್ ಕೇರ್ ಎನ್ನುವಂತಿದ್ದರು. ಇಂತಹ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ಕಾರು ಜಪ್ತಿ ಮಾಡುವಂತೆ ಆದೇಶಿಸಿ ಶಾಕ್ ನೀಡಿದೆ. ಯಗಚಿ ನಾಲೆಗಾಗಿ ಭೂಮಿಯನ್ನು ನಾಗಮ್ಮ, ಲಕ್ಷ್ಮೇಗೌಡ, ಜಗದೀಶ್ ಎಂಬುವರು ಕಳೆದುಕೊಂಡಿದ್ದರು. ಸರಿಯಾಗಿ ಪರಿಹಾರ ನೀಡಿಲ್ಲ ಎಂಬುದಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಪರಿಹಾರಕ್ಕೂ ಆದೇಶಿಸಲಾಗಿತ್ತು. ಭೂಮಿ ಕಳೆದುಕೊಂಡಿದ್ದಂತವರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ, ಪರಿಹಾರದ ಹಣವನ್ನು ನೀಡಲಾಗಿರಲಿಲ್ಲ. ಇಂದು ಹಾಸನ ಹಿರಿಯ ಸಿವಿಲ್ ಜಡ್ಜ್ ಈ ಪ್ರಕರಣದ ವಿಚಾರಣೆ ನಡೆಸಿ, ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡೋದಕ್ಕೆ ಆದೇಶಿಸಿದ್ದಾರೆ. ಅಂದಹಾಗೇ ಗುಂಟೆಗೆ 40,000ದಂತೆ 10.5 ಗುಂಟೆಗೆ ಪರಿಹಾರ ನಿಗದಿ ಪಡಿಸಲಾಗಿತ್ತು. ಈ ಪರಿಹಾರ ಸರಿಯಾಗಿಲ್ಲ. ಸೂಕ್ತ ಪರಿಹಾರ ನಿಗದಿ ಪಡಿಸಿ, 2 ವರ್ಷದ ಹಿಂದೆ ಕೋರ್ಟ್ ಆದೇಶಿಸಿತ್ತು. ಆದರೇ ಪರಿಹಾರ ನೀಡದಿದ್ದಕ್ಕಾಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿಗೆ ಕೋರ್ಟ್ ಆದೇಶಿಸಿದೆ. ಹೀಗಾಗಿ ಹಾಸನ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್(21) ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ಇಂದು ಹಾಸ್ಟೆಲ್ ನಲ್ಲಿ ಸ್ನಾನಕ್ಕೆಂದು ತೆರಳಿದಂತ ಸಂದರ್ಭದಲ್ಲಿ ದಿಢೀರ್ ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರು. ಆದರೇ ದುರಾದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ಗಣೇಶ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. https://kannadanewsnow.com/kannada/union-minister-prahlad-joshi-should-come-for-a-public-discussion-on-the-mnrega-scheme-dcm-d-k-shivakumar/ https://kannadanewsnow.com/kannada/special-train-service-between-mysore-belgaum-on-the-occasion-of-sankranti-festival/

Read More

ಬೆಂಗಳೂರು : “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 1,250 ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡೋದಕ್ಕೆ 6,328 ಲಕ್ಷ ಹಣವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಶುಭಮಂಗಳ ಆರ್.ವಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. “ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ರೂ.725.00 ಕೋಟಿ ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ-95 ರಂತೆ ಲೆಕ್ಕಶೀರ್ಷಿಕೆವಾರು ಕಾರ್ಯಕ್ರಮವಾರು ಅನುದಾನ ನಿಗದಿಪಡಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ. ಪುಸ್ತಾವನೆಯಲ್ಲಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಇವರು ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ…

Read More

ಮೈಸೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್ ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ–ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್…

Read More

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಇನ್ನೂ ಕೂಡ ವಿವರವಾಗಿ ತನಿಖೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಬೇಕಾದರೆ ತನಿಖೆಯಾಗಬೇಕು ಎಂದರು. ಡಿ.ಕೆ.ಶಿವಕುಮಾರ್ ಜವಾಬ್ದಾರಿಯುತ ಸಚಿವರು ಮತ್ತು ಉಪ ಮುಖ್ಯಮಂತ್ರಿಗಳು. ಕುಮಾರಸ್ವಾಮಿ ಹೇಳುವ ಪ್ರಕಾರ ಹೆಚ್ಚಿನ ಅಧಿಕಾರ ಇಲ್ಲ ಎಂಬುದು ಸಂವಿಧಾನಾತ್ಮಕವಾಗಿ ಸರಿ ಇರಬಹುದು.…

Read More

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಇನ್ನೂ ಕೂಡ ವಿವರವಾಗಿ ತನಿಖೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಬೇಕಾದರೆ ತನಿಖೆಯಾಗಬೇಕು ಎಂದರು. ಡಿ.ಕೆ.ಶಿವಕುಮಾರ್ ಜವಾಬ್ದಾರಿಯುತ ಸಚಿವರು ಮತ್ತು ಉಪ ಮುಖ್ಯಮಂತ್ರಿಗಳು. ಕುಮಾರಸ್ವಾಮಿ ಹೇಳುವ ಪ್ರಕಾರ ಹೆಚ್ಚಿನ ಅಧಿಕಾರ ಇಲ್ಲ ಎಂಬುದು ಸಂವಿಧಾನಾತ್ಮಕವಾಗಿ ಸರಿ ಇರಬಹುದು.…

Read More

ತುಮಕೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗಣೆ ಟ್ರಸ್ಟ್ ನಿಂದ ಜನವರಿ.10ರ ನಾಳೆ, ಜನವರಿ.11ರ ನಾಡಿದ್ದು ಎರಡು ದಿನಗಳ ಕಾಲ ಕಾಡುಗೊಲ್ಲ ಬುಡಕಟ್ಟು, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ಅಧ್ಯಯನ ಶಿಬಿರ ನಡೆಸಲಾಗುತ್ತಿದೆ. ತುಮಕೂರಿನ ಶಿರಾದಲ್ಲಿರುವಂತ ಸಮತಾ ಮಹಾವಿದ್ಯಾಲಯದ ಆವರಣದಲ್ಲಿ ಈ ಅಧ್ಯಯನ ಶಿಬಿರ ನಡೆಯಲಿದೆ ಎಂಬುದಾಗಿ ಗಣೆ ಟ್ರಸ್ಟ್ ನ ಅಧ್ಯಕ್ಷೆ ಡಾ.ಪ್ರೇಮ.ಜಿ.ಕೆ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾಡುಗೊಲ್ಲ ಸಮುದಾಯಕ್ಕೆ ತಮ್ಮ ಬುಡಕಟ್ಟಿನ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಾಳೆ, ನಾಡಿದ್ದು ಎರಡು ದಿನಗಳ ಕಾಲ ಅಧ್ಯಯನ ಶಿಬಿರ ಏರ್ಪಡಿಸಲಾಗಿದೆ ಎಂದಿದ್ದಾರೆ. ಜನವರಿ.10ರ ನಾಳೆ ಬೆಳಗ್ಗೆ 10 ಗಂಟೆಗೆ ಶಿಬಿರವನ್ನು ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಲೋಕಸಭಾ ಸದಸ್ಯರಾದಂತ ಪಿ.ಕೋದಂಡರಾಮಯ್ಯ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ಹಿರಿಯ ವಕೀಲರಾದಂತ ಪ್ರೊ.ರವಿವರ್ಮ ಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗದ ಅಧ್ಯಕ್ಷರಾದಂತ ಮಹೇಶ್ ಎಂ ಆರೋಗೆರೆ, ಕನ್ನಡ ಸಾಹಿತ್ಯ…

Read More

ನಿದ್ರೆ ಎಂದರೆ ಕೇವಲ ವಿಶ್ರಾಂತಿಯಲ್ಲ. ಇದು ನಿಮ್ಮ ದೇಹವು ದುರಸ್ತಿ ಸ್ಥಿತಿಗೆ ಹೋಗುವ ಸಮಯ. ಸ್ನಾಯುಗಳನ್ನು ಗುಣಪಡಿಸುವುದು ಮತ್ತು ಹಾರ್ಮೋನುಗಳನ್ನು ಸಮತೋಲನಗೊಳಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮತ್ತು ನೆನಪುಗಳನ್ನು ಸಂಸ್ಕರಿಸುವವರೆಗೆ, ಆರೋಗ್ಯದ ಪ್ರತಿಯೊಂದು ಅಂಶಕ್ಕೂ ಗುಣಮಟ್ಟದ ನಿದ್ರೆ ಅತ್ಯಗತ್ಯ. ಆದಾಗ್ಯೂ, ತಡರಾತ್ರಿಯ ಸ್ಕ್ರೀನ್ ಸಮಯ, ಕೆಲಸದ ಒತ್ತಡ ಮತ್ತು ಜೀವನಶೈಲಿಯ ಅಭ್ಯಾಸಗಳಿಂದಾಗಿ, ಅನೇಕ ಜನರು ರಾತ್ರಿಗೆ ಶಿಫಾರಸು ಮಾಡಲಾದ 7–9 ಗಂಟೆಗಳ ನಿದ್ರೆಯನ್ನು ಪಡೆಯುತ್ತಿಲ್ಲ. ಈ ನಿರಂತರ ನಿದ್ರಾಹೀನತೆಯು ನಿಧಾನವಾಗಿ ಹಲವಾರು ಗಂಭೀರ ಆರೋಗ್ಯ ಸ್ಥಿತಿಗಳಿಗೆ ಕಾರಣವಾಗಬಹುದು. ದೆಹಲಿಯ ಜಿಟಿಬಿ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಡಾ. ಅಜಿತ್ ಕುಮಾರ್, ದೀರ್ಘಕಾಲದ ನಿದ್ರಾಹೀನತೆಗೆ ಸಂಬಂಧಿಸಿದ ಪ್ರಮುಖ ಅಪಾಯಗಳನ್ನು ವಿವರಿಸುತ್ತಾರೆ: 1. ಅರಿವಿನ ಮತ್ತು ನರವೈಜ್ಞಾನಿಕ ಸಮಸ್ಯೆಗಳು ನಿದ್ರೆಯ ಕೊರತೆಯು ಸಾಮಾನ್ಯವಾಗಿ ಮೆದುಳಿನಲ್ಲಿ ಕಂಡುಬರುತ್ತದೆ. ನಿದ್ರೆಯ ಕೊರತೆಯು ಏಕಾಗ್ರತೆ, ಮನಸ್ಥಿತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳ ಮೇಲೆ ಪರಿಣಾಮ ಬೀರುತ್ತದೆ. ಕಾಲಾನಂತರದಲ್ಲಿ, ಇದು ಕಾರಣವಾಗಬಹುದು: ಮೆದುಳಿನ ಮಂಜು ನೆನಪಿನ ನಷ್ಟ ಚಿಂತನಾ ಸಾಮರ್ಥ್ಯ ಕಡಿಮೆಯಾಗಿದೆ…

Read More