Author: kannadanewsnow09

ಮದ್ದೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಡೆಯುತ್ತಿರುವ ಮಹಾ ಕುಂಭ ಮೇಳ ಮುಗಿಸಿ ಮದ್ದೂರಿಗೆ ವಾಪಾಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ಅಯೋಧ್ಯೆ ಬಳಿ ನಡೆದಿದೆ. ಪಟ್ಟಣದ ರಾಮಾಣಿ‌‌ ಶಾಮೀಲ್‌ ಮಾಲೀಕರಾದ ಜಯಂತಿ ಲಾಲ್‌ ಪಾಟೇಲ್ ಅವರ ಪತ್ನಿ ಮಂಜುಳಾ ಬೇನ್ (59) ಮೃತ ಮಹಿಳೆ. ಬಸ್ ನಲ್ಲಿ ಹೋಗಿ ಮಹಾ ಕುಂಭ ಮೇಳ ಮುಗಿಸಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ, ವಾಪಾಸ್ ಬರುವ ಸಂದರ್ಭದಲ್ಲಿ ಅಯೋಧ್ಯೆ ಬಳಿ ಬಸ್ಸು ನಿಲ್ಲಿಸಿದೆ. ಈ ವೇಳೆ ಮಂಜುಳಾ ಬೇನ್ ಅವರು ಶೌಚಗೃಹಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅಯೋಧ್ಯೆ ಬಳಿ ಅಪರಿಚಿತ ವಾಹನ ಡಿಕ್ಕಿಹೊಡೆದು ಈ ಘಟನೆ ನಡೆದಿದೆ. ಪಟ್ಟಣದ ಕೊಲ್ಲಿ ವೃತ್ತದ ಬಳಿಯಿರುವ ಅವರ ನಿವಾಸದಲ್ಲಿ ಕೆಲಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕಿಟ್ಟು ನಂತರ ಮೃತರ ಅಂತ್ಯಕ್ರಿಯೆ ಪಟ್ಟಣದ ಮರ್ವಾಡಿಗಳ ರುದ್ರಭೂಮಿ‌ ಗುರುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. https://kannadanewsnow.com/kannada/bengaluru-based-ai-announces-rs-40-lakh-salary-package-no-resume-required/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ಸ್ಮಾಲೆಸ್ಟ್ ಎಐ ಸಂಸ್ಥಾಪಕ ಸುದರ್ಶನ್ ಕಾಮತ್ ಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಹುದ್ದೆಗೆ ಅಸಾಂಪ್ರದಾಯಿಕ ನೇಮಕಾತಿ ವಿಧಾನವನ್ನು ಘೋಷಿಸುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಆಸಕ್ತಿಯನ್ನು ಹುಟ್ಟುಹಾಕಿದ್ದಾರೆ. ವಾರ್ಷಿಕ 40 ಲಕ್ಷ ರೂ. ಸಂಬಳ ಮತ್ತು ಐದು ದಿನಗಳ ಕಚೇರಿ ಕೆಲಸದ ವಾರವನ್ನು ನೀಡುವ ಈ ಹುದ್ದೆಗೆ ಅಭ್ಯರ್ಥಿಗಳ ಶೈಕ್ಷಣಿಕ ಹಿನ್ನೆಲೆ ಮತ್ತು ರೆಸ್ಯೂಮ್ ಅಗತ್ಯವಿಲ್ಲ ಎಂದು ಶ್ರೀ ಕಾಮತ್ ಹೇಳಿದ್ದಾರೆ. ಈ ಹುದ್ದೆಯು ಶೂನ್ಯದಿಂದ ಎರಡು ವರ್ಷಗಳ ಅನುಭವ ಹೊಂದಿರುವ ವ್ಯಕ್ತಿಗಳಿಗೆ ಮುಕ್ತವಾಗಿದೆ ಮತ್ತು ಇಂದಿರಾನಗರದಲ್ಲಿ ಕಾರ್ಯನಿರ್ವಹಿಸಲಿದೆ. ನಾವು ಸಣ್ಣ ಎಐನಲ್ಲಿ ಕ್ರ್ಯಾಕ್ಡ್ ಫುಲ್-ಸ್ಟ್ಯಾಕ್ ಎಂಜಿನಿಯರ್ ಅನ್ನು ನೇಮಿಸಿಕೊಳ್ಳಲು ನೋಡುತ್ತಿದ್ದೇವೆ … ನಿಮ್ಮನ್ನು ಪರಿಚಯಿಸುವ ಸಣ್ಣ 100 ಪದಗಳ ಪಠ್ಯವನ್ನು ಕಳುಹಿಸಿ + ನಿಮ್ಮ ಅತ್ಯುತ್ತಮ ಕೆಲಸದ ಲಿಂಕ್ಗಳನ್ನು info@smallest.ai” ಎಂದು ಅವರು ಎಕ್ಸ್ನಲ್ಲಿ ಬರೆದಿದ್ದಾರೆ. https://twitter.com/kamath_sutra/status/1893882856491143463 ಕ್ರ್ಯಾಕ್ಡ್ ಫುಲ್-ಸ್ಟ್ಯಾಕ್ ಎಂಜಿನಿಯರ್” ಎಂಬ ಪದವು ಟೆಕ್ ಉದ್ಯಮದಲ್ಲಿ ಔಪಚಾರಿಕವಾಗಿ ವ್ಯಾಖ್ಯಾನಿಸಲಾದ ಶೀರ್ಷಿಕೆಯಲ್ಲ, ಆದರೆ ಇದನ್ನು ಹೆಚ್ಚಾಗಿ ಆಡುಮಾತಿನಲ್ಲಿ…

Read More

ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಬಿಎಂಆರ್ ಡಿಎ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಉಪಸ್ಥಿತರಿದ್ದರು. “ರಾಜಸ್ಥಾನದ ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ 34 ಜಲಸಂಪನ್ಮೂಲ ಸಚಿವರು, 4-5 ಮುಖ್ಯಮಂತ್ರಿಗಳು, ಕೆಲವು ರಾಜ್ಯಗಳ ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು. ನಮ್ಮ ರಾಜ್ಯದಿಂದ ನಾನು ಹಾಗೂ ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸಿದ್ದೆವು. ನಮ್ಮ ರಾಜ್ಯದ ನೀರಾವರಿ ಯೋಜನೆಗಳ ವಿಚಾರವನ್ನು ನಾನು ಪ್ರಸ್ತಾಪ ಮಾಡಿದ್ದೆ. ಈ ವಿಚಾರವಾಗಿ ಜಲಶಕ್ತಿ ಸಚಿವರ ಬಳಿಯೂ ವೈಯಕ್ತಿಕವಾಗಿ ಈ ವಿಚಾರ ಪ್ರಸ್ತಾಪಿಸಿದ್ದೆವು. ನಂತರ…

Read More

ಉತ್ತರಪ್ರದೇಶ: ಇಂದು ಮಹಾ ಕುಂಭದ ಕೊನೆಯ ದಿನ. ಕಳೆದ 44 ದಿನಗಳಲ್ಲಿ 650 ಮಿಲಿಯನ್ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ. ಈ ಅಂಕಿ ಅಂಶವು ಯುನೈಟೆಡ್ ಸ್ಟೇಟ್ಸ್ನ ಜನಸಂಖ್ಯೆಗಿಂತ (ಸುಮಾರು 340 ಮಿಲಿಯನ್) ಎರಡು ಪಟ್ಟು ಹೆಚ್ಚಾಗಿದೆ. 45 ದಿನಗಳ ಕಾಲ ನಡೆದ ಮಹಾ ಕುಂಭವು ಮಹಾ ಶಿವರಾತ್ರಿಯ ಸ್ನಾನದ ಉತ್ಸವದೊಂದಿಗೆ ಕೊನೆಗೊಂಡಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರೆಬಿದ್ದಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ 1.4 ಮಿಲಿಯನ್ ಜನರು ಸ್ನಾನ ಮಾಡಿದ್ದಾರೆ. ಮಹಾ ಶಿವರಾತ್ರಿಯಂದು 30 ಮಿಲಿಯನ್ ಭಕ್ತರು ಆಗಮಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಇದರರ್ಥ ಒಟ್ಟು ಸಂಖ್ಯೆ 660 ರಿಂದ 670 ಮಿಲಿಯನ್ ನಡುವೆ ತಲುಪುತ್ತದೆ. ಸಂಗಮದಲ್ಲಿ ಸ್ನಾನ ಮಾಡುವ ಜನರ ಸಂಖ್ಯೆ 193 ದೇಶಗಳ ಜನಸಂಖ್ಯೆಗಿಂತ ಹೆಚ್ಚಾಗಿದೆ. ಭಾರತ ಮತ್ತು ಚೀನಾದ ಜನಸಂಖ್ಯೆ ಮಾತ್ರ ಕುಂಭಮೇಳದಲ್ಲಿ ಯಾತ್ರಾರ್ಥಿಗಳ ಸಂಖ್ಯೆಗಿಂತ ಹೆಚ್ಚಾಗಿದೆ. ಇಲ್ಲಿನ ಜನರ ಸಂಖ್ಯೆ ವಿಶ್ವದ ಅರ್ಧದಷ್ಟು ಹಿಂದೂ ಜನಸಂಖ್ಯೆಗೆ ಸಮನಾಗಿದೆ ಎಂದು…

Read More

ಬೆಂಗಳೂರು: ಪ್ರತಿಭಟನಾ ನಿರತ ಎನ್ ಹೆಚ್ ಎಂ ಶುಶ್ರೂಷಾಧಿಕಾರಿಗಳ ಜೊತೆಗೆ ನಾವಿದ್ದೇವೆ. ನೀವು ಇದ್ದರೇ ವೈದ್ಯಕೀಯ ಸೇವೆ ಸುಗಮವಾಗಿ ನಡೆಯಲಿದೆ ಅಂತ ಸಂಸದ ಡಾ.ಸಿಎನ್ ಮಂಜುನಾಥ್ ತಿಳಿಸಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ನಡೆಸುತ್ತಿರುವಂತ ಪ್ರತಿಭಟನಾ ಸ್ಥಳಕ್ಕೆ ಭೇಟಿಯಾಗಿ, ನೌಕರರ ಕಷ್ಟವನ್ನು ಆಲಿಸಿದರು. ಆ ಬಳಿಕ ಸಂಸದ ಡಾ. ಮಂಜುನಾಥ್ ಅವರು ಮಾತನಾಡಿ, ನಾವು ನಿಮ್ಮ ಜೊತೆ ಇದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿಸುವುದು, ಖಾಯಂ ಮಾಡುವ ಬಗ್ಗೆ ಒತ್ತಾಯಿಸುತ್ತೇವೆ. ನರ್ಸ್‍ಗಳು, ತಂತ್ರಜ್ಞರು ಸೇರಿ ವೈದ್ಯೇತರ ಸಿಬ್ಬಂದಿ ಅತ್ಯಂತ ಅನಿವಾರ್ಯ ಎಂದು ತಿಳಿಸಿದರು. https://kannadanewsnow.com/kannada/demand-for-contract-nurses-proposed-in-house-leader-of-opposition-in-council-chalavadi-narayanasamy/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ಅದು ತಲುಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಷಾಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜೊತೆಗೂಡುವೆ ಎಂದರು. ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ನಿಮ್ಮ ಸದಸ್ಯನ ರೂಪದಲ್ಲಿ ಅಲ್ಲಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಸಂಸದ ಡಾ. ಮಂಜುನಾಥ್ ಅವರಿಂದ ನಿಮ್ಮ ಬೇಡಿಕೆಗಳ ಕುರಿತಂತೆ ವಿವರ ಪಡೆದುಕೊಳ್ಳುವೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ. ಆರೋಗ್ಯ ಸಚಿವರ ಆರೋಗ್ಯ ಸರಿಯಾದರೆ ಅವರ ಜೊತೆಗೂ ಮಾತನಾಡುವೆ ಎಂದು ತಿಳಿಸಿದರು. ಅವರು ವೈದ್ಯರೇನೂ ಅಲ್ಲ; ಆರೋಗ್ಯ ಸಚಿವರಾಗುವ ಯೋಗ್ಯತೆ ಅವರಲ್ಲಿಲ್ಲ ಎಂದು ವ್ಯಂಗ್ಯವಾಡಿದರು. ದನಗಳಿಗೆ ಕೊಡುವ ಔಷಧಿಯನ್ನೂ ಜನರಿಗೆ…

Read More

ಪುಣೆ: ಇಲ್ಲಿನ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ರಾಜ್ಯ ಸಾರಿಗೆ ಬಸ್ ಒಳಗೆ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಸತಾರಾ ಜಿಲ್ಲೆಯ ಫಾಲ್ಟಾನ್ ಗೆ ಪುಣೆ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 5.45 ರ ಸುಮಾರಿಗೆ ಮಹಿಳೆ ಬಸ್ ಗಾಗಿ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ಅವಳನ್ನು ಸಮೀಪಿಸಿ ಸತಾರಾಗೆ ಹೋಗುವ ಬಸ್ ಮತ್ತೊಂದು ಪ್ಲಾಟ್ ಫಾರ್ಮ್ ಗೆ ಬಂದಿದೆ ಎಂದು ಸೂಚಿಸಿದನು. ಘಟನೆ ನಡೆದ ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣವು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಅತಿದೊಡ್ಡ ಬಸ್ ಜಂಕ್ಷನ್ಗಳಲ್ಲಿ ಒಂದಾಗಿದೆ ಮತ್ತು ಇದು ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿದೆ. ಶಂಕಿತನನ್ನು 36 ವರ್ಷದ ದತ್ತಾತ್ರೇಯ ರಾಮದಾಸ್ ಗಾಡೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕಳ್ಳತನ ಮತ್ತು ಸರಗಳ್ಳತನದ ಅನೇಕ ಪ್ರಕರಣಗಳು ದಾಖಲಾಗಿವೆ ಎಂದು ಸ್ವರ್ಗೇಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದ ಪೊಲೀಸರು ಆರೋಪಿ ಗಾಡೆ ಅವರನ್ನು…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಹೌದು ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್.1ರಿಂದ 20ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಫ್ರೀ ಆಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರ ತೋರಿಸಿ, ಸಾರಿಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. https://twitter.com/KarnatakaVarthe/status/1894690677159838053 https://kannadanewsnow.com/kannada/overwhelming-response-to-shakti-scheme-154955-trips-increased-to-176787/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಈವರೆಗೆ 400 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣವನ್ನು ಸಾರಿಗೆ ಬಸ್ಸುಗಳಲ್ಲಿ ಬೆಳೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ಬಳಿಕ 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳವಾಗಿದೆ. ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ. ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. https://twitter.com/KarnatakaVarthe/status/1894714829841334728 https://kannadanewsnow.com/kannada/bengaluru-man-attempts-suicide-by-consuming-phenyl-at-police-station/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ನಗರದಲ್ಲಿ ಪೊಲೀಸ್ ಠಾಣೆಯಲ್ಲೇ ಆರೋಪಿಯೊಬ್ಬ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತ ಅಚ್ಚರಿಯ ಘಟನೆ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿಯನ್ನು ರವಿ ಆಲಿಯಾಸ್ ರಾಬಿನ್ ಎಂಬುದಾಗಿ ತಿಳಿದು ಬಂದಿದೆ. ರವಿ ಆಲಿಯಾಸ್ ರಾಬಿನ್ ನನ್ನು ಸರಗಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದರು. ಪೊಲೀಸ್ ವಶದಲ್ಲಿದ್ದಂತ ಆತ ನಿನ್ನೆ ರಾತ್ರಿ ಪೊಲೀಸರು ಹೊಡೆಯುತ್ತಾರೆ ಎಂಬ ಭಯಕ್ಕೆ ಠಾಣೆಯ ಬಾತ್ ರೂಮಿನಲ್ಲೇ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿ ರವಿ ಆಲಿಯಾಸ್ ರಾಬಿನ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/good-news-for-job-seekers-state-govt-approves-recruitment-of-9000-posts-in-transport-corporations/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More