Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಎಎಸ್ ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್.16ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ವಾರ್ತಾ ಇಲಾಖೆ ಸೂಚಿಸಿದೆ. ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ. ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ಟರ್ಮಿನಲ್ 2 ನಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ನನ್ನು ಅನಾವರಣಗೊಳಿಸಿತು. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್ ಗಾರ್ಡನ್ನನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್ ಗಾರ್ಡನ್ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. ಪ್ಯಾಟ್ರಿಕ್ ಬ್ಲಾಂಕ್ ಅವರು ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವರ್ಟಿಕಲ್ ಗಾರ್ಡನ್ ನಿರ್ಮಿಸಿದ್ದು ಇದೇ ಮೊದಲು, ಮೂಲಭೂತ ಸೌಕರ್ಯಗಳೊಂದಿಗೆ ಪ್ರಕೃತಿಯನ್ನು ಸೆರೆ ಹಿಡಿದಂತ ಸುಂದರ ದೃಶ್ಯಾವಳಿಂದ ಈ ಗೋಡೆ ಉದ್ಯಾನ ಕಂಗೊಳಿಸಲಿದೆ. ಈ ಮೂಲಕ ಟಿ2 ನ ಅಡಿಪಾಯದ ಮೂಲತತ್ವವನ್ನು ಉದಾರಿಸಿದೆ. ‘ಟೈಗರ್ ವಿಂಗ್ಸ್’ ನ ಈ ವರ್ಟಿಕಲ್ ಗಾರ್ಡನ್ 153 ವಿವಿಧ ಜಾತಿಗಳ 15,000…
ನವದೆಹಲಿ: ಅಕ್ಟೋಬರ್ 31 ರಂದು ಬ್ಲಾಕ್ಬಸ್ಟರ್ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League – IPL) ಅನ್ನು ಉಳಿಸಿಕೊಂಡ ನಂತರ, ಮಹಿಳಾ ಪ್ರೀಮಿಯರ್ ಲೀಗ್ ತಂಡಗಳು ಗುರುವಾರ ತಮ್ಮ ಧಾರಣೆಗಳೊಂದಿಗೆ ಬಂದವು. ಡಬ್ಲ್ಯುಪಿಎಲ್ ನಿಯಮಗಳ ಪ್ರಕಾರ, ಒಂದು ತಂಡವು ಎಲ್ಲಾ 18 ಆಟಗಾರರನ್ನು ಉಳಿಸಿಕೊಳ್ಳಬಹುದು, ಗರಿಷ್ಠ ಆರು ವಿದೇಶಿ ತಾರೆಗಳೊಂದಿಗೆ, ಮತ್ತು ನಿರೀಕ್ಷಿತ ರೀತಿಯಲ್ಲಿ, ಎಲ್ಲಾ ಫ್ರಾಂಚೈಸಿಗಳು ಈ ಕ್ರಮವನ್ನು ಹೆಚ್ಚು ಬಳಸಿಕೊಂಡವು. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru – RCB) ಮತ್ತು ಮುಂಬೈ ಇಂಡಿಯನ್ಸ್ (Mumbai Indians – MI) ಯಾವುದೇ ಆಘಾತಕಾರಿ ಹೊರಗಿಡುವಿಕೆಯನ್ನು ಮಾಡಿಲ್ಲ ಮತ್ತು ಡಬ್ಲ್ಯುಪಿಎಲ್ 2025 ಋತುವಿಗೆ ಮುಂಚಿತವಾಗಿ ಪ್ರಮುಖ ಗುಂಪನ್ನು ಉಳಿಸಿಕೊಂಡಿವೆ. ಮೂರನೇ ಋತುವಿನ ಹರಾಜು ಮುಂದಿನ ತಿಂಗಳು ನಡೆಯಲಿದೆ. ಮುಂಬೈ ಇಂಡಿಯನ್ಸ್ ಮೊದಲ ಆವೃತ್ತಿಯನ್ನು ಗೆದ್ದರೆ, ಆರ್ಸಿಬಿ ಎರಡನೇ ಋತುವನ್ನು ಗೆದ್ದರೆ, ಡಿಸಿ ಪಂದ್ಯಾವಳಿಯ ಎರಡೂ ಆವೃತ್ತಿಗಳಲ್ಲಿ ಫೈನಲ್ ತಲುಪಿದೆ. 2025 ರ ಆವೃತ್ತಿಯ ಡಬ್ಲ್ಯುಪಿಎಲ್ ಹರಾಜು ಮೊತ್ತವನ್ನು…
ಬೆಂಗಳೂರು: ನೈಋತ್ಯ ರೈಲ್ವೆಯಿಂಜ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಕ್ಯಾಂಪೇನ್ 3.0 ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದು ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ಸಾಂಪ್ರದಾಯಿಕವಾಗಿ ಪಿಂಚಣಿದಾರರು ತಮ್ಮ ಪಿಂಚಣಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ನವೆಂಬರ್ನಲ್ಲಿ ವೈಯಕ್ತಿಕವಾಗಿ ಬ್ಯಾಂಕಿಗೆ ಭೇಟಿ ನೀಡಬೇಕಾಗಿತ್ತು. ಆದಾಗ್ಯೂ, ಈ ಹೊಸ ಅಭಿಯಾನವು ಆನ್ಲೈನ್ ಸಲ್ಲಿಕೆ ಆಯ್ಕೆಯನ್ನು ಅನುಮತಿಸುತ್ತದೆ. ಇದು ಸಮಯ ಮತ್ತು ಶ್ರಮವನ್ನು ಉಳಿಸುತ್ತದೆ. ಈ ಡಿಜಿಟಲ್ ಉಪಕ್ರಮವು ಭೌತಿಕ ಸಲ್ಲಿಕೆಗಳಿಗೆ ಸುರಕ್ಷಿತ, ಅನುಕೂಲಕರ ಮತ್ತು ಸಮಯ-ಪರಿಣಾಮಕಾರಿ ಪರ್ಯಾಯವನ್ನು ಒದಗಿಸುವ ಮೂಲಕ ಎಲ್ಲಾ ಪಿಂಚಣಿದಾರರಿಗೆ, ವಿಶೇಷವಾಗಿ ಹಿರಿಯ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಸುಲಭ ಡಿಜಿಟಲ್ ಪ್ರಕ್ರಿಯೆಯೊಂದಿಗೆ ಪಿಂಚಣಿದಾರರನ್ನು ಸಬಲೀಕರಣಗೊಳಿಸುವ ಮೂಲಕ, ನೈಋತ್ಯ ರೈಲ್ವೆ ತನ್ನ ವಲಯದಾದ್ಯಂತ ಜೀವನ ಪ್ರಮಾಣಪತ್ರಗಳ ಸಲ್ಲಿಕೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಅಭಿಯಾನದಲ್ಲಿ ಭಾಗವಹಿಸಲು, ಪಿಂಚಣಿದಾರರು ಅಥವಾ ಕುಟುಂಬ ಪಿಂಚಣಿದಾರರು ಈ ಹಂತಗಳನ್ನು ಅನುಸರಿಸಲು ಸೂಚಿಸಲಾಗಿದೆ: 1. ಗೂಗಲ್ ಪ್ಲೇ ಸ್ಟೋರ್ ನಿಂದ ಯುಐಡಿಎಐನ “ಆಧಾರ್ಫೇಸ್ ಆರ್ಡಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಕಲ್ಯಾಣ ವಿಭಾಗದಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ವಿಭಾಗದಡಿ ವಿವಿಧ ಯೋಜನೆಗಳಿಗೆ ವಾರದೊಳಗಾಗಿ ಅರ್ಜಿ ಆಹ್ವಾನಿಸಬೇಕು. ಈ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಲು ಸೂಚನೆ ನೀಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ಇ-ವೆಂಡಿಗ್ ವಾಹನ: ಮಾನ್ಯ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಇ-ವೆಂಡಿಗ್ ವಾಹನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಆ ಬಗ್ಗೆ ಚರ್ಚೆ ಮಾಡಿ ಅಭಿಪ್ರಾಯ ಪಡೆದ ಬಳಿಕ, ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು. ಅನಂತರ ಆಯ್ಕೆ ಮಾಡಿ ವಿವಿಧ ಬಗೆಯ ಇ–ವೆಂಡಿಂಗ್ ವಾಹನಗಳನ್ನು ವ್ಯಾಪಾರಿಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಸಿದ್ದಪಡಸಿ ವ್ಯಾಪಾರಿಗಳ ವಯಕ್ತಿಕ ಬಂಡವಾಳ ಹಾಗೂ ಬಿಬಿಎಂಪಿ ಅನುದಾನ ಸೇರಿ ಇ–ವೆಂಡಿಂಗ್…
ಬಳ್ಳಾರಿ : ಉಪಚುನಾವಣೆಯ ಪ್ರಚಾರ ಸಭೆಗಳಲ್ಲಿ ನಿರೀಕ್ಷೆಗೂ ಮೀರಿ ಜನರು ತಮ್ಮ ಬೆಂಬಲವನ್ನು ವ್ಯಕ್ತವಾಗುತ್ತಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಸಂಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಅವರದ್ದು ರಾಜಕೀಯ ಪ್ರತಿಭಟನೆ ವಿಜಯಪುರಕ್ಕೆ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಆಗಮಿಸಿರುವ ಬಗ್ಗೆ ಹಾಗೂ ಬಸವನಗೌಡ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಕ್ಫ್ ಬೋರ್ಡ್ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಯತ್ನಾಳ್ ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಂಟಿ ಸಂಸದೀಯ ಸಮಿತಿಯವರು ಭೇಟಿ ನೀಡಿದ್ದೂ ಕೂಡ ರಾಜಕೀಯವಾಗಿ. ಹಿಂದೆ ಯಾವಾಗ ಬಂದಿದ್ದರು ಎಂದು ಪ್ರಶ್ನಿಸಿದರು. ಸಮಸ್ಯೆ ಎಲ್ಲಿದೆ ಒಂದು ವೇಳೆ ಯಾರಿಗಾದರೂ ನೋಟೀಸು ನೀಡಲಾಗಿದ್ದರೆ ಅದನ್ನು ವಾಪಸು ಪಡೆಯುವುದಾಗಿ ಸ್ಪಷ್ಟವಾಗಿ ಈಗಾಗಲೇ ತಿಳಿಸಲಾಗಿದೆ. ಯಾರನ್ನೂ ನಾವು ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ದಾಖಲಾತಿಗಳು ತಿದ್ದುಪಡಿಯಾಗಿದ್ದರೆ ಅದನ್ನು ರದ್ದು ಮಾಡುತ್ತೇವೆ…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎರಡು ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಅದು ಎಲ್ಲಿ.? ಬಸ್ ಎಷ್ಟು ಹೊತ್ತಿಗೆ ಸಂಚಾರ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 08.11.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ 248U ಸುಮ್ಮನಹಳ್ಳಿ ಅಬ್ಬಿಗೆರೆ ಸುಂಕದಕಟ್ಟೆ, ಪೀಣ್ಯ 2ನೇ ಹಂತ, ಜಾಲಹಳ್ಳಿ ಕ್ರಾಸ್, ಶೆಟ್ಟಿಹಳ್ಳಿ, 2 ಬಸ್ಸು 16 ಸುತ್ತುವಳಿಗಳು ಸದರಿ ಮಾರ್ಗದ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ. ಸುಮ್ಮನಹಳ್ಳಿ ಬಿಡುವ ವೇಳೆ 9:15, 10:10, 11:40, 12:35, 14:20, 15:15, 16:55, 17:50 ಅಬ್ಬಿಗೆರೆ ಬಿಡುವ ವೇಳೆ 8:10, 9:05,…
ಬೆಂಗಳೂರು: ಬೆಂಗಳೂರು ವಿಭಾಗದ ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣೆ ಮತ್ತು ಮೂಲಸೌಕರ್ಯ ನವೀಕರಣದ ಕಾಮಗಾರಿ ನಿಮಿತ್ತ, ಈ ಕೆಳಗಿನ ರೈಲುಗಳ ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ನವೆಂಬರ್ 10 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ. ನವೆಂಬರ್ 7 ಮತ್ತು 10 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರಿನಿಂದ 120 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ. ನವೆಂಬರ್ 8 ಮತ್ತು 11 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ 90 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ. https://kannadanewsnow.com/kannada/big-twist-in-kiadb-scam-complaint-filed-against-siddaramaiah-mb-patil-to-pm-ed-stage-fixed/ https://kannadanewsnow.com/kannada/save-your-life-from-heart-attack-keep-this-7-rupees-ram-kit/
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾರಿ ಜಮೀನಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಪರಿಹಾರದ ಮೊತ್ತವನ್ನು…
ಬೆಂಗಳೂರು: ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನಕ್ಕೆ ಹೆಸರುವಾಸಿಯಾಗಿರುವ ರಾಮೇಶ್ವರಂ ಕೆಫೆ ತನ್ನ ನೂತನ ಶಾಖೆಯನ್ನು ಇಂದಿರಾನಗರದಲ್ಲಿ ಪುನರಾರಂಭಗೊಳಿಸಲಾಯಿತು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ 15,000 ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ಸುಮಾರು 400 ಜನರಿಗೆ ಆತಿಥ್ಯ ನೀಡಬಹುದಾದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಲಾಗಿದೆ. ಈ ಕುರಿತು ಮಾತನಾಡಿದ ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್, ಇಂದಿರಾನಗರದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದೇವೆ. ಈ ಭಾಗದ ಜನರಿಗಾಗಿ ನಮ್ಮ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಭೋಜನವನ್ನು ಗುಣಮಟ್ಟ ಹಾಗೂ ರುಚಿಕರವಾಗಿ ಉಣಬಡಿಸುವ ಉದ್ದೇಶದಿಂದ ವಿಶಾಲವಾದ ಸ್ಥಳದಲ್ಲಿ ನಿರ್ಮಿಸಿದೇವೆ. ಸುಮಾರು 120 ಹೆಚ್ಚು ಬಗೆಯ ವಿಶೇಷ ಭಕ್ಷ್ಯಗಳು ಲಭ್ಯವಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ಸಾಂಪ್ರದಾಯಕತೆಗೆ ಒತ್ತು ನೀಡುವ ಉದ್ದೇಶದಿಂದ ರಾಮೇಶ್ವರಂ ಕೆಫೆಯನ್ನು ದೇವಾಲಯದ ಮಾದರಿಯಲ್ಲಿಯೇ ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಭೇಟಿ ನೀಡುವವರಿಗೆ ನಮ್ಮ ಧಾರ್ಮಿಕತೆಯ ಅನುಭವ ದೊರೆಯಬೇಕು. ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ದಿವ್ಯಾ ರಾಘವೇಂದ್ರ ರಾವ್ ಮಾತನಾಡಿ, 2021ರಲ್ಲಿ ಪ್ರಾರಂಭಗೊಂಡ ನಮ್ಮ ಜರ್ನಿ ಇಲ್ಲಿಯವರೆಗೂ…