Author: kannadanewsnow09

ಚಿಕ್ಕಬಳ್ಳಾಪುರ: ಮದ್ಯ ಸೇವಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಪುತ್ರನೊಬ್ಬ ಹೊಡೆದು ಕೊಂದಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನೆಹರು ನಗರದಲ್ಲಿ ಈ ದುಷ್ಕೃತ್ಯವನ್ನು ಎಸಗಲಾಗಿದೆ. ತಂದೆ 55 ವರ್ಷದ ಗಂಗಣ್ಣನನ್ನು ರಿಪೀಸ್ ಪಟ್ಟಿಯಿಂದ ಹೊಡೆದು ಪುತ್ರ ಸಂಜಯ್ ಕುಮಾರ್ ಕೊಂದಿದ್ದಾನೆ. ಕುಡಿಯೋದಕ್ಕೆ ದುಡ್ಡು ಕೊಡಲಿಲ್ಲ ಎನ್ನುವ ಕಾರಣಕ್ಕೆ ತಂದೆ ಗಂಗಣ್ಣ ಹಾಗೂ ಪುತ್ರ ಸಂಜಯ್ ಕುಮಾರ್ ನಡುವೆ ಗಲಾಟೆಯಾಗಿದೆ. ಈ ವೇಳೆಯಲ್ಲಿ ರಿಪೀಸ್ ನಿಂದ ಹೊಡೆದು ತಂದೆಯನ್ನು ಕೊಂದಿದ್ದಾನೆ. ಆ ಬಳಿಕ ತಂದೆಯ ಶವಸಂಸ್ಕಾರಕ್ಕೆ ಸಂಜಯ್ ಕುಮಾರ್ ಮುಂದಾಗಿದ್ದಾನೆ. ವಿಚಾರ ತಿಳಿದಂತ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಗೌರಿಬಿದನೂರು ಠಾಣೆಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆಯಲ್ಲಿ ತಾನೇ ಅಪ್ಪನನ್ನು ಕೊಂದಿರೋದಾಗಿ ಪುತ್ರ ತಪ್ಪೊಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ಸಂಜಯ್ ಕುಮಾರ್(25) ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೌರಿಬಿದನೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/public-beware-child-trafficking-is-a-crime-if-caught-a-5-year-prison-sentence-is-fixed/ https://kannadanewsnow.com/kannada/renukaswamy-murder-case-actor-darshan-and-gang-deny-charges-against-them/

Read More

ಮೈಸೂರು: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು… *ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. *ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ. *ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. *ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ…

Read More

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತ ಪವಿತ್ರಾ ಗೌಡ ಮತ್ತು ಇತರ 15 ಆರೋಪಿಗಳು ತಪ್ಪೊಪ್ಪಿಕೊಂಡ ನಂತರ ಬೆಂಗಳೂರಿನ ನ್ಯಾಯಾಲಯವು ಸೋಮವಾರ ಅವರ ವಿರುದ್ಧ ಆರೋಪಗಳನ್ನು ಹೊರಿಸಿದೆ. ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೋಮವಾರ ಮಧ್ಯಾಹ್ನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ (CCH-57) ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳು ತಾವು ತಪ್ಪೊಪ್ಪಿಕೊಂಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಮತ್ತು ನ್ಯಾಯಾಧೀಶರು ತಮ್ಮ ಮನವಿಯನ್ನು ದಾಖಲಿಸಿಕೊಂಡು ತಮ್ಮ ವಿರುದ್ಧದ ಆರೋಪಗಳನ್ನು ಓದಿದರು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ನವೆಂಬರ್ 10 ರಂದು ನಿಗದಿಪಡಿಸಿತು. ವಿಚಾರಣೆಯ ನಂತರ, ದರ್ಶನ್ ಮತ್ತು ಇತರ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗುವುದು. ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಸ್ವಾಮಿ, ಜೂನ್ 9, 2024 ರಂದು ಪಶ್ಚಿಮ ಬೆಂಗಳೂರಿನ ಸುಮನಹಳ್ಳಿಯಲ್ಲಿರುವ ಮಳೆನೀರಿನ ಚರಂಡಿ ಬಳಿ ಕೊಲೆಯಾಗಿ ಪತ್ತೆಯಾಗಿದ್ದರು. ಅವರ ದೇಹವು ತೀವ್ರವಾಗಿ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿಸಲ್ಪಟ್ಟು ಜೈಲುಪಾಲಾಗಿರುವಂತ ಎ.1 ಆರೋಪಿ ಪವಿತ್ರಾಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 17 ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ನ್ಯಾಯಾಲಯದ ಮುಂದೆ ನಿರಾಕರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ನಾರಾಯಣಸ್ವಾಮಿ ಮಾಹಿತಿ ನೀಡಿದ್ದು, ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ದೋಷಾರೋಪ ಮಾಡಿದ್ದರು. ಆದರೇ ಯಾರೊಬ್ಬರೂ ದೋಷಾರೋಪಗಳನ್ನು ಒಪ್ಪಿಕೊಂಡಿಲ್ಲ. ಪೊಲೀಸರು ಗ್ರಂಥಗಳಂತೆ ಚಾರ್ಜ್ ಶೀಟ್ ಹಾಕಿದ್ದಾರೆ. ಹೇಗೆ ಒಪ್ಪಿಕೊಳ್ಳುವುದಕ್ಕೆ ಆಗುತ್ತೆ ಎಂಬುದಾಗಿ ಪ್ರಶ್ನಿಸಿದರು. ನವೆಂಬರ್.10ರಂದು ಖುದ್ದು ಹಾಜರಾಗುವುದಕ್ಕೆ ಹೇಳ್ತಾರೋ ಅಥವಾ ವೀಡಿಯೋ ಕಾನ್ಫೆರೆನ್ಸ್ ಗೆ ಹೇಳುತ್ತಾರೋ ಕಾದು ನೋಡಬೇಕು ಎಂಬುದಾಗಿ ಕೊಲೆ ಆರೋಪಿ ಪರ ವಕೀಲ ನಾರಾಯಣಸ್ವಾಮಿ ತಿಳಿಸಿದರು. https://kannadanewsnow.com/kannada/good-news-for-self-employed-people-ujires-rudset-organization-invites-applications-for-various-free-training/ https://kannadanewsnow.com/kannada/breaking-kannada-rajyotsava-award-winning-veena-maker-penna-obalaya-passes-away-cm-condoles/

Read More

ದಕ್ಷಿಣ ಕನ್ನಡ: ಇಲ್ಲಿದ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿರುದ್ಯೋಗಿ ಯುವಕ, ಯುವತಿಯರಿಗೆ, ಉದ್ಯೋಗವನ್ನು ಹುಡುಕುತ್ತಿರೋರಿಗೆ, ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ನಮ್ಮ ಸಂಸ್ಥೆಯಿಂದ ವಿವಿಧ ಉದ್ಯೋಗ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದಿದೆ. ಕೇಂದ್ರ ಸರ್ಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟಿರುವಂತ ರುಡ್ ಸೆಟ್ ಸಂಸ್ಥೆಯಿಂದ ದೇಶದ ವಿವಿಧ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ, ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ ಕಲ್ಪಿಸುತ್ತಿದೆ ಎಂದಿದೆ. ರುಡ್ ಸೆಟ್ ಸಂಸ್ಥೆಯಿಂದ ಈ ಕೆಳಗಿನ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಕಂಪ್ಯೂಟರ್ ಹಾರ್ಡ್ ವೇರ್ ಮತ್ತು ನೆಟ್ವರ್ಕಿಂಗ್ – ದಿನಾಂಕ 03-11-2025ರಿಂದ 17-12-2025ರವರೆಗೆ 45 ದಿನಗಳ ಉಚಿತ ತರಬೇತಿ. ಜೇನುಕೃಷಿ – ದಿನಾಂಕ 06-11-2025ರಿಂದ 25-11-2025ರವರೆಗೆ 20 ದಿನಗಳು. ತರಕಾರಿ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ಹಾಗೂ ಪವಿತ್ರಾ ಗೌಡ, 2ನೇ ಬಾರಿಗೆ ಬಂಧನದ ಬಳಿಕ ಇದೇ ಮೊದಲ ಬಾರಿಗೆ 2 ತಿಂಗಳ ಬಳಿಕ ಮುಖಾಮುಖಿ ಭೇಟಿಯಾಗಿ ಮಾತನಾಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಆರೋಪ ನಿಗದಿಯಾಗಿರುವ ಹಿನ್ನಲೆಯಲ್ಲಿ ಇಂದು ಎಲ್ಲಾ ಆರೋಪಿಗಳನ್ನು ಬೆಂಗಳಿನ 64ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಪವಿತ್ರಾಗೌಡ, ಎ2 ಆರೋಪಿ ನಟ ದರ್ಶನ್ ಅವರನ್ನು ನ್ಯಾಯಾಲಯದ ಮುಂದೆ ಸಾಲಾಗಿ ನಿಲ್ಲಿಸಲಾಗಿತ್ತು. ಪವಿತ್ರಾಗೌಡ ಹಿಂದೆ ನಟ ದರ್ಶನ್ ನಿಂತಿದ್ದರು. ಈ ಸಂದರ್ಭದಲ್ಲಿ ಮುಂದೆ ಬಾ ಎಂಬುದಾಗಿ ದರ್ಶನ್ ಅವರನ್ನು ಪವಿತ್ರಾಗೌಡ ಕರೆದಿದ್ದಾರೆ. ಆರೋಪಿ ಪವಿತ್ರಾಗೌಡ ಕರೆದ ಬೆನ್ನಲ್ಲೇ ನಟ ದರ್ಶನ್ ಮುಂದೆ ಹೋಗಿ ಪರಸ್ಪರ ಮಾತನಾಡಿದ್ದಾರೆ. 2 ತಿಂಗಳ ಬಳಿಕ ನಟ ದರ್ಶನ್ ಜೊತೆಗೆ ಪವಿತ್ರಾಗೌಡ ಮಾತನಾಡಿದ್ದಾರೆ. https://kannadanewsnow.com/kannada/a-heartbreaking-incident-in-the-state-a-dog-died-in-grief-over-the-death-of-its-owner/

Read More

ಶಿವಮೊಗ್ಗ: ತನ್ನ ಮಾಲೀಕನಿಗೆ ನಿಯತ್ತಾಗಿದ್ದಂತ ಆ ನಾಯಿಯು, ಅಷ್ಟೇ ಆತನನ್ನು ಹಚ್ಚಿಕೊಂಡಿತ್ತು. ಆದರೇ ಮಾಲೀಕ ಸಾವಿನ ಸುದ್ದಿ ತಿಳಿದು ನಾಯಿ ಕೂಡ ಪ್ರಾಣ ಬಿಟ್ಟಿರುವಂತ ಹೃದಯ ವಿದ್ರಾವಕ ಘಟನೆ ಭದ್ರಾವತಿಯನ್ನು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹುತಾಕಾಲನಿಯ ಜಿಂಕ್ ಲೈನ್ ನಿವಾಸಿ ಲಾರೆನ್ಸ್(61) ಅವರು ಪೈಂಟರ್ ಕೆಲಸ ಮಾಡುತ್ತಿದ್ದರು. ಅವರು ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಇಂತಹ ಅವರು ನಾಲ್ಕು ದಿನಗಳ ಹಿಂದೆ ನಿಧರಾಗಿದ್ದರು. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದಂತ ಲಾರೆನ್ಸ್ ಪಾರ್ಥೀವ ಶರೀರವನ್ನು ಮನೆಗೆ ತರಲಾಗಿತ್ತು. ತನ್ನ ನೆಚ್ಚಿನ ಮಾಲೀಕ ಸಾವನ್ನಪ್ಪಿ, ಶವವಾಗಿ ಮಲಗಿರುವುದನ್ನು ಕಂಡ ನಾಯಿ ತೀವ್ರ ನೊಂದುಕೊಂಡಿದೆ. ಮಾಲೀಕ ಲಾರೆನ್ಸ್ ಶವದ ಪಕ್ಕದಲ್ಲೇ ಮಲಗಿ ತೀವ್ರ ದುಖ ವ್ಯಕ್ತಪಡಿಸಿದಂತ ಅವರ ನೆಚ್ಚಿನ ಶ್ವಾನವು, ಅಲ್ಲೇ ಅಂತಿಮ ಉಸಿರೆಳೆದಿದೆ. ಗುರುವಾರದಂದು ಲಾರೆನ್ಸ್ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಅವರೊಟ್ಟಿಗೆ ಸಾವನ್ನಪ್ಪಿದಂತ ಶ್ವಾನವನ್ನು ಮನೆಯ ಹಿಂಭಾಗದಲ್ಲಿಯೇ ಹೂಳಲಾಗಿದೆ. https://kannadanewsnow.com/kannada/big-shock-for-candidates-who-apply-for-b-ed-admission-and-do-not-get-their-documents-verified-no-consideration-for-admission/ https://kannadanewsnow.com/kannada/attempt-to-illegally-sell-more-than-50-cattle-calves-in-mandya/

Read More

ಬೆಂಗಳೂರು: 2025-26ನೇ ಸಾಲಿಗೆ ಬಿ.ಇಡಿ ದಾಖಲಾತಿಗೆ ಇಂದಿನವರೆಗೆ ಅವಕಾಶ ನೀಡಲಾಗಿತ್ತು. ಆದರೇ ಕೆಲವರು ಸೀಟು ಘೋಷಣೆಯ ನಂತ್ರ ದಾಖಲಾತಿ ಪರಿಶೀಲನೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂತಹ ಅಭ್ಯರ್ಥಿಗಳನ್ನು ಬಿ.ಇಡಿ ದಾಖಲಾತಿಗೆ ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಕೇಂದ್ರಿಕೃತ ದಾಖಲಾತಿ ಘಟಕ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025-26ನೇ ಸಾಲಿನ ಬಿಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು ನಡೆಯುತ್ತಿದ್ದು, ದಿನಾಂಕ 03-11-2025ರ ಇಂದು ಕೊನೆಯ ದಿನವಾಗಿರುತ್ತದೆ ಎಂದಿದೆ. ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಕ್ಕೆ ಮೂಲ ದಾಖಲೆಗಳೊಂದಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರೂ ಅನೇಕ ಮಂದಿ ತಮ್ಮ ದಾಖಲೆಗಳ ಪರಿಶೀಲನೆ ಮಾಡಿಸಿರುವುದಿಲ್ಲ ಎಂದು ಹೇಳಿದೆ. ಇನ್ನೂ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳನ್ನು 2025-26ನೇ ಸಾಲಿನ ಬಿ.ಇಡಿ ದಾಖಲಾತಿಗೆ ಪರಿಗಣಿಸುವುದಿಲ್ಲ ಎಂಬುದಾಗಿ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಬ್ಬರು ಬಹಳ ದಿನಗಳ ಬಳಿಕ ಮುಖಾಮುಖಿಯಾದರು. ಕೇಸ್ ವಿಚಾರಣೆ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ಗೆ ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜಡ್ಜ್ ಮುಂದೆ ಹಾಜರಾಗಿದ್ದಾಗ ಪವಿತ್ರಾಗೌಡ ಹಿಂದೆಯೇ ನಟ ದರ್ಶನ್ ನಿಂತಿದ್ದಾಗಿ ತಿಳಿದು ಬಂದಿದೆ. ಈ ವೇಳೆ ಮುಂದೆ ಬರುವಂತೆ ಆರೋಪಿ ಪವಿತ್ರಾಗೌಡ ಅವರು ನಟ ದರ್ಶನ್ ಕರೆದಿದ್ದಾಗಿ ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಕೋರ್ಟ್ ನಲ್ಲಿ ಮುಂದೆ ಬಂದಂತ ನಟ ದರ್ಶನ್ ಹಾಗೂ ಪವಿತ್ರಾಗೌಡ ಪರಸ್ಪರ ಬಹಳ ದಿನಗಳ ನಂತ್ರ ಮುಖಾಮುಖಿಯಾಗಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/government-is-responding-to-the-plight-of-sandalwood-artisans-mla-gopalakrishna-belur/ https://kannadanewsnow.com/kannada/breaking-kannada-rajyotsava-award-winning-veena-maker-penna-obalaya-passes-away-cm-condoles/

Read More

ಶಿವಮೊಗ್ಗ : ಶ್ರೀಗಂಧ ಕೊರತೆಯಿಂದ ಕುಶಲಕರ್ಮಿಗಳ ಬದುಕು ಕಷ್ಟಕರವಾಗಿದೆ. ಕುಶಲಕರ್ಮಿಕಗಳ ಸಂಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸುತ್ತದೆ. ಡಿಪೋದಲ್ಲಿ ಸಂಗ್ರಹಿಸಿಟ್ಟು ಕೊಂಡಿರುವ ಗಂಧವನ್ನು ಕುಶಲಕರ್ಮಿಗಳಿಗೆ ಮೊದಲು ಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀಗಂಧ ಸಂಕೀರ್ಣದಲ್ಲಿ ಕರಕುಶಲ ಅಭಿವೃದ್ದಿ ನಿಗಮದ ವತಿಯಿಂದ ಮಂಜೂರಾದ 65 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದಂತ ಅವರು, ಒಂದು ಕಾಲದಲ್ಲಿ ವಿಧಾನಸೌಧ ಸೇರಿದಂತೆ ದೇಶದ ಪ್ರಮುಖ ಸ್ಥಳಗಳಲ್ಲಿ ಸಾಗರದ ಕುಶಲಕರ್ಮಿಗಳು ಕೆತ್ತಿದ ಕೆತ್ತನೆ ಇಂದಿಗೂ ಪ್ರದರ್ಶನಗೊಳ್ಳುತ್ತಿದೆ. ನಂತರ ಶ್ರೀಗಂಧದ ಕೊರತೆಯಿಂದ ಸಂಕಷ್ಟ ಎದುರಾಗಿತ್ತು. ಇತರೆ ಮರ ಉಪಯೋಗಿಸಿ ಕರಕುಶಲ ವಸ್ತುಗಳನ್ನು ತಯಾರಿಸುತ್ತಿದ್ದು ಇದಕ್ಕೂ ಅಗತ್ಯ ಮಾರುಕಟ್ಟೆಯನ್ನು ನಿಗಮದ ವತಿಯಿಂದ ಮಾಡಿಕೊಡಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ಕುಲಕಸುಬನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದರು. ಶ್ರೀಗಂಧ ಸಂಕೀರ್ಣದಲ್ಲಿ ಕ್ಯಾಂಟಿನ್ ನಿರ್ಮಾಣಕ್ಕೆ 8 ಲಕ್ಷ ರೂ., ಶಾಲಾ…

Read More